![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
![Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!](https://www.udayavani.com/wp-content/uploads/2025/02/19-4-415x249.jpg)
Team Udayavani, Apr 4, 2022, 5:10 PM IST
ಯಲಬುರ್ಗಾ: ಕೃಷಿ ಉತ್ಪನ್ನಗಳಿಗೆ ಮೂಲಸೌಲಭ್ಯ ಹಾಗೂ ಬೆಲೆ ಸಿಗಬೇಕಾದರೇ ಸಾರಿಗೆ ವ್ಯವಸ್ಥೆ ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಕಡೆ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಸಚಿವ ಹಾಲಪ್ಪ ಆಚಾರ್ ಹೇಳಿದರು.
ಪಟ್ಟಣದಿಂದ ತಾಲೂಕಿನ ವಿವಿಧ ಗ್ರಾಮಗಳ ರೈತರು ಬೆಳೆದಿರುವ ರೇಷ್ಮೆ ಬೆಳೆ ಮಾರುಕಟ್ಟೆ ತಲುಪುವುದಕ್ಕೆ ಅನೂಕುಲವಾಗುವ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗೆ ನೂತನ ಬಸ್ ಸೌಲಭ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.
ರಾಜ್ಯ ಸರಕಾರ ಹಾಗೂ ಸಾರಿಗೆ ಸಚಿವರು ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, ಕೋಟಿಗೂ ಹೆಚ್ಚು ಜನ ನಿತ್ಯ ಬಸ್ನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣ, ನಗರ ಪ್ರದೇಶಗಳಿಗೆ ಜನರು ಪ್ರಯಾಣಿಸಲು ಬಸ್ ಗಳನ್ನು ಬಿಟ್ಟಿದ್ದು, ಲಾಭ, ನಷ್ಟ ನೋಡುತ್ತಿಲ್ಲ. ಒಟ್ಟಿನಲ್ಲಿ ಜನರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ತಾಲೂಕಿನಲ್ಲಿಯೂ ಸಾರಿಗೆ ಸೌಕರ್ಯ ತುಂಬಾ ಉತ್ತಮವಾಗಿದೆ. ತಾಲೂಕಿನ ಎಲ್ಲ ಗ್ರಾಮಗಳಿಗೂ ಬಸ್ ಸೌಕರ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯಕ್ಕೆ ಅನುಸರವಾಗಿ ಬಸ್ ಸಂಚಾರಕ್ಕೆ ಕ್ರಮಕೈಗೊಳ್ಳಲಾಗಿದೆ.
ತಾಲೂಕಿನಲ್ಲಿ ಇತ್ತೀಚೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ರೇಷ್ಮೆ ಬೆಳೆಯುವುದಕ್ಕೆ ಮುಂದಾಗಿದ್ದು, ಸ್ಥಳೀಯವಾಗಿ ರೇಷ್ಮೆ ಮಾರುಕಟ್ಟೆ ಲಭ್ಯವಿಲ್ಲ ಹಾಗೂ ಸೂಕ್ತ ಬೆಲೆ ಇಲ್ಲದ ಕಾರಣ ರೈತರು ಸಮಸ್ಯೆ ಎದುರಿಸುವಂತಾಗಿತ್ತು. ರಾಮನಗರದಲ್ಲಿ ರೇಷ್ಮೆಗೆ ಸೂಕ್ತ ಬೆಲೆ ಇರುವ ಕಾರಣ ಸಾಕಷ್ಟು ರೈತರು ಮಾರುಕಟ್ಟೆಗೆ ರಾಮನಗರವನ್ನೇ ಅವಲಂಬಿಸಿದ್ದರು. ಈ ಎಲ್ಲ ಕಾರಣದಿಂದ ಬಸ್ ಸೌಲಭ್ಯ ಕಲ್ಪಿಸಿಕೊಡುವುದು ಅವಶ್ಯವಾಗಿತ್ತು. ಹಾಗೆಯೇ ಯಲಬುರ್ಗಾದಿಂದ ಜಾವಗಲ್ವರೆಗೂ ಬಸ್ ಸಂಚಾರ ಆರಂಭಿಸಲಾಯಿತು. ರೈತರು ಬಸ್ ವ್ಯವಸ್ಥೆ ಸದುಪಯೋಗ ಪಡಿಸಿಕೊಳ್ಳಿ ಎಂದರು.
ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯರಾದ ಅಶೋಕ ಅರಕೇರಿ, ಈರಪ್ಪ ಬಣಕಾರ, ಸಿದ್ದರಾಮೇಶ ಬೆಲೇರಿ,ಪ್ರಮುಖರಾದ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಅಮರಪ್ಪ ಕಲಬುರ್ಗಿ, ಸಿ.ಎಚ್. ಪೊಲೀಸಪಾಟೀಲ್, ಪ್ರಭುರಾಜ ಕಲಬುರ್ಗಿ, ಸುನೀಲ ಕುಲಕರ್ಣಿ, ರಿಯಾಜ್ ಖಾಜಿ, ಇಕ್ಬಾಲ್ ಸಾಬ್ ವಣಗೇರಿ, ಗೌಸುಸಾಬ್ ಕನಕಗಿರಿ, ಎಂ.ಎಫ್. ನದಾಫ್, ಮುನಾಫ್, ಡಿಪೋ ಮ್ಯಾನೇಜರ್ ರಮೇಶ ಚಿಣಗಿ, ಚಂದ್ರು ಮರದಡ್ಡಿ, ಸಾರಿಗೆ ಇಲಾಖೆ ಸಿಬ್ಬಂದಿ ಇದ್ದರು.
Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…
Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್ ಕೊಪ್ಪಳದಲ್ಲಿ ಆತ್ಮಹ*ತ್ಯೆ
Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು
Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು
Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
Pro Hockey: ಇಂಗ್ಲೆಂಡ್ ವಿರುದ್ಧ ಭಾರತ ವನಿತೆಯರಿಗೆ ಸೋಲು
You seem to have an Ad Blocker on.
To continue reading, please turn it off or whitelist Udayavani.