ಕನ್ನಡ ಮಾತಾಡಿದ ಎಂದು ಚಂದ್ರು ಹತ್ಯೆಯಾಗಿದೆ : ಸಿ.ಟಿ.ರವಿ
ಕೋರ್ಟ್ ಆದೇಶ : ಮಸೀದಿ ವಿರುದ್ಧವಾಗಲಿ, ದೇವಸ್ಥಾನಗಳ ಪರವಾಗಲಿ ಇಲ್ಲ
Team Udayavani, Apr 6, 2022, 2:55 PM IST
ಬೆಂಗಳೂರು : ನಾವು ಯಾವ ದೇಶದಲ್ಲಿಇದ್ದೇವೆ? ವ್ಯಕ್ತಿಗತ ಆಧಾರದಲ್ಲಿ ನೋಡಬಾರದು, ಚಂದ್ರು ಹತ್ಯೆಯ ಹಿಂದೆ ಪ್ರಚೋದನಕಾರಿ ಅಂಶ ಇದೆ ಎಂದು ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿಕೆ ನೀಡಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು ”ದುಃಖದ ಸಂಗತಿ ಏನು ಅಂದರೆ ಕನ್ನಡ ಮಾತಾಡಿದ ಅಂತಾ ಚಂದ್ರು ಹತ್ಯೆಯಾಗಿದೆ. ಇವತ್ತು ಗೋರಿಪಾಳ್ಯದಲ್ಲಿ ನಡೆದಿದೆ,ಮೊನ್ನೆ ಕಾಶ್ಮೀರದಲ್ಲಿ ನಡೆದಿದ್ದು,ನಾಳೆ ದೇಶದ ತುಂಬಾ ನಡೆಯಬಹುದು. ಇದರ ಬಗ್ಗೆ ಬುದ್ದಿಜೀವಿಗಳು ಮೌನವಾಗಿದ್ದಾರೆ.ಸತ್ತವನು ಹಿಂದೂ ಆದರೆ ಅವರ ಕಣ್ಣಲ್ಲಿ ಕಣ್ಣೀರು ಬರುವುದಿಲ್ಲ.ಸತ್ತವರು ಹಿಂದೂ ಆದರೆ ಸಿದ್ದರಾಮಯ್ಯ ಸಂತಾಪ ಸೂಚಿಸುವುದಿಲ್ಲ.ಅವರ ಆಷಾಢಭೂತಿತನಕ್ಕೆ ನಾನು ಧಿಕ್ಕಾರ ಹೇಳುತ್ತೇನೆ” ಎಂದು ಕಿಡಿಕಾರಿದರು.
ಇದನ್ನೂ ಓದಿ: ಚಂದ್ರು ಕೊಲೆ : ವಿವಾದದ ಬಳಿಕ ‘ನನ್ನಿಂದ ತಪ್ಪು ಹೇಳಿಕೆ’ ಎಂದ ಆರಗ ಜ್ಞಾನೇಂದ್ರ
‘ಧ್ವನಿವರ್ಧಕಗಳ ಶಬ್ಧದ ಪ್ರಮಾಣ ಬಗ್ಗೆ ಕೋರ್ಟ್ ಆದೇಶಗಳಿವೆ. ಕೋರ್ಟ್ ಆದೇಶಗಳನ್ನು ಎಲ್ಲರೂ ಪಾಲಿಸಲಿ. ನಾವು ನ್ಯಾಯಾಲಯದ ಪರ, ಪರಿಸರ ಇಲಾಖೆಯ ಪರ.ನಾನು ಈ ವಿಷಯದಲ್ಲಿ ಮಸೀದಿ ವಿರುದ್ಧವಾಗಲಿ, ದೇವಸ್ಥಾನಗಳ ಪರವಾಗಲಿ ಇಲ್ಲ.ಆದರೆ ಕೋರ್ಟ್ ಆದೇಶಗಳ ಪಾಲನೆ ಆಗಲಿ’ ಎಂದು ಹೇಳಿದರು.
ಟೀಕೆ ಮಾಡುವ ಇತರೇ ಪಕ್ಷಗಳು ಕೋರ್ಟ್ ಆದೇಶದ ಪರ ಇದ್ದಾರೋ? ಒಂದು ಸಮುದಾಯದ ಪರ ಇದ್ದಾರೋ ಹೇಳಲಿ.ನ್ಯಾಯಾಲಯದ ತೀರ್ಪುನ್ನು ವಿರೋಧಿಸಬಾರದು. ಮತಾಂಧತೆಯ ಭೂತ ಯಾರಿಗೆ ಹೊಕ್ಕಿದೆ ಎಂದು ಗೊತ್ತಿದೆ ಎಂದರು.
ನಾವಂತೂ ಸಮವಸ್ತ್ರರ ಪರ ನಿಂತಿದ್ದೇವೆ.ನಮಗೆ ಜಾತಿ ಒಡೆಯುವ ಅವಶ್ಯಕತೆ ಇಲ್ಲ.ಹಿಜಾಬ್ ಸಂಘರ್ಷಕ್ಕೆ ಕಾನೂನಿನ ನೆರವು ಒದಗಿಸಿದ್ದವರು ಯಾರು ಅಂತಾ ಹೇಳಲಿ.ಹಿಜಾಬ್ ಪರ ವಾದ ಮಾಡಿದ ಎಲ್ಲ ವಕೀಲರು ಕಾಂಗ್ರೆಸ್ ಬೆಂಬಲಿತರೇ ಇದ್ದರು. ಕಾಂಗ್ರೆಸ್ ನಿಲುವು ಯಾವ ಕಡೆ ? ಎಂದು ಪ್ರಶ್ನಿಸಿದರು.
ಮತ ಬ್ಯಾಂಕ್ ಗಾಗಿ ಸಮಾಜ ಒಡೆಯುವ ಕೆಲಸ ಮಾಡಿದ್ದು ಕಾಂಗ್ರೆಸ್. ಭಾಗ್ಯ ಯೋಜನೆ ತಂದು ಸಮಾಜ ಒಡೆದಿದ್ದು ಸಿದ್ದರಾಮಯ್ಯ ಎಂದರು. ಮುಸ್ಲಿಮರು ಮಾವು ತೆಗೆದುಕೊಳ್ಳದಂತೆ ಅಭಿಯಾನ ವಿಚಾರಕ್ಕೆ ಪ್ರತಿಕ್ರಿಯಿಸಿ ಈ ರೀತಿಯ ನಿಲುವನ್ನು ನಮ್ಮ ಪಕ್ಷ ಸಮರ್ಥಿಸಿಕೊಳ್ಳುವುದಿಲ್ಲ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Kunigal: ಪುರಸಭೆಯಲ್ಲಿ ಅವ್ಯವಹಾರ… ಮುಖ್ಯಾಧಿಕಾರಿ ಪಿ.ಶಿವಪ್ರಸಾದ್ ಸೇವೆಯಿಂದ ಅಮಾನತು
Mysuru: ದಸರಾ ಆನೆಗಳ ಕಾದಾಟ: ರೋಡಿಗೆ ದೌಡು, ದಿಕ್ಕೆಟ್ಟ ಜನ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Mangaluru: “ಜಾತ್ಯತೀತ’ ಬದಲು “ನಾಸ್ತಿಕ ಭಾರತ’ವಾಗಲಿ: ತುಷಾರ್ ಗಾಂಧಿ
Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ
Sullia: ತೋಟಕ್ಕೆ ಕಾಡಾನೆ ಲಗ್ಗೆ… ಬಾಳೆ, ಅಡಿಕೆ, ತೆಂಗು ಕೃಷಿಗೆ ಹಾನಿ
Ramanagara: ತಾನು ಸಿದ್ದರಾಮಯ್ಯ ಸಂಬಂಧಿ ಎಂದು ಸೆಕ್ಯೂರಿಟಿ ಗಾರ್ಡ್ ಗೆ ಹೊಡೆದ ಯುವಕ!
ಕುಶಾಲನಗರ ಪ.ಪಂ ಚುನಾವಣೆ ಗೊಂದಲ: ವಿಪಕ್ಷ ನಾಯಕ ಅಶೋಕ್ ಅಸಮಾಧಾನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.