ಕುತೂಹಲ ಕೆರಳಿಸಿದ  ಗ್ಯಾಸ್‌ ವಾಸನೆ ಮೂಲ ಇನ್ನೂ ನಿಗೂಢ!


Team Udayavani, Apr 11, 2022, 8:57 AM IST

mangalore

ಮಹಾನಗರ: ನಗರದಲ್ಲಿ ಕಳೆದ ಫೆಬ್ರವರಿ 17ರಂದು ರಾತ್ರಿ ವೇಳೆ ಕೆಲವು ಭಾಗಗಳಲ್ಲಿ ಅನುಭವಕ್ಕೆ ಬಂದ ಗ್ಯಾಸ್‌ ವಾಸನೆಯ ಮೂಲ ಎಲ್ಲಿ ಎನ್ನುವುದನ್ನು ಪತ್ತೆ ಹಚ್ಚಲು ಇನ್ನೂ ಸಾಧ್ಯವಾಗದೆ ನಿಗೂಢವಾಗಿದೆ.

ಜಿಲ್ಲಾಡಳಿತವು ಈ ಗ್ಯಾಸ್‌ ವಾಸನೆಯ ಮೂಲ ಪತ್ತೆ ಮಾಡಿ ವರದಿ ಸಲ್ಲಿಸಲು ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆಗೆ ಸೂಚನೆ ನೀಡಿತ್ತು. ಇಲಾಖೆಯ ಅಧಿಕಾರಿಗಳು ವಿವಿಧ ಆಯಾಮಗಳಲ್ಲಿ ತಪಾಸಣೆ ನಡೆಸಿ ಮೂಲ ಎಲ್ಲಿ ಎನ್ನುವುದನ್ನು ಕಂಡು ಹಿಡಿಯಲು ಸಾಧ್ಯವಾಗಿಲ್ಲ ಎಂದು ಜಿಲ್ಲಾಡಳಿತಕ್ಕೆ ವರದಿ ಸಲ್ಲಿಸಿದ್ದಾರೆ.

ಕಳೆದ ಗುರುವಾರ (ಎ. 7) ನಡೆದ ಜಿಲ್ಲಾ ವಿಪತ್ತು ನಿಯಂತ್ರಣ ಪ್ರಾಧಿಕಾರದ ಸಭೆಯಲ್ಲಿಯೂ ಈ ವಿಚಾರ ಚರ್ಚೆಗೆ ಬಂದಿತ್ತು. ಗ್ಯಾಸ್‌ ವಾಸನೆಯ ಮೂಲ ಪತ್ತೆ ಹಚ್ಚಲು ಸಾಧ್ಯವಾಗಿಲ್ಲ ಎಂದು ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆ, ಅಗ್ನಿ ಶಾಮಕ ಸೇವಾ ಇಲಾಖೆ ಮತ್ತು ಸಂಬಂಧಪಟ್ಟ ಇತರ ಇಲಾಖೆಗಳ ಅಧಿಕಾರಿಗಳು ಸಭೆಗೆ ತಿಳಿಸಿದ್ದಾರೆ.

ಘಟನೆಯ ಹಿನ್ನೆಲೆ 50 ದಿನಗಳ ಹಿಂದೆ ಅಂದರೆ ಫೆ. 17ರಂದು ರಾತ್ರಿ ನಗರದ ಕೆಲವು ಪ್ರದೇಶಗಳಲ್ಲಿ ಗ್ಯಾಸ್‌ ವಾಸನೆ ಹಬ್ಬಿದ್ದ ಬಗ್ಗೆ ವ್ಯಾಪಕ ಸುದ್ದಿಯಾಗಿದ್ದು, ಇದು ಜನರಲ್ಲಿ ಆತಂಕ ಮೂಡಿಸಿತ್ತು. ಮಂಗಳೂರಿನ ಕಾರ್‌ಸ್ಟ್ರೀಟ್‌, ಮಣ್ಣಗುಡ್ಡೆ, ಹಂಪನಕಟ್ಟೆ, ಪಾಂಡೇಶ್ವರ, ಸುಭಾಸ್‌ನಗರ, ಕುದ್ರೋಳಿ, ಕೊಡಿಯಾಲಬೈಲ್‌, ಕೊಟ್ಟಾರ, ಮಂದಾರಬೈಲ್‌, ಕೊಂಚಾಡಿ, ಕದ್ರಿ, ಬಿಜೈ ಮೊದಲಾದೆಡೆಗಳಲ್ಲಿ ಗ್ಯಾಸ್‌ ಲೀಕ್‌ ಆದ ವಾಸನೆ ಬಂದ ಬಗ್ಗೆ ಮಾಹಿತಿ ಲಭ್ಯವಾಗಿತ್ತು. ಭಯಭೀತಗೊಂಡ ಜನರು ಸಾಮಾಜಿಕ ಜಾಲತಾಣದ ಮೂಲಕ ತಮಗಾದ ಅನುಭವ ಹಂಚಿಕೊಂಡಿದ್ದರು.

ಮಂಗಳೂರು ಪೊಲೀಸ್‌, ಅಗ್ನಿ ಶಾಮಕ ದಳದ ಅಧಿಕಾರಿಗಳು, ಸಿಬಂದಿ ರಾತೋರಾತ್ರಿ ನಗರ ಮತ್ತು ಹೊರ ವಲಯದ ಕೆಲವು ಭಾಗಗಳಿಗೆ ತೆರಳಿ ಪರಿಶೀಲನೆ ನಡೆಸಿದ್ದರು. ಕಾರ್‌ಸ್ಟ್ರೀಟ್‌ನ ಕೆಲವು ಬಹು ಮಹಡಿ ಕಟ್ಟಡಗಳು, ಮಣ್ಣಗುಡ್ಡೆ, ಪಣಂಬೂರು, ಕುಳಾಯಿ, ಹೊನ್ನಕಟ್ಟೆ, ಎಂಎಸ್‌ಇಝಡ್‌ ಮತ್ತಿತರ ಕಡೆಗಳಿಗೆ ತೆರಳಿ ಗ್ಯಾಸ್‌ ವಾಸನೆ ಕುರಿತಂತೆ ತಪಾಸಣೆ ಕೈಗೊಂಡಿದ್ದರು.

ಮರುದಿನ (ಫೆ. 18) ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಸಹಿತ ಜಿಲ್ಲಾಡಳಿತದ ವತಿಯಿಂದ ಎಲ್ಲೆಡೆ ತಪಾಸಣೆ ನಡೆಸಲಾಗಿತ್ತು. ಆದರೆ ಗ್ಯಾಸ್‌ ಸೋರಿಕೆಯ ಮೂಲ ಪತ್ತೆ ಆಗಿರಲಿಲ್ಲ.

ಗ್ಯಾಸ್‌ ಸೋರಿಕೆ ಪತೆಯಾಗಿಲ್ಲ

ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆಯ ಅಧಿಕಾರಿಗಳು ವಿವಿಧ ಭಾಗಗಳಿಗೆ, ಕೈಗಾರಿಕೆ ಘಟಕಗಳಿಗೆ ತೆರಳಿ ತಪಾಸಣೆ ನಡೆಸಿ ವರದಿ ಸಲ್ಲಿಸಿದ್ದಾರೆ. ಗ್ಯಾಸ್‌ ಸೋರಿಕೆ ಎಲ್ಲಿ ಆಗಿದೆ, ಗ್ಯಾಸ್‌ ವಾಸನೆ ಎಲ್ಲಿಂದ ಬಂತೆಂಬುದು ಪತ್ತೆಯಾಗಿಲ್ಲ ಎಂದು ವರದಿಯಲ್ಲಿ ತಿಳಿಸಲಾಗಿದೆ. ಡಾ| ರಾಜೇಂದ್ರ ಕೆ.ವಿ., ದ.ಕ. ಜಿಲ್ಲಾಧಿಕಾರಿ

ಸಾಕಷ್ಟು ಪರಿಶೀಲಿಸಿದರೂ ಗೊತ್ತಾಗಿಲ್ಲ

ಗ್ಯಾಸ್‌ ವಾಸನೆಯ ಮೂಲ ಪತ್ತೆಗಾಗಿ ನಗರ ಮತ್ತು ಸುತ್ತ ಮುತ್ತ ಇರುವ ಕೈಗಾರಿಕೆ, ಕಾರ್ಖಾನೆಗಳಿಗೆ ಭೇಟಿ ನೀಡಿ ವಿವಿಧ ಆಯಾಮಗಳಲ್ಲಿ ಪರಿಶೀಲಿಸಿದ್ದೇವೆ. ಯಾವುದೇ ಸುಳಿವು ಲಭ್ಯವಾಗಿಲ್ಲ. ಗ್ಯಾಸ್‌ ವಾಸನೆ ನಿರ್ದಿಷ್ಟವಾಗಿ ಎಲ್ಲಿಂದ ಬಂತೆಂಬುದರ ಬಗ್ಗೆ ಪ್ರತ್ಯಕ್ಷ ಸಾಕ್ಷಿ ಕೂಡ ಎಲ್ಲಿಯೂ ಲಭಿಸಿಲ್ಲ. ಚಲಿಸುತ್ತಿದ್ದ ಯಾವುದೋ ಟ್ಯಾಂಕರ್‌ನಿಂದ ಗ್ಯಾಸ್‌ ಸೋರಿಕೆ ಆಗಿರುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಪುನಃ ಇಂತಹ ಪ್ರಕರಣ ವರದಿಯಾದರೆ ಗಂಭೀರವಾಗಿ ಪರಿಶೀಲಿಸಲಾಗುವುದು. ರಾಜೇಶ್‌ ಮಿಶ್ರಕೋಟಿ, ಉಪ ನಿರ್ದೇಶಕರು, ದ.ಕ. ಜಿಲ್ಲಾ ಕಾರ್ಖಾನೆ ಮತ್ತು ಬಾಯ್ಲರ್‌ ಇಲಾಖೆ

ಟಾಪ್ ನ್ಯೂಸ್

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Manipal: ಬ್ಯಾಂಕ್‌ಗಳಲ್ಲಿ ಕನ್ನಡ ಕಡ್ಡಾಯ ಮಾಡಿ: ಜಿಪಂ ಸಿಇಒ ಪ್ರತೀಕ್‌ ಬಾಯಲ್‌

Arrest

Ajjampura: ಪತ್ನಿಯ ಶೀಲ ಶಂಕಿಸಿ 5 ವರ್ಷದ ಮಗಳನ್ನೇ ಕೊಂದ ತಂದೆ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ವಿಧಾನ ಪರಿಷತ್‌ ಉಪಚುನಾವಣೆ; ಡಿಸಿ ಕಚೇರಿ ಸುತ್ತ ನಿಷೇಧಾಜ್ಞೆ

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಬೆಳೆ ವಿಮೆ ಯೋಜನೆ: ದ.ಕ.ಕ್ಕೆ 349 ಕೋ. ರೂ.

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

Mangaluru: ಅನುಮಾನಾಸ್ಪದ ಸಾವು ಪ್ರಕರಣ: ಆರೋಗ್ಯ ಇಲಾಖೆಯಿಂದ ತಂಡ

WhatsApp Image 2024-09-25 at 20.56.17

Mangaluru: ಆ್ಯಂಬುಲೆನ್ಸ್‌ ಪಲ್ಟಿ; ರೋಗಿ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

JDS

MUDA Case: ಸಿಎಂ ಸಿದ್ದರಾಮಯ್ಯ ರಾಜೀನಾಮೆಗೆ ಜೆಡಿಎಸ್‌ ಪಟ್ಟು, ಪ್ರತಿಭಟನೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

Udupi: ಗೀತಾರ್ಥ ಚಿಂತನೆ-46: ಖರ್ಚಿಲ್ಲದ ಪ್ರೀತಿ, ಸ್ನೇಹದಿಂದಲೇ ಭಗವಂತನೊಲುಮೆ

DK-Shivakumar

MUDA Case: ಸಿಎಂ ತಪ್ಪು ಮಾಡಿಲ್ಲ, ಅಧಿಕಾರಿಗಳು ಮಾಡಿರಬಹುದು: ಡಿ.ಕೆ.ಶಿವಕುಮಾರ್‌

Parameshwar

MUDA Case: ಅಭಿಯೋಜನೆಗೆ ಅನುಮತಿ ಎಲ್ಲರಿಗೂ ಅನ್ವಯ ಆಗಲಿ: ಗೃಹ ಸಚಿವ ಡಾ.ಜಿ. ಪರಮೇಶ್ವರ್‌

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Mangalore University: ಮಾನವತಾವಾದದ ಮೌಲ್ಯ ಬೆಳೆಸಿಕೊಳ್ಳಿ:ನ್ಯಾಯಮೂರ್ತಿ ಸಂತೋಷ್‌ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.