ಮಂಜೂರಾತಿ ನಿರೀಕ್ಷೆಯಲ್ಲಿ ಮೂರು ಪ್ರಸ್ತಾವನೆ


Team Udayavani, Mar 31, 2022, 12:03 PM IST

mahile

ಉಡುಪಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯಿಂದ ಜಿಲ್ಲೆಯಲ್ಲಿ ತುರ್ತಾಗಿ ಆಗಬೇಕಿರುವ ಪ್ರಮುಖ ಕಾಮಗಾರಿಗಳ ಪ್ರಸ್ತಾವನೆ ರಾಜ್ಯಕ್ಕೆ ಹೋಗಿ ತಿಂಗಳು ಕಳೆದರೂ ಮಂಜೂರಾತಿ ಸಿಕ್ಕಿಲ್ಲ.

ಉಡುಪಿ ತಾಲೂಕಿನ ನಿಟ್ಟೂರಿನಲ್ಲಿರುವ ಸರಕಾರಿ ಬಾಲಕಿಯರ ಬಾಲಮಂದಿರದ ಕಟ್ಟಡ 25 ವರ್ಷ ಹಳೆಯದು. ಅದನ್ನು ಕೆಡವಿ ಸುಸಜ್ಜಿತವಾದ ಮಕ್ಕಳ ಸ್ನೇಹಿ ಕಟ್ಟಡ ನಿರ್ಮಾಣಕ್ಕಾಗಿ 5 ಕೋ.ರೂ. ಅಂದಾಜು ಮೊತ್ತದಲ್ಲಿ ನೀಲನಕಾಶೆ ಸಿದ್ಧಪಡಿಸಿ ಅಂದಾಜುಪಟ್ಟಿ ಸಹಿತವಾದ ಪ್ರಸ್ತಾವನೆಯನ್ನು ರಾಜ್ಯ ಮಕ್ಕಳ ರಕ್ಷಣಾ ನಿರ್ದೇಶನಾಲಯಕ್ಕೆ 2021ರ ಆಗಸ್ಟ್‌ 17ರಂದು ಸಲ್ಲಿಸಲಾಗಿತ್ತು. ಈವರೆಗೂ ನಿರ್ದೇಶನಾಲಯದಿಂದ ಈ ಸಂಬಂಧ ಮಂಜೂರಾತಿಯ ಪತ್ರ ವ್ಯವಹಾರ ನಡೆದಿಲ್ಲ.

ಕಾರ್ಕಳ ತಾಲೂಕಿನ ಶಿಶು ಅಭಿವೃದ್ಧಿ ಯೋಜನ ಕಚೇರಿಯ (ಸಿ ಡಿ ಪಿ ಒ) ನೂತನ ಕಟ್ಟಡ ನಿರ್ಮಾಣಕ್ಕೆ 2 ಕೋ.ರೂ., ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನ ಕಚೇರಿಯ ನೂತನ ಕಟ್ಟಡ ನಿರ್ಮಾಣಕ್ಕೆ 1.35 ಕೋ.ರೂ.ಗಳ ಪ್ರಸ್ತಾವನೆಗಳನ್ನು ಪ್ರತ್ಯೇಕವಾಗಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗೆ ಕಳುಹಿಸಲಾಗಿದೆ. ಈ ಎರಡು ಪ್ರಸ್ತಾವನೆಗಳನ್ನು ಕ್ರಮವಾಗಿ 2021ರ ಡಿ. 21ರಂದು ಹಾಗೂ ನ. 20ರಂದು ಸಲ್ಲಿಸಲಾಗಿದೆ. ಒಟ್ಟಾರೆಯಾಗಿ ಜಿಲ್ಲೆಯಲ್ಲಿ ಶಿಶು ಅಭಿವೃದ್ಧಿ ಯೋಜನೆ ವಿಚಾರವಾಗಿ 8.35 ಕೋ.ರೂ. ಪ್ರಸ್ತಾವನೆ ಹೋಗಿದ್ದರೂ, ಈವರೆಗೂ ಯಾವುದೇ ಅನುದಾನ ಬಿಡುಗಡೆಯಾಗಿಲ್ಲ ಎಂದು ಮೂಲಗಳು ತಿಳಿಸಿವೆ.

ಎಪ್ರಿಲ್‌ನಲ್ಲಿ ಕಾಮಗಾರಿ ಆರಂಭ

ಜಿಲ್ಲಾ ಕೇಂದ್ರದಲ್ಲಿರುವ (ಬನ್ನಂಜೆ) ಬಾಲಭವನದ ಸಮಗ್ರ ಅಭಿವೃದ್ಧಿಗೆ 22 ಲ.ರೂ. ಪ್ರಸ್ತಾವನೆ ಸಲ್ಲಿಸಲಾಗಿತ್ತು. ಅದರಲ್ಲಿ 12 ಲ.ರೂ. ಈಗಾಗಲೇ ಬಿಡುಗಡೆಯಾಗಿದೆ. ಇದರ ಕಾಮಗಾರಿ ಆರಂಭಿಸುವಂತೆ ಲೋಕೋಪಯೋಗಿ ಇಲಾಖೆಗೆ ಪತ್ರವನ್ನು ಬರೆಯಲಾಗಿದೆ. ಎಪ್ರಿಲ್‌ ತಿಂಗಳಲ್ಲಿ ಕಾಮಗಾರಿ ಆರಂಭವಾಗಲಿದೆ. ಬಾಲಭವನದ ಪಕ್ಕದಲ್ಲಿರುವ ರಂಗಮಂದಿರದ ಎದುರಿನಲ್ಲಿ ಮಕ್ಕಳ ವಾಕಿಂಗ್‌ ಟ್ರ್ಯಾಕ್‌, ಆಟಿಕೆಗಳನ್ನು ಹೊಸದಾಗಿ ಹಾಕಲಾಗುತ್ತದೆ.

ಅಪೌಷ್ಟಿಕ ಮಕ್ಕಳು

ಜಿಲ್ಲೆಯಲ್ಲಿ 65,960 ಮಕ್ಕಳಿದ್ದಾರೆ. ಇವರಲ್ಲಿ 725 ಮಕ್ಕಳು ಅಪೌಷ್ಟಿಕತೆ, 65 ಮಕ್ಕಳು ತೀವ್ರ ಅಪೌಷ್ಟಿಕತೆಯಿಂದ ಬಳುತ್ತಿದ್ದಾರೆ. ಅವರಿಗೆ ಇಲಾಖೆಯಿಂದ ಪೌಷ್ಟಿಕ ಆಹಾರ ಒದಗಿಸಲಾಗುತ್ತಿದೆ. ಅಪೌಷ್ಟಿಕತೆ ಹೊಂದಿದ ಮಕ್ಕಳನ್ನು ಗುರುತಿಸುವ ಕಾರ್ಯ ಸರಿಯಾಗಿ ಆಗುತ್ತಿಲ್ಲ ಎಂಬ ಆರೋಪವೂ ಇದೆ. ಜಿಲ್ಲೆಯಲ್ಲಿ 6 ತಿಂಗಳಿಂದ 3 ವರ್ಷ 28,577 ಮಕ್ಕಳು, 3ರಿಂದ 6 ವರ್ಷದ 31,690 ಮಕ್ಕಳು, 5,527 ಗರ್ಭಿಣಿಯರು, 6,690 ಬಾಣಂತಿಯರು 1,191 ಅಂಗನವಾಡಿ ಕೇಂದ್ರದಿಂದ ಸೌಲಭ್ಯ ಪಡೆಯುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ

ಬಾಲಕಿಯರ ಬಾಲಮಂದಿರ ನೂತನ ಕಟ್ಟಡ ನಿರ್ಮಾಣ ಸಹಿತವಾಗಿ ಬ್ರಹ್ಮಾವರ ಹಾಗೂ ಕಾರ್ಕಳ ತಾಲೂಕಿನಲ್ಲಿ ಆಗಬೇಕಿರುವ ಕಟ್ಟಡಕ್ಕಾಗಿ ಸೂಕ್ತ ಅನುದಾನ ಕೋರಿ ಪ್ರಸ್ತಾವನೆ ಸಲ್ಲಿಸಿದ್ದೇವೆ. ಮಂಜೂರಾತಿಯ ಬಗ್ಗೆ ಈವರೆಗೂ ಮಾಹಿತಿ ಬಂದಿಲ್ಲ. ಬಾಲಭವನದ ಅಭಿವೃದ್ಧಿಗೆ ಮೊದಲ ಹಂತದ 12 ಲ.ರೂ. ಬಿಡುಗಡೆಯಾಗಿದೆ. ವೀಣಾ ವಿವೇಕಾನಂದ, ಉಪನಿರ್ದೇಶಕಿ (ಪ್ರಭಾರ), ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ, ಉಡುಪಿ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.