ಬಳ್ಳಾರಿ: 16 ಕಾಲೇಜುಗಳಲ್ಲಿ ಪ್ರಥಮ ಪಿಯು ಐಚ್ಛಿಕ ಕನ್ನಡ ಪರೀಕ್ಷೆ ರದ್ದು


Team Udayavani, Apr 1, 2022, 5:44 PM IST

1-sdas

ಬಳ್ಳಾರಿ: ಪ್ರಶ್ನೆ ಪತ್ರಿಕೆಯಲ್ಲಿ ದೋಷ ಕಂಡುಬಂದಿರುವ ಹಿನ್ನೆಲೆಯಲ್ಲಿ ಏ.1 ರಂದು ಶುಕ್ರವಾರ ನಡೆಯಬೇಕಿದ್ದ ಪ್ರಥಮ ಪಿಯು ವಾರ್ಷಿಕ ಪರೀಕ್ಷೆಯ ವಿಷಯ ಸಂಖ್ಯೆ 16 ಐಚ್ಛಿಕ ಕನ್ನಡ ಪರೀಕ್ಷೆಯನ್ನು ಬಳ್ಳಾರಿ/ವಿಜಯನಗರ ಜಿಲ್ಲೆಗಳಲ್ಲಿ ರದ್ದುಗೊಳಿಸಿ ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ರಾಜು ಅವರು ಆದೇಶ ಹೊರಡಿಸಿದ್ದಾರೆ.

ಪ್ರಥಮ ಪಿಯು ಪರೀಕ್ಷೆಗಳು ಏ.1 ರಂದು ಶುಕ್ರವಾರದಿಂದ ರಾಜ್ಯಾದ್ಯಂತ ಆರಂಭವಾಗಿದ್ದು, ಮೊದಲ ದಿನ ಶುಕ್ರವಾರ ಮಧ್ಯಾಹ್ನ ೨ ಗಂಟೆಯಿಂದ ಸಂಜೆ ೫.೧೫ರವರೆಗೆ ಲಾಜಿಕ್ ಮತ್ತು ಐಚ್ಛಿಕ ವಿಷಯ ಪರೀಕ್ಷೆಗಳು ನಡೆಯಬೇಕಿತ್ತು. ಆದರೆ, ಐಚ್ಛಿಕ ವಿಷಯ ಪ್ರಶ್ನೆ ಪತ್ರಿಕೆಯ ತಲೆಬರಹ ಪ್ರಥಮ ಪಿಯು ಬದಲಿಗೆ ದ್ವಿತೀಯ ಪಿಯು ಎಂದು ಮುದ್ರಣವಾಗಿರುವುದು ಪರೀಕ್ಷೆಗೆ ರದ್ದುಗೊಳಿಸಲು ಕಾರಣವಾಗಿದೆ. ಪರೀಕ್ಷೆಗೆ ಹಾಜರಾಗಿದ್ದ ವಿದ್ಯಾರ್ಥಿಗಳಿಗೆ ವಿತರಣೆಗೆ ಮುನ್ನವೇ ಪ್ರಶ್ನೆಪತ್ರಿಕೆಯಲ್ಲಿ ಆಗಿರುವ ಈ ಮುದ್ರಣ ಲೋಪವನ್ನು ಉಪನ್ಯಾಸಕರು, ಮೇಲ್ವಿಚಾರಕರು ಪತ್ತೆ ಹಚ್ಚಿರುವ ಹಿನ್ನೆಲೆಯಲ್ಲಿ ಕೂಡಲೇ ಐಚ್ಛಿಕ ಕನ್ನಡ ಪರೀಕ್ಷೆಯನ್ನು ರದ್ದುಗೊಳಿಸಿ, ಏಪ್ರಿಲ್ 16 ರಂದು ಬೆಳಗ್ಗೆ 9.30 ರಿಂದ ಮಧ್ಯಾಹ್ನ 12.45 ರವರೆಗೆ ನಡೆಸಲಾಗುವುದು ಎಂದು ಡಿಡಿಪಿಯು ರಾಜು ಅವರು ಆದೇಶ ಹೊರಡಿಸಿದ್ದಾರೆ.

ರಾಜ್ಯಾದ್ಯಂತ ಎಲ್ಲೆಡೆ ಪ್ರಥಮ ಪಿಯು ಪರೀಕ್ಷೆಗಳು ಸುಸೂತ್ರವಾಗಿ ನಡೆದಿವೆ. ಬಳ್ಳಾರಿ/ವಿಜಯನಗರ ಅವಳಿ ಜಿಲ್ಲೆಗಳಲ್ಲಿ ಮಾತ್ರ ಪ್ರಶ್ನೆ ಪತ್ರಿಕೆಯಲ್ಲಿ ಈ ದೋಷ ಕಂಡುಬಂದಿದೆ. ಅವಳಿ ಜಿಲ್ಲೆಗಳ ೧೬೧ ಪಿಯು ಕಾಲೇಜುಗಳ ಪೈಕಿ ಕೇವಲ 16 ಕಾಲೇಜುಗಳಲ್ಲಿ ಮಾತ್ರ ಐಚ್ಚಿಕ ಕನ್ನಡ ವಿಷಯ ಅಧ್ಯಯನಕ್ಕೆ ಅವಕಾಶವಿದೆ.

ಈ ಹಿನ್ನೆಲೆಯಲ್ಲಿ ಪರೀಕ್ಷೆ ಬರೆಯಲು ಈ ಕಾಲೇಜುಗಳಿಂದ ಒಟ್ಟು 1700 ವಿದ್ಯಾರ್ಥಿಗಳು ಹೆಸರು ನೋಂದಾಯಿಸಿಕೊಂಡಿದ್ದರು. ತಲೆಬರಹ ಮುದ್ರಣ ಲೋಪವಾಗಿರುವ ಪ್ರಶ್ನೆ ಪತ್ರಿಕೆಯಲ್ಲಿನ ಪ್ರಶ್ನೆಗಳು ಸಹ ದ್ವಿತೀಯ ಪಿಯುಗೆ ಸಂಬಂಧಿಸಿದ್ದೇ ಇಲ್ಲವೇ ಎಂಬುದನ್ನು ಪರಿಶೀಲಿಸಿಲ್ಲ. ತಲೆಬರಹದಲ್ಲಿ ಲೋಪವಾಗಿದ್ದನ್ನು ನೋಡಿದಾಕ್ಷಣ ಪರೀಕ್ಷೆಯನ್ನೇ ರದ್ದುಗೊಳಿಸಿ, ಮುಂದೂಡಲಾಗಿದ್ದು, ಏ.16 ರಂದು ಬೆಳಗ್ಗೆ9.30 ರಿಂದ ಮಧ್ಯಾಹ್ನ 12.45 ರವರೆಗೆ ನಡೆಸಲಾಗುವುದು ಎಂದು ಡಿಡಿಪಿಯು ರಾಜು ಸ್ಪಷ್ಟಪಡಿಸಿದ್ದಾರೆ.

ಟಾಪ್ ನ್ಯೂಸ್

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ

1-vij

Vijayapura;ಇಬ್ಬರು ಅಂತಾರಾಜ್ಯ ಕಳ್ಳರ ಬಂಧನ: 184 ಗ್ರಾಂ ಚಿನ್ನ, 80 ಗ್ರಾಂ ಬೆಳ್ಳಿ ಜಪ್ತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

4-Kanahosahalli

Kanahosahalli: ಹೋಬಳಿಯಾದ್ಯಂತ ಭಾರಿ ಮಳೆ; ಹಳ್ಳದಲ್ಲಿ ಕೊಚ್ಚಿಹೋದ ಮಿನಿ ಲಾರಿ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

Tungabhadra ಡ್ಯಾಂನ ಎಲ್ಲ 33 ಗೇಟ್‌ ಬದಲಿಸಲು ತಜ್ಞರ ಸಲಹೆ

7-road-mishap

ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು

21-Huvina-Hadagali

Huvina Hadagali: ಇಬ್ಬರು ಮಕ್ಕಳನ್ನು ಕೊಂದು ತಾನೂ ಆತ್ಮಹತ್ಯೆ ಮಾಡಿಕೊಂಡ ಮಹಿಳೆ

3–tungabadra-dam

TungabhadraDam ಚೈನ್ ಲಿಂಕ್ ಮುರಿತ;ತಾತ್ಕಾಲಿಕ ತಡೆಗೇಟ್ ನಿರ್ಮಾಣಕ್ಕೆ ಜಮೀರ್ ಅಹ್ಮದ್ ಪೂಜೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

Vaishnodevi-Temple

Famous Goddess Temple: ಗುಹಾಲಯ ಶ್ರೀಮಾತಾ ವೈಷ್ಣೋದೇವಿ ದೇಗುಲ, ಜಮ್ಮು-ಕಾಶ್ಮೀರ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Siddapura: ಪತ್ನಿ ಮತ್ತು ತಂಡದಿಂದ ಹಲ್ಲೆ ಆರೋಪ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

Mulki: ಮಾದಕ ವಸ್ತು ಸಾಗಾಟ ಆರೋಪಿಗಳ ಸೆರೆ

16

Ullal: ನಾಪತ್ತೆಯಾಗಿದ್ದ ವ್ಯಕ್ತಿಯ ಶವ ಬಾವಿಯಲ್ಲಿ ಪತ್ತೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.