ಮಣ್ಣಿನ ಸಂರಕ್ಷ ಣೆ ಪ್ರತಿಯೊಬ್ಬರ ಹೊಣೆಯಾಗಲಿ: ಡಾ| ಮಹಾಂತೇಶ


Team Udayavani, Apr 9, 2022, 1:18 PM IST

13soil

ವಿಜಯಪುರ: ಮಣ್ಣು, ನೀರು, ಗಾಳಿ ಸೇರಿದಂತೆ ಪಂಚಮಹಾಭೂತಗಳಿಂದ ಕೂಡಿದ ಈ ಪ್ರಕೃತಿ ಲಕ್ಷಾಂತರ ವರ್ಷಗಳಿಂದ ಇದೆ. ಈ ಪ್ರಕೃತಿಯನ್ನು ಸಹಜವಾಗಿಯೇ ಮುಂದಿನ ಪೀಳಿಗೆಗೆ ಕೊಂಡೊಯ್ಯಬೇಕಿರುವುದು ನಮ್ಮ ಮೇಲಿರುವ ಭಾರಿ ದೊಡ್ಡ ಹೊಣೆ. ಹೀಗಾಗಿ ಪ್ರಕೃತಿಯ ಭಾಗವಾಗಿರುವ ಮಣ್ಣನ್ನು ಉಳಿಸುವುದು ನಮ್ಮ ಕರ್ತವ್ಯವಾಗಲಿ ಎಂದು ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ಅಧ್ಯಕ್ಷ ಡಾ| ಮಹಾಂತೇಶ ಬಿರಾದಾರ ಹೇಳಿದರು.

ಶುಕ್ರವಾರ ಇಶಾ ಫೌಂಡೇಶನ್‌ ಮಣ್ಣು ಉಳಿಸಿ ಅಭಿಯಾನ ಅಂಗವಾಗಿ ವಿಜಯಪುರ ಸೈಕ್ಲಿಂಗ್‌ ಗ್ರೂಪ್‌ ನಗರದಲ್ಲಿ ಹಮ್ಮಿಕೊಂಡಿದ್ದ ಸೈಕಲ್‌ ಜಾಗೃತಿ ಜಾಥಾ ಸಿದ್ಧೇಶ್ವರ ದೇವಸ್ಥಾನದಿಂದ ಆರಂಭಗೊಂಡು ಪ್ರಮುಖ ಮಾರ್ಗದಲ್ಲಿ ಸಂಚರಿಸಿ, ಮಹಾತ್ಮ ಗಾಂಧೀಜಿ ವೃತ್ತದಲ್ಲಿ ಮುಕ್ತಾಯ ಕಂಡಿತು. ಈ ಸಂದರ್ಭದಲ್ಲಿ ಮಾತನಾಡಿದ ಡಾ| ಮಹಾಂತೇಶ ಬಿರಾದಾರ, ಸೈಕಲ್‌ ಜಾಥಾದಲ್ಲಿ ಮಾತನಾಡಿದ ಅವರು, ಮಣ್ಣು ಪ್ರಕೃತಿ ನಮಗೆ ನೀಡಿರುವ ಪವಿತ್ರ ಕೊಡುಗೆ. ಮನುಷ್ಯನ ಆಹಾರ ಉತ್ಪಾದನೆಯ ಮೂಲವೇ ಭೂಮಿ ಹಾಗೂ ಅದರ ಮೇಲಿರುವ ಮಣ್ಣು ಎಂದರು.

ಕೆಲವೇ ದಶಕಗಳ ಹಿಂದೆ ಫಲವತ್ತಾಗಿದ್ದ ಮಣ್ಣನ್ನು ಅವೈಜ್ಞಾನಿಕ ರಾಸಾಯನಿಕ ಬಳಸಿ, ಫಲವತ್ತಾದ ಭೂಮಿಯನ್ನು ಬಂಜರು ಮಾಡಿದ್ದೇವೆ. ಮಣ್ಣು ಕಲುಷಿತಗೊಂಡು, ಬೆಳೆಗಳು ವಿಷಯುಕ್ತಗೊಂಡು, ಕ್ಯಾನ್ಸರ್‌ ನಂತಹ ಕಾಯಿಲೆಗಳು ಹೆಚ್ಚುತ್ತಿವೆ. ನೀರಾವರಿ ಹೆಚ್ಚಿದಂತೆಲ್ಲ ಅತಿರೇಕದ ನೀರಿನ ಬಳಕೆಯಿಂದ ಮಣ್ಣಿನ ಫಲವತ್ತತೆ ಕಳೆದು, ಕ್ಷಾರತೆ ಹೆಚ್ಚುತ್ತಿದೆ. ಆದ್ದರಿಂದ ಮಣ್ಣಿನ ಮೂಲ ಸ್ವರೂಪವನ್ನು ಸಂರಕ್ಷಿಸುವ ಉದ್ದೇಶದಿಂದ ಅಗತ್ಯದಷ್ಟು ನೀರನ್ನು ಮಾತ್ರ ಬಳಸಬೇಕು ಎಂದು ಸಲಹೆ ನೀಡಿದರು.

ಸದ್ಯ ಪುಣೆಯಲ್ಲಿ ನೆಲೆಸಿರುವ ವೃತ್ತಿಯಲ್ಲಿ ಮರಿನ್‌ ಎಂಜಿನಿಯರ್‌ ಆಗಿರುವ ಸಾಗರ ಎಂಬವರು ಮಣ್ಣಿನ ಸಂರಕ್ಷಣೆ ಜಾಗೃತಿಗಾಗಿ ಕೊಯಮುತ್ತೂರ್‌ ಮಹಾನಗರದಿಂದ ಪುಣೆಯವರೆಗೆ 1500 ಕಿ.ಮೀ. ಸೈಕಲ್‌ ಜಾಗೃತಿ ಜಾಥಾ ನಡೆಸಿದ್ದು ಹಲವರಿಗೆ ಅನುಕರಣೀಯ ಎಂದರು. ಇಶಾ ಫೌಂಡೇಶನ್‌ನ ಬಸವರಾಜ ಗುರುಜಿ ಬಿರಾದಾರ, ಸೈಕ್ಲಿಂಗ್‌ ಗ್ರುಪ್‌ನ ಶಿವನಗೌಡ ಪಾಟೀಲ, ಸೋಮಶೇಖ ಸ್ವಾಮಿ, ಶಿವರಾಜ ಪಾಟೀಲ, ಸೋಮು ಮಠ, ಸಮೀರ ಬಳಗಾರ, ಸಂದೀಪ ಮಡಗೊಂಡ, ಡಿ.ಕೆ. ತಾವಸೆ ಸೇರಿದಂತೆ ಇತರರು ಸಾಗರ ಅವರನ್ನು ಸನ್ಮಾನಿಸಿದರು. ಪ್ರಗತಿಪರ ರೈತ ಎಸ್‌.ಟಿ.ಪಾಟೀಲ ಮಣ್ಣಿನ ಸಂರಕ್ಷಣೆ ಅಗತ್ಯದ ಕುರಿತು ಗೀತೆ ಹಾಡಿದರು.

ಟಾಪ್ ನ್ಯೂಸ್

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Santhe-last

Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ

kambala2

Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

ನಿಯಂತ್ರಣ ತಪ್ಪಿ ಸೇತುವೆ ಮೇಲಿಂದ ಕೆಳಗೆ ಬಿದ್ದ ಟಿಪ್ಪರ್… ಓರ್ವ ಮೃತ್ಯು. ಇನ್ನೋರ್ವ ಗಂಭೀರ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

Vijayapura: ಬಾಗಪ್ಪ ಹರಿಜನ ಕೊಲೆ ಪ್ರಕರಣ… ನಾಲ್ವರು ಆರೋಪಿಗಳ ಬಂಧನ

10

Muddebihal: ಮದವೇರಿದ್ದ ಎಮ್ಮೆ ಹಿಡಿಯಲು ಒಂದೂವರೆ ಗಂಟೆ ಕಾರ್ಯಾಚರಣೆ !

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

Vijayapura: ಕೊಲೆ ಪ್ರಕರಣದ ಆರೋಪಿ ಮೇಲೆ ಪೊಲೀಸರಿಂದ ಫೈರಿಂಗ್

VJP-Bagappa

Vijayapura: ರವಿ ಮೇಲಿನಕೇರಿ ಕೊ*ಲೆ ಸೇಡಿಗೆ ಭೀಮಾ ತೀರದ ಹಂತಕ ಬಾಗಪ್ಪ ಹರಿಜನ ಹ*ತ್ಯೆ?

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

City

Modern City: ದುಬಾೖ ಮಾದರಿ ದೇಶದಲ್ಲೂ ಫಿನ್‌ಟೆಕ್‌ ಸಿಟಿ ನಿರ್ಮಾಣ

Kanadka-Dooja

Surathkal: ಆರು ಬಾರಿಯ ಚಾಂಪಿಯನ್‌, ಕಂಬಳ ವೀರ ಕಾನಡ್ಕ ದೂಜನಿಗೆ ಸಮ್ಮಾನ

Yakshagana-Academy

Udupi: ಮಕ್ಕಳಲ್ಲಿ ತಾಳ್ಮೆ, ಏಕಾಗ್ರತೆ ಬೆಳೆಸಲು ಯಕ್ಷಗಾನ ತರಬೇತಿ ಅವಶ್ಯ: ಯು.ಟಿ. ಖಾದರ್‌

Sulya-1

Sulya: ಪೈಪ್‌ಲೈನ್‌ ಕಾಮಗಾರಿಯಿಂದ ರಸ್ತೆಗೆ ಹಾನಿ ಬಗ್ಗೆ ಚರ್ಚಿಸಿ ಕ್ರಮ: ಸತೀಶ್‌ ಜಾರಕಿಹೊಳಿ

Arebashe-Academy

Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.