ರಿಯಾಲಿಟಿ ಶೋನಿಂದ ಮಕ್ಕಳಲ್ಲಿ ಅಗತ್ಯಕ್ಕಿಂತ ಹೆಚ್ಚಾಗಿ ಸ್ವಪ್ರಜ್ಞೆಯ ಅಪಾಯ: ಪಲ್ಲವಿ


Team Udayavani, Apr 1, 2022, 12:15 PM IST

10pallavi

ಸಾಗರ: ಸಾಮಾನ್ಯವಾಗಿ ಮಕ್ಕಳಲ್ಲಿ ನಾನು, ನನ್ನಿಂದ ಎಂಬ ಪ್ರಜ್ಞೆ ಇರುವುದಿಲ್ಲ. ಆದರೆ ರಿಯಾಲಿಟಿ ಶೋಗಳು ಅವರಲ್ಲಿ ಈ ಪ್ರಜ್ಞೆಯನ್ನು ಜಾಗೃತಗೊಳಿಸುತ್ತಿದೆ ಎಂದು ಗಾಯಕಿ, ರಂಗನಟಿ ಎಂ.ಡಿ. ಪಲ್ಲವಿ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಇಲ್ಲಿನ ಎಸ್‌ಪಿಎಂ ರಸ್ತೆಯ ಬಾಪಟ್ ನಿವಾಸದಲ್ಲಿನ ಚರಕ ಅಂಗಡಿಯಲ್ಲಿ ಚರಕ ಹಾಗೂ ಕವಿಕಾವ್ಯ ಟ್ರಸ್ಟ್ ಏರ್ಪಡಿಸಿದ್ದ ಕಾರ್ಯಕ್ರಮದಲ್ಲಿ ‘ಕುಶಲೆ’ ಪ್ರಶಸ್ತಿಯನ್ನು ಸ್ವೀಕರಿಸಿದ ನಂತರ ನಡೆದ ಹಾಡು ಹರಟೆ ಸಂವಾದದಲ್ಲಿ ಅವರು ಮಾತನಾಡಿದರು.

ರಿಯಾಲಿಟಿ ಶೋಗಳಲ್ಲಿ ತೀರ್ಪುಗಾರರು ಮಕ್ಕಳನ್ನು ಉದ್ದೇಶಿಸಿ ಪದೇ ಪದೇ ನೀನು ಹೀಗೆ ಮಾಡಿದೆ, ನೀನು ಈ ರೀತಿ ನಡೆದುಕೊಂಡೆ ಎಂದು ಹೇಳುವುದರಿಂದ ಮಕ್ಕಳಲ್ಲಿ ಸ್ವಪ್ರಜ್ಞೆ ಅಗತ್ಯಕ್ಕಿಂತ ಹೆಚ್ಚಾಗಿ ಬೆಳೆಯುತ್ತಿದೆ. ಇವುಗಳಲ್ಲಿ ಭಾಗವಹಿಸುವ ಮಕ್ಕಳು ಸ್ಪರ್ಧಾರ್ಥಿಗಳಾಗುತ್ತಿದ್ದಾರೆಯೇ ಹೊರತು ಕಲಾವಿದರಾಗುತ್ತಿಲ್ಲ ಎಂದರು.

ಗ್ರಾಮೀಣ ಕರಕುಶಲ ಕಲೆ, ನೇಕಾರಿಕೆ ಮುಂತಾದವುಗಳ ಸಮಸ್ಯೆಗಳ ಬಗ್ಗೆ ಪ್ರಸನ್ನ ಅವರಿಂದಾಗಿ ನನ್ನಂತವರ ಅರಿವಿಗೆ ಬಂದಿದೆ. ಜಿಎಸ್‌ಟಿ ಸಮಸ್ಯೆ ಸೇರಿದಂತೆ ಗ್ರಾಮೀಣ ಕರಕುಶಲ ಕಲೆಗಳ ಸಮಸ್ಯೆ ಮತ್ತು ಸವಾಲುಗಳ ಸಂದರ್ಭ ಪ್ರಸನ್ನ ಸರ್ಕಾರವನ್ನು ಎಚ್ಚರಿಸಿದ್ದಾರೆ. ಪ್ರಸನ್ನರ ಚಳುವಳಿಯ ಪ್ರಭಾವದಿಂದಾಗಿ ನಾನೂ ಸಹ ಕೈ ಜೋಡಿಸಲು ಸಾಧ್ಯವಾಗಿದೆ. ಈಗ ಇಂತಹ ಪ್ರಶಸ್ತಿ ಪ್ರಸನ್ನ ಮತ್ತು ಚರಕದ ಮೂಲಕ ನನಗೆ ದೊರಕುತ್ತಿರುವುದು ಸಂತೋಷದ ಸಂಗತಿ ಎಂದರು.

ಕವಿಕಾವ್ಯ ಟ್ರಸ್ಟ್‌ನ ಕಾರ‍್ಯದರ್ಶಿ ಜಿ.ಇಂದುಕುಮಾರ್ ಮಾತನಾಡಿ,  ಗ್ರಾಮಾಂತರದ ಹೆಣ್ಣುಮಕ್ಕಳ ಸಂಸ್ಥೆಯಾಗಿರುವ ಕವಿಕಾವ್ಯ ಟ್ರಸ್ಟ್‌ನ ವತಿಯಿಂದ ಕುಶಲೆ ಪ್ರಶಸ್ತಿ ನೀಡುವ ಕಾರ‍್ಯವನ್ನು 2021-22ನೇ ಸಾಲಿನಲ್ಲಿ ಆರಂಭಿಸಲಾಗಿದೆ.  25 ಸಾವಿರ ರೂಪಾಯಿ ನಗದು, ಫಲಕ ಒಳಗೊಂಡಿರುವ ಈ ಪ್ರಶಸ್ತಿಗೆ ಕುಶಲೆ ಎಂದು ಹೆಸರಿಡಲಾಗಿದೆ.  ಮೊದಲ ಪ್ರಶಸ್ತಿಯನ್ನು ಕನ್ನಡದ ಹೆಸರಾಂತ ನಟಿ ಹಾಗೂ ಗಾಯಕಿ ಎಂ.ಡಿ. ಪಲ್ಲವಿಯವರಿಗೆ ಸಂಸ್ಥೆ ನೀಡುತ್ತಿರುವುದು ಹೆಮ್ಮೆ ತಂದಿದೆ. ಸಂಗೀತ, ನಾಟಕ ಕ್ಷೇತ್ರಕ್ಕೆ ಪಲ್ಲವಿಯವರು ನೀಡಿದ ಕೊಡುಗೆ ಹಾಗೂ ಅವರ ಸಹಕಾರಿ ಮನೋಭಾವವನ್ನು ಪರಿಗಣಿಸಿ ಕುಶಲೆ ಪ್ರಶಸ್ತಿ ನೀಡಲಾಗಿದೆ ಎಂದರು.

ಹಾಡು ಹರಟೆ ಕಾರ‍್ಯಕ್ರಮವನ್ನು ಎಂ.ವಿ.ಪ್ರತಿಭಾ ನಿರ್ವಹಿಸಿದರು. ಚರಕ ಸಂಸ್ಥೆಯ ಮಹಾಲಕ್ಷ್ಮಿ, ರಮೇಶ್, ಪೀಟರ್, ಜೀವನ್ಮುಖಿ ಸಂಸ್ಥೆಯ ನಂದಾ ಗೊಜನೂರು, ಗೀತಾ ಶ್ರೀನಾಥ್, ರೋಹಿಣಿ ಶರ್ಮಾ, ಮಂಜುಳಾ, ಚೈತ್ರ ಮುಂತಾದವರು ಹಾಜರಿದ್ದರು.

ಟಾಪ್ ನ್ಯೂಸ್

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

Cap-Brijesh-Chowta

Mangaluru: ಇಂಧನ ಸ್ಥಾಯಿ ಸಮಿತಿ ಸದಸ್ಯರಾಗಿ ಸಂಸದ ಕ್ಯಾ.ಬ್ರಿಜೇಶ್ ಚೌಟ ನೇಮಕ

1-kkk

PM Modi ನಾನು ಹೇಳಿದ್ದನ್ನು ಮಾಡಿ ತೋರಿಸಿದರೆ ಬಿಜೆಪಿ ಪರ ಪ್ರಚಾರ ಮಾಡುತ್ತೇನೆ: ಕೇಜ್ರಿವಾಲ್

Jaladurga-Puuturu

Putturu: ಭಾರೀ ಮಳೆಗೆ ಪೆರುವಾಜೆ ದೇವಾಲಯ ಜಲಾವೃತ

1-jagga

R. Ashoka ಪ್ರಕರಣವನ್ನು ಮುಡಾಕ್ಕೆ ಹೋಲಿಸಿದ್ದು ಸರಿಯಲ್ಲ:ಜಗದೀಶ ಶೆಟ್ಟರ್

1-rain-hebri

Heavy Rain: ಹೆಬ್ರಿಯಲ್ಲಿ ಮೇಘಸ್ಫೋಟ: ನೀರಲ್ಲಿ ಕೊಚ್ಚಿ ಹೋದ ಕಾರು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

10-sagara

Sagara: ಬಾಣಂತಿಗೆ ಕಪಾಳಮೋಕ್ಷ; ಪ್ರಸೂತಿ ವೈದ್ಯರ ವಿರುದ್ಧ ಪ್ರಕರಣ ದಾಖಲು

5

Anandapura ಗ್ರಾಮ ಪಂಚಾಯತ್ ಗಳ ಸೇವೆ ಸಂಪೂರ್ಣ ಬಂದ್

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ; ಮಧು ಬಂಗಾರಪ್ಪ ಭರವಸೆ

Sagara: ಸಿಗಂದೂರು ಚೌಡೇಶ್ವರಿ ದೇವಾಲಯಕ್ಕೆ ಅಗತ್ಯ ನ್ಯಾಯ ಒದಗಿಸಲು ಬದ್ಧ; ಮಧು ಬಂಗಾರಪ್ಪ

Sagara: ತಾಯಿಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತು; ಸುಧೀಂದ್ರ ಆಗ್ರಹ

Sagara: ತಾಯಿ ಮಗು ಆಸ್ಪತ್ರೆಯ ಪ್ರಸೂತಿ ತಜ್ಞರ ಅಮಾನತುಗೊಳಿಸುವಂತೆ ಆಗ್ರಹ

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

Holehonnuru: ನದಿಯಲ್ಲಿ ಮುಳುಗಿ ಯುವಕ ನೀರುಪಾಲು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

HDK-Chennapattana

By Polls Fight: ಡಿಸಿಎಂ ಪದೇ ಪದೇ ಬರ್ತಿರೋದು ಕುರ್ಚಿಗಾಗಿ ಅಲ್ವಾ?: ಎಚ್‌.ಡಿ.ಕುಮಾರಸ್ವಾಮಿ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

1

Bantwala: ಕೇಪು, ಅಳಿಕೆಯಲ್ಲಿ ಸಿಡಿಲು ಬಡಿದು ಮನೆಗೆ ಹಾನಿ

Railway-min-Ashiwini

Railway: ಶೀಘ್ರವೇ ಬೆಂಗಳೂರು-ಮೈಸೂರು, ತುಮಕೂರು ನಮೋ ರ್‍ಯಾಪಿಡ್‌ ರೈಲು: ರೈಲ್ವೆ ಸಚಿವ

dw

Padubidri: ರಸ್ತೆ ಅಪಘಾತ; ಗಾಯಾಳು ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.