ಸ್ಥಳ ನೋಡಿ ಕೆಲಸ ನಡೆಸಿ
ಸುಳ್ಯ ತಾ.ಪಂ. ಸಾಮಾನ್ಯ ಸಭೆಯಲ್ಲಿ ಸೂಚನೆ
Team Udayavani, Mar 30, 2022, 1:14 PM IST
ಸುಳ್ಯ: ಸರಕಾರದ ಯೋಜನೆಗಳನ್ನು ಆರಂಭಿಸುವ ಮೊದಲು ಅರಣ್ಯ ಅಥವಾ ಕಂದಾಯ ಇಲಾಖೆಗೆ ಸೇರಿದ ಸ್ಥಳವೋ ಎಂಬುದನ್ನು ಪರಿಶೀಲಿಸಿ ಯೋಜನೆಯ ಕಾಮಗಾರಿ ಆರಂಭಿಸಿ ಎಂದು ಸುಳ್ಯ ತಾ.ಪಂ. ಆಡಳಿತಾಧಿಕಾರಿ ಗಾಯತ್ರಿ ನಾಯಕ್ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಸುಳ್ಯ ತಾ.ಪಂ. ಸಾಮಾನ್ಯ ಸಭೆ ತಾ.ಪಂ. ಸಭಾಂಗಣದಲ್ಲಿ ಗಾಯತ್ರಿ ನಾಯಕ್ ಅಧ್ಯಕ್ಷತೆಯಲ್ಲಿ ನಡೆಯಿತು. ಘನತ್ಯಾಜ್ಯ ಘಟಕ ಯೋಜನೆಗಳು ಸೇರಿ ಇತರ ಯೋಜನೆಗಳಿಗೆ ಸ್ಥಳ ಗುರುತು ಮಾಡುವ ಮೊದಲು ಅರಣ್ಯ ಇಲಾಖೆ ಮತ್ತು ಕಂದಾಯ ಇಲಾಖೆಯನ್ನು ಸಂಪರ್ಕಿಸಿ ಸ್ಥಳ ಪರಿಶಿಲನೆ ನಡೆಸಬೇಕು. ಕಾಮಗಾರಿ ಅರ್ಧ ಆದ ಬಳಿಕ ಅರಣ್ಯ ಇಲಾಖೆಯ ತಡೆಗಳಂತಹ ಕಾನೂನುಗಳಿಂದ ಯೋಜನೆ ವಿಳಂಬವಾಗುತ್ತದೆ. ವಿವಾದ ಹುಟ್ಟುವ ಮೊದಲೇ ಬಗೆಹರಿಸುವ ಕೆಲಸ ನಡೆಯಬೇಕು ಎಂದು ನಾಯಕ್ ಹೇಳಿದರು.
ಐವತೊಕ್ಲು ಗ್ರಾಮದ ಸರ್ವೇ ನಂಬರ್ 6 ಮತ್ತು 7 ರಲ್ಲಿ ವಾಸ್ತವ್ಯ ಹೊಂದಿರುವ 12 ಕುಟುಂಬಗಳಿಗೆ 94ಸಿ ಯೋಜನೆಯಡಿ ಹಕ್ಕುಪತ್ರ ನೀಡುವ ವಿಚಾರಕ್ಕೆ ವಿಸ್ಕ್ರತ ವರದಿ ನೀಡಲು ಕಂದಾಯ ಇಲಾಖೆಗೆ ಸೂಚನೆ ನೀಡಿದರು. ಕೋವಿಡ್ ಲಸಿಕೆ ಪ್ರಕರಣದಲ್ಲಿ ಶೇ. 99 ಪ್ರಗತಿ ಆಗಿದೆ ಎಂದು ಆರೋಗ್ಯ ಇಲಾ ಖೆಯ ಅಧಿಕಾರಿಗಳು ತಿಳಿಸಿದರು. ಫ್ರಂಟ್ ಲೈನ್ ವರ್ಕರ್ಸ್ಗೆ ಬೂಸ್ಟರ್ ಡೋಸ್ ಹೆಚ್ಚೆಚ್ಚು ನೀಡಲು ಕ್ರಮ ವಹಿಸಿ ಎಂದರು.
ಘಟಕ ಮಂಜೂರು
15ನೇ ಹಣಕಾಸಿನ ಕ್ರಿಯಾ ಯೋಜನೆ ಆಗಲು ಬಾಕಿ ಇದೆ. ಸುಳ್ಯ ತಾಲೂಕಿಗೆ ಒಂದು ಪ್ಲಾಸ್ಟಿಕ್ ಮತ್ತು ಘನ ತ್ಯಾಜ್ಯ ನಿರ್ವಹಣೆಗೆ ಎಂ.ಆರ್.ಎಫ್. ಘಟಕ ಮತ್ತು ಒಂದು ಮಲ ತ್ಯಾಜ್ಯ ನಿರ್ವಹಣ ಘಟಕ ಮಂಜೂರುಗೊಂಡಿದೆ. ಎಂ.ಆರ್. ಎಫ್. ಘಟಕದಲ್ಲಿ ಪ್ಲಾಸ್ಟಿಕ್ ಮತ್ತು ಘನತ್ಯಾಜ್ಯಗಳನ್ನು ಸಂಗ್ರಹಿಸಿ ವ್ಯವಸ್ಥಿತವಾಗಿ ನಿರ್ವಹಣೆ ಮಾಡಲು ಈ ಘಟಕ ನೆರವಾಗುತ್ತದೆ. ಮಲ ತ್ಯಾಜ್ಯ ನಿರ್ವಹಣ ಘಟಕವನ್ನು ಆರಂಭಿಸಿ ಸಕ್ಕಿಂಗ್ ಯಂತ್ರದ ಮೂಲಕ ಮಲವನ್ನು ಸಂಗ್ರಹಿಸಿ ಅದನ್ನು ಗೊಬ್ಬರವಾಗಿ ಪರಿವರ್ತಿಸುವ ಘಟಕ ಆರಂಭಗೊಳ್ಳಲಿದೆ ಎಂದು ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಎನ್. ಭವಾನಿ ಶಂಕರ್ ಮಾಹಿತಿ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru Dasara: ನವರಾತ್ರಿ, ಶಾರದಾ ಮಹೋತ್ಸವ: ಪೊಲೀಸರಿಂದ ಮಾರ್ಗಸೂಚಿ
Mangaluru: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಅಭಿವೃದ್ಧಿ ಕಡೆಗಣನೆಯಾಗಿದೆ: ನಳಿನ್ ಆರೋಪ
Kadaba: ಕಾರು – ಬೈಕ್ ಅಪಘಾತ; ಸವಾರ ಮೃತ್ಯು
Kinnigoli ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಮನೆಯಲ್ಲಿ ಮತ್ತಷ್ಟು ಲಂಚದ ಹಣ ಪತ್ತೆ
illegal Sand: ತುಂಬೆ, ಮಾರಿಪಳ್ಳ: ಮರಳು ಅಡ್ಡೆಗೆ ದಾಳಿ; 20 ಬೋಟ್ಗಳ ವಶ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Bigg Boss: ಬಿಗ್ ಬಾಸ್ ಮನೆಯಲ್ಲಿ ರಾದ್ಧಾಂತ ಸೃಷ್ಟಿಸಿದ ವಿವಾದಿತ ಸ್ಪರ್ಧಿಗಳಿವರು..
Irani Cup: ತನುಷ್ ಕೋಟ್ಯಾನ್ ದಿಟ್ಟ ಹೋರಾಟ; 27 ವರ್ಷದ ಬಳಿಕ ಇರಾನಿ ಕಪ್ ಗೆದ್ದ ಮುಂಬೈ
Goa ದಲ್ಲಿ ನಡೆದ ಘಟನೆ ಅಲ್ಲ; ವಿದೇಶಿ ಕಡಲಿನಲ್ಲಿ ಬೋಟ್ ದುರಂತ: ವೈರಲ್ ವಿಡಿಯೋ ನೋಡಿ
Bellary: ನೀರಿನ ರಭಸಕ್ಕೆ ಕೊಚ್ಚಿಹೋಗಿ ವ್ಯಕ್ತಿ ಮೃತ
Renukaswamy Case: ದರ್ಶನ್ ಪರ ವಕೀಲರ ಸುದೀರ್ಘ ವಾದ..ಜಾಮೀನು ಅರ್ಜಿ ಮತ್ತೆ ಮುಂದೂಡಿಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.