ಬಿಜೆಪಿ ವಿರುದ್ಧ ಯಾವುದೇ ರಂಗವನ್ನು ಮುನ್ನಡೆಸಲು ಹೋಗುವುದಿಲ್ಲ: ಶರದ್ ಪವಾರ್
''ದಿ ಕಾಶ್ಮೀರ್ ಫೈಲ್ಸ್" ನ್ನು ಒಂದು ಧರ್ಮದ ಜನರು ಕೋಪಗೊಳ್ಳುವ ರೀತಿಯಲ್ಲಿ ನಿರ್ಮಿಸಲಾಗಿದೆ
Team Udayavani, Apr 4, 2022, 4:31 PM IST
ಮುಂಬಯಿ: ಬಿಜೆಪಿ ವಿರುದ್ಧ ಯಾವುದೇ ರಂಗವನ್ನು ಮುನ್ನಡೆಸಲು ಹೋಗುವುದಿಲ್ಲ ಎಂದು ಎನ್ಸಿಪಿ ಮುಖ್ಯಸ್ಥ ಶರದ್ ಪವಾರ್ ಹೇಳಿದ್ದಾರೆ.
ಕೊಲ್ಲಾಪುರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಎನ್ಸಿಪಿ ಮುಖ್ಯಸ್ಥ ಪವಾರ್, ಪ್ರಸ್ತುತ ಕಾಂಗ್ರೆಸ್ ನೇತೃತ್ವದ ಯುಪಿಎಯನ್ನು ಮುನ್ನಡೆಸುವುದಿಲ್ಲ ಎಂದು ಸ್ಪಷ್ಟಪಡಿಸಿದ್ದಾರೆ “ಇತ್ತೀಚೆಗೆ, ನಮ್ಮ ಪಕ್ಷದ ಕೆಲವು ಯುವ ಕಾರ್ಯಕರ್ತರು ನನ್ನನ್ನು ಯುಪಿಎ ಅಧ್ಯಕ್ಷರಾಗುವಂತೆ ಕೇಳುವ ನಿರ್ಣಯವನ್ನು ಅಂಗೀಕರಿಸಿದ್ದಾರೆ. . ಆದರೆ ನನಗೆ ಆ ಸ್ಥಾನದ ಬಗ್ಗೆ ಆಸಕ್ತಿ ಇಲ್ಲ, ನಾನು ಆ ಸ್ಥಾನಕ್ಕೆ ಹೋಗುವುದಿಲ್ಲ, ನಾನು ಆ ಜವಾಬ್ದಾರಿಯನ್ನು ತೆಗೆದುಕೊಳ್ಳುವುದಿಲ್ಲ ಎಂದರು.
ಬಿಜೆಪಿಗೆ ಪರ್ಯಾಯವನ್ನು ಒದಗಿಸಲು ಪ್ರಯತ್ನಿಸಿದರೆ, ಅಂತಹ ಬಣವನ್ನು ಸಹಕರಿಸಲು, ಬೆಂಬಲಿಸಲು ಮತ್ತು ಬಲಪಡಿಸಲು ನಾನು ಸಿದ್ಧನಿದ್ದೇನೆ. ನಾವು ಅದನ್ನು ಮಾಡುತ್ತಿದ್ದೇವೆ. ಪ್ರತಿಪಕ್ಷಗಳು ಒಗ್ಗೂಡಬೇಕು ಎಂದು ಹೇಳಿದಾಗ ಕೆಲವು ಸಂಗತಿಗಳನ್ನು ನಿರ್ಲಕ್ಷಿಸಬೇಕಾಗಿಲ್ಲ. ಮಮತಾ ಬ್ಯಾನರ್ಜಿ ಅವರ ಟಿಎಂಸಿ ಪಶ್ಚಿಮ ಬಂಗಾಳದಲ್ಲಿ ಪ್ರಬಲ ಪಕ್ಷವಾಗಿದೆ ಮತ್ತು ಅವರು ಜನರ ಬೆಂಬಲವನ್ನು ಹೊಂದಿದ್ದಾರೆ. ಅದೇ ಸಮಯದಲ್ಲಿ, ಪ್ರಾದೇಶಿಕ ಪಕ್ಷಗಳು ಇತರ ರಾಜ್ಯಗಳಲ್ಲಿ ಪ್ರಬಲವಾಗಿವೆ ಎಂದು ಪವಾರ್ ಹೇಳಿರುವುದಾಗಿ ಪಿಟಿಐ ಉಲ್ಲೇಖಿಸಿದೆ.
“ಒಂದು ಪಕ್ಷ ಮಾತ್ರ ಬಲಿಷ್ಠವಾಗಿದ್ದರೆ ಅದು ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುತಿನ್ನಂತಾಗುತ್ತದೆ. ಅವರು ಮತ್ತು ಚೀನಾದ ಅಧ್ಯಕ್ಷರು ಅವರು ಜೀವಂತವಾಗಿರುವವರೆಗೆ ತಮ್ಮ ದೇಶಗಳನ್ನು ಮುನ್ನಡೆಸಲು ನಿರ್ಧರಿಸಿದ್ದಾರೆ. ಭಾರತವು ಅಂತಹ ಪುತಿನ್ ಹೊಂದಿರಬಾರದು ಎಂದು ನಾನು ಭಾವಿಸುತ್ತೇನೆ. ಎಂದು ಪವಾರ್ ಹೇಳಿದ್ದಾರೆ.
”ದಿ ಕಾಶ್ಮೀರ್ ಫೈಲ್ಸ್” ಚಲನಚಿತ್ರವನ್ನು ಇತರ ಧರ್ಮದ ಜನರು ಕೋಪಗೊಳ್ಳುವ ರೀತಿಯಲ್ಲಿ ನಿರ್ಮಿಸಲಾಗಿದೆ. ಕಾಶ್ಮೀರಿ ಪಂಡಿತರ ನಿರ್ಗಮನದ ಸಮಯದಲ್ಲಿ ಕಣಿವೆಯಲ್ಲಿ ವಿ ಪಿ ಸಿಂಗ್ ಅವರ ಸರ್ಕಾರವು ಕೇಂದ್ರದಲ್ಲಿ ಅಧಿಕಾರದಲ್ಲಿತ್ತು, ಕಾಂಗ್ರೆಸ್ ಇರಲಿಲ್ಲ ಎಂದು ಪವಾರ್ ಪುನರುಚ್ಚರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
J&K: ಇಂದು ಜಮ್ಮು-ಕಾಶ್ಮೀರದಲ್ಲಿ 2ನೇ ಹಂತದ ಮತದಾನ
Politics; ಲೋಕಸಭೆ ಚುನಾವಣೆ ಬಳಿಕ ಮೋದಿ ಮನಸ್ಥಿತಿ ಬದಲಾಗಿದೆ: ರಾಹುಲ್ ಗಾಂಧಿ
Explainer:ಒಂದು ದೇಶ-ಒಂದು ಚುನಾವಣೆ..ರಾಷ್ಟ್ರದ ಹಿತಕ್ಕೊ? ರಾಜಕೀಯ ಪಕ್ಷಗಳ ಹಿತಕ್ಕಾಗಿಯೇೂ?
Delhi CM; ಕೇಜ್ರಿವಾಲ್ರನ್ನು ಮತ್ತೆ ಸಿಎಂ ಮಾಡುವುದೇ ಗುರಿ: ಆತಿಷಿ
Mallikarjun Kharge; ನಿಮ್ಮ ನಾಯಕರ ಬಾಯಿಗೆ ಬೀಗ ಹಾಕಿ: ಮೋದಿಗೆ ಖರ್ಗೆ ಪತ್ರ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Chitradurga: ನಿಯಂತ್ರಣ ತಪ್ಪಿ KSRTC ಬಸ್ ಪಲ್ಟಿ… ವಿದ್ಯಾರ್ಥಿಗಳು ಸೇರಿ ಹಲವರಿಗೆ ಗಾಯ
Influencer: ತನ್ನನ್ನು ತಾನೇ ಮದುವೆಯಾಗಿದ್ದ 26ರ ಯುವತಿ ಕಟ್ಟಡದಿಂದ ಜಿಗಿದು ಆ*ತ್ಮಹ*ತ್ಯೆ
Shivamogga: ಮಾರುಕಟ್ಟೆಯಲ್ಲಿ ಚೀನಾ ಬೆಳ್ಳುಳ್ಳಿ ಮಾರಾಟ… ಅಧಿಕಾರಿಗಳಿಂದ ದಾಳಿ
BBK-11: ಮೊದಲ ದಿನವೇ ಬಿಗ್ ಮನೆಯಲ್ಲಿ ಚಿನ್ನಾಭರಣ ಕಳಚಿಟ್ಟ ‘ಗೋಲ್ಡ್ ಸುರೇಶ್’
Israel: ಹಮಾಸ್,ಹೆಜ್ಬುಲ್ಲಾ, ಸಿರಿಯಾ ಜೊತೆಗೆ ಯೆಮೆನ್ ಹೌತಿ ನೆಲೆಗಳ ಮೇಲೆ ಇಸ್ರೇಲ್ ದಾಳಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.