ಗುಜರಿ ಅಡ್ಡೆಯಾದ ಬ್ರಿಟಿಷರ ಕಾಲದ ಕಟ್ಟಡ

ರೈತರಿಗೆ ಅನುಕೂಲವಾಗುವಂತಹ ಚಿಂತನೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ಮಾಡಬೇಕಾಗಿದೆ.

Team Udayavani, Apr 9, 2022, 12:50 PM IST

ಗುಜರಿ ಅಡ್ಡೆಯಾದ ಬ್ರಿಟಿಷರ ಕಾಲದ ಕಟ್ಟಡ

ನವಲಗುಂದ: ಬ್ರಿಟಿಷರ ಕಾಲದಲ್ಲಿ ಕಟ್ಟಿರುವಂತಹ ಶತಮಾನ ಕಂಡ ತಹಶೀಲ್ದಾರ್‌ ಕಾರ್ಯಾಲಯಕ್ಕೆ ಕಾಯಕಲ್ಪ ಬೇಕಾಗಿದೆ. ಹಿಂದೊಂದು ದಿನ ಹಳೆಯ ತಹಶೀಲ್ದಾರ್‌ ಕಾರ್ಯಾಲಯದ ಆವರಣದಲ್ಲಿ ಪೊಲೀಸ್‌ ಠಾಣೆ ಸೇರಿದಂತೆ ತಾಲೂಕಾಡಳಿತವೇ ಕಾರ್ಯನಿರ್ವಹಿಸುತ್ತಿತ್ತು. ಸುಂದರವಾಗಿದ್ದ ಶತಮಾನದ ಕಟ್ಟಡವನ್ನು ಈಗ ನಿರ್ಲಕ್ಷಿಸುತ್ತಿರುವುದು ಸಾರ್ವಜನಿಕರ ಕೆಂಗಣ್ಣಿಗೆ ಗುರಿಯಾಗಿದೆ.

ಶತಮಾನದ ಕಟ್ಟಡದಲ್ಲಿದ್ದ ಹಳೆಯ ತಹಶೀಲ್ದಾರ್‌ ಕಾರ್ಯಾಲಯ ಈಗ ಪೊಲೀಸ್‌ ಇಲಾಖೆ ಸೀಜ್‌ ಮಾಡಿದ ವಾಹನಗಳ ಗುಜರಿ ಅಡ್ಡೆಯಾಗಿ ಪರಿಣಮಿಸಿದೆ. ಹಳೆಯ ತಹಶೀಲ್ದಾರ್‌ ಕಾರ್ಯಾಲಯದಲ್ಲಿ ಸದ್ಯ ರೆಕಾರ್ಡ್‌, ಭೂಮಾಪನಾಧಿಕಾರಿ, ಸರ್ವೇ, ಕಂದಾಯ ಇಲಾಖೆ ಸೇರಿದಂತೆ ತಾಲೂಕಿನ ಗ್ರಾಮ ಲೆಕ್ಕಾಧಿಕಾರಿಗಳ ಕಾರ್ಯಾಲಯಗಳಿಗೆ ಕೊಠಡಿಗಳು ಬಳಕೆ ಬಿಟ್ಟರೆ ಉಳಿದವುಗಳು ಖಾಲಿ ಇವೆ. ಬೇರೆ ಸರಕಾರಿ ಕಚೇರಿಗಳಿಗಾದರೂ ನೀಡಿದರೆ ಹಳೆಯ ಕಟ್ಟಡಕ್ಕೆ ಹೊಸ ಕಳೆಯಾದರೂ ಬರಬಹುದು ಎಂಬುದು ಜನರ ನಿರೀಕ್ಷೆಯಾಗಿದೆ.

ಹಳೆಯ ತಹಶೀಲ್ದಾರ್‌ ಕಾರ್ಯಾಲಯಕ್ಕೆ ದಿನನಿತ್ಯ ನೂರಾರು ರೈತರು ಆಗಮಿಸುತ್ತಾರೆ. ಈ ಆವರಣದಲ್ಲಿ ಗುಜರಿ, ಮೂತ್ರ ವಿಸರ್ಜನೆ, ಎಲ್ಲೆಂದರಲ್ಲಿ ಉಗುಳುವುದರಿಂದ ಕಟ್ಟಡದ ವಾತಾವರಣವೇ ಹಾಳಾಗಿದೆ. ಶತಮಾನದ ಕಟ್ಟಡವನ್ನು ಅಭಿವೃದ್ಧಿಪಡಿಸಿ ಬಾಡಿಗೆ ರೂಪದಲ್ಲಿ ಬೇರೆಡೆಗೆ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಕಚೇರಿಗಳನ್ನು ಇಲ್ಲಿಗೆ ಸ್ಥಳಾಂತರಿಸಿ ಸಾರ್ವಜನಿಕರಿಗೆ, ರೈತರಿಗೆ ಅನುಕೂಲವಾಗುವಂತಹ ಚಿಂತನೆಯನ್ನು ತಾಲೂಕು ಮಟ್ಟದ ಅಧಿಕಾರಿಗಳು ಮಾಡಬೇಕಾಗಿದೆ.

ಹಳೆಯ ತಾಲೂಕು ಕಚೇರಿ ಕಾರ್ಯಾಲಯದ ಹತ್ತಿರವೇ ಪೊಲೀಸ್‌ ಠಾಣೆ ಇದ್ದು, ಸೀಜ್‌ ಮಾಡಿದ ವಾಹನಗಳನ್ನು ಠಾಣೆಯಲ್ಲಿರಿಸುವುದನ್ನು ಬಿಟ್ಟು ಎಲ್ಲೆಂದರಲ್ಲಿ ಅಪಘಾತ ವಾಹನಗಳ ಶೋರೂಮ್‌ ಮಾಡಿದ್ದಾರೆ. ಹಳೆಯ ತಹಶೀಲ್ದಾರ್‌ ಕಾರ್ಯಾಲಯ ಆವರಣದಲ್ಲಿಯೇ ವೀರಭದ್ರೇಶ್ವರ ಹಾಗೂ ಮಾರುತಿ ದೇವಸ್ಥಾನವಿದ್ದು, ಭಕ್ತರು ಸಹ ಭಯದಲ್ಲಿ ಬಂದು ಹೋಗುವಂತಾಗಿದೆ. ಗುಜರಿ ವಾಹನಗಳಿಂದ ವಿಷಜಂತುಗಳು ಮನೆ ಮಾಡಿದ್ದು ಕಚೇರಿ ಕೆಲಸಕ್ಕೆಂದು ಬಂದಾಗ ಅವಘಡಕ್ಕೆ ಎಡೆಮಾಡಿಕೊಟ್ಟಂತಾಗಿದೆ. ನೂತನವಾಗಿ ಆಗಮಿಸಿರುವ ತಹಶೀಲ್ದಾರ್‌ ಅನಿಲ ಬಡಿಗೇರ ಅವರು ಶತಮಾನದ ಕಟ್ಟಡದ ಆವರಣದಲ್ಲಿನ ಗುಜರಿ ವಾಹನಗಳನ್ನು ಸ್ಥಳಾಂತರಿಸಿ ಆವರಣ ಸ್ವಚ್ಛತೆಗೆ ಆದ್ಯತೆ ನೀಡಬೇಕೆಂಬುದು ಜನರ ಆಶಯವಾಗಿದೆ.

ವಿಶಾಲವಾದ ಕಾರ್ಯಾಲಯದ ಜಾಗೆಯಲ್ಲಿ ರೈತರ ವಾಹನಗಳು ನಿಲ್ಲಲು ಸಹ ಜಾಗೆ ಇಲ್ಲದಂತೆ ಅಪಘಾತದ ವಾಹನಗಳ ತಾಣವಾಗಿಸಿದ್ದಾರೆ. ಇಂತಹ ಕಟ್ಟಡ ಸಿಗುವುದು ಅಪರೂಪ. ವಿಶಾಲವಾದ ಜಾಗೆ, ಕಲ್ಲಿನಲ್ಲಿ ಕಟ್ಟಿದ ಗೋಡೆಗಳ ಕಟ್ಟಡವನ್ನು ತಾಲೂಕಾಡಳಿತ ನಿರ್ಲಕ್ಷಿಸುತ್ತಿರುವುದು ನೋವುನ್ನುಂಟು ಮಾಡಿದೆ.
ಬಸಣ್ಣ ಬೆಳವಣಕಿ,ಅಳಗವಾಡಿ ಗ್ರಾಮಸ್ಥ

ಪುಂಡಲೀಕ ಮುಧೋಳ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.