ಬಿಎಸ್ ವೈ ಆಪ್ತ ಪುಟ್ಟಸ್ವಾಮಿ ಸದ್ಯದಲ್ಲೇ ಮಠಾಧೀಶ, ಸನ್ಯಾಸ ದೀಕ್ಷೆ!
ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ ನೀಡಲಿದ್ದಾರೆ
Team Udayavani, Apr 6, 2022, 11:12 AM IST
ಬೆಂಗಳೂರು: ಮಾಜಿ ಸಚಿವ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಬಿ.ಜೆ.ಪುಟ್ಟಸ್ವಾಮಿ ಅವರು ಸದ್ಯದಲ್ಲೇ ಸ್ವಾಮೀಜಿಗಳಾಗಲಿದ್ದಾರೆ. ಮೇ 6ರಂದು ಸನ್ಯಾಸ ದೀಕ್ಷೆ ಪಡೆಯಲಿರುವ ಬಿ.ಜೆ. ಪುಟ್ಟಸ್ವಾಮಿ ಅವರು, 15ರಂದು ಬೆಂಗಳೂರಿನ ಮಾದನಾಯ್ಕನಹಳ್ಳಿಯಲ್ಲಿರುವ ಶ್ರೀ ಕ್ಷೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದ ಪ್ರಥಮ ಪೀಠಾಧಿಪತಿಯಾಗಿ ಅಲಂಕೃತಗೊಳ್ಳಲಿದ್ದಾರೆ.
ಇದನ್ನೂ ಓದಿ:16 ದಿನಗಳಲ್ಲಿ 14ನೇ ಬಾರಿ ಪೆಟ್ರೋಲ್, ಡೀಸೆಲ್ ಬೆಲೆ ಹೆಚ್ಚಳ; ಎಲ್ಲಿ ಎಷ್ಟು ಏರಿಕೆಯಾಗಿದೆ?
ಈ ಬಗ್ಗೆ ಪುಟ್ಟಸ್ವಾಮಿ ಅವರೇ ಮಾಹಿತಿ ನೀಡಿದ್ದು, ಮಠಕ್ಕೆ ಪೀಠಾಧ್ಯಕ್ಷರ ನೇಮಕ ಮಾಡಬೇಕಿತ್ತು. ಆಗ ರಾಜರಾಜೇಶ್ವರಿ ನಗರದ ವಿಜಯೇಂದ್ರ ಪುರಿ ಸ್ವಾಮೀಜಿ ಅವರು ನೀವೇ ಮೊದಲ ಪೀಠಾಧ್ಯಕ್ಷರಾಗಿ ಎಂದರು.
ಅಲ್ಲದೆ, ನಾನು ಅವರ ಪ್ರಾರ್ಥನೆ ವೇಳೆ ಕಾಣಿಸಿಕೊಂಡಿದ್ದೇನಂತೆ. ಹೀಗಾಗಿ ನಾನೇ ಪೀಠಾಧ್ಯಕ್ಷನಾಗಲಿದ್ದೇನೆ. ಅದಕ್ಕೂ ಮೊದಲು ದೀಕ್ಷೆ ಪಡೆಯುತ್ತೇನೆಂದು ಹೇಳಿದರು. ಸನ್ಯಾಸ ದೀಕ್ಷೆಗೂ ಮುನ್ನ ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ಪುಟ್ಟಸ್ವಾಮಿ ರಾಜೀನಾಮೆ ನೀಡಲಿದ್ದಾರೆ. ಪಟ್ಟಾಭಿಷೇಕ ಕಾರ್ಯ ಕ್ರಮಕ್ಕೆ ಆಗ ಮಿಸು ವಂತೆ ಈಗಾಗಲೇ ಸಿಎಂ ಬಸವರಾಜ ಬೊಮ್ಮಾಯಿ, ಮಾಜಿ ಸಿಎಂಗಳಾದ ಬಿ.ಎಸ್. ಯಡಿಯೂರಪ್ಪ, ಸಿದ್ದರಾಮಯ್ಯ, ಎಚ್.ಡಿ. ಕುಮಾರಸ್ವಾಮಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಸೇರಿ ಹಲವು ರಾಜಕೀಯ ನಾಯಕರಿಗೆ ಆಹ್ವಾನ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Munirathna ವಿರುದ್ಧದ ಪ್ರಕರಣಗಳ ತನಿಖೆಗೆ ಎಸ್ಐಟಿ ರಚಿಸಿದ ರಾಜ್ಯ ಸರಕಾರ
Road roller ಅಡಿಯಲ್ಲಿ ಸಿಲುಕಿ ಇಬ್ಬರು ದಾರುಣ ಸಾ*ವು
BJP; ರಮೇಶ ಜಾರಕಿಹೊಳಿ ಸಿಟ್ಟು ಕಡಿಮೆಯಾಗಿಲ್ಲ,ಅವರ ನಿರ್ಧಾರಕ್ಕೆ ಬದ್ಧ: ಯತ್ನಾಳ್
Darshan ಜಾಮೀನು ಅರ್ಜಿ ಕೊನೆಗೂ ಸಲ್ಲಿಕೆ:ವಿಚಾರಣೆ ಮುಂದೂಡಿದ ಕೋರ್ಟ್
Bengaluru; ಫ್ರಿಡ್ಜ್ ನಲ್ಲಿ ಮಹಿಳೆಯ ಕೊಳೆತ ಶ*ವ!!; 30 ಕ್ಕೂ ಹೆಚ್ಚು ತುಂಡುಗಳು!!!
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.