1800 ವರ್ಷ ಇತಿಹಾಸವಿರುವ ನಾಗ ದೇವರಿಗೆ ಕೋಳಿ ಬಲಿಕೊಟ್ಟು ಪೂಜಿಸುತ್ತಾರಂತೆ ಗ್ರಾಮಸ್ಥರು…

ಅರೋಗ್ಯ ಸಂಬಂಧಿ ಸಮಸ್ಯೆಗೆ ಈ ನಾಗದೇವರ ಅನುಗ್ರಹವೇ ಪರಿಹಾರ

Team Udayavani, Apr 3, 2022, 6:55 PM IST

1800 ವರ್ಷ ಇತಿಹಾಸವಿರುವ ನಾಗ ದೇವರಿಗೆ ಕೋಳಿ ಬಲಿಕೊಟ್ಟು ಪೂಜಿಸುತ್ತಾರಂತೆ ಗ್ರಾಮಸ್ಥರು…

ಕೊರಟಗೆರೆ : ತಾಲೂಕಿನ ಹೊಳವನಹಳ್ಳಿ ಹೋಬಳಿಯ ಸುಮಾರು 1800 ವರ್ಷದ ಇತಿಹಾಸವಿರುವ ಶ್ರೀ ನಾಗದೇವರ ವಿಗ್ರಹವಿದ್ದು ಆ ವಿಗ್ರಹವನ್ನು ಆದಿಜಾಂಬವ ಜನಾಂಗದ ಕುಟುಂಬದವರು, ಈ ಒಂದು ವಿಗ್ರಹಕ್ಕೆ ವಸಂತಕಾಲದ ಮೊದಲ ಹಬ್ಬವಾದ ಯುಗಾದಿಯ ನಂತರದ ದಿನದಂದು,  ಈ ಜನಾಂಗದವರು ಈ ವಿಗ್ರಹಕ್ಕೆ ಹಿಂದಿನ ಸಂಪ್ರದಾಯದಂತೆ ಕೋಳಿಯನ್ನು ಬಲಿಕೊಟ್ಟು ವಿಗ್ರಹಕ್ಕೆ ಪೂಜೆಯನ್ನು ಮಾಡಿಕೊಂಡು ಬರುತ್ತಿದ್ದಾರೆ.

ಕರಿನಾಗ ಎಂದೇ ಜನಪ್ರಿಯವಾಗಿರುವ ತುಮಕೂರು ಜಿಲ್ಲೆ, ಕೊರಟಗೆರೆ ತಾಲ್ಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹರಪ್ಪ ಗೊಂಡನಹಳ್ಳಿ ಯಲ್ಲಿ ನೆಲೆಸಿರುವ ಸ್ವಾಮಿ ದೇವಸ್ಥಾನಕ್ಕೆ ವಸಂತಕಾಲದ ಯುಗಾದಿ ಹಬ್ಬದ ಹಿಂದಿನ ದಿನದಂದು ಆದಿಜಾಂಬವ ಜನಾಂಗದವರಾದ ನೂರಾರು ಭಕ್ತರು ಬರುತ್ತಾರೆ. ಚರ್ಮವ್ಯಾದಿ, ಕಣ್ಣು, ಮೂಗು, ಕಿವಿಗೆ ಸಂಬಂಧಿಸಿದ ಸಮಸ್ಯೆಗಳಿಗೆ ಈ ದೇವರ ಅನುಗ್ರಹವೇ ಪರಿಹಾರ ಎಂಬ ನಂಬಿಕೆ .ಇದೆ

ನಾಗದೋಷ ನಿವಾರಣೆಗಾಗಿ ಇಲ್ಲಿಗೆ ಬರುವವರೇ ಹೆಚ್ಚಾಗಿದ್ದಾರೆ. ಶತಮಾನಗಳ ಹಿಂದೆ ಹರಪ್ಪ ಗೊಂಡನಹಳ್ಳಿ ಪುಟ್ಟ ಗ್ರಾಮವಿದ್ದು, ಪ್ರತಿ ವರ್ಷ ಯುಗಾದಿ ನಂತರ ದಿನದಂದು ನಡೆಯುವ ಪೂಜೆಯ ದಿನದೊಂದು ಅನ್ನಾಹಾರ ಸೇವಿಸದೆ ಕಾಲ್ನಡಿಗೆ ಮೂಲಕ ಹೋಗಿ ಪೂಜೆ ಸಲ್ಲಿಸುತಿದ್ದರು, ಓಬಳಯ್ಯ ಎಂಬ ವ್ಯಕ್ತಿಗೆ ಸ್ವಪ್ನದಲ್ಲಿ ಸ್ವಾಮಿ ಕಾಣಿಸಿಕೊಂಡು, ದಕ್ಷಿಣ ದಿಕ್ಕಿನಲ್ಲಿ ಒಂದು ಉತ್ತದಲ್ಲಿ ತಾನಿರುವುದಾಗಿ, ತನ್ನನ್ನು ಹುಡುಕಿ ಪ್ರತಿಷ್ಠಾಪನೆ ನಡೆಸಬೇಕು ಎಂದು ತಿಳಿಸಿದ್ದಾರೆ. ಸ್ವಪ್ನ ವೃತ್ತಾಂತವನ್ನು ಗ್ರಾಮಸ್ಥರಿಗೆ ತಿಳಿಸಿದ ಓಬಳಯ್ಯ ತನ್ನ ಸಂಬಂಧಿಕರನ್ನು ಕರೆದುಕೊಂಡು ಹುತ್ತವನ್ನು ಹುಡುಕಾಟ ನಡೆಸಿದ್ದಾರೆ.ಕೆಲವು ಸಮಯದ ನಂತರ ಮನೆಗೆ ಬಂದು ಆಯಾಸದಿಂದ ಕೋಣೆಯಲ್ಲಿ ಮಲಗಿದ ನಂತರ ಅವರಿದ್ದ ಒಂದು ಸ್ಥಳದಿಂದ ಓಂ ಎಂದು ಶಬ್ದವನ್ನು ಕೇಳಿಸಿಕೊಂಡು ಹೊರಗೆ ಬಂದು ನೋಡಿದರೆ ದಕ್ಷಿಣ ದಿಕ್ಕಿನಲ್ಲಿ ಬೇವಿನ ಮರದ ಕೆಳಗಡೆ ಹುತ್ತದಿಂದ ಓಂ ಎಂಬ ಶಬ್ದವನ್ನು ಕೇಳಿ ಹುತ್ತ ಇದ್ದ ಸ್ಥಳವನ್ನು ಅಗೆದು ನೋಡಿದಾಗ ಹೆಡೆ ಸುತ್ತಿಕೊಂಡಿರುವ ನಾಗರ ವಿಗ್ರಹ ಸಿಕ್ಕಿದೆ. ವಿಗ್ರಹ ಸ್ವಪ್ನದಲ್ಲಿ ದೇವರು ನಿರ್ದೇಶನ ನೀಡಿದಂತೆ ತಟದಲ್ಲಿ ವಿಗ್ರಹ ಪ್ರತಿಷ್ಠಾಪಿಸಲಾಗಿದೆ.

ಇದನ್ನೂ ಓದಿ : ಏಪ್ರಿಲ್ ತಿಂಗಳಲ್ಲೇ ನಡೆಯಲಿದೆಯಂತೆ ರಣಬೀರ್ – ಆಲಿಯಾ ಭಟ್ ವಿವಾಹ

ದೈವ ಪ್ರೇರಣೆಯಂತೆ ದೇಗುಲ ನಿರ್ಮಿಸಿದ್ದಾರೆ. ಜಾಂಬವ ಜನಾಂಗದ ವಂಶಸ್ಥರು, ಕಿವಿಯಲ್ಲಿ ಕೀವು ಸೋರುವುದು, ಕಣ್ಣಿನ ಸಮಸ್ಯೆ, ಉಸಿರಾಟ, ಚರ್ಮ ಸಮಸ್ಯೆ, ವಿವಾಹ, ಸಂತಾನ ಭಾಗ್ಯ, ಇಲ್ಲಿಗೆ ಬಂದು ಸಮಸ್ಯೆ ಪರಿಹರಿಸಿಕೊಂಡಿರುವುದಾಗಿ ಭಕ್ತರು ತಿಳಿಸುತ್ತಾರೆ,

ಸುಮಾರು ವರ್ಷಗಳಿಂದ ನಮ್ಮ ತಾತಂದಿರು, ಈ ನಾಗ ದೇವರಿಗೆ ಯುಗಾದಿ ಹಬ್ಬದ ಮರುದಿನ ಉಪವಾಸವಿದ್ದು ಈ ದೇವರಿಗೆ ಪೂಜೆಗೆ ಕೋಳಿಯನ್ನು ಬಲಿಕೊಟ್ಟು ಸಂಪ್ರದಾಯವಿದೆ ಹಿಂದೆ ನಮ್ಮ ಹಿರಿಯರು ಏನು ಮಾಡಿಕೊಂಡು ಬರುತ್ತಿದ್ದರು ಈಗಿನ ಪೀಳಿಗೆ ಅದೇ ರೀತಿ ಮುಂದುವರಿಸಿಕೊಂಡು ಬರುತ್ತಿದ್ದೇವೆ ನಮ್ಮ ಮಕ್ಕಳು ದೇಶದ ಯಾವುದೇ ಮೂಲೆಯಲ್ಲಿದ್ದರೂ ಯುಗಾದಿಯ ದಿನದಂದು ಬರದಿದ್ದರೂ ಈ ದಿನದಂದು ಗ್ರಾಮಕ್ಕೆ ಬರಲೇಬೇಕು ಈ ನಾಗದೇವರಿಗೆ ಪೂಜೆಯನ್ನು ಮಾಡಲೇಬೇಕು ಎಂದರು.

– ಹನುಮಂತರಾಯಪ್ಪ. ಪೂಜಾರ್, ಮಾಜಿ ಗ್ರಾಪಂ ಸದಸ್ಯರು.

ಈ ದೇವರಿಗೆ ಯುಗಾದಿ ಹಬ್ಬದ ನಂತರ ದಿನದಂದು ಪೂಜೆಯನ್ನು ಹಮ್ಮಿಕೊಳ್ಳಲಾಗುತ್ತದೆ ಇದರ ವಿಶೇಷವೇನೆಂದರೆ ನಮ್ಮ ಮನೆಯ ಅಂಗಳಕ್ಕೆ ಬೇರೆಯವರು ಬರುವುದಿಲ್ಲ. ನಮ್ಮ ಅಕ್ಕ ತಂಗಿಯರು ಮದುವೆಯಾದ ನಂತರ ಈ ಒಂದು ಪೂಜೆಗೆ ಬರುವುದು ಬೇಕಾಗಿಲ್ಲ. ತಂದೆಯವರು ಯುಗಾದಿಯ ಹಬ್ಬದ ಮಾರನೇ ದಿನ ಈ ದೇವರಿನ ಪೂಜೆಗೆಂದು ಕೋಳಿಯನ್ನು ಬಲಿಕೊಟ್ಟು ಆಶೀರ್ವಾದ ಪಡೆಯುತ್ತಿದ್ದೇವೆ.

– ಅಂಜನ್ ಮೂರ್ತಿ, ಗ್ರಾಮಸ್ಥರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.