ಧರ್ಮದಲ್ಲಿ ಜನ್ಮವಾದರೆ ಸಾಲದು, ಆಚರಣೆಯಿಂದ ಮಾತ್ರ ಸಾರ್ಥಕ್ಯ: ಸಮ್ಯಕ್ ಸಾಗರ ಮುನಿಮಹಾರಾಜರು


Team Udayavani, Apr 9, 2022, 5:59 PM IST

ಧರ್ಮದಲ್ಲಿ ಜನ್ಮವಾದರೆ ಸಾಲದು, ಆಚರಣೆಯಿಂದ ಮಾತ್ರ ಸಾರ್ಥಕ್ಯ: ಸಮ್ಯಕ್ ಸಾಗರ ಮುನಿಮಹಾರಾಜರು

ಸಾಗರ: ಜೈನ ಧರ್ಮದಲ್ಲಿ ಜನ್ಮ ತಾಳುವುದರಿಂದ ಜೀವನ ಪಾವನವಾಗುವುದಿಲ್ಲ. ಧರ್ಮದ ಆಚರಣೆಯಿಂದ ಮಾತ್ರ ಜೈನರಾಗಿ ಜನ್ಮ ತಾಳಿರುವುದಕ್ಕೆ ಸಾರ್ಥಕವಾಗುತ್ತದೆ. ಅಂತಹ ಮೋಕ್ಷಮಾರ್ಗದಲ್ಲಿ ಮುನ್ನಡೆಯುವುದರಿಂದ ಕರ್ಮಗಳು ಕಳೆಯುತ್ತವೆ ಎಂದು ಸಮ್ಯಕ್ ಸಾಗರ ಮುನಿಮಹಾರಾಜರು ನುಡಿದರು.

ತಾಲೂಕಿನ ಬಾರಂಗಿ ಹೋಬಳಿ ಅರಲಗೋಡು ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಹಳಬಳ್ಳಿ ಭಗವಾನ್ ನೇಮಿನಾಥ ತೀರ್ಥಂಕರರ ದಿಗಂಬರ ಜಿನ ಮಂದಿರದ ವೇದಿ ಪ್ರತಿಷ್ಠಾ ಮಹೋತ್ಸವದ ಧಾರ್ಮಿಕ ಸಭೆಯ ದಿವ್ಯ ಸಾನ್ನಿಧ್ಯ ವಹಿಸಿ, ಜೈನರು ಆಚಾರ ವಿಚಾರದಿಂದ ಗುರುತಿಸಿಕೊಳ್ಳಬೇಕು. ಕಂದಮೂಲಗಳ ತ್ಯಾಗಮಾಡಬೇಕು. ನಿತ್ಯ ಪೂಜೆ ವಿಧಿವಿಧಾನಗಳನ್ನು ನಿರ್ವಹಿಸುವ ಮೂಲಕ ಧರ್ಮ ಜಾಗೃತಿಗಾಗಿ ಧರ್ಮ ಮಾರ್ಗದಲ್ಲಿ ನಡೆಯಬೇಕು ಎಂದು ಹೇಳಿದರು.

ದಿನೇದಿನೆ ಅಧರ್ಮ ಹೆಚ್ಚಾಗುತ್ತಿದೆ. ಧರ್ಮ ಜಾಗೃತಿಯಿರುವವರೆಗೆ ಧರ್ಮಮಾರ್ಗದಲ್ಲಿ ನಡೆಯಬೇಕು. ಮುಂದೊಂದು ದಿನ ಧರ್ಮ ಅವನತಿ ಹೊಂದುವ ದಿನ ಬರುವ ಸಾಧ್ಯತೆಯಿದೆ. ಅಂತಹ ದಿನಗಳಲ್ಲಿ ಜನಜೀವನ ನಿಯಂತ್ರಣ ತಪ್ಪಿದಂತಾಗುತ್ತದೆ. ಆದ್ದರಿಂದ ಧರ್ಮ ಉಳಿಯುವಂತೆ ಪ್ರತಿಯೊಬ್ಬರೂ ಧರ್ಮಜಾಗೃತಿಗಾಗಿ ತುಡಿಯುವ ಮೂಲಕ ಅನುಸರಿಸಬೇಕು ಎಂದು ಕರೆ ನೀಡಿದರು.

ಇದನ್ನೂ ಓದಿ : ಕೆನಡಾದಲ್ಲಿ ನಡೆದ ಗುಂಡಿನ ದಾಳಿಗೆ ಭಾರತೀಯ ವಿದ್ಯಾರ್ಥಿ ಸಾವು

ಶಿವಮೊಗ್ಗದ ವಿಜಯ ಕುಮಾರ್ ಜೆ. ದಿನಕರ್ ಧಾರ್ಮಿಕ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿ, ಪ್ರಸ್ತುತ ಧರ್ಮಜಾಗೃತಿ ಕ್ಷೀಣಿಸುತ್ತಿದೆ. ದೇಶದಲ್ಲಿ ಜೈನರು 35 ಕೋಟಿ ಜನಸಂಖ್ಯೆಯಿತ್ತು. ಆದರೆ ಪ್ರಸ್ತುತ 1 ಕೋಟಿ ಜನಸಂಖ್ಯೆಗೆ ಕುಸಿಯಲು ಕಾರಣವೇನು ಎಂದು ಪ್ರಶ್ನಿಸಿಕೊಳ್ಳಬೇಕಾಗಿದೆ. ಜೈನ ಮಂದಿರಗಳ ಜೀರ್ಣೋದ್ಧಾರ ಕಾರ್ಯಗಳು ನಡೆಯುತ್ತಿವೆ. ಪ್ರತಿಯೊಬ್ಬ ಶ್ರಾವಕರು ಮಂದಿರಗಳಿಗೆ ಭೇಟಿ ನೀಡಿ ದೇವರ ದರ್ಶನ ಮಾಡುವ ಸಂಕಲ್ಪ ಮಾಡಬೇಕಿದೆ. ಮಕ್ಕಳಲ್ಲಿ ಧಾರ್ಮಿಕ ಸಂಸ್ಕಾರಗಳನ್ನು ಬಿತ್ತುವ ಧಾರ್ಮಿಕ ಶಿಬಿರಗಳಿಗೆ ಸೇರಿಸಬೇಕು. ಜೈನ ಯುವಕ-ಯುವತಿಯರು ಧರ್ಮದ ಚೌಕಟ್ಟು ಮೀರದಂತೆ ಸುಸಂಸ್ಕೃತ ಸಂಸ್ಕಾರವಂತರನ್ನಾಗಿ ಮಾರ್ಪಡಿಸಬೇಕು ಎಂದು ಕರೆ ನೀಡಿದರು.

ಬಿದರೂರು ಜೈನ ಬಸದಿ ಅಧ್ಯಕ್ಷೆ ಬಬಿತಾ ಪ್ರೇಮ್‌ಕುಮಾರ್ ಮಾತನಾಡಿದರು. ವೇದಿ ಪ್ರತಿಷ್ಠಾ ಮಹೋತ್ಸವ ಸಮಿತಿ ಅಧ್ಯಕ್ಷರಾದ ವೀರರಾಜ ಜೈನ್ ಮರುಬಿಡಿ ಅಧ್ಯಕ್ಷತೆ ವಹಿಸಿದ್ದರು. ಸಾಗರ ಜೈನ ಬಸದಿ ಅಧ್ಯಕ್ಷರಾದ ಹೊಯ್ಸಳ ಜೈನ್, ಇಡುವಾಣಿ ಬಸದಿ ಅಧ್ಯಕ್ಷ ನೇಮಯ್ಯ ಜೈನ್, ಹಲಕಂಟ ಜೈನ ಬಸದಿ ಅಧ್ಯಕ್ಷರಾದ ಸಂತೋಷ್‌ಕುಮಾರ್ ಜೈನ್, ನೆಲೆನೆಲೆ ಜಿನಮಂದಿರದ ಅಧ್ಯಕ್ಷರಾದ ಪಾರ್ಶ್ವನಾಥ ಜೈನ್ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

Charmadi Ghat: ತಡೆಗೋಡೆ ಅಪಾಯದಲ್ಲಿ: ಕೊಚ್ಚಿ ಹೋಗುತ್ತಿರುವ ಮಣ್ಣು

1-a-da

Rain; ಭಾರತ ಮತ್ತು ದಕ್ಷಿಣ ಆಫ್ರಿಕಾ ವನಿತಾ ಟಿ20 ರದ್ದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Zeeka-Virus

Zika Virus: ಗರ್ಭಿಣಿಯರೇ ಝೀಕಾ ಬಗ್ಗೆ ಎಚ್ಚರ: ಸರಕಾರ ಸೂಚನೆ

MBPatil

Airport: ರಾಜಧಾನಿ ಸಮೀಪ ವಿಮಾನ ನಿಲ್ದಾಣಕ್ಕೆ ಜಾಗದ ಹುಡುಕಾಟ: ಎಂ.ಬಿ. ಪಾಟೀಲ್‌

R.Ashok

Assembly Electionನಲ್ಲಿ ಮೈತ್ರಿಗೆ ದೇವೇಗೌಡರು ಒಪ್ಪಲಿಲ್ಲ: ಅಶೋಕ್‌

MUST WATCH

udayavani youtube

ಕೂಲ್ ಮೂಡ್ ನಲ್ಲಿ ಸ್ವಿಮ್ಮಿಂಗ್ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ : ಇಲ್ಲಿದೆ ವಿಡಿಯೋ

udayavani youtube

ಅಂಬಾನಿ ಕುಟುಂಬದಿಂದ ಆಟಗಾರರೊಂದಿಗೆ ವಿಶ್ವಕಪ್ ಗೆಲುವಿನ ಸಂಭ್ರಮಾಚರಣೆ

udayavani youtube

Team india

udayavani youtube

ಮರವಂತೆ ಬೀಚ್ ಅಪಾಯ ಲೆಕ್ಕಿಸದೆ ಪ್ರವಾಸಿಗರ ಹುಚ್ಚಾಟ

udayavani youtube

ಕಮಲಶಿಲೆ ದುರ್ಗೆಯ ಪಾದ ಸ್ಪರ್ಶಿಸಿದ ಕುಬ್ಜಾ ನದಿ

ಹೊಸ ಸೇರ್ಪಡೆ

Reel-Cinema

Film: ಚಲನಚಿತ್ರ ಚೆನ್ನಾಗಿದ್ದರೆ ಮಾತ್ರ ಟಿಕೆಟ್‌ ಖರೀದಿಸಿ

ಆಗಸ್ಟ್‌ನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

Augustನಲ್ಲಿ ವಿಶ್ವ ಕುಂದಾಪ್ರ ಕನ್ನಡ ದಿನಾಚರಣೆ

1-paris

Paris Olympics; ಅಲ್ಡ್ರಿನ್‌, ಅಂಕಿತಾ ಧ್ಯಾನಿಗೆ ಒಲಿಂಪಿಕ್ಸ್‌ ಟಿಕೆಟ್‌

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

S. T. Somashekhar ಮುಡಾ ಸದಸ್ಯತ್ವಕ್ಕೆ ಬೇರೆಡೆಯ ಶಾಸಕರ ಲಾಬಿ

1-eweweqw

Wrestling; ವಿನೇಶ್‌ ಫೋಗಾಟ್‌ ಗೆ ಸ್ವರ್ಣ ಪದಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.