ಶಿರೂರು ಸ.ಪ.ಪೂ. ಕಾಲೇಜು ಮೇಲ್ಛಾವಣಿ ಕುಸಿತ


Team Udayavani, Apr 6, 2022, 11:18 AM IST

roof

ಬೈಂದೂರು: ಸರಕಾರಿ ಶಾಲೆಗಳ ಪ್ರಗತಿಯಾಗಬೇಕೆಂದು ಸರಕಾರ ಪ್ರತೀ ವರ್ಷ ಹತ್ತಾರು ಹೊಸ ಯೋಜನೆಗಳ ಜತೆಗೆ ನೂರಾರು ಕೋಟಿ ರೂ. ಅನುದಾನಗಳನ್ನು ಮಂಜೂರು ಮಾಡುತ್ತದೆ. ಆದರೆ ಇಲಾಖೆಯ ನಿಷ್ಕಾಳಜಿ. ಜವಾಬ್ದಾರಿಯುತ ಅಧಿಕಾರಿಗಳ ನಿರ್ವಹಣೆ ಲೋಪದಿಂದ ಗ್ರಾಮೀಣ ಭಾಗದ ಹಲವು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳ ವಿದ್ಯಾರ್ಥಿಗಳ ನಿತ್ಯ ಯಾತನೆ ಪಡುವಂತಾಗಿದೆ.

ಇದಕ್ಕೆ ಉದಾಹರಣೆಯಾಗಿ ಶಿರೂರು ಸರಕಾರಿ ಪದವಿಪೂರ್ವ ಕಾಲೇಜಿನ ಸಭಾಭವನದ ಮೇಲ್ಛಾವಣಿ ಕುಸಿದು ತಿಂಗಳು ಸಮೀಪಿಸಿದರೂ ಸಹ ಯಾವುದೇ ಕ್ರಮಕೈಗೊಂಡಿಲ್ಲ. ಮಳೆಗಾಲ ಸನ್ನಿಹಿತವಾದ ಕಾರಣ ದುರಸ್ತಿಯಾಗದಿದ್ದರೆ ಕಟ್ಟಡ ಕುಸಿಯುವ ಭೀತಿ ಇದೆ.

1973ರಲ್ಲಿ ನಿರ್ಮಾಣಗೊಂಡಿರುವ ಈ ಕಟ್ಟಡವನ್ನು ಈ ಹಿಂದೆ ಎರಡು ಬಾರಿ ದುರಸ್ತಿ ಮಾಡಲಾಗಿತ್ತು. ಪ್ರೌಢಶಾಲೆಯಲ್ಲಿ ಸುಮಾರು 185 ವಿದ್ಯಾರ್ಥಿಗಳು ಹಾಗೂ ಕಾಲೇಜಿನಲ್ಲಿ 104 ವಿದ್ಯಾರ್ಥಿಗಳು ಶಿಕ್ಷಣ ಪಡೆಯುತ್ತಿದ್ದಾರೆ. ಶಾಲೆಯ ಸಾಂಸ್ಕೃತಿಕ ಸೇರಿದಂತೆ ಸಭಾ ಕಾರ್ಯಕ್ರಮಗಳಿಗೆ ಈ ಕೊಠಡಿಗಳನ್ನು ಬಳಸಲಾಗುತ್ತಿದೆ.

ಅಧಿಕಾರಿಗಳಿಗೆ ಪತ್ರ ಬರೆದರೂ ಪ್ರಯೋಜನವಾಗಿಲ್ಲ

ಸಭಾ ಭವನದ ಮೇಲ್ಛಾವಣಿಯು ನಾಲ್ಕೈದು ತಿಂಗಳ ಹಿಂದೆ ಕುಸಿಯುವ ಭೀತಿಯಲ್ಲಿತ್ತು. ಶಾಲಾ ಪ್ರಾಂಶುಪಾಲರು ಇದರ ದುರಸ್ತಿಯಾಗದಿದ್ದರೆ ಅಪಾಯ ವಾಗಬಹುವುದೆನ್ನುವ ಉದ್ದೇಶದಿಂದ ತತ್‌ ಕ್ಷಣ ದುರಸ್ತಿಗಾಗಿ ಜಿಲ್ಲಾಧಿಕಾರಿ ಹಾಗೂ ಅಧಿಕಾರಿಗಳಿಗೆ ಪತ್ರ ಬರೆದಿದ್ದರು. ಆದರೆ ಅಧಿಕಾರಿಗಳು ಗಂಭೀರವಾಗಿ ಪರಿಗಣಿಸದ ಕಾರಣ ಮೇಲ್ಛಾವಣಿ ಕುಸಿದು ಬಿದ್ದಿದೆ. ಶಿಕ್ಷಣ ಸಂಸ್ಥೆ ಆಗಿರುವ ಕಾರಣ ಜನಪ್ರತಿನಿಧಿಗಳು ಮತ್ತು ಇಲಾಖೆ ತುರ್ತು ಪರಿಹಾರದಲ್ಲಿ ಅನುದಾನ ನೀಡಿ ದುರಸ್ತಿ ಮಾಡಬೇಕಿದೆ. ಆದರೆ ತಿಂಗಳುಗಳು ಕಳೆದರೂ ಕೂಡ ದುರಸ್ತಿ ಬಗ್ಗೆ ಗಮನಹರಿಸಿಲ್ಲ. ಹೀಗಾಗಿ ಶಿರೂರಿನ ಪ್ರಮುಖ ಕಾಲೇಜಿನ ಅವ್ಯವಸ್ಥೆ ನೋಡಿ ಮರುಕ ಪಡುವಂತಾಗಿದೆ. ಇಲಾಖೆ ಈ ಬಗ್ಗೆ ಗಮನಹರಿಸಿ ತುರ್ತು ದುರಸ್ತಿಮೂಲಕ ವಿದ್ಯಾರ್ಥಿಗಳ ಶಿಕ್ಷಣಕ್ಕೆ ಸಂಸ್ಥೆಗೆ ಅನುಕೂಲ ಮಾಡಿಕೊಡಬೇಕು ಎನ್ನುವುದು ಶಿಕ್ಷಣಾಭಿಮಾನಿಗಳ ಅಭಿಪ್ರಾಯವಾಗಿದೆ.

ಮೇಲ್ಛಾವಣಿ ಶೀಘ್ರ ದುರಸ್ತಿಗೆ ಕ್ರಮ

ಕಾಲೇಜಿನ ಮೇಲ್ಛಾವಣಿ ಕುಸಿದಿರುವ ಕುರಿತು ಶಾಸಕರ ಗಮನಕ್ಕೆ ತರಲಾಗಿದೆ. ಶಾಸಕರ ನಿಧಿಯಿಂದ ಎರಡು ಲ.ರೂ. ಅನುದಾನ ನೀಡುವ ಭರವಸೆ ನೀಡಿದ್ದಾರೆ. ಸಂಬಂಧಪಟ್ಟ ಎಂಜಿನಿಯರ್‌ಗಳಿಗೆ ಅಂದಾಜು ಪಟ್ಟಿ ತಯಾರಿಸಲು ತಿಳಿಸಿದ್ದು ಶೀಘ್ರ ದುರಸ್ತಿ ಮಾಡಲಾಗುವುದು. -ತುಳಸೀದಾಸ ಮೊಗೇರ, ಕಾರ್ಯಾಧ್ಯಕ್ಷ ಶಾಲಾಭಿವೃದ್ಧಿ ಸಮಿತಿ

ಟಾಪ್ ನ್ಯೂಸ್

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

darshan

Bellary Jail: ಬೆನ್ನು ನೋವು ತಡೆಯಲಾಗದು..: ಪತ್ನಿ, ಸೋದರನ ಎದುರು ದರ್ಶನ್‌ ಅಳಲು

director suri

Cini Talk: ಸಿನಿಮಾ ನಿರ್ದೇಶಕ ಬಿಝಿನೆಸ್‌ ಮ್ಯಾನ್‌ ಅಲ್ಲ!: ನಿರ್ದೇಶಕ ಸೂರಿ ಮಾತು

Victory is possible if CP Yogeshwar becomes candidate for Channapatna: Arvind Bellad

BJP: ಚನ್ನಪಟ್ಟಣಕ್ಕೆ ಸಿಪಿ ಯೋಗೇಶ್ವರ್ ಅಭ್ಯರ್ಥಿಯಾದರೆ ಗೆಲುವು ಸಾಧ್ಯ: ಅರವಿಂದ ಬೆಲ್ಲದ್

ESI Hospital : ಕೋಲ್ಕತ್ತಾದ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ಓರ್ವ ರೋಗಿ ಮೃತ್ಯು

ESI Hospital: ಬೆಳ್ಳಂಬೆಳಗ್ಗೆ ಇಎಸ್‌ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ

Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BUS driver

Bus ticket; ದೀಪಾವಳಿ ಸಂಭ್ರಮಕ್ಕೆ ಬಸ್‌ ಟಿಕೆಟ್‌ ದರ ತಣ್ಣೀರು

1-mahe

MAHE-Mangalore University ಒಡಂಬಡಿಕೆ : ಮೂಳೆ ಅಲೋಗ್ರಾಫ್ಟ್‌ಗಳ ಗಾಮಾ ವಿಕಿರಣ

1-a-kota-pammu

Pramod Madhwaraj ಅವರದ್ದು ಯಾರನ್ನೂ ದ್ವೇಷಿಸದ ಅಪರೂಪದ ವ್ಯಕ್ತಿತ್ವ: ಕೋಟ

1-ottin

Baindur; ಒತ್ತಿನೆಣೆ ತಿರುವಿನಲ್ಲಿ ಗುಡ್ಡ ಕುಸಿತ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

Udupi: ಗೀತಾರ್ಥ ಚಿಂತನೆ-67: ಅರ್ಜುನನ ಅಹಂ ನಾಶಕ್ಕೆ ಕೃಷ್ಣತಂತ್ರ

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

udayavani youtube

ಮಕ್ಕಳ ಸ್ಕ್ರೀನ್ ಟೈಮಿಂಗ್ ಕುರಿತು ಎಚ್ಚರಿಕೆ ಅತ್ಯವಶ್ಯಕ.. ಇಲ್ಲಿದೆ ಅಗತ್ಯ ಮಾಹಿತಿ

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

ಹೊಸ ಸೇರ್ಪಡೆ

10-bng

Bengaluru: ಬೊಲೆರೊದಲ್ಲಿ ಬಂದು ಮೇಕೆ ಕಳ್ಳತನ ; 29 ಕುರಿ, ಮೇಕೆ, ವಾಹನ ಜಪ್ತಿ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Sandalwood: ನಟಿ ಅಮೂಲ್ಯ ಸಹೋದರ, ನಿರ್ದೇಶಕ ದೀಪಕ್‌ ಅರಸ್‌ ನಿಧನ

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್

4

Mangaluru: ಸೇತುವೆ ಮೇಲೆ ಸಂಚಾರ ನಿರ್ಬಂಧದಿಂದ ಕಂಗೆಟ್ಟ ನಾಗರಿಕರು

9-maski

ಆಟೋ, ದ್ವಿಚಕ್ರ ವಾಹನಗಳಿಗೆ ಪ್ರತ್ಯೇಕ ಪಾರ್ಕಿಂಗ್‌ ವ್ಯವಸ್ಥೆ ಕಲ್ಪಿಸಲು ಸಾರ್ವಜನಿಕರ ಒತ್ತಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.