ಸಂಕಷ್ಟದಲ್ಲಿ ಲಂಕಾ: ನೆರವು ನೀಡಿದ ಮೋದಿಯವರಿಗೆ ಆಭಾರಿ ಎಂದ ಜಯಸೂರ್ಯ
ನಮಗೆ ಸಹಾಯ ಮಾಡಿದ ಭಾರತ ''ದೊಡ್ಡಣ್ಣ''
Team Udayavani, Apr 7, 2022, 11:31 AM IST
News and Image credit : ANI
ಕೊಲಂಬೋ : ಶ್ರೀಲಂಕಾದ ಮಾಜಿ ಕ್ರಿಕೆಟಿಗ ಸನತ್ ಜಯಸೂರ್ಯ ದೇಶದ ಪ್ರಸ್ತುತ ಪರಿಸ್ಥಿತಿಯ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದು, ತೀವ್ರ ಆರ್ಥಿಕ ಸಂಕಷ್ಟದ ವೇಳೆ ನೆರವು ನೀಡಿದ ಭಾರತವನ್ನು ನಮ್ಮ ದೇಶದ ”ದೊಡ್ಡಣ್ಣ” ಎಂದು ಕರೆದಿದ್ದಾರೆ.
ಎಎನ್ ಐ ಸುದ್ದಿಸಂಸ್ಥೆಯೊಂದಿಗೆ ನಡೆಸಿದ ಸಂದರ್ಶನದಲ್ಲಿ , ಜಯಸೂರ್ಯ ಅವರು, ”ಜನರು ಈ ಪರಿಸ್ಥಿತಿಯನ್ನು ಎದುರಿಸುತ್ತಿರುವುದು ದುರದೃಷ್ಟಕರ. ಅವರು ಹೀಗೆ ಬದುಕಲು ಸಾಧ್ಯವಿಲ್ಲ ಎಂದು ಪ್ರತಿಭಟನೆ ಆರಂಭಿಸಿದ್ದಾರೆ. ಗ್ಯಾಸ್ ಕೊರತೆ ಉಂಟಾಗಿದ್ದು, ಗಂಟೆಗಟ್ಟಲೆ ವಿದ್ಯುತ್ ಪೂರೈಕೆಯಾಗುತ್ತಿಲ್ಲ” ಎಂದು ಲಂಕಾ ಪರಿಸ್ಥಿತಿಯ ಕುರಿತು ವಿವರಿಸಿದ್ದಾರೆ.
”ಶ್ರೀಲಂಕಾ ಸರ್ಕಾರಕ್ಕೆ ತಾವು ಬಳಲುತ್ತಿರುವುದನ್ನು ತೋರಿಸಲು ಜನರು ಹೊರಗೆ ಬರಲು ಮತ್ತು ಪ್ರತಿಭಟಿಸಲು ಪ್ರಾರಂಭಿಸಿದ್ದಾರೆ. ಸಂಬಂಧಪಟ್ಟವರು ಈ ಬಗ್ಗೆ ಸರಿಯಾಗಿ ಗಮನಹರಿಸದಿದ್ದರೆ ಅನಾಹುತವಾಗುತ್ತದೆ. ಇದರ ಜವಾಬ್ದಾರಿಯು ಪ್ರಸ್ತುತ ಸರ್ಕಾರಕ್ಕೆ ಹೋಗುತ್ತದೆ” ಎಂದು ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ.
”ನಮ್ಮ ದೇಶದ ನೆರೆಯ ಮತ್ತು ದೊಡ್ಡಣ್ಣನಾಗಿ, ಭಾರತ ಯಾವಾಗಲೂ ನಮಗೆ ಸಹಾಯ ಮಾಡಿದೆ. ನಾವು ಭಾರತ ಸರ್ಕಾರ ಮತ್ತು ಪ್ರಧಾನಿ ಮೋದಿಯವರಿಗೆ ಆಭಾರಿಯಾಗಿದ್ದೇವೆ. ಸದ್ಯದ ಸನ್ನಿವೇಶದಿಂದ ನಮಗೆ ಬದುಕುವುದು ಸುಲಭವಲ್ಲ. ಭಾರತ ಮತ್ತು ಇತರ ದೇಶಗಳ ಸಹಾಯದಿಂದ ಇದರಿಂದ ಹೊರಬರಲು ಸಾಧ್ಯವಿದೆ ಎಂದು ನಾವು ಭಾವಿಸುತ್ತೇವೆ” ಎಂದು ಅವರು ಹೇಳಿದ್ದಾರೆ.
ಭಾರತ ನಮಗೆ ದೊಡ್ಡಣ್ಣ ಇದ್ದಂತೆ. ಭಾರತವನ್ನು ಅನುಸರಿಸುವುದೇ ಉತ್ತಮ’ ಎಂದು ಪ್ರತಿಪಕ್ಷ ಮುಖಂಡ, ಮಾಜಿ ಕ್ರಿಕೆಟಿಗ ಅರ್ಜುನ ರಣತುಂಗ, ಚೀನ ರೂಪಿಸಿದ ಸಾಲದ ಕೂಪದಲ್ಲಿ ಬಿದ್ದು ಪರದಾಡುತ್ತಿರುವ ಲಂಕಾ ಸರಕಾರಕ್ಕೆ ಬುದ್ಧಿ ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Israel ಸರ್ಜಿಕಲ್ ಸ್ಟ್ರೈಕ್: ಹೆಜ್ಬುಲ್ಲಾ ಮುಖ್ಯಸ್ಥನ ಅಂತ್ಯಕ್ಕೆ 80 ಟನ್ ಬಾಂಬ್!
India ವರ, ಇರಾಕ್, ಇರಾನ್ ಶಾಪ: ವಿಶ್ವಸಂಸ್ಥೆಯಲ್ಲಿ ಇಸ್ರೇಲ್ ಪ್ರಧಾನಿ ನೆತನ್ಯಾಹು
Sunita Williams;ಬಾಹ್ಯಾಕಾಶದಿಂದ ಕರೆ ತರುವ ಕಾರ್ಯ ಆರಂಭ
Sheikh Hasina ಭಾರತದಿಂದ ಗಡೀಪಾರಿಗೆ ಬಾಂಗ್ಲಾದೇಶ ಪ್ರಯತ್ನ?
UN ಭದ್ರತಾ ಮಂಡಳಿಯಲ್ಲಿ ಭಾರತಕ್ಕೆ ಸ್ಥಾನ: ಪೋರ್ಚುಗಲ್ ಬೆಂಬಲ
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
MUDA Scam: ಸಿಎಂ ಸಿದ್ದರಾಮಯ್ಯ ವಿರುದ್ಧದ ಪ್ರಕರಣ ತನಿಖೆಗೆ ಲೋಕಾಯುಕ್ತದಿಂದ 4 ತಂಡ ರಚನೆ
Rescue: ಉತ್ತರ ಭಾರತದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದ ಉಡುಪಿಯ ತಂಡಕ್ಕೆ ಸಂಸದ ಕೋಟ ಸಹಾಯ
leak: ಎಸೆಸೆಲ್ಸಿಪರೀಕ್ಷೆ ದಿನ ಬೆಳಗ್ಗೆ 6ಕ್ಕೆ ಶಿಕ್ಷಕರಿಗೆ ಸಿಗಲಿದೆ ಪ್ರಶ್ನೆಪತ್ರಿಕೆ
Daily Horoscope: ಅನವಶ್ಯ ಮಾತುಗಳಿಂದ ದೂರವಿರಿ, ಉದ್ಯೋಗಸ್ಥರ ಸಮಸ್ಯೆ ನಿವಾರಣೆ
KSOU: ಪರೀಕ್ಷೆ ಸಮೀಪಿಸುತ್ತಿದ್ದರೂ ಮುದ್ರಿತ ಪಠ್ಯ ಸಿಗಲಿಲ್ಲ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.