![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Mar 31, 2022, 1:01 PM IST
ವಾಡಿ: ಪಟ್ಟಣದ ಹೊರ ವಲಯದ ರಾಷ್ಟ್ರೀಯ ಹೆದ್ದಾರಿ ಮಾರ್ಗವಾಗಿ ಸಂಚರಿಸಿ ಅಪಾರ ಪ್ರಮಾಣದ ಅಕ್ರಮ ಗಾಂಜಾ ಸಾಗಿಸುತ್ತಿದ್ದ ವಾಹನವೊಂದರ ಮೇಲೆ ಪೊಲೀಸರು ಬುಧವಾರ ಬೆಳಗ್ಗೆಯೇ ದಾಳಿ ನಡೆಸಿದ್ದು, 2.22 ಲಕ್ಷ ರೂ. ಮೌಲ್ಯದ ಅಕ್ರಮ ಗಾಂಜಾ ವಶಪಡಿಸಿಕೊಳ್ಳುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮ ಗಾಂಜಾ ಸಾಗಾಣಿಕೆ ಖಚಿತ ಮಾಹಿತಿ ಬಂದ ತಕ್ಷಣ ಕಾರ್ಯಪ್ರವೃತ್ತರಾದ ಶಹಾಬಾದ ಡಿವೈಎಸ್ಪಿ ಉಮೇಶ ಚಿಕ್ಕಮಠ, ಎಸ್ಪಿ ಇಶಾ ಪಂತ್ ಹಾಗೂ ಹೆಚ್ಚುವರಿ ಎಸ್ಪಿ ಪ್ರಸನ್ನಕುಮಾರ ದೇಸಾಯಿ ಮಾರ್ಗದರ್ಶನದಲ್ಲಿ ಸಿಪಿಐ ಪ್ರಕಾಶ ಯಾತನೂರ, ಪಿಎಸ್ಐ ಮಹಾಂತೇಶ ಜಿ. ಪಾಟೀಲ ಹಾಗೂ ಸಿಬ್ಬಂದಿಗಳಾದ ಮಹೆಬೂಬ್ ಶೇಖ, ಲಕ್ಷ್ಮಣ, ದತ್ತಾತ್ರೇಯ, ಬಸವರಾಜ, ಮಧುಕರ, ಗಂಗಪ್ಪ ತಂಡ ಪ್ರಕರಣ ಬೇಧಿಸಿದೆ.
ಅಕ್ರಮ ಗಾಂಜಾ ಸಾಗಾಣಿಕೆಯಲ್ಲಿ ತೊಡಗಿದ್ದ ತೆಲಂಗಾಣ ಮೂಲದ ಮಾನಸಿಂಗ್ ಜಯಂತರಾಮ ಎನ್ನುವ ಆರೋಪಿಯನ್ನು ಪೊಲೀಸರು ಬಂಧಿಸಿ ನ್ಯಾಯಾಂಗ ವಶಕ್ಕೆ ಒಪ್ಪಿಸಿದ್ದಾರೆ. ವಾಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Kalaburagi: ಹಂತ- ಹಂತವಾಗಿ ಪಿಸಿಸಿ ಅಧ್ಯಕ್ಷರ ಬದಲಾವಣೆ: ಎಐಸಿಸಿ ಅಧ್ಯಕ್ಷ ಖರ್ಗೆ
Kalaburagi: ಜಾತ್ರೆಗಳಲ್ಲಿ ಕಾರುಗಳ ಕಳ್ಳತನ ಮಾಡುತ್ತಿದ್ದ ಅಂತರಾಜ್ಯ ಕಳ್ಳರ ತಂಡ ಬಂಧನ
Kalaburagi: 5 ಲಕ್ಷ ರೂ. ಸುಪಾರಿ ಕೊಟ್ಟು ಪತಿ ಕಾಲು ಮುರಿಸಿದ ಪತ್ನಿ
MUDA Case: ಸಿಎಂಗೆ ಕೋರ್ಟ್ ರಿಲೀಫ್; ಸತ್ಯ ಮೇವ ಜಯತೆ ಎಂದ ಸಚಿವ ಈಶ್ವರ ಖಂಡ್ರೆ
BJP Rift: ಬಿ.ವೈ.ವಿಜಯೇಂದ್ರ ಪುನರಾಯ್ಕೆ ಆದರೆ ನಮ್ಮ ನಿರ್ಧಾರ ಪ್ರಕಟ: ಶಾಸಕ ಯತ್ನಾಳ್
You seem to have an Ad Blocker on.
To continue reading, please turn it off or whitelist Udayavani.