ಸರ್ವಜ್ಞ ಭವನಕ್ಕೆ ಜಮೀನು-ಅನುದಾನ: ಪ್ರಿಯಾಂಕ್‌ ಖರ್ಗೆ ಭರವಸೆ


Team Udayavani, Apr 6, 2022, 1:46 PM IST

16karge

ಚಿತ್ತಾಪುರ: ಕುಂಬಾರ ಸಮಾಜದ ಬಹುದಿನಗಳ ಬೇಡಿಕೆಯಾದ ಸರ್ವಜ್ಞ ಭವನ ನಿರ್ಮಾಣಕ್ಕಾಗಿ ಪಟ್ಟಣದಲ್ಲಿ ಒಂದು ಎಕರೆ ಜಮೀನು ಮಂಜೂರು ಮಾಡಲಾಗಿದ್ದು, 50 ಲಕ್ಷ ರೂ. ಅನುದಾನ ಬಿಡುಗಡೆ ಮತ್ತು ಕುಂಬಾರ ಅಭಿವೃದ್ಧಿ ಮಂಡಳಿ ನಿಗಮವನ್ನಾಗಿಸಲು ಪ್ರಯತ್ನಿಸಲಾಗುವುದು ಎಂದು ಮಾಜಿ ಸಚಿವ, ಶಾಸಕ ಪ್ರಿಯಾಂಕ್‌ ಖರ್ಗೆ ಹೇಳಿದರು.

ಪಟ್ಟಣದ ಬಸವೇಶ್ವರ ಕಲ್ಯಾಣ ಮಂಟಪದಲ್ಲಿ ತಾಲೂಕು ಕುಂಬಾರ ಸಮಾಜದ ವತಿಯಿಂದ ಹಮ್ಮಿಕೊಂಡಿದ್ದ ಕುಂಬಾರ ಜನಜಾಗೃತಿ ಸಮಾವೇಶ ಹಾಗೂ ಕವಿ ಸರ್ವಜ್ಞ ಜಯಂತಿ ಸಮಾರಂಭ ಉದ್ಘಾಟಿಸಿ ಅವರು ಮಾತನಾಡಿದರು.

ಧ್ವನಿ ಇಲ್ಲದ ಸಮಾಜದ ಜನರು ಒಂದಾಗಿರುವುದು ಖುಷಿ ತರುವ ಸಂಗತಿಯಾಗಿದೆ. ಸರ್ವಜ್ಞ ಜಯಂತ್ಯುತ್ಸವ ಆಚರಿಸುತ್ತಿದ್ದೇವೆ. ಮೂರೇ ಮೂರು ಸಾಲುಗಳಲ್ಲಿ ಜೀವನದ ಬಗ್ಗೆ ಹಾಗೂ ವಾಸ್ತವಿತೆ ಬಗ್ಗೆ ಮನಮುಟ್ಟುವಂತೆ ವಚನ ರಚಿಸುತ್ತಿದ್ದ ಸರ್ವಜ್ಞರು ಬಸವಾದಿ ಶರಣರಿಂದ ಪ್ರಭಾವಕ್ಕೆ ಒಳಗಾದ ಶ್ರೇಷ್ಠ ಕವಿಯಾಗಿದ್ದಾರೆ ಎಂದು ಕೊಂಡಾಡಿದರು. ಜಾತಿ ವ್ಯವಸ್ಥೆ ಆಳವಾಗಿ ಬೇರುಬಿಟ್ಟು ಮೂಢನಂಬಿಕೆ ತಾಂಡವಾಡುತ್ತಿದ್ದ ಆ ಕಾಲ ಘಟ್ಟದಲ್ಲಿ ಜನರನ್ನು ಜಾಗೃತಿಗೊಳಿಸಲು ತಮ್ಮ ತ್ರಿಪದಿ ವಚನಗಳ ಮೂಲಕ ಕನ್ನಡ ಆಸ್ಮಿತೆ ಮೂಡಿಸಿದ್ದ ಸರ್ವಜ್ಞರು ಅಸಮಾನ್ಯ ಕವಿಯಾಗಿದ್ದರು. ಅವರು ಒಟ್ಟು 7 ಕೋಟಿ ವಚನ ರಚಿಸಿದ್ದು ಪ್ರಶಾಂಸರ್ಹ. 16ನೇ ಶತಮಾನದಲ್ಲಿಯೇ ಸಮಾನತೆಗಾಗಿ ಹೋರಾಟ ನಡೆಸಿದ್ದ ಸರ್ವಜ್ಞ ಕವಿ ಎಲ್ಲ ಕಾಲಕ್ಕೂ ಸಲ್ಲುವ ಕವಿ ದಾರ್ಶನಿಕರಾಗಿದ್ದಾರೆ ಎಂದರು.

ನೀವು ಧ್ವನಿ ಇಲ್ಲದವರು ಎಂದು ಭಾವಿಸಬೇಕಿಲ್ಲ. ನಿಮ್ಮ ಧ್ವನಿಯಾಗಿ ನಾನು ನಿಮ್ಮೊಂದಿಗೆ ಇದ್ದೇನೆ. ಕಲ್ಯಾಣ ಕರ್ನಾಟಕದ ಜನರ ಏಳಿಗೆಗಾಗಿ ನಾನು ಎಲ್ಲ ಪಕ್ಷದ ನಾಯಕರೊಂದಿಗೆ ಕೈ ಜೋಡಿಸಿ ಹೋರಾಟ ನಡೆಸಲು ಸಿದ್ಧನಿದ್ದೇನೆ. ಇಲ್ಲಿ ರಾಜಕೀಯ ವಿಷಯ ಪ್ರಮುಖವಾಗುವುದಿಲ್ಲ. ನಾನು ಕುಂಬಾರ ಸಮಾಜದ ಅಭಿವೃದ್ಧಿಗೆ ಬದ್ಧನಾಗಿದ್ದೇನೆ ಎಂದು ಹೇಳಿದರು.

ಕುಂಬಾರ ಸಮಾಜದ ತಾಲೂಕು ಅಧ್ಯಕ್ಷ ಪ್ರಭು ಕುಂಬಾರ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಬಸವರಾಜ ಬೆಣ್ಣೂರಕರ್‌, ಸಾಹಿತಿ ಬನ್ನಪ್ಪ ಬಿ.ಕೆ ಮಾತನಾಡಿದರು. ಶ್ರೀ ಶರಣ ಗುಂಡಯ್ಯ ಸ್ವಾಮಿ, ಶ್ರೀ ಸೋಮಶೇಖರ ಶಿವಾಚಾರ್ಯ, ಶ್ರೀ ಪರ್ವತೇಶ್ವರ ಶಿವಾಚಾರ್ಯ, ಶ್ರೀ ಸಂಗಮನಾಥ ಸ್ವಾಮಿ ಆಶೀರ್ವಚನ ನೀಡಿದರು.

ಕುಂಬಾರ ಸಮಾಜದ ಜಿಲ್ಲಾಧ್ಯಕ್ಷ ಶರವಶರಣಪ್ಪ ಸುಲೇಪೇಟ್‌, ಎಂ. ರಾಚಪ್ಪ, ಉಮಾಕಾಂತ ಹಳ್ಳೆ, ಭೀಮಣ್ಣ ಸಾಲಿ, ರಮೇಶ ಮರಗೋಳ, ನಾಗರೆಡ್ಡಿ ಪಾಟೀಲ, ಶಿವಾನಂದ ಪಾಟೀಲ, ಸೋಮಶೇಖರ ಪಾಟೀಲ, ಜಗದೇವ ಕುಂಬಾರ, ದೇವಿಂದ್ರಪ್ಪ, ಜಗನ್ನಾಥ ಕುಂಬಾರ, ಕಲ್ಲಪ್ಪ ಕುಂಬಾರ, ಲಕ್ಷ್ಮಣ ಕುಂಬಾರ, ಶ್ರೀಹರಿ ಕುಂಬಾರ, ನಾಗಣ್ಣ ವಾರದ್‌, ದಶರಥ ಕುಂಬಾರ, ಶಿವರುದ್ರ ಭೀಣಿ, ಶಿವರಾಜ ಕಲಗುರ್ತಿ, ನಾಮದೇವ ರಾಠೊಡ, ಮಲ್ಲಿಕಾರ್ಜುನ ಎಮ್ಮೇನೂರ್‌, ಸಾಬಣ್ಣ ಡಿಗ್ಗಿ, ಭೀಮರಾಯ ಕುಂಬಾರ, ಶರಣಬಸಪ್ಪ ಕುಂಬಾರ, ಭೀಮರಾಯ ಕುಂಬಾರ ಇತರರು ಇದ್ದರು. ವೀರಣ್ಣ ಕುಂಬಾರ ಸ್ವಾಗತಿಸಿದರು, ನರಸಪ್ಪ ಕುಂಬಾರ ನಿರೂಪಿಸಿದರು.

ಟಾಪ್ ನ್ಯೂಸ್

1

Crime: ಯೂಟ್ಯೂಬ್‌ ನೋಡಿ ಪ್ರೇಯಸಿಯ 59 ತುಂಡು ಮಾಡಿದ್ದ ಹಂತಕ!

INDvsBAN: New openers for India in T20; Who is the opener with Sharma?

INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್‌ ಯಾರು?

3-doctor-patient

Doctor-Patient relationship: ವೈದ್ಯ – ರೋಗಿ ಸಂಬಂಧ ಮುಂದೇನು?

vidya balan in bhool bhulaiya 3

Vidya Balan; ಮತ್ತೆ ಬಂದಳು ಮಂಜುಳಿಕಾ!

mumbai

Short Circuit; ಅಗ್ನಿ ಆಕಸ್ಮಿಕದಲ್ಲಿ ಒಂದೇ ಕುಟುಂಬದ ಏಳು ಮಂದಿ ಸಜೀವ ದಹನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

Agra: ಶಿಕ್ಷಕಿಯ ಆಕ್ಷೇಪಾರ್ಹ ವಿಡಿಯೋ ಹಂಚಿಕೊಂಡ ವಿದ್ಯಾರ್ಥಿಗಳು; ನಾಲ್ವರ ಬಂಧನ

2-kulur-1

Kuloor: ಮೊಯ್ದೀನ್‌ ಬಾವಾ ಸೋದರ ಮಮ್ತಾಜ್‌ ಅಲಿ ನಾಪತ್ತೆ; ಅಪಘಾತ ಸ್ಥಿತಿಯಲ್ಲಿ ಕಾರು ಪತ್ತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

Kalaburagi: ಕಲ್ಯಾಣ ಕರ್ನಾಟಕ ಭಾಗದ ಸಮಗ್ರ ಶೈಕ್ಷಣಿಕ ಅಭಿವೃದ್ಧಿಗೆ ತಜ್ಞರ ಸಮಿತಿ ರಚನೆ

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

ಹೊಸ ಮಾರುಕಟ್ಟೆಗೆ ಪ್ರವೇಶ: ಕೊಲ್ಹಾಪುರ ಮಾರುಕಟ್ಟೆಗೆ ಕಲಬುರಗಿ ಹಾಲು!

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಛಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

Kalaburagi: ಅಧಿಕಾರಿಗಳಿಗೆ ಕೊಬ್ಬು‌ ಹೆಚ್ಚಾಗಿದೆ; ಚಳಿ ಬಿಡಿಸಬೇಕಿದೆ: ಬಿ.ಆರ್.ಪಾಟೀಲ್

ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

Govt.,: ನಾಲ್ಕು ವರ್ಷವಾದರೂ ಸಿಕ್ಕಿಲ್ಲ ವಿವಾಹ ಪ್ರೋತ್ಸಾಹಧನ!  

5-kalburgi

Kalaburagi: ಮದ್ಯದ ಗುಂಗಿನಲ್ಲಿ ಪತ್ನಿಯನ್ನು ಕೊಂದ ಪತಿ!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

‌Fraud: ಚೀಟಿ ವ್ಯವಹಾರದಲ್ಲಿ ವಂಚನೆ; ಪತಿ, ಪತ್ನಿ, ಪುತ್ರ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Arrested: ದೇವರಾಜ ಅರಸು ಟ್ರಕ್‌ ಟರ್ಮಿನಲ್‌ ಪ್ರಕರಣ; ಮತ್ತೂಬ್ಬ ಅಧಿಕಾರಿ ಬಂಧನ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

Udupi: ಎಸ್‌ಬಿಐ ಗೃಹ ಮತ್ತು ಕಾರು ಸಾಲ ಹಬ್ಬದ ಉದ್ಘಾಟನೆ

4

Bengaluru: ಮಲ್ಲೇಶ್ವರ ಮೈದಾನದಲ್ಲಿ ಮಗು ಸಾವಿಗೆ ಗೇಟ್‌ ವೆಲ್ಡಿಂಗ್‌ ದೋಷ ಕಾರಣ; ಸಮಿತಿ

3

Arrested: 22 ಮನೆ ಕಳ್ಳತನ ಕೇಸ್‌ ಆರೋಪಿ ಸೆರೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.