ಪರ್ಕಳ ರಾ.ಹೆ.: ನೇರ ರಸ್ತೆ ಕಾಮಗಾರಿ ಆರಂಭ

ಹೈಕೋರ್ಟ್‌ನಲ್ಲಿದ್ದ ಒಂದು ಪ್ರಕರಣ ಇತ್ಯರ್ಥ

Team Udayavani, Apr 10, 2022, 1:56 PM IST

parkala

ಉಡುಪಿ: ಪರ್ಕಳ ರಾಷ್ಟ್ರೀಯ ಹೆದ್ದಾರಿ (ಎನ್‌ಎಚ್‌169ಎ) ಕಾಮಗಾರಿ ಆರಂಭದಿಂದಲೂ ಒಂದಲ್ಲ ಒಂದು ಬಗೆಯ ವಿವಾದದಿಂದ ಅಚ್ಚುಕಟ್ಟಾಗಿ ಕಾಮಗಾರಿ ನಡೆಯಲು ಸಾಧ್ಯವಾಗಿರಲಿಲ್ಲ. ಭೂಸ್ವಾಧೀನ, ಪರಿಹಾರ ವಿತರಣೆ ಸಹಿತ ಮೊದಲಾದ ತಾಂತ್ರಿಕ ಕಾರಣಗಳಿಂದ ಇಲ್ಲಿನ ಕಾಮಗಾರಿ ವಿಳಂಬವಾಗುತ್ತಲೆ ಇತ್ತು. ಇದೀಗ ಭೂ ಸ್ವಾಧೀನ ಮತ್ತು ಪರಿಹಾರ ವಿಷಯಕ್ಕೆ ಸಂಬಂಧಿಸಿ ಕೋರ್ಟ್‌ನಲ್ಲಿದ್ದ ಎರಡು ಪ್ರಕರಣದಲ್ಲಿ ಒಂದು ಪ್ರಕರಣ ಇತ್ಯರ್ಥಗೊಂಡಿದೆ.

ಇನ್ನೊಂದು ಪ್ರಕರಣ ಇತ್ಯರ್ಥಗೊಳ್ಳಬೇಕಿದೆ. ಇತ್ಯರ್ಥಗೊಂಡ ಪ್ರಕರಣಕ್ಕೆ ಸಂಬಂಧಿಸಿ ಈಗಾಗಲೆ ಕಾಮಗಾರಿ ಆರಂಭಿಸಲಾಗಿದೆ. ಈ ಹಿಂದೆ ತಡೆಯಾಜ್ಞೆ ಪರಿಣಾಮ ಕಾಮಗಾರಿ ಕೆಲವು ತಿಂಗಳು ಸ್ಥಗಿತಗೊಂಡಿತ್ತು. ಇದಕ್ಕೆ ಸಾರ್ವಜನಿಕ ವಲಯದಿಂದ ವ್ಯಾಪಕ ಟೀಕೆ ವ್ಯಕ್ತವಾಗಿತ್ತು. ಹೆದ್ದಾರಿ ಸಚಿವಾಲಯ ಹೈಕೋರ್ಟ್‌ ತಡೆಯಾಜ್ಞೆ ಇರುವ ಪ್ರದೇಶ ಹೊರತುಪಡಿಸಿ ಉಳಿದ ಭಾಗದ 540 ಮೀಟರ್‌ ಹೆದ್ದಾರಿ ರಸ್ತೆ ಕಾಮಗಾರಿಯನ್ನು ಕೈಗೆತ್ತಿಕೊಂಡಿದ್ದು, ಈಗಾಗಲೇ ಪೂರ್ಣಗೊಳಿಸಿದೆ.

ಕೆನರಾ ಬ್ಯಾಂಕ್‌ ಸಮೀಪದ ತಂಪು ಪಾನೀಯ ಘಟಕದವರೆಗೆ ಕಾಂಕ್ರೀಟ್‌ ರಸ್ತೆ ಪೂರ್ಣಗೊಂಡಿದ್ದು ಇಲ್ಲಿಂದ ನೇರ ಮಾರ್ಗದಲ್ಲಿ ನಗರಸಭೆಯ ನೀರಿನ ಟ್ಯಾಂಕ್‌ವರೆಗೆ ವ್ಯವಸ್ಥಿತ ರಸ್ತೆ ನಿರ್ಮಾಣಗೊಳ್ಳಲಿದೆ. ಇಲ್ಲಿ ಆರಂಭಿಕ ಹಂತದ ಕಾಮಗಾರಿ ಸಾಗುತ್ತಿದೆ. ಯಂತ್ರಗಳು ಸ್ಥಳಕ್ಕಾಗಮಿಸಿದ್ದು, ಕಾರ್ಮಿಕರು ರಸ್ತೆ ನಿರ್ಮಾಣ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ. ಇದನ್ನು ಸಾವಿರಾರು ಲೋಡ್‌ ಮಣ್ಣು ತುಂಬಿಸಿ ಎತ್ತರ ಮಾಡಿ ಬಳಿಕ ಕಾಂಕ್ರೀಟ್‌ ರಸ್ತೆ ನಿರ್ಮಿಸಬೇಕು. 390 ಮೀಟರ್‌ ವ್ಯಾಪ್ತಿಯಷ್ಟು ತಡೆಯಾಜ್ಞೆ ಇದ್ದು, ಇದರಲ್ಲಿ ಈಗಾಗಲೇ ಇತ್ಯರ್ಥಗೊಂಡ ಪ್ರಕರಣದ ವ್ಯಾಪ್ತಿಯಲ್ಲಿ 150 ಮೀಟರ್‌ನಷ್ಟು ಕಾಮಗಾರಿ ನಿರ್ವಹಿಸಲಾಗುತ್ತಿದೆ ಎಂದು ಎಂಜಿನಿಯರ್‌ಗಳು ಮಾಹಿತಿ ನೀಡಿದ್ದಾರೆ.

ಮಳೆ ನೀರು ಚರಂಡಿ, ಬಸ್‌ಬೇ ನಿರ್ಮಾಣ ಬಾಕಿ

ಪರ್ಕಳ ಪೇಟೆ ಭಾಗದಲ್ಲಿ 540 ಮೀಟರ್‌ನಷ್ಟು ರಸ್ತೆ ಕಾಮಗಾರಿ ವ್ಯವಸ್ಥಿತವಾಗಿ ಮುಗಿಸಲಾಗಿದ್ದು, ಇನ್ನೂ ಮಳೆ ನೀರು ಹರಿಯುವ ತೋಡು, ಪಾದಚಾರಿ ಮಾರ್ಗ, ರಸ್ತೆ ವಿಭಾಜಕ ಮತ್ತು ಬಸ್‌ ಬೇ ನಿರ್ಮಾಣವನ್ನು ಅಚ್ಚುಕಟ್ಟಾಗಿ ಕಾಮಗಾರಿ ನಡೆಸುವಂತೆ ಸ್ಥಳೀಯರು ಮನವಿ ಮಾಡಿದ್ದಾರೆ. ಮುಂದಿನ ದಿನಗಳಲ್ಲಿ ಮಳೆಗಾಲ ಶುರುವಾಗಲಿದ್ದು, ಅಷ್ಟರೊಳಗೆ ಕೆಲಸ ಮುಗಿಸಿಕೊಡಬೇಕು. ಕಾಮಗಾರಿ ಮುಗಿಯುತ್ತಿದ್ದಂತೆ ಲೈಟ್‌ ವ್ಯವಸ್ಥೆಯೂ ಶೀಘ್ರ ಕಲ್ಪಿಸಬೇಕು ಎಂದು ಆಗ್ರಹಿಸಿದ್ದಾರೆ.

ಎರಡು ಪ್ರಕರಣ

ಭೂಸ್ವಾಧೀನ ಪ್ರಕ್ರಿಯೆ ಸಂಬಂಧಿಸಿ ಎರಡು ಪ್ರಕರಣ ಹೈಕೋರ್ಟ್‌ನಲ್ಲಿದ್ದು, ಒಂದು ಪ್ರಕರಣ ಇತ್ಯರ್ಥಗೊಂಡು ನೇರ ರಸ್ತೆ ನಿರ್ಮಾಣಕ್ಕೆ ಕಾಮಗಾರಿ ಆರಂಭಗೊಂಡಿದೆ. ಇನ್ನೊಂದು ಪ್ರಕರಣವು ಶೀಘ್ರ ಇತ್ಯರ್ಥಗೊಳ್ಳಲಿದೆ. – ಕೆ. ರಘುಪತಿ ಭಟ್‌, ಶಾಸಕ

 

ಟಾಪ್ ನ್ಯೂಸ್

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

adike

Areca nut; ಬಳಲಿರುವ ಅಡಿಕೆಗೆ ಚೀನ ವೈರಸ್‌ ಸಿಡಿಲು!

1-kb

Land; ಬಗರ್‌ ಹುಕುಂ ಅರ್ಜಿ: ಎರಡು ತಿಂಗಳು ಗಡುವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

11

Udupi: ಸರಣಿ ಕಳ್ಳತನ; 3 ಮಂದಿಯ ಕೃತ್ಯ! ಸಿಸಿಟಿವಿಯಲ್ಲಿ ದಾಖಲು 

fraudd

Udupi: ದಾಳಿ ಹೆಸರಲ್ಲಿ ಹಣ ಪಡೆದು ವಂಚನೆ: ಮುಂಜಾಗ್ರತೆಗೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

isreal

Coastal People in Israel: ಸದ್ಯ ಸುರಕ್ಷಿತ, ಆದರೂ ಆದರೆ ಭವಿಷ್ಯವೇನು ಎಂಬ ಆತಂಕ

Udupi-DC-Meeting

Udupi: ಅಕ್ರಮ ಮೀನುಗಾರಿಕೆ ಬೋಟುಗಳಿಗೆ ಗರಿಷ್ಠ ದಂಡ: ಜಿಲ್ಲಾಧಿಕಾರಿ ಡಾ. ವಿದ್ಯಾಕುಮಾರಿ

1-horoscope

Daily Horoscope: ಕೇಳಿದವರಿಗೆ ಮಾತ್ರ ಸಲಹೆ ನೀಡಿ, ಅನವಶ್ಯವಾದ ವಿವಾದಕ್ಕೆ ಅವಕಾಶ ಬೇಡ

Bela1

Wild Elephant: ಧರ್ಮಸ್ಥಳ, ಚಾರ್ಮಾಡಿಯಲ್ಲಿ ಕಾಡಾನೆಗಳ ಹಾವಳಿ

Kota-poojary

Social Media Fake Account: ಸಂಸದ ಕೋಟ ಶ್ರೀನಿವಾಸ ಪೂಜಾರಿ ಖಾತೆ ನಕಲಿ: ದೂರು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.