ಉತ್ತಮ ಸಾರಿಗೆಯಿಂದ ಕೃಷಿ ಪ್ರಗತಿ: ಆಚಾರ್‌

ಬೆಂಗಳೂರು-ರಾಮನಗರ ಜಿಲ್ಲೆಗೆ ಬಸ್‌ ಸೌಲಭ್ಯ

Team Udayavani, Apr 4, 2022, 5:10 PM IST

20

ಯಲಬುರ್ಗಾ: ಕೃಷಿ ಉತ್ಪನ್ನಗಳಿಗೆ ಮೂಲಸೌಲಭ್ಯ ಹಾಗೂ ಬೆಲೆ ಸಿಗಬೇಕಾದರೇ ಸಾರಿಗೆ ವ್ಯವಸ್ಥೆ ಸರಿಯಾಗಿರಬೇಕು. ಈ ನಿಟ್ಟಿನಲ್ಲಿ ರೈತರಿಗೆ ಅಗತ್ಯವಿರುವ ಎಲ್ಲ ಕಡೆ ಸಾರಿಗೆ ವ್ಯವಸ್ಥೆ ಕೈಗೊಳ್ಳಲಾಗಿದೆ ಎಂದು ಸಚಿವ ಹಾಲಪ್ಪ ಆಚಾರ್‌ ಹೇಳಿದರು.

ಪಟ್ಟಣದಿಂದ ತಾಲೂಕಿನ ವಿವಿಧ ಗ್ರಾಮಗಳ ರೈತರು ಬೆಳೆದಿರುವ ರೇಷ್ಮೆ ಬೆಳೆ ಮಾರುಕಟ್ಟೆ ತಲುಪುವುದಕ್ಕೆ ಅನೂಕುಲವಾಗುವ ಬೆಂಗಳೂರು ಹಾಗೂ ರಾಮನಗರ ಜಿಲ್ಲೆಗೆ ನೂತನ ಬಸ್‌ ಸೌಲಭ್ಯಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು.

ರಾಜ್ಯ ಸರಕಾರ ಹಾಗೂ ಸಾರಿಗೆ ಸಚಿವರು ರಾಜ್ಯದ ಜನರಿಗೆ ಉತ್ತಮ ಸಾರಿಗೆ ವ್ಯವಸ್ಥೆ ಕಲ್ಪಿಸಿದ್ದು, ಕೋಟಿಗೂ ಹೆಚ್ಚು ಜನ ನಿತ್ಯ ಬಸ್‌ನಲ್ಲಿಯೇ ಪ್ರಯಾಣ ಮಾಡುತ್ತಿದ್ದಾರೆ. ಗ್ರಾಮೀಣ ಪ್ರದೇಶಗಳಿಂದ ಪಟ್ಟಣ, ನಗರ ಪ್ರದೇಶಗಳಿಗೆ ಜನರು ಪ್ರಯಾಣಿಸಲು ಬಸ್‌ ಗಳನ್ನು ಬಿಟ್ಟಿದ್ದು, ಲಾಭ, ನಷ್ಟ ನೋಡುತ್ತಿಲ್ಲ. ಒಟ್ಟಿನಲ್ಲಿ ಜನರಿಗೆ ಸಮರ್ಪಕ ಸಾರಿಗೆ ಸೌಲಭ್ಯ ಕಲ್ಪಿಸಲಾಗಿದೆ. ತಾಲೂಕಿನಲ್ಲಿಯೂ ಸಾರಿಗೆ ಸೌಕರ್ಯ ತುಂಬಾ ಉತ್ತಮವಾಗಿದೆ. ತಾಲೂಕಿನ ಎಲ್ಲ ಗ್ರಾಮಗಳಿಗೂ ಬಸ್‌ ಸೌಕರ್ಯ ಒದಗಿಸಲಾಗಿದೆ. ವಿದ್ಯಾರ್ಥಿಗಳ ಶಾಲಾ-ಕಾಲೇಜು ಸಮಯಕ್ಕೆ ಅನುಸರವಾಗಿ ಬಸ್‌ ಸಂಚಾರಕ್ಕೆ ಕ್ರಮಕೈಗೊಳ್ಳಲಾಗಿದೆ.

ತಾಲೂಕಿನಲ್ಲಿ ಇತ್ತೀಚೆಗೆ ರೈತರು ಹೆಚ್ಚಿನ ಪ್ರಮಾಣದಲ್ಲಿ ರೇಷ್ಮೆ ಬೆಳೆಯುವುದಕ್ಕೆ ಮುಂದಾಗಿದ್ದು, ಸ್ಥಳೀಯವಾಗಿ ರೇಷ್ಮೆ ಮಾರುಕಟ್ಟೆ ಲಭ್ಯವಿಲ್ಲ ಹಾಗೂ ಸೂಕ್ತ ಬೆಲೆ ಇಲ್ಲದ ಕಾರಣ ರೈತರು ಸಮಸ್ಯೆ ಎದುರಿಸುವಂತಾಗಿತ್ತು. ರಾಮನಗರದಲ್ಲಿ ರೇಷ್ಮೆಗೆ ಸೂಕ್ತ ಬೆಲೆ ಇರುವ ಕಾರಣ ಸಾಕಷ್ಟು ರೈತರು ಮಾರುಕಟ್ಟೆಗೆ ರಾಮನಗರವನ್ನೇ ಅವಲಂಬಿಸಿದ್ದರು. ಈ ಎಲ್ಲ ಕಾರಣದಿಂದ ಬಸ್‌ ಸೌಲಭ್ಯ ಕಲ್ಪಿಸಿಕೊಡುವುದು ಅವಶ್ಯವಾಗಿತ್ತು. ಹಾಗೆಯೇ ಯಲಬುರ್ಗಾದಿಂದ ಜಾವಗಲ್‌ವರೆಗೂ ಬಸ್‌ ಸಂಚಾರ ಆರಂಭಿಸಲಾಯಿತು. ರೈತರು ಬಸ್‌ ವ್ಯವಸ್ಥೆ ಸದುಪಯೋಗ ಪಡಿಸಿಕೊಳ್ಳಿ ಎಂದರು.

ಪಪಂ ಅಧ್ಯಕ್ಷ ಅಮರೇಶ ಹುಬ್ಬಳ್ಳಿ, ಸದಸ್ಯರಾದ ಅಶೋಕ ಅರಕೇರಿ, ಈರಪ್ಪ ಬಣಕಾರ, ಸಿದ್ದರಾಮೇಶ ಬೆಲೇರಿ,ಪ್ರಮುಖರಾದ ಬಸಲಿಂಗಪ್ಪ ಭೂತೆ, ವೀರಣ್ಣ ಹುಬ್ಬಳ್ಳಿ, ಅಮರಪ್ಪ ಕಲಬುರ್ಗಿ, ಸಿ.ಎಚ್‌. ಪೊಲೀಸಪಾಟೀಲ್‌, ಪ್ರಭುರಾಜ ಕಲಬುರ್ಗಿ, ಸುನೀಲ ಕುಲಕರ್ಣಿ, ರಿಯಾಜ್‌ ಖಾಜಿ, ಇಕ್ಬಾಲ್‌ ಸಾಬ್‌ ವಣಗೇರಿ, ಗೌಸುಸಾಬ್‌ ಕನಕಗಿರಿ, ಎಂ.ಎಫ್‌. ನದಾಫ್‌, ಮುನಾಫ್‌, ಡಿಪೋ ಮ್ಯಾನೇಜರ್‌ ರಮೇಶ ಚಿಣಗಿ, ಚಂದ್ರು ಮರದಡ್ಡಿ, ಸಾರಿಗೆ ಇಲಾಖೆ ಸಿಬ್ಬಂದಿ ಇದ್ದರು.

ಟಾಪ್ ನ್ಯೂಸ್

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavati: 15 ದಿನದಲ್ಲೇ ಕಳ್ಳತನ ಪ್ರಕರಣ ಭೇದಿಸಿದ ಪೊಲೀಸರು…

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

Gangavathi: ಬ್ರಹ್ಮಾವರ ಮೂಲದ ದೇಗುಲ ಕಟ್ಟಡ ಎಂಜಿನಿಯರ್‌ ಕೊಪ್ಪಳದಲ್ಲಿ ಆತ್ಮಹ*ತ್ಯೆ

13(1

Tawargera: ಲಾರಿ-ಬುಲೆರೋ ವಾಹನ ಡಿಕ್ಕಿ; ಇಬ್ಬರು ಸಾವು

12-

Kanakagiri: ಬ್ಯಾಂಕಿನಲ್ಲಿಯೇ ವೃದ್ಧ ಗ್ರಾಹಕನ ಹಣ ಎಗರಿಸಿದ ಖದೀಮರು

Shivaraj-Tangadagi

Koppal: ರಾಜ್ಯದಲ್ಲಿ ನಾವು ಸ್ಟ್ರಾಂಗ್‌ ಇದ್ದಿದ್ದರಿಂದ ಇವಿಎಂ ಕಿತಾಪತಿ ನಡೆದಿಲ್ಲ; ತಂಗಡಗಿ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.