ಕೀವ್ ನಲ್ಲಿ ಹಿನ್ನಡೆ : ರಷ್ಯಾ ಸೈನ್ಯಕ್ಕೆ ಹೊಸ ಜನರಲ್ ನೇಮಿಸಿದ ಪುತಿನ್
ಮೇ 9 ರ "ವಿಜಯ ದಿನ"ಕ್ಕೆ ರಷ್ಯಾದಲ್ಲಿ ಅತ್ಯಂತ ಮಹತ್ವವೇಕೆ?
Team Udayavani, Apr 10, 2022, 1:17 PM IST
ಮಾಸ್ಕೋ : ಉಕ್ರೇನ್ ನಡುವಿನ ಯುದ್ಧದಲ್ಲಿ ರಷ್ಯಾ ಮಿಲಿಟರಿ ಕೀವ್ ನಗರವನ್ನು ಪೂರ್ಣವಾಗಿ ವಶಪಡಿಸಿಕೊಳ್ಳಲು ವಿಫಲವಾದ ಬೆನ್ನಲ್ಲೇ ಅಧ್ಯಕ್ಷ ವ್ಲಾದಿಮಿರ್ ಪುತಿನ್ ಅವರು ಸೈನ್ಯಕ್ಕೆ ಹೊಸ ಜನರಲ್ ನೇಮಕ ಮಾಡಿದ್ದಾರೆ. ಅಲೆಕ್ಸಾಂಡರ್ ಡ್ವೊರ್ನಿಕೋವ್ ಅವರನ್ನು ನೇಮಿಸಿದ್ದಾರೆ. ರಷ್ಯಾದ ದಕ್ಷಿಣ ಮಿಲಿಟರಿ ಜಿಲ್ಲೆಯ ಕಮಾಂಡರ್ ಉಕ್ರೇನ್ನಲ್ಲಿ ಯುದ್ಧವನ್ನು ಮುನ್ನಡೆಸಲಿದ್ದಾರೆ.
ಡ್ವೊರ್ನಿಕೋವ್ ಅವರನ್ನು ಉಕ್ರೇನ್ನಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಯ ಥಿಯೇಟರ್ ಕಮಾಂಡರ್ ಎಂದು ಹೆಸರಿಸಲಾಗಿದೆ.
ಮೇ 9 ರಂದು ನಡೆಯಲಿರುವ `ವಿಜಯ ದಿನ ಆಚರಣೆಯ ಮೊದಲು ಯುದ್ಧಭೂಮಿಯಲ್ಲಿ ಭಾರಿ ಪ್ರಗತಿಯೊಂದಿಗೆ ಪುತಿನ್ ಅವರ ಮುಂದೆ ಕಾಣಿಸಿಕೊಳ್ಳುವ ಗುರಿಯನ್ನು ರಷ್ಯಾದ ಜನರಲ್ ಹೊಂದಿದ್ದಾರೆ ಎಂಬ ಊಹಾಪೋಹವಿದೆ. ಮಿಲಿಟರಿ ವಿಶ್ಲೇಷಕರು ಮತ್ತು ಗುಪ್ತಚರ ಮೌಲ್ಯಮಾಪನಗಳೊಂದಿಗೆ ಪರಿಚಿತವಾಗಿರುವ ಯುಎಸ್ ಅಧಿಕಾರಿಗಳನ್ನು ಉಲ್ಲೇಖಿಸಿ ಸಿಎನ್ಎನ್ ಭಾನುವಾರ ಈ ವರದಿ ಮಾಡಿದೆ.
ಮೇ 9 “ವಿಜಯ ದಿನ” ರಷ್ಯಾದಲ್ಲಿ ಅತ್ಯಂತ ಮಹತ್ವದ ದಿನವಾಗಿದೆ, ಏಕೆಂದರೆ ಇದು ಎರಡನೇ ಮಹಾಯುದ್ಧದಲ್ಲಿ ಜರ್ಮನಿಯ ಮೇಲೆ ಸೋವಿಯತ್ ಒಕ್ಕೂಟದ ವಿಜಯದ ವಾರ್ಷಿಕೋತ್ಸವವನ್ನು ಸೂಚಿಸುತ್ತದೆ.
ಉತ್ತರ ಉಕ್ರೇನ್ನಿಂದ ರಷ್ಯಾ ನಿರ್ಗಮನಕ್ಕೆ ಮುಂದಾಗಿದೆ ಎಂಬುದಕ್ಕೆ ಪುರಾವೆಗಳನ್ನು ತೋರಿಸುತ್ತದೆ ಎಂದು ಶನಿವಾರ ಇಂಗ್ಲೆಂಡ್ ಮಿಲಿಟರಿ ಗುಪ್ತಚರ ಮಾಹಿತಿ ನೀಡಿದೆ. ಏತನ್ಮಧ್ಯೆ, ರಷ್ಯಾದ 13 ವೈಮಾನಿಕ ಗುರಿಗಳನ್ನು ಶನಿವಾರ ನಾಶಪಡಿಸಲಾಗಿದೆ ಎಂದು ಉಕ್ರೇನ್ನ ವಾಯುಪಡೆಯು ಮಾಹಿತಿ ನೀಡಿದೆ.
ಇಂಗ್ಲೆಂಡ್ ಪ್ರಧಾನಿ ಬೋರಿಸ್ ಜಾನ್ಸನ್ ಅವರು ಉಕ್ರೇನ್ ಅಧ್ಯಕ್ಷ ವೊಲೊಡಿಮಿರ್ ಝೆಲೆನ್ಸ್ಕಿ ಅವರನ್ನು ಶನಿವಾರ ಕೈವ್ನಲ್ಲಿ ಭೇಟಿಯಾಗಿ. ಉಕ್ರೇನಿಯನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶಿಸಲು ಉಕ್ರೇನ್ಗೆ ಪ್ರಯಾಣಿಸಿದ್ದೇನೆ ಎಂದು ಹೇಳಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Burkina Faso: ಬುರ್ಕಿನಫಾಸೋದಲ್ಲಿ ಒಂದೇ ಗಂಟೆಯಲ್ಲಿ 600 ಮಂದಿ ಹತ್ಯೆ
Zakir Naik ವಿವಾದ; ಎಲ್ಲರೂ ಅಲ್ಲಾಹನನ್ನಷ್ಟೇ ಪ್ರಾರ್ಥಿಸಿದರೆ ಶಾಂತಿ…
Iran ಅಣ್ವಸ್ತ್ರ ಕೇಂದ್ರದ ಮೇಲೆ ದಾಳಿ ಮಾಡಿ: ಇಸ್ರೇಲ್ಗೆ ಟ್ರಂಪ್
Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು
Iran ಸರ್ವೋಚ್ಚ ನಾಯಕನ ಕೈಯಲ್ಲಿ ರೈಫಲ್!; ಇಸ್ರೇಲ್ ದೀರ್ಘಕಾಲ ಉಳಿಯುವುದಿಲ್ಲ..
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
ICC Womens T20 World Cup; ಪಾಕಿಸ್ಥಾನ ವಿರುದ್ಧ ಗೆಲುವಿನ ನಗೆ ಬೀರಿದ ಭಾರತ
Ambewadi ಕಾಯ್ದಿಟ್ಟ ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಬೀಟೆ ಮರ ಕಡಿಯುತ್ತಿದ್ದ ಓರ್ವನ ಬಂಧನ
Cycle Ride: ಸಾಗುತ ದೂರ ದೂರ… ಬೆಂಗಳೂರು ಟು ಗೋವಾ ಸೈಕಲ್ ಸವಾರಿ
Kamanur village: ದಾರಿ ತೋರುವ ಮಾದರಿ ಗ್ರಾಮ
Bigg Boss: ಬಿಗ್ ಬಾಸ್ ಮಾಜಿ ಸ್ಪರ್ಧಿ ಪ್ರಯಾಣಿಸುತ್ತಿದ್ದ ಕಾರು ಅಪಘಾತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.