ತರುಣ್ ತೇಜ್ಪಾಲ್ ಲೈಂಗಿಕ ದೌರ್ಜನ್ಯ ಕೇಸ್: ವಿಚಾರಣೆ ಏಪ್ರಿಲ್ 11 ಕ್ಕೆ ಮುಂದೂಡಿಕೆ
Team Udayavani, Mar 31, 2022, 5:58 PM IST
ಪಣಜಿ: ಸಹುದ್ಯೋಗಿ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯ ನಡೆಸಿರುವ ಪ್ರಕರಣಕ್ಕೆ ಸಂಬಂಧಿಸಿದಂತೆ ತೆಹಲ್ಕಾ ಪತ್ರಿಕೆಯ ಮಾಜಿ ಸಂಪಾದಕ ತರುಣ್ ತೇಜ್ಪಾಲ್ ರನ್ನು ಖುಲಾಸೆಗೊಳಿಸಿರುವುದನ್ನು ಪ್ರಶ್ನಿಸಿ ಸರ್ಕಾರ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ಬಾಂಬೆ ಹೈಕೋರ್ಟ್ ನ ಗೋವಾ ಪೀಠ ಏಪ್ರಿಲ್ 11 ಕ್ಕೆ ಮುಂದೂಡಿದೆ.
ಇದೇ ಪ್ರಕರಣಕ್ಕೆ ಸಂಬಂಧಿಸಿದ ತೇಜ್ಪಾಲ್ ರವರ ಅರ್ಜಿಯ ವಿಚಾರಣೆ ಏಪ್ರಿಲ್ 1 ರಂದು ಸುಪ್ರೀಂ ಕೋರ್ಟ್ ನಲ್ಲಿ ನಡೆಯಲಿದೆ. ಇನ್ ಕ್ಯಾಮರಾ ವಿಚಾರಣೆಗಾಗಿ ಅವರ ಮನವಿಯನ್ನು ಹೈಕೋರ್ಟ್ ತಿರಸ್ಕರಿಸಿದ ನಂತರ ತೇಜ್ಪಾಲ್ ರವರು ಸುಪ್ರಿಂ ಕೋರ್ಟ್ ನ ಮೆಟ್ಟಿಲೇರಿದ್ದರು.
ಏಪ್ರಿಲ್ 1 ರಂದು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರಿಂ ಕೋರ್ಟ್ ನಲ್ಲಿ ವಿಚಾರಣೆ ಆರಂಭಗೊಳ್ಳಲಿದೆ. ಇದರಿಂದಾಗಿ ಹೈಕೋರ್ಟ್ ನಲ್ಲಿ ನಡೆಯುತ್ತಿರುವ ವಿಚಾರಣೆಯನ್ನು ಮುಂದೂಡಬೇಕು ಎಂದು ತರುಣ್ ತೇಜ್ಪಾಲ್ ಪರ ವಕೀಲರು ಬಾಂಬೆ ಹೈಕೋರ್ಟ್ ಗೋವಾ ಪೀಠದಲ್ಲಿ ಮನವಿ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಇದೀಗ ಬಾಂಬೆ ಹೈಕೋರ್ಟ್ ನ ಗೋವಾ ಪೀಠವು ಈ ಪ್ರಕರಣದ ವಿಚಾರಣೆಯನ್ನು ಏಪ್ರಿಲ್ 11 ಕ್ಕೆ ಮುಂದೂಡಿದೆ.
ಸಂತ್ರಸ್ತೆ ಯ ದೂರಿನ ಪ್ರಕಾರ ತೇಜ್ಪಾಲ್ ರವರು ಗೋವಾದ ಪಂಚತಾರಾ ಹೋಟೆಲ್ನಲ್ಲಿ ನಡೆದ ಕಾರ್ಯಕ್ರಮದಲ್ಲಿ ತಮ್ಮ ಕಚೇರಿಯ ಮಹಿಳಾ ಪತ್ರಕರ್ತೆಯ ಮೇಲೆ ಲೈಂಗಿಕ ದೌರ್ಜನ್ಯವೆಸಗಿದ್ದಾರೆ ಎಂದು ಆರೋಪಿಸಲಾಗಿದೆ. ಆದರೆ ಸಾಕ್ಷಾಧಾರಗಳ ಕೊರತೆಯಿಂದ ಮಾಪ್ಸಾ ಜಿಲ್ಲಾ ಸತ್ರ ನ್ಯಾಯಾಲಯವು ತೇಜ್ಪಾಲ್ ರವರನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಪ್ರಶ್ನಿಸಿ ಗೋವಾ ಸರ್ಕಾರ ಬಾಂಬೆ ಹೈಕೋರ್ಟ್ ಗೋವಾ ಪೀಠದ ಮೆಟ್ಟಿಲೇರಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.