ಮುಕ್ತಿ ಮಂದಿರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆ

ರಂಭಾಪುರಿ ಶ್ರೀಗಳಿಂದ ಗದ್ದುಗೆಗಳ ಶಂಕುಸ್ಥಾಪನೆ

Team Udayavani, Apr 1, 2022, 3:36 PM IST

17

ಲಕ್ಷ್ಮೇಶ್ವರ: ಭೂ ಕೈಲಾಸ ಮುಕ್ತಿಮಂದಿರ ಧರ್ಮಕ್ಷೇತ್ರದಲ್ಲಿ ತ್ರಿಕೋಟಿ ಶಿವಲಿಂಗ ಸ್ಥಾಪನೆಯಾಗಿ ಜ್ಯೋತಿರ್ಲಿಂಗಗಳಷ್ಟೇ ಪವಿತ್ರ ಕ್ಷೇತ್ರವಾಗಬೇಕೆಂಬ ಲಿಂ|ಜ|ವೀರ ಗಂಗಾಧರ ಶಿವಾಚಾರ್ಯರ ಕನಸು, ಸಂಕಲ್ಪ ಈಡೇರಿಕೆಗೆ ಕಾಲ ಕೂಡಿ ಬಂದಿದೆ.

ಅವರ ಕೃಪಾಶೀರ್ವಾದದಿಂದ ಮುಕ್ತಿಮಂದಿರ ಧರ್ಮ ಕ್ಷೇತ್ರದಲ್ಲಿ ಏ.2 ರಂದು ಶನಿವಾರ ಬೆಳಿಗ್ಗೆ 9ಕ್ಕೆ ಬಾಳೆಹೊನ್ನೂರು ಜ|ಪ್ರಸನ್ನ ರೇಣುಕ ಡಾ|ವೀರ ಸೋಮೇಶ್ವರ ಶಿವಾಚಾರ್ಯರು ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಗದ್ದುಗೆಗಳ ಶಂಕುಸ್ಥಾಪನೆ(ಗುದ್ದಲಿ ಪೂಜೆ) ನೆರವೇರಿಸಲಿದ್ದಾರೆ ಎಂದು ಮುಕ್ತಿಮಂದಿರ ಧರ್ಮಕ್ಷೇತ್ರದ ಪಟ್ಟಾಧ್ಯಕ್ಷರಾದ ಶ್ರೀ ವಿಮಲರೇಣುಕ ವೀರಮುಕ್ತಿಮುನಿ ಶಿವಾಚಾರ್ಯ ಹೇಳಿದರು.

ಈ ಕುರಿತು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಕಳೆದ 2-3 ದಶಕಗಳ ಭಕ್ತರ ಕನಸಾಗಿರುವ ತ್ರಿಕೋಟಿ ಲಿಂಗ ಸ್ಥಾಪನೆಗೆ ಅನೇಕ ಸಮಸ್ಯೆಗಳು ಎದುರಾದರೂ ಸಹ ಇದೀಗ ಲಿಂ|ಜಗದ್ಗುರುಗಳ ಸಂಕಲ್ಪ ಸಾಕಾರಕ್ಕೆ ಮುಂದಡಿ ಇಡಲಾಗುತ್ತಿದೆ.

ಕ್ಷೇತ್ರದಲ್ಲಿ ಈಗಾಗಲೇ ಸಿದ್ಧಗೊಂಡಿರುವ ಸಾವಿರಾರು ಶಿವಲಿಂಗಗಳು ಪ್ರತಿಷ್ಠಾಪನೆಗೊಂಡರೆ ಶ್ರೀಕ್ಷೇತ್ರ ದೇಶಾದ್ಯಂತ ಪ್ರಸಿದ್ಧಿ ಪಡೆಯಲಿದೆ. 2.5 ಅಡಿ ಎತ್ತರದ ಶಿವಲಿಂಗವೊಂದರಲ್ಲಿ 6000 ಗರ್ಭಲಿಂಗಗಳಿರುವಂತಹ 5000 ಶಿವಲಿಂಗಗಳು ಸೇರಿದಾಗ ತ್ರಿಕೋಟಿ ಲಿಂಗವಾಗುತ್ತವೆ. ಈ 5000 ಶಿವಲಿಂಗಗಳು 8 ವರ್ತುಲಗಳಲ್ಲಿ ಪ್ರತಿಷ್ಠಾಪಿತಗೊಂಡು ನಡುವೆ ಲಿಂ|ಜಗದ್ಗುರುಗಳ ಹಾಗೂ ರೇಣುಕರ ಬೃಹತ್‌ ಮೂರ್ತಿ ಮಂದಿರ ನಿರ್ಮಾಣಗೊಳ್ಳಲಿದೆ.

ಈಗಾಗಲೇ ಕ್ಷೇತ್ರದಲ್ಲಿ 4500ಕ್ಕೂ ಹೆಚ್ಚು ಶಿವಲಿಂಗಗಳು, ಒಂದು ಬೃಹತ್‌ ಶಿವಲಿಂಗ ಮತ್ತು ಬಸವಣ್ಣನ ಮೂರ್ತಿ ಸಿದ್ಧಗೊಂಡು ಶ್ರೀಕ್ಷೇತ್ರದಲ್ಲಿ ನೆಲೆನಿಂತಿವೆ. ಲಿಂ|ಶ್ರೀಗಳ ಸಂಕಲ್ಪ ಈಡೇರಿಕೆಗೆ ನಾಡಿನ ಅನೇಕ ಭಕ್ತರು ಸಹಾಯ ನೀಡಿದ್ದು, 1 ಶಿವಲಿಂಗ ಸೇವೆಗೆ 6001 ರೂ. ನಿಗದಿಪಡಿಸಲಾಗಿದೆ ಎಂದರು.

ಬಹುದೊಡ್ಡ ಧರ್ಮ ಕಾರ್ಯಕ್ಕೆ ಭಕ್ತರಿಂದ ತನು, ಮನ, ಧನದ ಸಹಾಯ- ಸಹ ಕಾರದ ಅಗತ್ಯವಿದೆ. “ಮಾನವ ಧರ್ಮಕ್ಕೆ ಜಯವಾಗಲಿ- ಧರ್ಮದಿಂದಳೇ ವಿಶ್ವಕ್ಕೆ ಶಾಂತಿ’ ಎಂಬ ಘೋಷಣೆಯನ್ನು ಜಗತ್ತಿಗೆ ನೀಡಿದ ಲಿಂ|ಜ|ವೀರಗಂಗಾಧರ ಶಿವಾಚಾರ್ಯರು ಸಂಕಲ್ಪ ಈಡೇರಿಕೆಗೆ ಕೈಗೊಂಡ ಮಹೋನ್ನತ ಕಾರ್ಯಕ್ಕೆ ರಂಭಾಪುರಿ ಪೀಠದ ಜಗದ್ಗುರುಗಳ ಅನುಗ್ರಹ, ಭಕ್ತ ಗಣದ ಸಹಾಯ- ಸಹಕಾರದಿಂದ ತ್ರಿಕೋಟಿ ಶಿವಲಿಂಗ ಸ್ಥಾಪನೆಯ ಕಾರ್ಯಕ್ಕೆ ಮುಂದಡಿಯಿಡಲು ಸಾಧ್ಯವಾಗುತ್ತಿವೆ ಎಂದರು.

ಈ ಶ್ರೇಷ್ಠ ಕಾರ್ಯ ನಿರ್ವಿಘ್ನವಾಗಿ ಸಾಗಲು ಯುಗಾದಿಯ ಪರ್ವಕಾಲದ ಶುಭಕೃತ ನಾಮ ಸಂವತ್ಸರದಲ್ಲಿ ರಂಭಾಪುರಿ ಜಗ ದ್ಗುರುಗಳು ಭೂಮಿಪೂಜೆ ನೆರವೇರಿಸಲಿದ್ದಾರೆ. ನಾಡಿನ ಹರ-ಗುರು-ಚರಮೂರ್ತಿಗಳು, ರಾಜಕೀಯ ಮುಖಂಡರು, ಗಣ್ಯರು ಭಾಗವಹಿಸುವರು ಎಂದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Haveri-Die

Haveri: ಡಾಬಾ ಬಂದಾಗ ದಿಢೀರ್‌ ಎಂದು ಕಣ್ಣು ಬಿಟ್ಟ ವ್ಯಕ್ತಿ ನಿಧನ!

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ತೂಕ ಯಂತ್ರದಲ್ಲಿ ಮೋಸ 7 ಜನರ ಲೈಸೆನ್ಸ್‌ ರದ್ದು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

Haveri: ಎತ್ತಿನ ಗಾಡಿಗೆ ಡಿಕ್ಕಿ ಹೊಡೆದ ಬೈಕ್… ಮೂವರು ವಿದ್ಯಾರ್ಥಿಗಳು ಸ್ಥಳದಲ್ಲೇ ಮೃತ್ಯು

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

“ಡಾಬಾ ಬಂತು ಎದ್ದೇಳು’ಅಂದ ಕೂಡಲೇ “ಸತ್ತವನು’ ಉಸಿರಾಡಿದ!

12-haveri

Haveri: ಕೃಷ್ಣಮೃಗ ಅಭಯಾರಣ್ಯದಲ್ಲಿ “ಕಲ್ಲು ಗೌಜಲು’

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.