ಬಹು ನಿರೀಕ್ಷಿತ ಸಿದ್ದಾಪುರ ಏತ ನೀರಾವರಿ ಯೋಜನೆಗೆ ಅನುಮೋದನೆ

ಸಂಸದರು, ಶಾಸಕರ ಮುತುವರ್ಜಿಯಲ್ಲಿ 165 ಕೋ.ರೂ. ಮಂಜೂರು

Team Udayavani, Apr 7, 2022, 11:00 AM IST

irrigation

ಕುಂದಾಪುರ: ವಾರಾಹಿ ಬಲದಂಡೆ ಹಾದುಹೋಗುವ ಅಚ್ಚುಕಟ್ಟು ಪ್ರದೇಶದ ಸಾವಿರಾರು ಹೆಕ್ಟೇರ್‌ ಪ್ರದೇಶಗಳಿಗೆ ನೀರು ಒದಗಿಸುವ ಸಿದ್ದಾಪುರ ಏತ ನೀರಾವರಿ ಯೋಜನೆಗೆ ರಾಜ್ಯ ಸರಕಾರ ಅನುಮೋದನೆ ನೀಡಿದೆ. 1,200 ಹೆಕ್ಟೇರ್‌ ಭೂ ಪ್ರದೇಶಗಳಿಗೆ ನೀರು ಒದಗಿಸುವ 165 ಕೋ.ರೂ. ವೆಚ್ಚದ ಯೋಜನೆಗೆ ಬಸವರಾಜ ಬೊಮ್ಮಾಯಿ ಮಂಜೂರಾತಿ ನೀಡಿದ್ದಾರೆ.

ಹೊಳೆ ಶಂಕರನಾರಾಯಣ ಬಳಿ ವಾರಾಹಿ ನದಿಯಿಂದ ಸುಮಾರು 53.67 ಕ್ಯೂಸೆಕ್ಸ್‌ ನೀರನ್ನು ಮೇಲಕ್ಕೆತ್ತಿ ಸಿದ್ದಾಪುರ, ಆಜ್ರಿ, ಕೊಡ್ಲಾಡಿ, ಹೊಸಂಗಡಿ, ಕರ್ಕುಂಜೆ ಆಸುಪಾಸಿನ 1,200 ಹೆಕ್ಟೇರ್‌ ಭೂ ಪ್ರದೇಶಗಳಿಗೆ ನೀರಾವರಿ ಸೌಲಭ್ಯ ಒದಗಿಸುವ ಯೋಜನೆ ಇದಾಗಿದೆ.

0.54 ಟಿಎಂಸಿ ನೀರು ಅಗತ್ಯ

ಈ ಯೋಜನೆಗೆ 0.54 ಟಿಎಂಸಿ ನೀರಿನ ಅವಶ್ಯಕತೆಯಿದೆ. ಸಿದ್ದಾಪುರ ಗ್ರಾಮದ ಮೂಲಕ ಹಾದು ಹೋಗುವ ವಾರಾಹಿ ಕಾಲುವೆಯ ನೀರನ್ನು ಕಾಶಿಕಾಲು ಕೆರೆಗೆ ಹಾಯಿಸಿ, ಕುಬ್ಜಾ ನದಿ ಮೂಲಕ ಹರಿಸುವ ಯೋಜನೆ ಇದಾಗಿದೆ. ವಾರಾಹಿ ಬಲದಂಡೆ ಕಾಲುವೆ ಹಾದುಹೋಗುವ ಸಿದ್ದಾಪುರ ಸುತ್ತಮುತ್ತಲಿನ ಕೆಲವೊಂದು ಗ್ರಾಮಗಳು ಎತ್ತರದ ಪ್ರದೇಶದಲ್ಲಿ ಅಚ್ಚುಕಟ್ಟು ಪ್ರದೇಶವನ್ನು ಹೊಂದಿದೆ. ಇದರಿಂದಾಗಿ ಈ ಎತ್ತರದ ಪ್ರದೇಶಗಳು ನೀರಾವರಿ ಸೌಲಭ್ಯದಿಂದ ವಂಚಿತರಾಗಿದ್ದು, ಇದಲ್ಲದೆ ಈ ಭಾಗದಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆಯು ತಲೆದೋರುತ್ತದೆ. ಇಲ್ಲಿನ 1,200 ಹೆಕ್ಟೇರ್‌ ಪ್ರದೇಶಕ್ಕೆ ಸಿದ್ದಾಪುರ ಏತ ನೀರಾವರಿ ಯೋಜನೆ ವರದಾನವಾಗಲಿದೆ.

ಸಂಸದರ ಅವಿರತ ಪ್ರಯತ್ನ

ಸಿದ್ದಾಪುರ ಏತ ನೀರಾವರಿ ಯೋಜನೆಯನ್ನು 2019ರಲ್ಲಿ ಕುಮಾರಸ್ವಾಮಿ ನೇತೃತ್ವದ ಸರಕಾರ ಬಜೆಟ್‌ನಲ್ಲಿ ಘೋಷಿಸಿತ್ತು. ಆದರೆ ಬಳಿಕ ಮಾತ್ರ ಈ ಯೋಜನೆ ನೆನೆಗುದಿಗೆ ಬಿದ್ದಿತ್ತು. ಬಾಳ್ಕಟ್ಟು ನದಿ ನೀರು ಬಳಕೆದಾರರ ಸಮಿತಿ ಸಿದ್ದಾಪುರ, ಜಿಲ್ಲಾ ರೈತ ಸಂಘವು ಈ ಬಗ್ಗೆ ಅನೇಕ ಸಮಯದಿಂದ ಒತ್ತಾಯಿಸುತ್ತಲೇ ಇತ್ತು. ಆದರೆ ಸಾವಿರಾರು ಹೆಕ್ಟೇರ್‌ ಕೃಷಿ ಪ್ರದೇಶಕ್ಕೆ ಅನುಕೂಲವಾಗವ ಈ ಯೋಜನೆಯನ್ನು ಶತಾಯ – ಗತಾಯ ಅನುಷ್ಠಾನಕ್ಕೆ ತರಲೇಬೇಕೆಂದು ಸಂಸದ ಬಿ.ವೈ. ರಾಘವೇಂದ್ರ ಅವರು ನಿರಮತರವಾಗಿ ಪ್ರಯತ್ನಿಸುತ್ತಿದ್ದರು. ಬಜೆಟ್‌ಗೂ ಮೊದಲೇ ಸಿಎಂ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿದ್ದರು. ಆದರೆ ಬಜೆಟ್‌ನಲ್ಲಿ ಘೋಷಣೆ ಮಾಡಿರಲಿಲ್ಲ. ಆ ಬಳಿಕವು ಯೋಜನೆ ಜಾರಿಗೆ ಸಂಸದರು ಬೈಂದೂರು ಶಾಸಕ ಬಿ.ಎಂ. ಸುಕುಮಾರ್‌ ಶೆಟ್ಟರ ಸಹಕಾರದೊಂದಿಗೆ ಪ್ರಯತ್ನಿಸುತ್ತಲೇ ಇದ್ದರು. ಕೊನೆಗೂ ಬಹು ನಿರೀಕ್ಷೆಯ ನೀರಾವರಿ ಯೋಜನೆಗೆ ಅನುದಾನ ಮಂಜೂರಾಗಿದೆ. ‌

ಕೃಷಿ ಗೆ ಪ್ರಯೋಜನ

ಸಿದ್ದಾಪುರ ಏತ ನೀರಾವರಿ ಯೋಜನೆಗೆ ಸಿಎಂ ಬಸವರಾಜ ಬೊಮ್ಮಾಯಿ ಅವರು ಒಪ್ಪಿಗೆ ನೀಡಿದ್ದು, ಈ ಕುರಿತಂತೆ ಬಜೆಟ್‌ ಮೊದಲು ಸಹ ಭೇಟಿ ನೀಡಿ ಮನವಿ ಸಲ್ಲಿಸಿದ್ದೆ. ಈಗ 165 ಕೋ.ರೂ. ಅನುದಾನ ಬಿಡುಗಡೆಯಾಗಲಿದೆ. ಮುಖ್ಯಮಂತ್ರಿಗೆ ಅಭಿನಂದನೆಗಳು. ಸಾವಿರಾರು ಹೆಕ್ಟೇರ್‌ ಕೃಷಿ ಪ್ರದೇಶಕ್ಕೆ ಪ್ರಯೋಜನವಾಗಲಿದೆ. – ಬಿ.ವೈ. ರಾಘವೇಂದ್ರ, ಸಂಸದ

ಮುಂದಿನ ಪ್ರಕ್ರಿಯೆ ತ್ವರಿತಗತಿ

ಸಿದ್ದಾಪುರ ಏತ ನೀರಾವರಿ ಯೋಜನೆಗೆ ರಾಜ್ಯ ಸರಕಾರ ಮಂಜೂರಾತಿ ನೀಡಿದ್ದು, ಇದರಿಂದ ಇಲ್ಲಿನ ಅನೇಕ ಊರುಗಳ ಕೃಷಿಕರಿಗೆ ಕೃಷಿಗೆ ವರದಾನವಾಗಲಿದೆ. ಅನುದಾನ ಬಿಡುಗಡೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಹಾಗೂ ಇದಕ್ಕಾಗಿ ಶ್ರಮಿಸಿದ ಸಂಸದ ರಾಘವೇಂದ್ರ ಅವರಿಗೆ ಕೃತಜ್ಞತೆಗಳು. ಶೀಘ್ರ ಮುಂದಿನ ಹಂತದ ಪ್ರಕ್ರಿಯೆ ತ್ವರಿತಗತಿಯಲ್ಲಿ ಆರಂಭವಾಗಲಿದೆ. – ಬಿ.ಎಂ. ಸುಕುಮಾರ್‌ ಶೆಟ್ಟಿ , ಶಾಸಕ

ಟಾಪ್ ನ್ಯೂಸ್

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

hockey; India playing against Germany

Hockey: ಜರ್ಮನಿ ವಿರುದ್ಧ “ಪ್ಯಾರಿಸ್‌ ಪ್ರತಿಕಾರ’ಕ್ಕೆ ಸಿದ್ಧತೆ

13 thousand recruitment in top 5 IT firms in first half of this year

IT: ಈ ವರ್ಷದ ಮೊದಲಾರ್ಧದಲ್ಲಿ ಅಗ್ರ 5 ಐಟಿ ಸಂಸ್ಥೆಗಳಲ್ಲಿ 13 ಸಾವಿರ ನೇಮಕ

Prime Minister Modi preached peace mantra to Putin again!

Narendra Modi: ಪುತಿನ್‌ಗೆ ಮತ್ತೆ ಶಾಂತಿ ಮಂತ್ರ ಬೋಧಿಸಿದ ಪ್ರಧಾನಿ ಮೋದಿ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1KH-HOSPITAL

Manipal: ಅನ್ನನಾಳ ರಂಧ್ರ ಸಮಸ್ಯೆಗೆ ನವೀನ ಎಂಡೋಸ್ಕೋಪಿಕ್‌ ಚಿಕಿತ್ಸೆ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: ಗೀತಾರ್ಥ ಚಿಂತನೆ-72: ಶಬ್ದ ಬಳಕೆಯಲ್ಲಿ ಧ್ವನ್ಯಾರ್ಥ ವಿಶೇಷಣ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

Udupi: 51ನೇ ಅ.ಭಾ. ಪ್ರಾಚ್ಯವಿದ್ಯಾ ಸಮ್ಮೇಳನ ಭಾರತೀಯ ಜ್ಞಾನಪರಂಪರೆ ಕುರಿತು ಚಿಂತನ ಮಂಥನ

byndoor

Kundapura: ಕಟ್ಟಡದಿಂದ ಬಿದ್ದು ಕಾರ್ಮಿಕ ಸಾವು

15(1)

Manipal: ಮಲ್ಪೆಯ ಮರಳು ಭೂಮಿಯಲ್ಲೊಂದು ಸುಂದರ ಉದ್ಯಾನ!

MUST WATCH

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಕಪ್ಪುಪಟ್ಟಿ ತೆಗೆಸಿದ ಚೀಫ್ ಜಸ್ಟೀಸ್ ಆಫ್ ಇಂಡಿಯಾ!

udayavani youtube

ಯಾಹ್ಯಾ ಸಿನ್ವಾರ್ ಹತ್ಯೆಯ ಡ್ರೋನ್ ವಿಡಿಯೋ ಬಿಡುಗಡೆ ಮಾಡಿದ ಇಸ್ರೇಲ್

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

udayavani youtube

ಅಗಲಿದ ರತನ್ ಟಾಟಾಗೆ ಶ್ರದ್ಧಾಂಜಲಿ ಸಲ್ಲಿಸಿದ ಅಂಬಾನಿ ಕುಟುಂಬ

ಹೊಸ ಸೇರ್ಪಡೆ

Glasgow Commonwealth Games: No place to Hockey, Cricket, Wrestling, Badminton

Glasgow Commonwealth Games: ಹಾಕಿ, ಕ್ರಿಕೆಟ್‌, ಕುಸ್ತಿ, ಬ್ಯಾಡ್ಮಿಂಟನ್‌ಗೆ ಖೋ

16

Mangaluru: ಹಳೆಯ ಹೆಲ್ಮೆಟ್‌ ಇಟ್ಟು ಹೊಸ ಹೆಲ್ಮೆಟ್‌ ಕಳವು!

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Channapatna By-Election: ಯೋಗೇಶ್ವರ್‌ ಎನ್‌ಡಿಎ ಅಭ್ಯರ್ಥಿ?

Belagavi: ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣ ವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

Belagavi:ಅಧಿವೇಶನ ವೇಳೆ 10 ಲಕ್ಷ ಜನರ ಜತೆ ಸುವರ್ಣವಿಧಾನಸೌಧಕ್ಕೆ ಮುತ್ತಿಗೆ ಹಾಕುತ್ತೇವೆ…

fake court in gujarat

Gujarat: ನಕಲಿ ಪೊಲೀಸ್‌ ಆಯ್ತು, ಅರೆಸ್ಟ್‌ ಆಯ್ತು.. ಈಗ ನಕಲಿ ಕೋರ್ಟ್‌!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.