ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಅಗತ್ಯ ನೆರವು

ಸುಚಿತ್ರಾ-ಚಿತ್ರಾ ಫಿಲ್ಮ್‌ ಸೈಟಿಯಿಂದ ಜಂಟಿಯಾಗಿ ಆಯೋಜನೆ

Team Udayavani, Apr 12, 2022, 12:02 PM IST

4

ಧಾರವಾಡ: ಅವಳಿನಗರದಲ್ಲಿ ಸುಚಿತ್ರಾ ಹಾಗೂ ಚಿತ್ರಾ ಫಿಲ್ಮ್‌ ಸೊಸೈಟಿಗಳು ಜಂಟಿಯಾಗಿ ಆಯೋಜಿಸಲು ಬಯಸಿರುವ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ ಎಲ್ಲ ಅಗತ್ಯ ನೆರವು ಒದಗಿಸಲಾಗುವುದು ಎಂದು ಶಾಸಕ ಅರವಿಂದ ಬೆಲ್ಲದ ಹೇಳಿದರು.

ನಗರದ ಸೃಜನಾ ರಂಗಮಂದಿರಲ್ಲಿ ಸೋಮವಾರ ನಡೆದ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಕುರಿತ ಪೂರ್ವಭಾವಿ ಸಭೆಯಲ್ಲಿ ಅವರು ಮಾತನಾಡಿದರು.

ಸುಚಿತ್ರಾ ಹಾಗೂ ಚಿತ್ರಾ ಎರಡೂ ಫಿಲ್ಮ್‌ ಸೊಸೈಟಿಗಳಿಗೆ 50 ವರ್ಷಗಳು ತುಂಬುತ್ತಿರುವ ಈ ಸಂದರ್ಭದಲ್ಲಿ ಹುಬ್ಬಳ್ಳಿ- ಧಾರವಾಡದಲ್ಲಿ ಅರ್ಥ ಪೂರ್ಣವಾದ ಚಿತ್ರೋತ್ಸವ ಆಯೋಜನೆಗೆ ಸ್ಥಳೀಯ ಸಂಘ- ಸಂಸ್ಥೆ, ಉದ್ಯಮಗಳು ಹಾಗೂ ಆಡಳಿತದಿಂದ ಅಗತ್ಯ ನೆರವು, ಸಹಕಾರ ಕಲ್ಪಿಸಲಾಗುವುದು. ಇದಕ್ಕಾಗಿ ಪ್ರತ್ಯೇಕ ಸಮಿತಿ ರಚಿಸುವುದು ಸೂಕ್ತ ಎಂದರು.

ಚಲನಚಿತ್ರ ನಟ, ನಿರ್ದೇಶಕ ಪ್ರಕಾಶ ಬೆಳವಾಡಿ ಮಾತನಾಡಿ, ಸಿನಿಮಾ ಸಂಸ್ಕೃತಿ ಬೆಳೆಸುವ ಮೂಲಕ ವಿಪುಲ ಅವಕಾಶ ಹಾಗೂ ಸಾಧ್ಯತೆಗಳನ್ನು ಸೃಷ್ಟಿಸಬಹುದು. ಸ್ಥಳೀಯ ಉದ್ಯಮ, ವ್ಯಾಪಾರಿಗಳು, ಕೈಗಾರಿಕೆಗಳ ಮೂಲಕ ಸಂಪನ್ಮೂಲಗಳ ಕ್ರೋಢೀಕರಣ ಮಾಡಿ ಸರ್ಕಾರದ ಒಂದು ಸಣ್ಣ ಪಾಲಿನ ಅನುದಾನ ಪಡೆದು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆಯೋಜಿಸುವ ಉದ್ದೇಶವಿದೆ ಎಂದು ಹೇಳಿದರು.

ಸುಚಿತ್ರಾ ಫಿಲ್ಮ್‌ ಸೊಸೈಟಿಯ ನರಹರಿರಾವ್‌ ಮಾತನಾಡಿ, ಇಟಲಿಯಲ್ಲಿ ಮುಸಲೋನಿಯ ಕಾಲದಲ್ಲಿ ಚಲನಚಿತ್ರೋತ್ಸವ ಪರಂಪರೆ ಪ್ರಾರಂಭವಾಯಿತು. ಇದೀಗ ಕಾನ್‌, ಬರ್ಲಿನ್‌, ಆಸ್ಕರ್‌ ಪ್ರಶಸ್ತಿ ವಿಜೇತ ಚಿತ್ರಗಳು ನಾಡಿನ ಜನರಿಗೆ ವೀಕ್ಷಿಸಲು ಲಭ್ಯವಾಗಬೇಕು ಎಂದು ಹೇಳಿದರು.

ಡಿಸಿ ನಿತೇಶ್‌ ಕೆ. ಪಾಟೀಲ ಮಾತನಾಡಿ, ವಿಮಾನ, ರೈಲ್ವೆ, ಬಸ್‌ ಮತ್ತಿತರ ಉತ್ತಮ ಸಂಪರ್ಕ ವ್ಯವಸ್ಥೆ ಹೊಂದಿರುವ ಹುಬ್ಬಳ್ಳಿ-ಧಾರವಾಡದಲ್ಲಿ ದೊಡ್ಡ ಸಂಖ್ಯೆಯ ವಿದ್ಯಾರ್ಥಿ ಸಮೂಹವಿದೆ. ಒಂದೇ ಕಡೆ ಅನೇಕ ಚಲನಚಿತ್ರಗಳನ್ನು ವೀಕ್ಷಿಸಲು ಸಾಧ್ಯವಾಗುವ ಉತ್ಸವ,ಗೋಷ್ಠಿಗಳನ್ನು ಹಮ್ಮಿಕೊಳ್ಳಬಹುದು. ಸರ್ಕಾರದಿಂದಲೂ ನೆರವು ಪಡೆಯಲು ಪ್ರಸ್ತಾವನೆ ಸಲ್ಲಿಸಲಾಗುವುದು ಎಂದರು.

ಮಹಾನಗರ ಪಾಲಿಕೆ ಆಯುಕ್ತ ಡಾ| ಬಿ. ಗೋಪಾಲಕೃಷ್ಣ ಮಾತನಾಡಿ, ಕೋವಿಡ್‌ ನಂತರದ ದಿನಗಳಲ್ಲಿ ಜನರಿಗೆ ಸದಭಿರುಚಿಯ ಸಾಂಸ್ಕೃತಿಕ ಚಟುವಟಿಕೆಗಳನ್ನು ನೀಡುವ ಅಗತ್ಯವಿದೆ ಎಂದರು.

ರಂಗಾಯಣ ನಿರ್ದೇಶಕ ರಮೇಶ್‌ ಪರವಿನಾಯ್ಕರ್‌ ಮಾತನಾಡಿ, ಆಜಾದಿ ಕಾ ಅಮೃತ ಮಹೋತ್ಸವದ ಈ ಸಂದರ್ಭದಲ್ಲಿ ಭಾರತೀಯ ಕಲೆ, ಪರಂಪರೆ ಬಿಂಬಿಸುವ, ಪರಿಸರ ಜಾಗƒತಿಯ ಚಿತ್ರಗಳು ಉತ್ಸವದಲ್ಲಿ ಪ್ರದರ್ಶನಗೊಳ್ಳಲಿ, ರಂಗಾಯಣ ಸಹಕಾರ ಒದಗಿಸಲಿದೆ ಎಂದರು.

ರಂಗಕರ್ಮಿ ಪ್ರಕಾಶ ಗರುಡ, ಚಿತ್ರ ಫಿಲ್ಮ್‌ ಸೊಸೈಟಿಯ ಎ.ಎಂ. ಖಾನ್‌, ಶ್ರೀನಿವಾಸ ಶಾಸ್ತ್ರಿ, ಆನಂದ ವರ್ಧನ್‌, ವಿಶಾಖ ಅಭಿಷೇಕ ಅಯ್ಯಂಗಾರ, ಸಮೀರ್‌ ಜೋಷಿ, ಅರುಣ ಕರಡಿ ಸೇರಿದಂತೆ ಅನೇಕರು ಸಲಹೆ-ಸೂಚನೆಗಳನ್ನು ನೀಡಿದರು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ಕುಮಾರ ಬೆಕ್ಕೇರಿ ನಿರೂಪಿಸಿದರು. ವಾರ್ತಾ ಇಲಾಖೆ ಹಿರಿಯ ಸಹಾಯಕ ನಿರ್ದೇಶಕ ಮಂಜುನಾಥ ಡೊಳ್ಳಿನ ವಂದಿಸಿದರು.

 

ಸದಭಿರುಚಿಯ ಎಲ್ಲಾ ಚಿತ್ರಗಳು ಓಟಿಟಿ ವೇದಿಕೆಯಲ್ಲಿ ಸಿಗುವುದಿಲ್ಲ. ಸಾಮೂಹಿಕವಾಗಿ ಒಟ್ಟಾಗಿ ಸಿನಿಮಾ ವೀಕ್ಷಿಸುವ ಅನುಭವಕ್ಕೂ, ಪ್ರತ್ಯೇಕವಾಗಿ ಒಬ್ಬರೇ ನೋಡುವುದಕ್ಕೂ ವ್ಯತ್ಯಾಸವಿದೆ. ಚಲನಚಿತ್ರೋತ್ಸವದ ಮೂಲಕ ಫಿಲ್ಮ್‌ ಕೋರ್ಸ್‌ಗಳನ್ನು ಜನಪ್ರಿಯಗೊಳಿಸಿ, ಉದ್ಯೋಗ ಸೃಜನೆಗೆ ಅವಕಾಶವಿದೆ. –ಪ್ರಕಾಶ ಬೆಳವಾಡಿ, ಚಲನಚಿತ್ರ ನಟ-ನಿರ್ದೇಶಕ

ಟಾಪ್ ನ್ಯೂಸ್

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

Train: ರೈಲು ಢಿಕ್ಕಿ ತಡೆಯಲು ಉಪಕ್ರಮ: ನೈಋತ್ಯ ರೈಲ್ವೇಗೆ ಮೊದಲ ಬಾರಿ “ಕವಚ’

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

ಮೂವರು ಲೇಖಕಿಯರಿಗೆ ಕವಿಸಂ ಮಾತೃಶ್ರೀ ರತ್ನಮ್ಮ ಹೆಗ್ಗಡೆ ಮಹಿಳಾ ಗ್ರಂಥ ಬಹುಮಾನಕ್ಕೆ ಆಯ್ಕೆ

8

Dharwad: ಪಂ.ಮನಸೂರ ಸಂಗೀತ ಪಾಠ ಶಾಲೆ ಮತ್ತೆ ಆರಂಭ; ಜಿಲ್ಲಾಧಿಕಾರಿ ದಿವ್ಯ ಪ್ರಭು

Hubli: Police seize Rs 89.99 lakhs being transported without documents

Hubli: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89.99 ಲಕ್ಷ ರೂ ಪೊಲೀಸ್‌ ವಶಕ್ಕೆ

ED summons case: Temporary relief for Siddaramaiah’s wife Parvathi, Bairati Suresh

ED summons: ಸಿದ್ದರಾಮಯ್ಯ ಪತ್ನಿ ಪಾರ್ವತಿ, ಬೈರತಿ ಸುರೇಶಗೆ ತಾತ್ಕಾಲಿಕ ರಿಲೀಫ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

16

Pro Hockey: ಇಂಗ್ಲೆಂಡ್‌ ವಿರುದ್ಧ ಭಾರತ ವನಿತೆಯರಿಗೆ ಸೋಲು

crimebb

Kasaragod: ಹಲ್ಲೆ ಪ್ರಕರಣ; ಕೇಸು ದಾಖಲು

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.