ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ; ಗುತ್ತಿಗೆದಾರರ ಸಂಘದ ಗಂಭೀರ ಆರೋಪ

ಸಂತೋಷ್ ಕುಟುಂಬಕ್ಕೆ 2 ಕೋಟಿ ಪರಿಹಾರ ನೀಡಬೇಕು

Team Udayavani, Apr 13, 2022, 2:50 PM IST

money 1

ಬೆಂಗಳೂರು: ಆತ್ಮಹತ್ಯೆ ಮಾಡಿಕೊಂಡಿರುವ ಗುತ್ತಿಗೆದಾರ ಸಂತೋಷ್ ಪಾಟೀಲ್ ಕುಟುಂಬಕ್ಕೆ 2 ಕೋಟಿ ರೂ. ಪರಿಹಾರ ನೀಡಬೇಕು, ಪ್ರಕರಣದ ತನಿಖೆಯನ್ನು ಸಿಬಿಐ ಅಥವಾ ಹೈಕೋರ್ಟ್ ಹಾಲಿ ನ್ಯಾಯಧೀಶರಿಂದ ನಡೆಸಬೇಕು ಎಂದು ರಾಜ್ಯ ಗುತ್ತಿಗೆದಾರರ ಅಸೋಸಿಯೇಷನ್ ಒತ್ತಾಯಿಸಿದೆ.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ,ಗುತ್ತಿಗೆದಾರನ ಸಾವಿಗೆ ಸರ್ಕಾರವೇ ನೇರ ಹೊಣೆ. ಕೂಡಲೇ ಬಾಕಿ ಇರುವ ಗುತ್ತಿಗೆ ಹಣ ಬಿಡುಗಡೆ ಮಾಡುವಂತೆ ಆಗ್ರಹಿಸಿದ್ದಾರೆ. ಕುಟುಂಬಕ್ಕೆ ಸಾಂತ್ವನ ಹೇಳುವ ಬದಲು ಪರಿಹಾರ ನೀಡುವಂತೆ ಆಗ್ರಹಿಸಿದ್ದಾರೆ.

ಸಾವಿಗೆ ಯಾರು ಕಾರಣ ಅಂತ ಡೆತ್ ನೋಟ್ ನಲ್ಲಿ ಸ್ಪಷ್ಟವಾಗಿ ಉಲ್ಲೇಖವಾಗಿದೆ. ಸಚಿವರು ಶೇಕಡಾ 40  ರಷ್ಟು ಕಮೀಷನ್ ಕೇಳುತ್ತಿದ್ದಾರೆ ಅಂತ ಆರೋಪ ಮಾಡಿದ್ದರು. ದೆಹಲಿಗೆ ತೆರಳಿ ಅಮಿತ್ ಶಾ,ಪ್ರಧಾನಿ ಮೋದಿ ಅವರಿಗೂ ದೂರು ಸಲ್ಲಿಸಿದ್ದರು. ದೆಹಲಿಯಲ್ಲಿ ದೂರು ಕೊಟ್ಟಾಗಲೇ ಸ್ಪಂದನೆ ಮಾಡಿದ್ದರೆ ಜೀವ ಉಳಿಯುತ್ತಿತ್ತು. ಸಚಿವರು ಮಾನವೀಯತೆಯಿಂದ ನಡೆದುಕೊಂಡಿದ್ದರೆ ಜೀವ ಬಲಿಯಾಗುತ್ತಿರಲಿಲ್ಲ. ಟೆಂಡರ್ ಕರೆಯೋಕೆ 5 ರಷ್ಟು ಕಮಿಷನ್ ಕೊಡಬೇಕಾಗಿದೆ ಎಂದರು.

ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ

ಆರೋಗ್ಯ ಇಲಾಖೆಯಲ್ಲಿ ಅತಿ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿದೆ. ನೀರಾವರಿ ಇಲಾಖೆಯಲ್ಲಿಯೂ ಕಮಿಷನ್  ದಂಧೆ ಹೆಚ್ಚು ನಡೆಯುತ್ತಿದೆ.ಆರೋಗ್ಯ ಸಚಿವ ಸುಧಾಕರ್, ಕಾರಜೋಳ ಅತಿ ಹೆಚ್ಚು ಭ್ರಷ್ಟಾಚಾರ ನಡೆಸುತ್ತಿದ್ದಾರೆ ಎಂದು ಗಂಭೀರ ಆರೋಪ ಮಾಡಿದರು.

ಗುತ್ತಿಗೆದಾರರು ಒಂದು ತಿಂಗಳು ಕೆಲಸ ಸ್ಥಗಿತಗೊಳಿಸುವಂತೆ ತೀರ್ಮಾನ ಕೈಗೊಂಡಿದ್ದು, ಮೇ 25 ರಿಂದ ಒಂದು ತಿಂಗಳು ರಾಜ್ಯಾದ್ಯಂತ ಕೆಲ್ಸ ಸ್ಥಗಿತಗೊಳಿಸುವುದಾಗಿ  ಹೇಳಿಕೆ ನೀಡಿದ್ದಾರೆ.

ಭ್ರಷ್ಟಚಾರ ಹೆಚ್ಚಿದ್ದರೂ ಸಿಎಂ ಮೌನವಾಗಿರುವುದು ಸರಿಯಲ್ಲ.ರೌಡಿಗಳ ಮೂಲಕ ಸಂತೋಷ್ ಗೆ ಬೆದರಿಕೆ ಹಾಕಿಸುವ ಕೆಲಸ ಸರ್ಕಾರ ಮಾಡಿದೆ. ನಮ್ಮ ಹತ್ತಿರ ಭ್ರಷ್ಟಚಾರದ ದಾಖಲೆಗಳಿವೆ. ಬಿಡುಗಡೆಗೆ ನಾವು ಹೆದರುತ್ತಿದ್ದೇವೆ.ನಮಗೆ ಕೊಲೆ ಬೆದರಿಕೆ ಬರುತ್ತಿದೆ. ಆದರೂ ಸೂಕ್ತ ಸಮಯದಲ್ಲಿ ದಾಖಲೆ ಬಿಡುಗಡೆ ಮಾಡುತ್ತೇವೆ. ಇದು ರೌಡಿಗಳ ಸರ್ಕಾರ ಎಂದು ನೇರ ಆರೋಪ ಮಾಡಿದರು.

ನೀರಾವರಿ ಇಲಾಖೆಯಲ್ಲಿ ಟೆಂಡರನ್ನು ಹೆಚ್ಚು ಮಾಡುವ ಕೆಲಸ ಆಗುತ್ತಿದ್ದಾಗ ಬೊಮ್ಮಾಯಿಗೆ 5 ಬಾರಿ ದೂರು ಕೊಟ್ವರೂ ಪ್ರಯೋಜನವಾಗಿಲ್ಲ. ಈ ಸರ್ಕಾರ ಶೇ. 40 ರಷ್ಟು ಕಮಿಷನ್ ಸರ್ಕಾರ. ಈಶ್ವರಪ್ಪ ರನ್ನ ಜೈಲಿಗೆ ಕಳುಹಿಸಬೇಕು ಎಂದು ಆಗ್ರಹಿಸಿದರು.

ಆರೋಗ್ಯ ಇಲಾಖೆ, ನೀರಾವರಿ ಇಲಾಖೆ, ಬಿಬಿಎಂಪಿಯಲ್ಲಿ ಅತಿ ಹೆಚ್ಚು ಭ್ರಷ್ಟಚಾರ ನಡೆಯುತ್ತಿದೆ. ಆರೋಗ್ಯ ಸಚಿವ ಸುಧಾಕರ್ ನೇರವಾಗಿ ಕಮಿಷನ್ ಪಡೆಯುತ್ತಾರೆ.5 ರಷ್ಟು ಕಮಿಷನ್  ಕೊಟ್ಟರೆ ಟೆಂಡರ್ ಗೆ ಅನುಮೋದನೆ ಕೊಡುತ್ತಾರೆ. ಆರೋಗ್ಯ ಇಲಾಖೆ,ನೀರಾವರಿ ಇಲಾಖೆ ಮತ್ತು ಲೋಕೋಪಯೋಗಿ ಇಲಾಖೆ ಅತೀ ಹೆಚ್ಚು ಭ್ರಷ್ಟಾಚಾರ ನಡೆಯುತ್ತಿರುವ ಇಲಾಖೆಗಳು ಎಂದರು.

ನೀರಾವರಿ ಇಲಾಖೆಯಲ್ಲಿ ಏಜೆಂಟ್ ನೇಮಕ ಮಾಡಿದ್ದಾರೆ. ಅವರ ಮೂಲಕ ಕಮಿಷನ್ ಪಡೆಯುತ್ತಾರೆ. ಬಿಬಿಎಂಪಿಯಲ್ಲಿ 15 ರಷ್ಟು ಕಮಿಷನ್  ದಂಧೆ ನಡೆಯುತ್ತಿದೆ. ಲಂಚ ಕೊಟ್ಟಿರುವ ದಿನಾಂಕ ಎಲ್ಲವೂ ನಮ್ಮ‌ಬಳಿ ದಾಖಲೆ ಇದೆ. ಇಡೀ ರಾಜ್ಯದಲ್ಲಿ ಸುಧಾಕರ್ ಸಂಬಂಧಿಕರೇ ಗುತ್ತಿಗೆದಾರರು . ಆರೋಗ್ಯ ಇಲಾಖೆಯಲ್ಲಿ ಶೇಕಡಾ 60 ರಷ್ಟು ಕೆಲಸ ಅವರ ಸಂಬಂಧಿಕರೇ ಮಾಡುತ್ತಿದ್ದಾರೆ ಎಂದು ಆರೋಪ ಮಾಡಿದರು.

ಶಾಸಕರ ಮಕ್ಕಳೇ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದಾರೆ. ಚಿತ್ರದುರ್ಗದ ಶಾಸಕರೊಬ್ಬರ ಮಗ ಗುತ್ತಿಗೆದಾರರಾಗಿ ಕೆಲಸ ಮಾಡುತ್ತಿದ್ದು, ಇವತ್ತಿನಿಂದ 15  ದಿನ ಕಾಲಾವಕಾಶ ಕೊಡುತ್ತೇವೆ. ಭ್ರಷ್ಟಾಚಾರದ ದಾಖಲೆಗಳನ್ನ ಬಳಿಕ‌ ಬಿಡುಗಡೆ ಮಾಡುತ್ತೇವೆ ಎಂದು ಸಂಘದ ಉಪಾಧ್ಯಕ್ಷ ಮಂಜುನಾಥ್ ಹೇಳಿಕೆ ನೀಡಿದ್ದಾರೆ.

ಶಾಸಕರು, ಸಚಿವರು ನಮಗೆ ಬೆದರಿಕೆ ಹಾಕುವ ಕೆಲಸ ಮಾಡುತ್ತಿದ್ದಾರೆ. ಮೊದಲು ಇದಕ್ಕೆ ಬ್ರೇಕ್ ಹಾಕುವ ಕೆಲಸ ಮಾಡಬೇಕು. ಕಮಿಷನ್ ನೀಡುತ್ತಿರುವುದರಿಂದ ಎಲ್ಲಾ‌ ಕಾಮಾಗಾರಿಗಳು ಕಳಪೆಯಿಂದ ಕೂಡಿವೆ. 10 ಸಾವಿರ ಕೋಟಿ ವೆಚ್ಚ ಮಾಡಿ ರಸ್ತೆ ನಿರ್ಮಾಣ ಮಾಡಲಾಗಿದೆ. ರಾಜರಾಜೇಶ್ವರಿ ನಗರದಲ್ಲಿ ಆ ರಸ್ತೆ ಕಳಪೆಯಿಂದ ಕೂಡಿದೆ. 2019 ರಿಂದ ಕಮಿಷನ್ ದಂಧೆ ಹೆಚ್ಚಾಗಿದೆ. ಪ್ರಧಾನಿ ಅವರಿಗೆ ಪತ್ರ ಕೊಟ್ಟ ಮೇಲೆ ಸಂತೋಷ್ ಗೆ ಬೆದರಿಕೆ ಹೆಚ್ಚಾಗಿತ್ತು, ಹೀಗಾಗಿ ತಲೆ ಮರೆಸಿಕೊಂಡು ಓಡಾಡುತ್ತಿದ್ದರು. ಶೀಘ್ರದಲ್ಲೇ ಸುಧಾಕರ್ ಭ್ರಷ್ಟಾಚಾರದ ಕುರಿತ ದಾಖಲೆ‌ ಬಿಡುಗಡೆ ಮಾಡುತ್ತೇವೆ. ಆ ಬಳಿಕ ಅವರೂ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದರು.

ಟಾಪ್ ನ್ಯೂಸ್

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

ಶಾಲೆ ಸಮೀಪ ಮದ್ಯದಂಗಡಿ ಇದ್ದರೆ ದೂರು ನೀಡಿ

1-dee

ಕಾಲೇಜುಗಳಲ್ಲಿ ಜಾನಪದ ಉತ್ಸವ: ಇಲಾಖೆ ಸೂಚನೆ

arrested

CM ಕಚೇರಿಯ ಟಿಪ್ಪಣಿ ನಕಲು: ಬಂಧನ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.