ಬಿಸಿಲಿಗೆ ಬಳಲಿ ಬೆಂಡಾದ ಬೆಣ್ಣೆನಗರಿ ಜನ

ಹೆಚ್ಚುತ್ತಿರುವ ತಾಪಮಾನಕ್ಕೆ ತತ್ತರಿಸಿದ ಜನಜೀವನ

Team Udayavani, Apr 7, 2022, 3:14 PM IST

majjige

ದಾವಣಗೆರೆ: ಜಿಲ್ಲೆಯಲ್ಲಿ ಸೂರ್ಯನ ಪ್ರಖರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಬಿಸಿಲಿನ ಝಳದಿಂದ ರಕ್ಷಿಸಿಕೊಳ್ಳಲು ಜನರು ನಾನಾ ರೀತಿಯ ಕ್ರಮಗಳತ್ತ ಚಿತ್ತ ಹರಿಸಿದ್ದಾರೆ.

ಸೋಮವಾರ ಗರಿಷ್ಠ 38 ಡಿಗ್ರಿ ಸೆಲ್ಸಿಯಸ್‌ ಉಷ್ಣಾಂಶ ದಾಖಲಾಗಿದೆ. ಮುಂದಿನ ಐದು ದಿನಗಳಲ್ಲಿ ಜಿಲ್ಲೆಯಲ್ಲಿ ಸರಾಸರಿ ಗರಿಷ್ಠ ಉಷ್ಣಾಂಶ 38 ಡಿಗ್ರಿ ಸೆಲ್ಸಿಯಸ್‌ ಇರಲಿದ್ದು, ಗುರುವಾರ ಮಾತ್ರ ತಾಪಮಾನ 39 ಡಿಗ್ರಿಸೆಲ್ಸಿಯಸ್‌ಗೆ ಏರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಏಪ್ರಿಲ್‌ ಮೂರನೇ ವಾರದಿಂದ ಉಷ್ಣಾಂಶ ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ ಎನ್ನಲಾಗಿದೆ. ಬೆಳಿಗ್ಗೆ 11 ಗಂಟೆಯಾಗುತ್ತಲೇ ಸೂರ್ಯ ತನ್ನ ಪ್ರಖರತೆ ಹೆಚ್ಚಿಸಿಕೊಳ್ಳುತ್ತಿದ್ದು, ಮಧ್ಯಾಹ್ನ 12ರಿಂದ ನಾಲ್ಕು ಗಂಟೆ ಅವಧಿಯಲ್ಲಿನ ಓಡಾಟ ಮಹಿಳೆ, ವೃದ್ಧರು, ಮಕ್ಕಳಾದಿಯಾಗಿ ಎಲ್ಲರಿಗೂ ಕಷ್ಟವಾಗುತ್ತಿದೆ. ಒಂದು ಕಡೆ ಬಿಸಿಲಿಗೆ ಕಾದು ಕೆಂಡದಂತಾದ ಕಾಂಕ್ರಿಟ್‌ ರಸ್ತೆಯ ಉಗಿ, ಇನ್ನೊಂದೆಡೆ ಮೇಲಿನ ಸುಡುಬಿಸಿಲು. ಈ ನಡುವೆ ಕೆಲವರು ಕೊಡೆ, ಟೋಪಿ ಬಳಸಿದರೆ, ಮತ್ತೆ ಕೆಲವರು ಆಟೋರಿಕ್ಷಾ ಪ್ರಯಾಣಕ್ಕೆ ಮೊರೆ ಹೋಗುತ್ತಿದ್ದಾರೆ.

ಬಿಸಿಲಿನಿಂದಾಗಿ ಜನರ ನೀರಿನ ದಾಹ ತೀರದಾಗಿದ್ದು ನೀರಿನ ಬಾಟಲಿಗಳ ವ್ಯಾಪಾರ ಜೋರಾಗಿದೆ. ದೇಹವನ್ನು ತಂಪುಗೊಳಿಸಲು ಜನರು ಹಣ್ಣಿನ ರಸ, ಐಸ್‌ಕ್ರೀಮ್‌, ಮಜ್ಜಿಗೆ, ಎಳನೀರಿಗೆ ಮೊರೆಹೋಗುತ್ತಿದ್ದಾರೆ, ಹಾಗಾಗಿ ಇವುಗಳ ಮಾರಾಟ ಭರಪೂರ ನಡೆಯುತ್ತಿದೆ. ಇದರ ಜತೆಗೆ ಕಲ್ಲಂಗಡಿ, ಕರಬೂಜ ಹಣ್ಣುಗಳ ಖರೀದಿಗೂ ಮುಂದಾಗಿದ್ದಾರೆ. ಮನೆ, ಕಚೇರಿ, ಅಂಗಡಿಗಳಲ್ಲಿಯೂ ಬಿಸಿಲಿನ ಕಾವು ಹೆಚ್ಚಾಗಿದ್ದು, ಹಗಲು-ರಾತ್ರಿ ಗಾಳಿ ಪಂಕ ತಿರುತ್ತಲೇ ಇವೆ. ವಿದ್ಯುತ್‌ ಹೋದರಂತೂ ಕೆಲವರಿಗೆ ಜೀವವೇ ಹೋದ ಅನುಭವವಾಗುತ್ತಿದೆ. ಆಗ ಜನರು ಮನೆಯಿಂದ ಹೊರಗೆ ಬಂದು ಗಾಳಿಯ ನಿರೀಕ್ಷೆಯಲ್ಲಿ ನಿಲ್ಲುವುದು ಸಾಮಾನ್ಯವಾಗಿದೆ.

ಮಕ್ಕಳಿಗೂ ಸಮಸ್ಯೆ

ಚಿಕ್ಕ ಮಕ್ಕಳಿಗೆ ಶಾಲೆ ರಜೆ ನೀಡಲಾಗಿದ್ದು, ಸದಾ ರಸ್ತೆ, ಮೈದಾನದಲ್ಲಿ ಆಟ ಆಡುತ್ತಿದ್ದ ಮಕ್ಕಳಿಗೆ ಈ ಬಿಸಿಲು ಮನೆಯಲ್ಲೇ ಕಟ್ಟಿ ಹಾಕಿದೆ. ಬಿಸಿಲಿನ ಕಾರಣದಿಂದ ಪಾಲಕರು ಮಕ್ಕಳನ್ನು ಹೊರಗೆ ಕಳುಹಿಸದೇ ಇರುವುದರಿಂದ ಮಕ್ಕಳು ಮನೆಯೊಳಗೇ ಸೆಕೆಯ ನಡುವೆಯೇ ಆಟ ಆಡಿಕೊಂಡಿರಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಕೆಲ ಮಕ್ಕಳು ರಾತ್ರಿ 9-10 ಗಂಟೆಗೆ ಮನೆಯಿಂದ ಹೊರಬಂದು ತಂಪು ವಾತಾವರಣದಲ್ಲಿ ಬೀದಿದೀಪದ ಬೆಳಕಲ್ಲಿ ಆಟವಾಡಿ ಖುಷಿಪಡುತ್ತಿದ್ದಾರೆ. ಬೈಕ್‌ ಸವಾರರಂತೂ ಸೆಕೆಯಲ್ಲೇ ಹೆಲ್ಮೆಟ್‌ ಹಾಕಿಕೊಂಡು ಬೆವರೊರೆಸಿಕೊಳ್ಳುವ ದೃಶ್ಯಗಳು ಕಂಡು ಬರುತ್ತಿವೆ.

ಬಿಸಿಲಿನಿಂದ ಜನರಿಗೆ ಆಗುವ ದಾಹ ತೀರಿಸಲು ಹತ್ತು ಹಲವು ಸಂಘ-ಸಂಸ್ಥೆಗಳು ಉಚಿತ ಮಜ್ಜಿಗೆ, ನೀರು ವಿತರಿಸುವ ಕಾರ್ಯಕ್ರಮಗಳನ್ನು ಮಹಾನಗರದ ಹಲವೆಡೆ ಹಮ್ಮಿಕೊಂಡಿವೆ. ಕೆಲವು ಅಂಗಡಿಕಾರರು, ಆಟೋರಿಕ್ಷಾದವರು ಜನರಿಗಾಗಿ ತಮ್ಮಲ್ಲೇ ಕುಡಿಯುವ ನೀರಿನ ವ್ಯವಸ್ಥೆ ಮಾಡಿಕೊಂಡು ಜಲಸೇವೆ ಮಾಡುತ್ತಿದ್ದು ಎಲ್ಲ ಪ್ರಶಂಸೆಗೆ ಪಾತ್ರವಾಗಿದೆ.

ಬಿಸಿಲಿನ ಝಳ ಹೆಚ್ಚಾಗಿದ್ದರಿಂದ ಜನರು ಹಣ್ಣಿನ ಮೊರೆ ಹೋಗುತ್ತಿದ್ದಾರೆ. ಆದ್ದರಿಂದ ಹಣ್ಣಿನ ವ್ಯಾಪಾರ ಈ ವಾರದಿಂದ ಜೋರಾಗಿದೆ. ಕಲ್ಲಂಗಡಿ, ಕರಬೂಜ, ತಾಳೆಹಣ್ಣನ್ನು ಜನ ಹೆಚ್ಚು ಖರೀದಿಸುತ್ತಿದ್ದಾರೆ. – ರಫೀಕ್‌, ಹಣ್ಣಿನ ವ್ಯಾಪಾರಿ

ದಾವಣಗೆರೆಯಲ್ಲಿ ಈ ವರ್ಷ ಈವರೆಗೆ ಒಮ್ಮೆಯೂ ದೊಡ್ಡ ಮಳೆಯಾಗಿಲ್ಲ. ಮಳೆಯಾಗಿದ್ದರೆ ಭೂಮಿ ತಂಪಾಗುತ್ತಿತ್ತು. ಮಳೆಯಾಗದೆ ಇರುವುದರಿಂದ ಬಿಸಿಲಿನ ತಾಪಮಾನ ಹೆಚ್ಚಾಗಿದೆ. ಬಿಸಿಲಿನ ಝಳದಿಂದ ತಪ್ಪಿಸಿಕೊಳ್ಳಲು ಏನು ಮಾಡಿದರೂ ನೆಮ್ಮದಿ ಸಿಗುತ್ತಿಲ್ಲ.- ನಿರಂಜನ ಟಿ., ನಾಗರಿಕ

ಟಾಪ್ ನ್ಯೂಸ್

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

Mandya: ಸ್ನೇಹಿತನ ಪತ್ನಿ ಜತೆ ಅಕ್ರಮ ಸಂಬಂಧ; ಸಕ್ಕರೆನಾಡಲ್ಲಿ ಯುವಕನ ಕೊಲೆ!

The audio rights of 45 movie were sold for a whopping sum

Arjun Janya: ಭರ್ಜರಿ ಮೊತ್ತಕ್ಕೆ ಮಾರಾಟವಾಯ್ತು ʼ45ʼ ಆಡಿಯೋ ರೈಟ್ಸ್

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Bengaluru: ಪತ್ನಿ, ಪ್ರಿಯಕರನ ಖಾಸಗಿ ವಿಡಿಯೋ ಇಟ್ಟುಕೊಂಡು ಬೆದರಿಸಿದ ಗಂಡ!

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ

Jammu – Kashmir: ಸೇನಾ ವಾಹನದ ಮೇಲೆ ಗುಂಡಿನ ದಾಳಿ… ಮುಂದುವರೆದ ಶೋಧ ಕಾರ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

Davanagere: ಹಳೆಯ ದಾಖಲೆಗಳ ಲ್ಯಾಮಿನೇಶನ್:‌ ಮಹಾನಗರ ಪಾಲಿಕೆಯ ಹೊಸ ಕ್ರಮ

DVG-1

Davanagere: ನಾಪತ್ತೆಯಾಗಿದ್ದ ವ್ಯಕ್ತಿ ಅಣಜಿ ಕೆರೆ ಬಳಿ ಅಸ್ಥಿಪಂಜರವಾಗಿ ಪತ್ತೆ!

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

Davanagere: ಭೈರತಿ ಸುರೇಶ್ ವಿರುದ್ದ ಮಾನನಷ್ಟ ಮೊಕದ್ದಮೆ ಎಚ್ಚರಿಕೆ ನೀಡಿದ ರೇಣುಕಾಚಾರ್ಯ

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

ಅ. 22ರಂದು ಬೆಂಗಳೂರಲ್ಲಿ ವೀರಶೈವ ಲಿಂಗಾಯತ ಸಭೆ: ಶಾಮನೂರು

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

Davanagere: ಒಳ ಮೀಸಲಾತಿ ಜಾರಿಗೆ ಆಗ್ರಹಿಸಿ ಅ.23ರಂದು ಪ್ರತಿಭಟನೆ: ರವಿನಾರಾಯಣ್

MUST WATCH

udayavani youtube

ಗಣಪತಿ ಸಹಕಾರಿ ವ್ಯವಸಾಯಕ ಸಂಘ ‘ನಿ.’ ಕೆಮ್ಮಣ್ಣು ಶತಾಭಿವಂದನಂ ಸಮಾರೋಪ ಸಂಭ್ರಮ ಸಂಪನ್ನ

udayavani youtube

ಉದಯವಾಣಿ’ಚಿಣ್ಣರ ಬಣ್ಣ -2024

udayavani youtube

ಹಬ್ಬದ ಊಟವೇ ಈ ಹೋಟೆಲ್ ನ ಸ್ಪೆಷಾಲಿಟಿ

udayavani youtube

ಪ್ರಿಯಕರನೊಂದಿಗೆ ಸೇರಿ ಪತಿಯನ್ನು ಹ*ತ್ಯೆಗೈದ ಆರೋಪಿತೆ ಸಹೋದರನೊಂದಿಗೆ ಮಾತಾಡಿದ ಆಡಿಯೋ

udayavani youtube

ಡೂಪ್ಲಿಕೇಟ್ ಕೀ ಮಹತ್ವವೇನು ?

ಹೊಸ ಸೇರ್ಪಡೆ

Kaup LaxmiJanardhana Temple: Manohar Shetty elected as Management Committee Chairman

Kaup LaxmiJanardhana Temple: ವ್ಯವಸ್ಥಾಪನಾ ಸಮಿತಿ ಅಧ್ಯಕ್ಷರಾಗಿ ಮನೋಹರ್ ಶೆಟ್ಟಿ ಆಯ್ಕೆ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

Hosapete: ಜ್ವರದಿಂದ ಮಗು ಸಾವು; ವೈದ್ಯರ ನಿರ್ಲಕ್ಷ್ಯ ಕಾರಣವೆಂದು ಪಾಲಕರ ಆಕ್ರೋಶ

ramesh

BJP: ವಿಜಯೇಂದ್ರ ನಾಯಕತ್ವವನ್ನು ನಾನು ಒಪ್ಪುವುದಿಲ್ಲ: ರಮೇಶ ಜಾರಕಿಹೊಳಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Kerala: ವಿಡಿಯೋ ಅಪ್ಲೋಡ್‌ ಮಾಡಿದ ಕೆಲ ಗಂಟೆಯಲ್ಲೇ ಶವವಾಗಿ ಪತ್ತೆಯಾದ ಖ್ಯಾತ ವ್ಲಾಗರ್ ದಂಪತಿ

Explainer: ವಯನಾಡ್‌ ಲೋಕಸಮರ- ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Explainer: ವಯನಾಡ್‌ ಲೋಕಸಮರ-ಪ್ರಿಯಾಂಕಾ ವಿರುದ್ಧ ಮಾಜಿ ಪತ್ರಕರ್ತ, ಕೌನ್ಸಿಲರ್‌ ಅಖಾಡಕ್ಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.