![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 2, 2022, 1:56 PM IST
ಮಹಾಲಿಂಗಪುರ: ಪಟ್ಟಣದ ಐತಿಹಾಸಿಕ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಪ್ರತಿವರ್ಷದಂತೆ ಯುಗಾದಿ ಹಬ್ಬದ ಜಟೋತ್ಸವವು ಶನಿವಾರ ಮುಂಜಾನೆ ಸಂಭ್ರಮ ಸಡಗರದಿಂದ ಜರುಗಿತು.
ನಸುಕಿನಲ್ಲೆ ಭಕ್ತರ ಆಗಮನ : ಯುಗಾದಿ ಜಟೋತ್ಸವ ವೀಕ್ಷಣೆಗಾಗಿ ನಸುಕಿನ 3 ಗಂಟೆಯಿಂದಲೇ ಭಕ್ತರು ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಆಗಮಿಸುತ್ತಿದ್ದರು. ಯುಗಾದಿಯ ಮುಂಜಾನೆ ಮಹಾಲಿಂಗೇಶ್ವರ ಜಟೋತ್ಸವ ವೀಕ್ಷಣೆ ಮಾಡಿದರೇ ಯಾವುದೇ ಕಂಟಕ ಇರುವದಿಲ್ಲ, ವರ್ಷಪೂರ್ತಿ ನೆಮ್ಮದಿಯ ಜೀವನ ನಡೆಸಬಹುದು ಎಂಬುವದು ಭಕ್ತಾದಿಗಳ ಅಜಲ ನಂಬಿಕೆಯಾಗಿದೆ.
ಯುಗಾದಿ ಪಾಡ್ಯೆಯ ನಿಮಿತ್ಯ ಮಹಾಲಿಂಗೇಶ್ವರ ಗದ್ದುಗೆಗೆ ವಿಶೇಷ ಪೂಜೆ ಸಲ್ಲಿಸಲಾಯಿತು. ಜಟೋತ್ಸವ ವೇಳೆ ಕರಡಿ ಕಲಾವಿದರು ಕರಡಿ ಸೇವೆ ಸಲ್ಲಿಸಿದರು.ಜಟೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಶಾವಗಿ ಪಾಯಸದ ಸಿಹಿ ಪ್ರಸಾದ ವ್ಯವಸ್ಥೆ ಮಾಡಲಾಗಿತ್ತು.
ಬಾಗಲಕೋಟೆಯ ಸಂಸದ ಪಿ.ಸಿ.ಗದ್ದಿಗೌಡರ, ತೇರದಾಳ ಶಾಸಕ ಸಿದ್ದು ಸವದಿ, ಮಹಾಲಿಂಗೇಶ್ವರ ಜಾತ್ರಾ ಕಮೀಟಿ ಅಧ್ಯಕ್ಷ ಲಕ್ಷ್ಮಣಗೌಡ ಪಾಟೀಲ ಸೇರಿದಂತೆ ಮಹಾಲಿಂಗಪುರ ಹಾಗೂ ಸುತ್ತಮುತ್ತಲಿನ ಗ್ರಾಮಗಳ ಸಾವಿರಾರು ಭಕ್ತರು ಉಪಸ್ಥಿತರಿದ್ದರು.
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.