ಬಿಜೆಪಿ ಸರ್ಕಾರ ಪತನವಾಗುವವರೆಗೂ ಹೋರಾಟ: ಜಯಂತ್
Team Udayavani, Apr 1, 2022, 3:56 PM IST
ಸಾಗರ: ಪೆಟ್ರೋಲ್, ಡೀಸೆಲ್, ಅಡುಗೆ ಅನಿಲ ಸೇರಿದಂತೆ ದಿನಬಳಕೆ ವಸ್ತುಗಳ ದರವನ್ನು ಹೆಚ್ಚಿಸಿರುವ ಕೇಂದ್ರ ಸರ್ಕಾರದ ಜನವಿರೋಧಿ ನೀತಿ ಖಂಡಿಸಿ ಗುರುವಾರ ಕಾಂಗ್ರೆಸ್ ವತಿಯಿಂದ ಸಿಲಿಂಡರ್ಗೆ ಹಾರ ಹಾಕಿ ಪೂಜೆ ಮಾಡಿ, ಜಾಗಟೆ ಬಾರಿಸುವ ಮೂಲಕ ಸಾಗರ ಹೊಟೇಲ್ ವೃತ್ತದಲ್ಲಿ ಪ್ರತಿಭಟನೆ ನಡೆಸಲಾಯಿತು.
ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕೆಪಿಸಿಸಿ ಕಾರ್ಯದರ್ಶಿ ಡಾ| ರಾಜನಂದಿನಿ, ಕೇಂದ್ರ ಸರ್ಕಾರದ ಬೆಲೆಏರಿಕೆ ನೀತಿಯಿಂದಾಗಿ ಜನಸಾಮಾನ್ಯರು ಬದುಕು ನಡೆಸಲು ಸಾಧ್ಯವಾಗದ ಸ್ಥಿತಿ ನಿರ್ಮಾಣವಾಗಿದೆ. ಕಳೆದ ಆರೇಳು ದಿನಗಳಲ್ಲಿ ಪೆಟ್ರೋಲ್, ಡಿಸೇಲ್ ದರ ಏಳೆಂಟು ರೂಪಾಯಿ ಹೆಚ್ಚಿದೆ. ಅಡುಗೆ ಅನಿಲ ಸಿಲಿಂಡರ್ ದರ ಸಾವಿರ ರೂಪಾಯಿ ಸಮೀಪಿಸುತ್ತಿದೆ. ನರೇಂದ್ರ ಮೋದಿಯವರದ್ದು ಬಂಡವಾಳಶಾಹಿಗಳ ಪರವಾದ ಸರ್ಕಾರ ಎನ್ನುವುದು ಸಾಬೀತಾಗಿದೆ ಎಂದರು.
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಆರ್. ಜಯಂತ್ ಮಾತನಾಡಿ, ಈ ದೇಶದಲ್ಲಿ ಬೆಲೆ ಏರಿಕೆ ಮಾತ್ರವಲ್ಲದೆ ಜನರು ಬದುಕಲು ಸಾಧ್ಯವಾಗದಂತೆ ಕೋಮುಭಾವನೆಯನ್ನು ಕೆರಳಿಸುವ ಕೆಲಸವನ್ನು ಬಿಜೆಪಿ ಸರ್ಕಾರ ಕೇಂದ್ರ ಮತ್ತು ರಾಜ್ಯದಲ್ಲಿ ಮಾಡುತ್ತಿದೆ. ದೇಶವನ್ನು ಸಂಪೂರ್ಣ ಹಾಳು ಮಾಡಬೇಕಾದರೆ ಎರಡು ಕೋಮುಗಳ ನಡುವೆ ಕಿಚ್ಚು ಹೊತ್ತಿಸಿದರೆ ಸಾಕು ಎಂದು ಹಿರಿಯರು ಹೇಳಿದ್ದಾರೆ. ಬಿಜೆಪಿ ಸರ್ಕಾರ ಜನರ ಭಾವನೆಗಳ ಜೊತೆ ಚೆಲ್ಲಾಟವಾಡುತ್ತಿದೆ. ಕಾಂಗ್ರೆಸ್ ಇಂತಹದ್ದನ್ನು ಸಹಿಸಿಕೊಳ್ಳುವುದಿಲ್ಲ. ಮುಂದಿನ ದಿನಗಳಲ್ಲಿ ಕಾಂಗ್ರೆಸ್ ವತಿಯಿಂದ ಬಿಜೆಪಿ ಸರ್ಕಾರ ಪತನವಾಗುವವರೆಗೂ ಹೋರಾಟ ನಡೆಸಲಾಗುತ್ತದೆ ಎಂದರು.
ತಾಪಂ ಮಾಜಿ ಅಧ್ಯಕ್ಷ ಮಲ್ಲಿಕಾರ್ಜುನ ಹಕ್ರೆ ಮಾತನಾಡಿ, ತೆರಿಗೆ ಹೆಚ್ಚಳ ಮಾಡಿದ್ದೇ ನರೇಂದ್ರ ಮೋದಿ ಸರ್ಕಾರದ ಹೆಗ್ಗಳಿಕೆಯಾಗಿದೆ. ಪದೇಪದೇ ಇಂಧನ, ಅಡುಗೆ ಅನಿಲ ಸಿಲಿಂಡರ್ ದರ ಹೆಚ್ಚಳ ಮಾಡುವ ಮೂಲಕ ಕೇಂದ್ರ ಸರ್ಕಾರ ಜನಸಾಮಾನ್ಯರ ಬದುಕಿಗೆ ಬರೆ ಹಾಕುವ ಕೆಲಸ ಮಾಡುತ್ತಿದೆ ಎಂದರು. ಪ್ರತಿಭಟನೆಯಲ್ಲಿ ನಗರ ಕಾಂಗ್ರೆಸ್ ಅಧ್ಯಕ್ಷ ಐ.ಎನ್. ಸುರೇಶಬಾಬು, ಜಿಲ್ಲಾ ಕಾಂಗ್ರೆಸ್ ಕಾರ್ಯದರ್ಶಿ ರಫೀಕ್ ಬಾಬಾಜಾನ್, ಮಹಿಳಾ ಕಾಂಗ್ರೆಸ್ ಅಧ್ಯಕ್ಷರಾದ ಮಧುಮಾಲತಿ, ಸುಮಂಗಲ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hosanagara: ಹೆಜ್ಜೇನು ದಾಳಿಯಿಂದ ಏಳು ಮಂದಿಗೆ ಗಾಯ; ಒಬ್ಬರ ಸ್ಥಿತಿ ಗಂಭೀರ
Sagara: ರೈತರ ಭೂಮಿ ಹಕ್ಕು ಸಮಸ್ಯೆ ಹಂತ ಹಂತವಾಗಿ ಪರಿಹಾರಕ್ಕೆ ಸರಕಾರ ಬದ್ಧ: ಜಿ.ಪರಮೇಶ್ವರ್
By-election: ಉಪ ಚುನಾವಣೆ 3 ಕ್ಷೇತ್ರದಲ್ಲೂ ಕಾಂಗ್ರೆಸ್ಗೆ ಗೆಲುವು; ಬೇಳೂರು
Sagara: ರೈತರು ನಡೆಸುತ್ತಿರುವ ಅಹೋರಾತ್ರಿ ಪ್ರತಿಭಟನೆ; ಜೆಡಿಎಸ್ ಬೆಂಬಲ
Minister R. B. Timmapur: ಬಂಗಾರಪ್ಪ ಕಾಲದಿಂದ ಹೊಸ ಮದ್ಯ ಅಂಗಡಿಗೆ ಪರವಾನಗಿ ನೀಡಿಲ್ಲ
MUST WATCH
ಹೊಸ ಸೇರ್ಪಡೆ
Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ
BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ
Kerala: ವಿಡಿಯೋ ಅಪ್ಲೋಡ್ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ
Explainer: ವಯನಾಡ್ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್ ಅಖಾಡಕ್ಕೆ
Kannada Movie: ನ.29ಕ್ಕೆ ತೆರೆಗೆ ಬರಲಿದೆ ʼನಾ ನಿನ್ನ ಬಿಡಲಾರೆʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.