ಅನ್ಯಧರ್ಮದ ಯುವಕ-ಯುವತಿ ಮದುವೆ ಗದ್ದಲ

ಹಿಂದೂ ಸಂಘಟನೆಗಳ "ಲವ್‌ ಜಿಹಾದ್‌' ಆರೋಪ

Team Udayavani, Apr 7, 2022, 10:35 AM IST

3

ಹುಬ್ಬಳ್ಳಿ: ನಗರದ ಅನ್ಯ ಧರ್ಮಿಯ ಯುವಕ-ಯುವತಿ ಪ್ರೀತಿಸಿ ಮದುವೆಯಾಗಿದ್ದು, ಇದನ್ನು ಖಂಡಿಸಿ ಯುವತಿ ಕುಟುಂಬದವರು ಹಾಗೂ ಎಸ್‌ಎಸ್‌ಕೆ ಸಮಾಜದವರು ಬುಧವಾರ ಇಲ್ಲಿನ ಉಪನಗರ ಪೊಲೀಸ್‌ ಠಾಣೆ ಎದುರು ಪ್ರತಿಭಟನೆ ನಡೆಸಿದರು.

ಕೇಶ್ವಾಪುರದ ಯುವಕ ಹಾಗೂ ಉಣಕಲ್ಲನ ಯುವತಿ ಪರಸ್ಪರ ಪ್ರೀತಿಸಿ ಗದುಗಿನಲ್ಲಿ ರಿಜಿಸ್ಟರ್‌ ಮದುವೆ ಆಗಿದ್ದಾರೆ. ಈ ವಿಷಯ ಗೊತ್ತಾಗುತ್ತಿದ್ದಂತೆ ಯುವತಿಯ ಕುಟುಂಬದವರು ಮತ್ತು ಅವರ ಸಮಾಜದವರು ಠಾಣೆ ಎದುರು ಜಮಾಯಿಸಿ, ಪ್ರೀತಿ ಹೆಸರಲ್ಲಿ ಲವ್‌ ಜಿಹಾದ್‌ ನಡೆಸಲಾಗಿದೆ. ಮತಾಂತರ ಮಾಡುವ ಹುನ್ನಾರ ನಡೆದಿದೆ ಎಂದು ಆರೋಪಿಸಿ ಮಧ್ಯಾಹ್ನದಿಂದ ರಾತ್ರಿವರೆಗೂ ಠಾಣೆ ಎದುರು ಪ್ರತಿಭಟಿಸಿದರು. ಯುವತಿಯನ್ನು ಕರೆದುಕೊಂಡು ಬಂದು ತಮಗೆ ಒಪ್ಪಿಸಬೇಕು. ಇಲ್ಲವೇ ಸಾಂತ್ವನ ಕೇಂದ್ರಕ್ಕೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು.

ಸಮಾಜದ ಮುಖಂಡರು ಈ ಕುರಿತು ಹಲವು ಬಾರಿ ಪೊಲೀಸ್‌ ಅಧಿಕಾರಿಗಳೊಂದಿಗೆ ಚರ್ಚೆ ನಡೆಸಿದರು. ಯುವತಿ ತಮಗೆ ಒಪ್ಪಿಸುವ ಬಗ್ಗೆ ಪೊಲೀಸರು ಸ್ಪಷ್ಟ ಭರವಸೆ ನೀಡಬೇಕೆಂದು ಪಟ್ಟುಹಿಡಿದರು. ಆದರೆ ಪೊಲೀಸರು ಕಾನೂನು ರೀತಿ ಕ್ರಮ ಕೈಗೊಳ್ಳಲಾಗುವುದು. ಯುವಕ-ಯುವತಿಯ ಜನ್ಮದಿನಾಂಕದ ದಾಖಲೆಗಳನ್ನು ಪರಿಶೀಲಿಸಲಾಗುವುದು ಎಂದು ಸಮಜಾಯಿಸಿ ನೀಡಿದರೂ ಪ್ರತಿಭಟನಾಕಾರರು ಒಪ್ಪಲಿಲ್ಲ. ಕೊನೆಗೆ ಏ.7ರಂದು ಮಧ್ಯಾಹ್ನ 12 ಗಂಟೆಯೊಳಗೆ ಯುವತಿಯನ್ನು ಕರೆದುಕೊಂಡು ಬರುತ್ತೇವೆಂದು ಭರವಸೆ ಕೊಟ್ಟ ನಂತರ ಪ್ರತಿಭಟನೆ ಹಿಂಪಡೆದರು.

ರಾತ್ರಿ 8:30ರ ಸುಮಾರಿಗೆ ಶ್ರೀರಾಮ ಸೇನಾ ಸಂಸ್ಥಾಪಕ ಪ್ರಮೋದ ಮುತಾಲಿಕ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದಾಗ ಮತ್ತೆ ಕೆಲವರು ಪ್ರತಿಭಟನೆಗೆ ಮುಂದಾದರು. ಪೊಲೀಸರು ಯುವತಿಯನ್ನು ಕರೆದುಕೊಂಡು ಬರುವುದಾಗಿ ಭರವಸೆ ನೀಡಿದ ಮೇಲೆ ಪ್ರತಿಭಟನೆ ಹಿಂಪಡೆದರು. ಮಹಾನಗರ ಪೊಲೀಸ್‌ ಆಯುಕ್ತ ಲಾಭೂ ರಾಮ ಮತ್ತು ಹಿರಿಯ ಅಧಿಕಾರಿಗಳು ಸ್ಥಳದಲ್ಲಿದ್ದು ಪರಿಸ್ಥಿತಿ ನಿಭಾಯಿಸಿದರು. ಸಮಾಜದ ಮುಖಂಡರೊಂದಿಗೆ ಮಾತುಕತೆ ನಡೆಸಿದರು.

ಪ್ರತಿಭಟನೆಯಲ್ಲಿ ಎಸ್‌ಎಸ್‌ಕೆ ಚಿಂತನ-ಮಂಥನ ಸಮಿತಿಯ ಅಧ್ಯಕ್ಷ ಹನುಮಂತಸಾ ನಿರಂಜನ, ಎಸ್‌ಎಸ್‌ ಕೆ ಸಮಾಜದ ಧರ್ಮದರ್ಶಿ ನೀಲಕಂಠಸಾ ಜಡಿ, ನಾಗೇಶ ಕಲಬುìಗಿ, ವಿಶ್ವ ಹಿಂದೂ ಪರಿಷತ್‌ ಮುಖಂಡ ಶಿವಾನಂದ ಸತ್ತಿಗೇರಿ, ಸಂತೋಷ ಕಠಾರೆ, ವಿಶ್ವನಾಥ ಬೂದುರ, ಆಕಾಶ ಹುಬ್ಬಳ್ಳಿ, ಸುನಿಲ ಚಿಲ್ಲಾಳ, ಶೋಭಾ ನಾಕೋಡ, ಪವನ ಕಾಟವೆ, ರೇಣುಕಾ ಇರಕಲ್‌, ನೀತಾ ಮೇತ್ರಾಣಿ, ರಾಜೇಶ್ವರಿ ಜಡಿ, ಯಶೋಧಾ ತಾಂಬೆ ಮೊದಲಾದವರಿದ್ದರು.

ರಾಜ್ಯದಲ್ಲಿ ಲವ್‌ ಜಿಹಾದ್‌ ಮೂಲಕ ಹಿಂದೂ ಹುಡುಗಿಯರನ್ನು ಪ್ರೀತಿ-ಪ್ರೇಮದ ಹೆಸರಿನಲ್ಲಿ ಮತಾಂತರ ಮಾಡುವ ಪ್ರಕರಣಗಳು ನಿರಂತರವಾಗಿ ನಡೆಯುತ್ತಿವೆ. ನಗರದಲ್ಲಿ ಅಪ್ರಾಪೆ¤ಯನ್ನು ಅನ್ಯಧರ್ಮದ ಯುವಕ ಯುಗಾದಿಯಂದು ಕರೆದುಕೊಂಡು ಹೋಗಿ ಗದುಗಿನಲ್ಲಿ ರಿಜಿಸ್ಟರ್‌ ಮದುವೆಯಾಗಿದ್ದಾನೆ. ಬೋಗಸ್‌ ದಾಖಲೆಗಳಿದ್ದರೂ ಅಲ್ಲಿನ ಅಧಿಕಾರಿ ಮದುವೆಗೆ ಅವಕಾಶ ನೀಡಿದ್ದಾರೆ. ಮೊದಲು ಅಧಿಕಾರಿಯನ್ನು ತಕ್ಷಣ ಅಮಾನತು ಮಾಡಬೇಕು. ಇಲ್ಲಿನ ಪೊಲೀಸರು ಸಹಿತ ಯುವಕನಿಗೆ ಪರೋಕ್ಷವಾಗಿ ಬೆಂಬಲ ನೀಡುತ್ತಿದ್ದಾರೆ. ಸ್ಥಳೀಯ ಶಾಸಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದಾರೆ ಎಂದು ಗಮನಕ್ಕೆ ಬಂದಿದೆ. ಪೊಲೀಸರು ಯಾರ ಒತ್ತಡಕ್ಕೂ ಮಣಿಯದೆ ತಾವೇ ಹೇಳಿದಂತೆ ಗುರುವಾರ ಮಧ್ಯಾಹ್ನ 12 ಗಂಟೆಯೊಳಗೆ ಯುವತಿಯನ್ನು ಕರೆದುಕೊಂಡು ನಮಗೆ ಒಪ್ಪಿಸಬೇಕು. ಇಲ್ಲವೇ ಸಾಂತ್ವನ ಕೇಂದ್ರಕ್ಕೆ ಕಳುಹಿಸಬೇಕು. ಇಲ್ಲವಾದರೆ ನಮ್ಮ ಹೋರಾಟದ ದಿಕ್ಕು ಬದಲಾಗುತ್ತದೆ. ಆಗ ಸಂಭವಿಸಬಹುದಾದ ಅನಾಹುತಗಳಿಗೆ ಪೊಲೀಸರೇ ಜವಾಬ್ದಾರರಾಗುತ್ತಾರೆ. ರಾಜ್ಯ ಸರ್ಕಾರ ಲವ್‌ ಜಿಹಾದ್‌ ತಡೆ ಕಾನೂನು ಜಾರಿಗೊಳಿಸಬೇಕು. ಇಲ್ಲವಾದರೆ ಬಿಜೆಪಿ ಶಾಸಕರ ಮನೆಯ ಮುಂದೆ ಧರಣಿ ನಡೆಸಲಾಗುವುದು. ಪ್ರಮೋದ ಮುತಾಲಿಕ, ಶ್ರೀರಾಮ ಸೇನಾ ರಾಷ್ಟ್ರಾಧ್ಯಕ್ಷ

ಏ.2ರಂದು ಬೆಂಡಿಗೇರಿ ಠಾಣೆಯಲ್ಲಿ ಅಪ್ರಾಪ್ತೆ ಕಾಣೆ ಬಗ್ಗೆ ಪ್ರಕರಣ ದಾಖಲಾಗಿತ್ತು. ಈ ಕುರಿತು ಕೂಡಲೇ ವಿಚಾರಣೆ ಮಾಡಿ ಕಾನೂನು ಪ್ರಕಾರ ಕ್ರಮಕೈಗೊಳ್ಳಲಾಗುವುದು. ಏ.4ರಂದು ಯುವಕ ಮತ್ತು ಯುವತಿ ಪತ್ತೆಯಾಗಿದ್ದಾರೆ. ಈಗ ಪಾಲಕರು ಅಪಹರಣ ಕುರಿತು ದೂರು ಕೊಟ್ಟಿದ್ದಾರೆ. ಇಲ್ಲಿಯವರೆಗೆ ದೊರೆತ ದಾಖಲೆಗಳ ಪ್ರಕಾರ ಇಬ್ಬರು ವಯಸ್ಕರಾಗಿದ್ದಾರೆ. ಪ್ರತಿಭಟನಾಕಾರರು ಮಾಡಿದ ಆರೋಪಗಳನ್ನು ಪರಿಶೀಲಿಸಲಾಗುವುದು. ವಿಚಾರಣೆ ಮುಗಿಯುವವರೆಗೆ ಎಲ್ಲರೂ ಸಹಕಾರ ನೀಡಬೇಕು. ಸಾಹಿಲ ಬಾಗ್ಲಾ, ಡಿಸಿಪಿ, ಕಾನೂನು ಮತ್ತು ಸುವ್ಯವಸ್ಥೆ

ಟಾಪ್ ನ್ಯೂಸ್

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

19

Bharamasagara: ವಿದ್ಯುತ್ ಕಿಡಿಗೆ ಎರಡು‌ ಮೇವಿನ ಬಣವೆ ಸಂಪೂರ್ಣ ಭಸ್ಮ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.