ಮೊದಲೇ ಈಶ್ವರಪ್ಪ- ಸಂತೋಷ್ ವಿವಾದ ಬಗೆಹರಿಸಿದ್ದರೆ ಇಂದು ಒಂದು ಜೀವ ಉಳಿಯುತಿತ್ತು :ಬಯ್ಯಾಪೂರ


Team Udayavani, Apr 12, 2022, 8:08 PM IST

ಈಶ್ವರಪ್ಪ- ಸಂತೋಷ್ ವಿವಾದ ಸಿಎಂ ಬಗೆಹರಿಸಿದ್ದರೆ ಇಂದು ಒಂದು ಜೀವ ಉಳಿಯುತಿತ್ತು : ಬಯ್ಯಾಪೂರ

ಕುಷ್ಟಗಿ : ಈ ಮೊದಲೇ ಸಿಎಂ ಬಸವರಾಜ ಬೊಮ್ಮಾಯಿ ಅವರು, ಈ ವಿವಾದದ ಹಿನ್ನೆಲೆಯಲ್ಲಿ ಸಚಿವ ಈಶ್ವರಪ್ಪ ಹಾಗೂ ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ ಅವರುಗಳನ್ನು ಕರೆಯಿಸಿಕೊಂಡು ವಿವಾದ ಬಗೆಹರಿಸಿದ್ದರೆ ಸಂತೋಷ ಪಾಟೀಲ ಅವರ ಪ್ರಾಣ ಉಳಿಯುತ್ತಿತ್ತು ಶಾಸಕ ಅಮರೇಗೌಡ ಪಾಟೀಲ ಬಯ್ಯಾಪೂರ ಅಭಿಪ್ರಾಯಪಟ್ಟರು.

ಉದಯವಾಣಿಯೊಂದಿಗೆ ಮಾತನಾಡಿದ ಅವರು, ಆತ್ಮಹತ್ಯೆ ಮಾಡಿಕೊಂಡಿರುವ ಸಂತೋಷ ಪಾಟೀಲ, ಸಚಿವ ಈಶ್ವರಪ್ಪ ವಿರುದ್ದ ಪ್ರಧಾನಮಂತ್ರಿಯವರೆಗೂ ದೂರು ನೀಡಿದ್ದರಿಂದಲೇ ಈಶ್ವರಪ್ಪ ಅವರು ತಮ್ಮ ಕಾರ್ಯಕರ್ತನ ಮೇಲೆ ಒತ್ತಡ ಹಾಕಿರುವ ಬಗ್ಗೆ ಗುಮಾನಿ ವ್ಯಕ್ತವಾಗುತ್ತಿದೆ. ಪ್ರಥಮ ದರ್ಜೆ ಗುತ್ತಿಗೆದಾರ, ಸಚಿವ ಈಶ್ವರಪ್ಪ ಅವರ ಒಡನಾಡಿಯೂ ಆಗಿದ್ದರು. ಅಂತವರ ಪರಿಸ್ಥಿತಿ ಹೀಗಾದರೆ ಬೇರೆಯವರ ಯಾವ ರೀತಿಯಾಗಬಹುದು ಎನ್ನುವುದು ಸಮಾಜ ಅರ್ಥ ಮಾಡಿಕೊಳ್ಳಬೇಕಿದೆ.

ಬಿಜೆಪಿ ಕಾರ್ಯಕರ್ತ ಸಂತೋಷ ಪಾಟೀಲ, ಕಿರುಕುಳದಿಂದಲೇ ಆತ್ಮಹತ್ಯೆ ಮಾಡಿಕೊಂಡಿರುವುದು ಬಹಿರಂಗ ಸತ್ಯ. ಸರ್ಕಾರ ಪರಿಶೀಲಿಸಿ ಸೂಕ್ತವಾದ ಏಜೆನ್ಸಿಯ ಮೂಲಕ ಈ ದುರಂತ ಸಾವು ಯಾವ ರೀತಿಯಾಗಿದೆ. ಆಗಲು ಕಾರಣವೇನೆಂಬುದನ್ನು ತನಿಖೆ ನಡೆಸಬೇಕಿರುವುದು ಸರ್ಕಾರ ಜವಾಬ್ದಾರಿ ಆಗಿದೆ.

ಇದನ್ನೂ ಓದಿ : ಈಶ್ವರಪ್ಪ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲಿಸಿ, ಸಂಪುಟದಿಂದ ವಜಾ ಮಾಡಿ: ಈಶ್ವರ್ ಖಂಡ್ರೆ  

ಸಚಿವ ಈಶ್ವರಪ್ಪ ವಿರುದ್ದ 40 ಪರ್ಸೇಂಟೇಜ್ ಆರೋಪಿಸಿದ್ದ ಸಂಧರ್ಭದಲ್ಲಿ ಸಚಿವ ಈಶ್ವರಪ್ಪ ಅವರು, ಸಂತೋಷ ಪಾಟೀಲ ವಿರುದ್ದ ಮಾನನಷ್ಟ ಮೊಕದ್ದಮೆ ಬಗ್ಗೆ ಪ್ರಸ್ತಾಪಿಸಿದ್ದರು. ಅದು ಎಷ್ಟರ ಮಟ್ಟಿಗೆ ನಿಜ ಎನ್ನುವುದು ಗೊತ್ತಿಲ್ಲ. ಸಂತೋಷ ಪಾಟೀಲ ಪ್ರಾಣ ಕಳೆದುಕೊಳ್ಳುವ ಮಟ್ಟಿಗೆ ಹೋಗಬಾರದಿತ್ತು. ಆತ್ಮಹತ್ಯೆ ಮಾಡಿಕೊಂಡಿರುವುದು ದುರದೃಷ್ಟಕರವಾಗಿದೆ. ಸರ್ಕಾರ ಯಾರೇ ಮಾಡಿರಲಿ ಗಂಭೀರವಾಗಿ ಪರಿಗಣಿಸಿ ತನಿಖೆ ಕೈಗೊಳ್ಳಬೇಕಿದೆ.

ಟಾಪ್ ನ್ಯೂಸ್

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

BELLARE-MALE

Rain: ಪುತ್ತೂರು, ಸುಳ್ಯ, ಬೆಳ್ಳಾರೆ: ಕೆಲವಡೆ ಹಾನಿ ಉಕ್ಕಿ ಹರಿದ ಗೌರಿ ಹೊಳೆ; ಸಂಚಾರ ಬಂದ್‌

DANDIA-DANCE

Udupi Ucchila Dasara: ಸಾರ್ವಜನಿಕ ದಾಂಡಿಯಾ, ಗರ್ಭಾ ನೃತ್ಯ ಸಂಭ್ರಮ

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

siddanna-2

Guarantee ಯೋಜನೆಗಳಿಂದ ಕರ್ನಾಟಕ ನಂ. 1: ಸಿದ್ದರಾಮಯ್ಯ

AANE 2

Tiger ದಾಳಿ: 3 ತಿಂಗಳ ಮರಿಯಾನೆ ಸಾ*ವು

police

Hubli; ದತ್ತಮೂರ್ತಿ 4 ಕೈ ಭಗ್ನ ಮಾಡಿದ ದುಷ್ಕರ್ಮಿಗಳು

1-pap

ಪತ್ರಿಕಾ ವಿತರಕರಿಗೆ ಅಂಬೇಡ್ಕರ್‌ ಕಾರ್ಮಿಕರ ಸಹಾಯ ಯೋಜನೆ

1-lokaa

Lokayukta; 25 ಸಾವಿರ ರೂ.ಲಂಚ ಪಡೆಯುವಾಗ ಬಲೆಗೆ ಬಿದ್ದ ಎಡಿಎಲ್‌ಆರ್‌!!

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

-pumpwell

Rain: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆ; ಕೆಲವೆಡೆ ಹಾನಿ

gold

Guruvayur Devaswam ಒಡೆತನದಲ್ಲಿ 1,085 ಕೆ.ಜಿ. ಚಿನ್ನ!

nitish-kumar

Budget ಆರ್ಥಿಕ ಸಹಾಯ: ಕೇಂದ್ರವನ್ನು ಶ್ಲಾಘಿಸಿದ ಬಿಹಾರ ಸಿಎಂ

Kharge 2

Kharge ಟೀಕೆ; ಹಳಸಿದ ಭಾಷಣದಿಂದ ವೈಫ‌ಲ್ಯ ಮರೆಮಾಚಲು ಸಾಧ್ಯವಿಲ್ಲ

attack

Public place ಮೂತ್ರ ವಿಸರ್ಜಿಸಬೇಡ ಎಂದಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.