![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-415x246.jpg)
ಸರಕಾರಿ ಯೋಜನೆಗಳಲ್ಲಿ ಇನ್ನು ಪೌಷ್ಟಿಕಾಂಶ ಇರುವ ಅಕ್ಕಿ ವಿತರಣೆ
Team Udayavani, Apr 9, 2022, 7:30 AM IST
![ಸರಕಾರಿ ಯೋಜನೆಗಳಲ್ಲಿ ಇನ್ನು ಪೌಷ್ಟಿಕಾಂಶ ಇರುವ ಅಕ್ಕಿ ವಿತರಣೆ](https://www.udayavani.com/wp-content/uploads/2022/04/anurag-1-620x405.jpg)
ಹೊಸದಿಲ್ಲಿ: ದೇಶಾದ್ಯಂತ ಉದ್ದೇಶಿತ ಸಾರ್ವಜನಿಕ ವಿತರಣ ವ್ಯವಸ್ಥೆಯಲ್ಲಿ ಪೌಷ್ಟಿಕಾಂಶಯುಕ್ತ ಅಕ್ಕಿ ವಿತರಣೆ ಮಾಡುವುದಕ್ಕೆ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಆರ್ಥಿಕ ವ್ಯವಹಾರಗಳ ಸಂಪುಟ ಸಮಿತಿ ಶುಕ್ರವಾರ ಅನುಮೋದನೆ ನೀಡಿದೆ. ಈ ಬಗ್ಗೆ ಕೇಂದ್ರ ವಾರ್ತಾ ಮತ್ತು ಪ್ರಸಾರ ಸಚಿವ ಅನುರಾಗ್ ಠಾಕೂರ್ ಮಾಹಿತಿ ನೀಡಿದ್ದಾರೆ. ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ(ಎನ್ಎಫ್ಎಸ್ಎ), ಸಮಗ್ರ ಮಕ್ಕಳ ಅಭಿವೃದ್ಧಿ ಸೇವೆ(ಐಸಿಡಿಎಸ್), ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ(ಪಿಎಂ- ಪೋಷಣ್) ಮತ್ತು ಇತರ ಕಲ್ಯಾಣ ಯೋಜನೆಗಳು(ಒಡಬ್ಲ್ಯುಎಸ್) ಅಡಿಯಲ್ಲಿ ಈ ಯೋಜನೆ ಜಾರಿಗೊಳಿಸಲಾಗುತ್ತದೆ. 2024ರೊಳಗೆ ದೇಶಾದ್ಯಂತ ಹಂತ ಹಂತವಾಗಿ ಯೋಜನೆ ಜಾರಿಗೆ ಬರಲಿದೆ. ಈ ಯೋಜನೆಗೆ ಸರಕಾರ ವಾರ್ಷಿಕವಾಗಿ 2,700 ಕೋಟಿ ರೂ. ಖರ್ಚು ಮಾಡಲಿದೆ.
ಯೋಜನೆ ವಿಸ್ತರಣೆ: ಮಾಜಿ ಪ್ರಧಾನಿ ದಿ| ಅಟಲ್ ಬಿಹಾರಿ ವಾಜಪೇಯಿ ಅವರ ಸ್ಮರಣಾರ್ಥ ನೀತಿ ಆಯೋಗವು 2015ರಲ್ಲಿ ಆರಂಭಿಸಿರುವ ಅಟಲ್ ಇನೋವೇಶನ್ ಮಿಷನ್(ಎಐಎಂ) ಅನ್ನು 2023ರ ಮಾರ್ಚ್ವರೆಗೆ ವಿಸ್ತರಿಸುವುದಕ್ಕೇ ಕೇಂದ್ರ ಸಂಪುಟ ಅನುಮೋದನೆ ನೀಡಿದೆ. ಈ ವಿಸ್ತೃತ ಅವಧಿಯಲ್ಲಿ 10,000 ಟಿಂಕರಿಂಗ್ ಲ್ಯಾಬ್ಗಳು(ಎಟಿಎಲ್), 101 ಅಟಲ್ ಇನ್ಕ್ಯುಬೇಷನ್ ಕೇಂದ್ರಗಳು(ಎಐಸಿ), 50 ಕಮ್ಯುನಿಟಿ ಇನೋವೇಶನ್ ಸೆಂಟರ್(ಎಸಿಐಸಿ) ಆರಂಭಿಸಲಾಗು ವುದು. ಹಾಗೆಯೇ 200 ಸ್ಟಾರ್ಟ್ಅಪ್ ಗಳಿಗೆ “ಅಟಲ್ ನ್ಯೂ ಇಂಡಿಯಾ ಚಾಲೆಂಜ್’ ಯೋಜನೆಯಡಿ ಬೆಂಬಲ ನೀಡಲಾಗುವುದು. ಅದಕ್ಕಾಗಿ ಕೇಂದ್ರ ಸರಕಾರ 2000 ಕೋಟಿ ರೂ. ಮೊತ್ತ ವಿನಿಯೋಗ ಮಾಡಲಿದೆ.
ಟಾಪ್ ನ್ಯೂಸ್
![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-415x246.jpg)
![](https://www.udayavani.com/wp-content/uploads/2024/03/IndianClicks_GVega_300x250_03212024_1_3.gif)
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
![udayavani youtube](https://i.ytimg.com/vi/NdljxpTr0n8/mqdefault.jpg)
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
![udayavani youtube](https://i.ytimg.com/vi/Ge2mbEcT0j0/mqdefault.jpg)
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
![udayavani youtube](https://i.ytimg.com/vi/qW7fcwKh15I/mqdefault.jpg)
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
![udayavani youtube](https://i.ytimg.com/vi/rXflDn9gBE4/mqdefault.jpg)
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
![udayavani youtube](https://i.ytimg.com/vi/OPoFL9bnOqc/mqdefault.jpg)
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
![Shivamogga: ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು](https://www.udayavani.com/wp-content/uploads/2024/12/shivamogga-2-150x89.jpg)
Shivamogga: ತಡರಾತ್ರಿ ಭೀಕರ ರಸ್ತೆ ಅಪಘಾತ… ಬೈಕ್ ನಲ್ಲಿದ್ದ ಇಬ್ಬರು ಯುವಕರು ಮೃ*ತ್ಯು
![Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು](https://www.udayavani.com/wp-content/uploads/2024/12/plane1-150x90.jpg)
Plane Mishap: ಲಘು ವಿಮಾನ ಪತನ… ಬ್ರೆಜಿಲ್ ನ ಉದ್ಯಮಿ ಸೇರಿ ಹತ್ತು ಮಂದಿ ಮೃತ್ಯು
![BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!](https://www.udayavani.com/wp-content/uploads/2024/12/11-27-150x90.jpg)
BBK11: ಬಾಯಿ ಮುಚ್ಕೊಂಡು ಇರು.. ಫೈಯರ್ ಬ್ರ್ಯಾಂಡ್ ಚೈತ್ರಾ ಕೋಪಕ್ಕೆ ಮನೆಮಂದಿ ಶಾಕ್.!
![1-chali](https://www.udayavani.com/wp-content/uploads/2024/12/1-chali-150x101.jpg)
Kashmir cold: 34 ವರ್ಷಗಳಲ್ಲೇ ಕನಿಷ್ಠ ತಾಪಮಾನ ದಾಖಲು!
![Hemmadi-Sevantige](https://www.udayavani.com/wp-content/uploads/2024/12/Hemmadi-Sevantige-150x90.jpg)
Natural Disaster: ಅನಿರೀಕ್ಷಿತ ಮಳೆಗೆ ಸೊರಗಿದ ವಿಶಿಷ್ಟ ಗುಣದ ಹೆಮ್ಮಾಡಿ ಸೇವಂತಿಗೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.