ದೇಗುಲದ ಬಾಗಿಲು ತೆಗೆಸುವುದಕ್ಕಾಗಿ ಉಮಾ ಭಾರತಿ ಅನ್ನ ತ್ಯಾಗ
Team Udayavani, Apr 13, 2022, 7:35 AM IST
ಭೋಪಾಲ್: ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ಬಿಜೆಪಿ ನಾಯಕಿ ಉಮಾಭಾರತಿ ಅವರು ರೈಸೆನ್ ಕೋಟೆಯಲ್ಲಿರುವ ಸೋಮೇಶ್ವರ ದೇಗುಲದ ಬಾಗಿಲನ್ನು ತೆರೆಯುವವರೆಗೂ ಅನ್ನ ತ್ಯಾಗ ನಡೆಸುವುದಾಗಿ ಸೋಮವಾರ ಘೋಷಿಸಿದ್ದಾರೆ.
ಉಮಾಭಾರತಿ ಅವರು ಸೋಮವಾರ ಸೋಮೇಶ್ವರ ದೇಗುಲದಲ್ಲಿ ಪೂಜೆ ಸಲ್ಲಿಸಲೆಂದು ತೆರಳಿದ್ದರು. ಕ್ರಿ.ಶ.11ನೇ ಶತಮಾನದಲ್ಲಿ ಕಟ್ಟಲಾಗಿರುವ ಆ ದೇಗುಲವನ್ನು ಪ್ರತಿವರ್ಷ ಶಿವರಾತ್ರಿಯ ದಿನ ಮಾತ್ರವೇ ತೆರೆಯಲಾಗುತ್ತದೆ. ಅದೇ ಹಿನ್ನೆಲೆ ಜಿಲ್ಲಾಡಳಿತದವರು ದೇಗುಲದ ಬಾಗಿಲು ತೆರೆಯಲಾಗದು ಎಂದು ಉಮಾ ಭಾರತಿ ಅವರಿಗೆ ತಿಳಿಸಿದ್ದಾರೆ.
ಇದನ್ನೂ ಓದಿ:ಬಾಲಿವುಡ್ನ ಆಲಿಯಾ ಭಟ್ -ರಣಬೀರ್ ಕಪೂರ್ ಮದುವೆ ಮುಂದೂಡಿಕೆ?
ಈ ವಿಚಾರವಾಗಿ ಆಕ್ರೋಶ ಹೊರಹಾಕಿರುವ ನಾಯಕಿ, ಈ ದೇಗುಲದ ಬಾಗಿಲನ್ನು ತೆರೆಯುವವರೆಗೂ ನಾನು ಅನ್ನ ತ್ಯಾಗ ಮಾಡುವುದಾಗಿ ಹೇಳಿದ್ದಾರೆ. ದೇಗುಲದ ಬಾಗಿಲ ಬಳಿಯೇ ಗಂಗಾ ನೀರು ಹಾಕಿ, ಆರತಿ ಮಾಡಿ ತೆರಳಿದ್ದಾರೆ.
ಸೋಮೇಶ್ವರ ದೇಗುಲದ ಬಾಗಿಲನ್ನು ಪ್ರತಿ ದಿನ ತೆರೆಯಬೇಕೆಂದು ಇತ್ತೀಚೆಗೆ ಕೆಲ ಹಿಂದೂ ಪರ ಸಂಘಟನೆಗಳು ಸ್ಥಳೀಯ ಆಡಳಿತಕ್ಕೆ ಒತ್ತಡ ಹೇರುತ್ತಿದ್ದು, ಪ್ರತಿಭಟನೆ ನಡೆಸುತ್ತಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Video: ನಿಮಗೆ ಮತ ಹಾಕಿದ್ದೇನೆ, ನನಗೊಂದು ಮದುವೆ ಮಾಡಿಸಿ.. ಶಾಸಕರ ಬಳಿ ಮನವಿ ಮಾಡಿದ ವ್ಯಕ್ತಿ
Relief for Sadhguru: ಇಶಾ ಫೌಂಡೇಶನ್ ವಿರುದ್ಧದ ಪ್ರಕರಣ ವಜಾಗೊಳಿಸಿದ ಸುಪ್ರೀಂ ಕೋರ್ಟ್
ESI Hospital: ಬೆಳ್ಳಂಬೆಳಗ್ಗೆ ಇಎಸ್ಐ ಆಸ್ಪತ್ರೆಯಲ್ಲಿ ಅಗ್ನಿ ಅವಘಡ… ರೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
INDvsNZ: 12ನೇ ತರಗತಿ ಪರೀಕ್ಷೆಗಾಗಿ ನ್ಯೂಜಿಲ್ಯಾಂಡ್ ವಿರುದ್ದ ಸರಣಿ ಕೈಬಿಟ್ಟ ಕ್ರಿಕೆಟರ್
Maharashtra; ಕೈ ನಾಯಕರಿಗೆ ಸಾಮರ್ಥ್ಯವಿಲ್ಲ..: ಸೀಟು ಹಂಚಿಕೆ ಕುರಿತು ರಾವತ್ ಅಸಮಾಧಾನ
UP: ಟೊಮ್ಯಾಟೊ ಸಾಗಿಸುತ್ತಿದ್ದ ಟ್ರಕ್ ಪಲ್ಟಿ… ರಾತ್ರಿಯಿಡೀ ಟೊಮ್ಯಾಟೊ ಕಾದು ಕೂತ ಪೊಲೀಸರು
Manipal ಪರಿಸರದ 15-20 ಪಕ್ಷಿ ಪ್ರಭೇದ ಕಣ್ಮರೆ; ಇ ಬರ್ಡ್ ಪೋರ್ಟಲ್ನಲ್ಲಿ ದಾಖಲಾತಿ
Shirva: ಹುಲಿ ವೇಷ ಹಾಕಿ ಅನಾರೋಗ್ಯಪೀಡಿತ ಬಾಲಕನಿಗೆ ನೆರವು ನೀಡಿದ ಪೋರರು!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.