ಪದವಿ ಸ್ವೀಕರಿಸುವವರಿಗೆ “ವಸ್ತ್ರಸಂಹಿತೆ’ ಕಡ್ಡಾಯ!

ಮಂಗಳೂರು ವಿ.ವಿ.ಯಿಂದ ಘಟಿಕೋತ್ಸವದಲ್ಲಿ ನಿಯಮ ಪಾಲನೆಗೆ ಚಿಂತನೆ

Team Udayavani, Apr 7, 2022, 8:15 AM IST

ಪದವಿ ಸ್ವೀಕರಿಸುವವರಿಗೆ “ವಸ್ತ್ರಸಂಹಿತೆ’ ಕಡ್ಡಾಯ!

ಮಂಗಳೂರು: ಮಂಗಳೂರು ವಿ.ವಿ. ಘಟಿಕೋತ್ಸವ ಸಂದರ್ಭ ರಾಜ್ಯ ಪಾಲರಿಂದ ಪದವಿ ಸ್ವೀಕರಿಸುವ ವಿದ್ಯಾರ್ಥಿಗಳು ಈ ಬಾರಿ ಕಡ್ಡಾಯವಾಗಿ “ವಸ್ತ್ರ ಸಂಹಿತೆ’ ಪಾಲಿಸಬೇಕು; ಇಲ್ಲ ವಾದರೆ ವೇದಿಕೆಯ ಮೇಲೆ ಪದವಿ ಸ್ವೀಕರಿಸಲು ಅನುಮತಿ ಇಲ್ಲ!

ವಿ.ವಿ.ಯ 40ನೇ ವಾರ್ಷಿಕ ಘಟಿಕೋತ್ಸವ ಎ. 23ರ ಬೆಳಗ್ಗೆ 11ಕ್ಕೆ ಮಂಗಳಗಂಗೋತ್ರಿಯಲ್ಲಿ ನಡೆಯಲಿದೆ. ಈ ವೇಳೆ ಪದವಿ ಪಡೆಯು ವವರು ಪೂರ್ಣ ಬಿಳಿ ಬಣ್ಣದ ಉಡುಗೆ ಧರಿಸಿರಬೇಕು. ನಿಯಮ ಪಾಲಿಸದಿದ್ದರೆ ವೇದಿ ಕೆಯಲ್ಲಿ ಸರ್ಟಿಫಿಕೇಟ್‌ ಸಿಗದು. ಅವರು ಕಾರ್ಯಕ್ರಮ ಮುಗಿದ ಬಳಿಕ ಸರ್ಟಿಫಿಕೇಟ್‌ ಪಡೆಯಬೇಕಾಗುತ್ತದೆ.

ಘಟಿಕೋತ್ಸವದಲ್ಲಿ ಪದವಿ ಪಡೆಯುವ ವಿದ್ಯಾರ್ಥಿಗಳು ಸಮವಸ್ತ್ರ ನಿಯಮ ಪಾಲಿಸು ವಂತೆ ನಿರ್ದೇಶನ ಈ ಹಿಂದೆಯೇ ಇತ್ತು. ಆದರೂ ಕೆಲವು ವಿದ್ಯಾರ್ಥಿಗಳು ಬಣ್ಣ ಬಣ್ಣದ ಬಟ್ಟೆ ಧರಿಸಿ ಬಂದು ಪದವಿ ಪಡೆದದ್ದಿದೆ. ಇದು ವಿ.ವಿ.ಯ ಶೈಕ್ಷಣಿಕ ಶಿಸ್ತಿಗೆ ವಿರುದ್ಧವಾದದ್ದು ಎಂದು ವಸ್ತ್ರಸಂಹಿತೆ ಕಡ್ಡಾಯ ಪಾಲನೆಗೆ ಈ ಬಾರಿ ನಿರ್ಧರಿಸಲಾಗಿದೆ. ವಿದ್ಯಾರ್ಥಿಗಳು ದಾಖಲಾತಿ ಪಡೆಯುವ ಸಂದರ್ಭ ಈ ಸೂಚನೆಯನ್ನು ಮಂಗಳೂರು ವಿ.ವಿ. ನೀಡಲಿದೆ ಎಂದು ಮಂಗಳೂರು ವಿ.ವಿ. ಕುಲಸಚಿವ (ಪರೀಕ್ಷಾಂಗ) ಪ್ರೊ| ಪಿ.ಎಲ್‌. ಧರ್ಮ ಹೇಳಿದ್ದಾರೆ.

ಈ ಬಾರಿ ಚಿನ್ನದ ಪದಕ!
ಮಂಗಳೂರು ವಿ.ವಿ.ಯ ಈ ಹಿಂದಿನ ಘಟಿಕೋತ್ಸವ ಸಂದರ್ಭ ಚಿನ್ನದ ಪದಕ ನೀಡಿರಲಿಲ್ಲ. ಯಾಕೆಂದರೆ ಚಿನ್ನದ ಮೌಲ್ಯ ದುಪ್ಪಟ್ಟಾಗಿತ್ತು. ಬದಲಾಗಿ, ಅವರಿಗೆ “ನಗದು ಬಹುಮಾನ ಪರಿವರ್ತಿತ’ ಎಂಬ ಮಾದರಿಯಲ್ಲಿ ನೀಡಲಾಗುತ್ತಿತ್ತು. ಈ ಬಾರಿ ಚಿನ್ನದ ಪದಕ ಪಡೆಯಲಿರುವವರಿಗೆ ಚಿನ್ನದ ಪದಕವನ್ನೇ ನೀಡಬೇಕು ಎಂದು ವಿ.ವಿ. ಚಿಂತನೆ ನಡೆಸಿದೆ.

ಘಟಿಕೋತ್ಸವದ ಮುನ್ನಾ ದಿನ ವಿದ್ಯಾರ್ಥಿಗಳು ವಿ.ವಿ.ಗೆ ಆಗಮಿಸಿ ದಾಖಲಾತಿ ಮಾಡಬೇಕು. ಆದರೆ ದೂರದ ಕೆಲವು ವಿದ್ಯಾರ್ಥಿಗಳಿಗೆ ಇದು ಸಮಸ್ಯೆ. ಹೀಗಾಗಿ ಈ ಪ್ರಕ್ರಿಯೆಯನ್ನು ಆನ್‌ಲೈನ್‌ ಮಾಡುವ ಬಗ್ಗೆಯೂ ವಿ.ವಿ. ಚಿಂತನೆ ನಡೆಸಿದೆ.

2 ಅಥವಾ 3 ಮಂದಿಗೆ ಗೌರವ ಡಾಕ್ಟರೇಟ್‌
ಮಂಗಳೂರು ವಿ.ವಿ.ಯ ಬಹುಮಹತ್ವದ “ಗೌರವ ಡಾಕ್ಟರೇಟ್‌’ ಈ ಬಾರಿ ಇಬ್ಬರು ಅಥವಾ ಮೂವರಿಗೆ ಸಿಗುವ ಸಾಧ್ಯತೆ ಇದೆ. ವಿ.ವಿ.ಯಿಂದ ಸುಮಾರು 10 ಮಂದಿಯ ಹೆಸರುಗಳನ್ನು ಶಿಫಾರಸು ಮಾಡಲಾಗಿತ್ತು. ಈ ಪೈಕಿ ಆಂತರಿಕ ತಂಡ 2-3 ಮಂದಿಯನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಕಳೆದ ವರ್ಷ ಗೌರವ ಡಾಕ್ಟರೇಟ್‌ ನೀಡಿರಲಿಲ್ಲ. ಅದಕ್ಕೂ ಹಿಂದಿನ ವರ್ಷ ಒಬ್ಬರಿಗೆ ಮಾತ್ರ ಪ್ರದಾನ ಮಾಡಲಾಗಿತ್ತು. ರಾಜ್ಯದ ಇತರ ವಿ.ವಿ.ಗಳಲ್ಲಿ ಇತ್ತೀಚೆಗೆ ನಡೆದ ಘಟಿಕೋತ್ಸವಗಳಲ್ಲಿ ಸರಾಸರಿ ಮೂವರಿಗೆ ಗೌರವ ಡಾಕ್ಟರೇಟ್‌ ನೀಡಲಾಗಿದೆ. ಹೀಗಾಗಿ ಮಂಗಳೂರು ವಿ.ವಿ.ಯಲ್ಲಿಯೂ ಇಬ್ಬರು ಅಥವಾ ಮೂವರಿಗೆ ಈ ಗೌರವ ಲಭಿಸಬಹುದೆನ್ನುವ ನಿರೀಕ್ಷೆಗೆ ಪುಷ್ಟಿ ದೊರೆತಿದೆ.

ಈ ಬಾರಿಯ ಘಟಿಕೋತ್ಸವ ಹಲವು ವಿಶೇಷಗಳನ್ನು ಒಳಗೊಂಡಿದೆ. ಇದೇ ಮೊದಲ ಬಾರಿಗೆ ರಾಜ್ಯಪಾಲರು ಘಟಿಕೋತ್ಸವದಲ್ಲಿ ಅಧ್ಯಕ್ಷೀಯ ಭಾಷಣ ಮಾಡಲಿದ್ದಾರೆ. ವಿಶೇಷ ವಾಗಿ ಪದವಿ ಸ್ವೀಕರಿಸುವವರು ಕಡ್ಡಾಯವಾಗಿ ವಿ.ವಿ. ಸೂಚಿಸುವ ಡ್ರೆಸ್‌ಕೋಡ್‌ ಪಾಲಿಸಬೇಕು. ಈ ಬಗ್ಗೆ ಎಲ್ಲ ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗುತ್ತಿದೆ.
-ಪ್ರೊ| ಪಿ.ಎಸ್‌.ಯಡಪಡಿತ್ತಾಯ,
ಕುಲಪತಿಗಳು, ಮಂಗಳೂರು ವಿ.ವಿ.

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Vamanjoor Thiruvailuguthu Sankupoonja – Devupoonja Jodukare Kambala Result

Kambala Result: ವಾಮಂಜೂರು ತಿರುವೈಲುಗುತ್ತು ಸಂಕುಪೂಂಜ -ದೇವುಪೂಂಜ ಜೋಡುಕರೆ ಕಂಬಳ ಫಲಿತಾಂಶ

Dinesh-Gundurao

Congress: ದಲಿತ ಸಮಾವೇಶ ಯಾವ ರೀತಿ ಎಂಬ ಬಗ್ಗೆಯಷ್ಟೇ ಚರ್ಚೆ: ದಿನೇಶ್‌ ಗುಂಡೂರಾವ್‌

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಮಾದಕ ವಸ್ತು ಸೇವನೆ; ಮೂವರು ವಶಕ್ಕೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Mangaluru: ಬಾಲಕಿಗೆ ಕಿರುಕುಳ: ಅಂಗಡಿ ಮಾಲಕನಿಗೆ 5 ವರ್ಷ ಸಜೆ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

Arrested: ಜೂಜಾಟದ ಅಡ್ಡೆಗೆ ದಾಳಿ 20 ಮಂದಿಯ ಬಂಧನ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.