ವಿಶ್ವಾಸಕ್ಕೆ ತೆಗೆದುಕೊಂಡು ಕಾರ್ಯನಿರ್ವಹಣೆ: ಸಿಎಂ ಬೊಮ್ಮಾಯಿ
Team Udayavani, Apr 6, 2022, 6:40 AM IST
ಬೆಂಗಳೂರು: ಮುಸಲ್ಮಾನ ಸಮುದಾಯದವರು ನಮಾಜ್ ಮಾಡಲು ಆಜಾನ್ ಬಳಕೆ ಮಾಡುವ ಬಗ್ಗೆ ಹೈಕೋರ್ಟ್ ಆದೇಶ ಇದೆ. ಈ ವಿಚಾರದಲ್ಲಿ ಎಲ್ಲರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಕೆಲಸ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಮಂಗಳವಾರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಆಜಾನ್ ಬಳಕೆಗೆ ನಿರ್ದಿಷ್ಟ ಡೆಸಿಬಲ್ಸ್ ಶಬ್ದ ಇರಬೇಕು ಎಂದು ಹೈಕೋರ್ಟ್ ಈ ಹಿಂದೆಯೇ ಆದೇಶ ನೀಡಿತ್ತು. ಆ ಆದೇಶ ಪಾಲಿಸಿಲ್ಲ ಅಂತ ಹೈಕೋರ್ಟ್ ಮತ್ತೊಂದು ಆದೇಶ ಮಾಡಿದೆ ಎಂದರು.
ಹೈಕೋರ್ಟ್ನ ಹಿಂದಿನ ಆದೇಶಗಳನ್ನು ಹಂತ ಹಂತವಾಗಿ ಪಾಲನೆಗೆ ಕ್ರಮ ತೆಗೆದುಕೊಳ್ಳುತ್ತೇವೆ. ಎಲ್ಲರನ್ನೂ ವಿಶ್ವಾಸದಲ್ಲಿ ತೆಗೆದುಕೊಂಡು ಮಾಡುವ ಕೆಲಸ ಇದು. ಈ ವಿಚಾರದಲ್ಲಿ ಯಾವುದೇ ರೀತಿಯ ಬಲವಂತ ಮಾಡಬೇಕಾಗಿಲ್ಲ. ಹಲವು ಸಂಘಟನೆಗಳ ಜತೆ ಪೊಲೀಸ್ ಠಾಣೆ ಮಟ್ಟದಲ್ಲಿ, ಜಿಲ್ಲಾ ಮಟ್ಟದಲ್ಲಿ ಸಭೆಗಳನ್ನೂ ಮಾಡಿದ್ದೇವೆ. ಮುಂದೆಯೂ ಈ ತರದ ಸಭೆಗಳನ್ನು ಮಾಡಿ ಕ್ರಮ ತೆಗೆದುಕೊಳ್ಳುತ್ತೇವೆ ಎಂದು ಹೇಳಿದರು.
ಇದನ್ನೂ ಓದಿ:ಡಾ| ಪ್ರಭಾಕರ ಭಟ್ ಆರೋಗ್ಯದಲ್ಲಿ ಏರುಪೇರು; ಆಸ್ಪತ್ರೆಗೆ ದಾಖಲು
ಹಾಸ್ಯಾಸ್ಪದ
ತೆಲಂಗಾಣದ ಐಟಿ ಬಿಟಿ ಸಚಿವ ಕೆ.ಟಿ. ರಾಮರಾವ್ ಬೆಂಗಳೂರನ್ನು ಹೈದರಾಬಾದ್ಗೆ ಕರ್ನಾಟಕವನ್ನು ತೆಲಂಗಾಣಕ್ಕೆ ಹೋಲಿಕೆ ಮಾಡಿರುವುದು ಹಾಸ್ಯಾಸ್ಪದ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಹೈದರಾಬಾದ್ಗೆ ಉದ್ಯಮಿಗಳನ್ನು ಆಹ್ವಾನಿಸಿ ತೆಲಂಗಾಣ ಸಚಿವ ಕೆ.ಟಿ. ರಾಮರಾವ್ ಟ್ವೀಟ್ ಮಾಡಿರುವುದಕ್ಕೆ ಪ್ರತಿಕ್ರಿಯಿಸಿದ ಅವರು, ಕೆ.ಟಿ. ರಾಮರಾವ್ಗೆ ಅವರ ಟ್ವೀಟ್ ಹಾಸ್ಯಾಸ್ಪದವಾಗಿದೆ. ಇಡೀ ಜಗತ್ತಿನ ಜನ ಬೆಂಗಳೂರಿಗೆ ಬರುತ್ತಿದ್ದಾರೆ. ಬರೀ ಭಾರತದ ಉದ್ಯಮಿಗಳಷ್ಟೇ ಬರುತ್ತಿಲ್ಲ. ಅತೀ ಹೆಚ್ಚು ಸ್ಟಾರ್ಟ್ ಅಪ್ ಗಳು ಬೆಂಗಳೂರಿನಲ್ಲಿವೆ. ಅತೀ ಹೆಚ್ಚು ಎಫ್ ಡಿಐ ಬೆಂಗಳೂರಿನಲ್ಲಿದೆ. ಕರ್ನಾಟಕದ ಕಳೆದ ಮೂರು ತ್ತೈಮಾಸಿಕಗಳ ಆರ್ಥಿಕತೆ ಹೆಚ್ಚಿನ ಮಟ್ಟದಲ್ಲಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
INDvsBAN: ಟೆಸ್ಟ್ ಮೊದಲ ದಿನವೇ ಪ್ರಮಾದ; ಐಸಿಸಿ ಶಿಕ್ಷೆಯ ಭಯದಲ್ಲಿ ಬಾಂಗ್ಲಾದೇಶ ತಂಡ
Labanon: ಲೆಬನಾನ್ ಪ್ರಯಾಣಿಕರು ಪೇಜರ್ಸ್, ವಾಕಿಟಾಕಿ ಒಯ್ಯುವಂತಿಲ್ಲ: ಕತಾರ್ ಏರ್ ವೇಸ್
Thirthahalli: ಮರವೇರಿ ಕುಳಿತ 13 ಅಡಿ ಉದ್ದದ ಹೆಬ್ಬಾವು… ಸ್ಥಳೀಯರಿಂದ ರಕ್ಷಣೆ
Bengaluru: ಜೈಲಲ್ಲಿ ವಿಶೇಷ ಆತಿಥ್ಯ: ನಾಗ, ವೇಲು 2 ದಿನ ಕಸ್ಟಡಿಗೆ
Anandpura: ಗಾಂಜಾ ತಡೆಗೆ ಪೊಲೀಸ್ ಇಲಾಖೆ ಮುಂದಾಗಬೇಕು: ಮೋಹನ್ ಕುಮಾರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.