ಉಗ್ರ ಹಫೀಜ್ ಪುತ್ರ ತಲ್ಹಾ ಸಯೀದ್ “ಘೋಷಿತ ಭಯೋತ್ಪಾದಕ’
ಕೇಂದ್ರ ಗೃಹ ಇಲಾಖೆಯಿಂದ ಘೋಷಣೆ
Team Udayavani, Apr 10, 2022, 7:45 AM IST
ನವದೆಹಲಿ: ಮಹತ್ವದ ಬೆಳವಣಿಗೆಯೊಂದರಲ್ಲಿ, ಲಷ್ಕರ್-ಎ-ತೊಯ್ಬಾ ಉಗ್ರ, ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಹಫೀಜ್ ಸಯೀದ್ನ ಪುತ್ರ ಹಫೀಜ್ ತಲ್ಹಾ ಸಯೀದ್ನನ್ನು ಕೇಂದ್ರ ಸರ್ಕಾರ ಶನಿವಾರ “ಘೋಷಿತ ಭಯೋತ್ಪಾದಕ’ ಎಂದು ಘೋಷಿಸಿದೆ.
ಉಗ್ರ ಹಫೀಜ್ ಸಯೀದ್ಗೆ ಪಾಕಿಸ್ತಾನದ ಉಗ್ರ ನಿಗ್ರಹ ನ್ಯಾಯಾಲಯವು 32 ವರ್ಷಗಳ ಜೈಲು ಶಿಕ್ಷೆ ವಿಧಿಸಿದ ಬೆನ್ನಲ್ಲೇ ಈ ಬೆಳವಣಿಗೆ ನಡೆದಿದೆ.
ಲಷ್ಕರ್ ಉಗ್ರ ಸಂಘಟನೆಯ ಧಾರ್ಮಿಕ ಘಟಕದ ಮುಖ್ಯಸ್ಥನಾಗಿರುವ ತಲ್ಹಾ ಸಯೀದ್ ಭಾರತ ಮತ್ತು ಅಫ್ಘಾನಿಸ್ತಾನದಲ್ಲಿ ಉಗ್ರರ ನೇಮಕ, ದೇಣಿಗೆ ಸಂಗ್ರಹ, ದಾಳಿಗೆ ಸಂಚು ಮತ್ತು ದಾಳಿಯಲ್ಲಿ ಸಕ್ರಿಯವಾಗಿ ಪಾಲ್ಗೊಂಡಿರುವ ಕಾರಣ ಆತನ ವಿರುದ್ಧ ಕಾನೂನುಬಾಹಿರ ಚಟುವಟಿಕೆಗಳ ನಿಯಂತ್ರಣ ಕಾಯ್ದೆಯನ್ವಯ ಕ್ರಮವನ್ನೂ ಕೈಗೊಳ್ಳಲಾಗುವುದು ಎಂದು ಕೇಂದ್ರ ಗೃಹ ಸಚಿವಾಲಯ ಹೇಳಿದೆ.
ಇದನ್ನೂ ಓದಿ:ಸೋಲಿನ ಸರಣಿಯಲ್ಲಿ ಚೆನ್ನೈ : ಹೈದರಾಬಾದ್ ಪರ ಮಿಂಚಿದ ಅಭಿಷೇಕ್ ಶರ್ಮಾ
ತಲ್ಹಾ ಸಯೀದ್ ಭಾರತ, ಇಸ್ರೇಲ್, ಅಮೆರಿಕ ಮತ್ತು ಅಫ್ಘನ್ ನಲ್ಲಿರುವ ಭಾರತದ ಹಿತಾಸಕ್ತಿಗಳ ವಿರುದ್ಧ ಜಿಹಾದ್ ಪ್ರಚಾರಕ್ಕಾಗಿ ಪಾಕಿಸ್ತಾನದಾದ್ಯಂತ ಇರುವ ಎಲ್ಲ ಲಷ್ಕರ್ ಕೇಂದ್ರಗಳಿಗೆ ಮುಕ್ತವಾಗಿ ಓಡಾಡುತ್ತಿದ್ದಾರೆ ಎಂದೂ ಆರೋಪಿಸಿರುವ ಗೃಹ ಇಲಾಖೆ, ಆತನನ್ನು “ಘೋಷಿತ ಭಯೋತ್ಪಾದಕ’ ಎಂದು ಘೋಷಿಸುತ್ತಿರುವುದಾಗಿ ಹೇಳಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೆಚ್ಚು ಮಂದಿ ವಿಡಿಯೋ ನೋಡಬೇಕೆಂದು ಟವರ್ ಏರಿದ ಯೂಟ್ಯೂಬರ್: ಮನವೊಲಿಕೆಗೆ ಖಾಕಿ ಸುಸ್ತು
Crocodile: ವಾಹನಗಳು ಓಡಾಡುವ ರಸ್ತೆಯಲ್ಲೇ ದೈತ್ಯ ಮೊಸಳೆ ಸಂಚಾರ…
Commercial LPG ಸಿಲಿಂಡರ್ ದರದಲ್ಲಿ ಇಳಿಕೆ…; ನೂತನ ದರ ಎಷ್ಟು? ಇಲ್ಲಿದೆ ಮಾಹಿತಿ
ಪ್ರವಾಸಿಗರ ಕಣ್ಣೆದುರೇ ಕೊಚ್ಚಿಹೋದ ಒಂದೇ ಕುಟುಂಬದ ಏಳು ಮಂದಿ ಸದಸ್ಯರು.. ಭಯಾನಕ ದೃಶ್ಯ ಸೆರೆ
NEET EXAM ಇನ್ನು ನೀಟ್ ಆನ್ಲೈನ್?ವಿವಾದದ ಬೆನ್ನಲ್ಲೇ ಕೇಂದ್ರ ಸರಕಾರದ ಚಿಂತನೆ
MUST WATCH
ಹೊಸ ಸೇರ್ಪಡೆ
Hubli; ಆಂತರಿಕ ಕಚ್ಚಾಟದಿಂದ ರಾಜ್ಯ ಸರ್ಕಾರ ಬಿದ್ದರೆ ನಮ್ಮ ಹೈಕಮಾಂಡ್..: ಮಹೇಶ ಟೆಂಗಿನಕಾಯಿ
Sagara: ತಮ್ಮ ವ್ಯಾಪ್ತಿಯಲ್ಲೇ ಕೆಲಸ ಮಾಡಲು ವಿಎಗಳಿಗೆ ಸೂಚನೆ; ಕಾಗೋಡು ಆಗ್ರಹ
15 ದಿನದಲ್ಲಿ ಸಮಸ್ಯೆಗೆ ಸ್ಪಂದಿಸಿ.. ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದ ಶಾಸಕ ಭೀಮಣ್ಣ ನಾಯ್ಕ
Siruguppa: ಅಕ್ರಮವಾಗಿ ಸಂಗ್ರಹಿಸಿ ಇಟ್ಟಿದ್ದ ಪಡಿತರ ಅಕ್ಕಿ ವಶ
India:ಭಾರತದಲ್ಲಿ ವಿದ್ಯುತ್ ಬಳಕೆ ಪ್ರಮಾಣ ಶೇ.9ರಷ್ಟು ಹೆಚ್ಚಳ;ಜೂನ್ ನಲ್ಲಿ 152 BU ಬಳಕೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.