ಉತ್ತಮ ಸೇವೆ ನೀಡುತ್ತಿದೆ ಪೊಲೀಸ್‌ ಇಲಾಖೆ

ಕಳೆದ 1 ವರ್ಷ 6 ತಿಂಗಳಲ್ಲಿ ಪೊಲೀಸ್‌ ಠಾಣೆಗಳ ಉನ್ನತಿಗೆ ಕ್ರಮ ಕೈಗೊಳ್ಳಲಾಗಿದೆ.

Team Udayavani, Apr 13, 2022, 5:59 PM IST

ಉತ್ತಮ ಸೇವೆ ನೀಡುತ್ತಿದೆ ಪೊಲೀಸ್‌ ಇಲಾಖೆ

ಬೆಳಗಾವಿ: ಪೊಲೀಸ್‌ ಇಲಾಖೆ ರಾಜ್ಯದಲ್ಲಿ ಉತ್ತಮ ಸೇವೆ ಒದಗಿಸುತ್ತಿದೆ. ಪೊಲೀಸ್‌ ಸಿಬ್ಬಂದಿ ನೆಮ್ಮದಿಯಿಂದ ತಮ್ಮ ಜೀವನ ನಡೆಸಬೇಕು ಎಂಬ ಉದ್ದೇಶದಿಂದ ಈಗಿರುವ ವಸತಿ ಗೃಹಗಳಿಗಿಂತ ದೊಡ್ಡ ಮಟ್ಟದಲ್ಲಿ 20 ಸಾವಿರ ವಸತಿ ಗೃಹಗಳನ್ನು ನಿರ್ಮಾಣ ಮಾಡಲು ಯೋಜನೆ ರೂಪಿಸಲಾಗಿದೆ. ಈಗಾಗಲೇ 10 ಸಾವಿರ ವಸತಿ ಗೃಹಗಳ ನಿರ್ಮಾಣ ಕಾರ್ಯ ಪ್ರಗತಿಯಲ್ಲಿದೆ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

ನಗರದ ಮಚ್ಛೆ ಕೆ.ಎಸ್‌.ಆರ್‌.ಪಿ 2ನೇ ಪಡೆಯ ತರಬೇತಿ ಶಾಲೆಯ ಕವಾಯತು ಮೈದಾನದಲ್ಲಿ  ಮಂಗಳವಾರ ಕೆ.ಎಸ್‌.ಆರ್‌.ಪಿ. ಪೊಲೀಸ್‌ ಕಾನ್ಸ್‌ ಟೇಬಲ್‌ ಪ್ರಶಿಕ್ಷಣಾರ್ಥಿಗಳ 4ನೇ ತಂಡದ ನಿರ್ಗಮನ ಪಥಸಂಚಲನ ಪರಿವೀಕ್ಷಿಸಿ ಮಾತನಾಡಿದ ಅವರು, ಬ್ರಿಟಿಷರಿಂದ ಸ್ವಾತಂತ್ರ್ಯ ಪಡೆಯುವ ಸಮಯದಲ್ಲಿ, ಭಾರತೀಯರಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವ ಸಾಮರ್ಥ್ಯ ಇಲ್ಲ ಎಂದು ಹೇಳಿದ್ದರು.

ಪ್ರಸ್ತುತ ನಮ್ಮ ದೇಶದಲ್ಲಿ ಪೊಲೀಸ್‌ ಪಡೆ ಶಿಸ್ತು, ಪ್ರಾಮಾಣಿಕತೆಯಿಂದ ಶಾಂತಿ ಸುವ್ಯವಸ್ಥೆಯನ್ನು ಅಚ್ಚುಕಟ್ಟಾಗಿ ಕಾಪಾಡುತ್ತಿದೆ ಎಂದರು. ದೇಶದಲ್ಲಿ ಕರ್ನಾಟಕ ಪೊಲೀಸ್‌ ಇಲಾಖೆ ಉತ್ತಮ ರೀತಿಯ ಸೇವೆ ಸಲ್ಲಿಸುತ್ತಿದೆ. ಚುನಾವಣೆ ಸಮಯದಲ್ಲಿ ಮತ್ತು ಶಾಂತಿ ಸುವ್ಯವಸ್ಥೆ ಕಾಪಾಡಲು ಪೊಲೀಸ್‌ ಇಲಾಖೆ ಶೌರ್ಯ, ಸಾಹಸ, ಉತ್ತಮ ಕಾರ್ಯಕ್ಷಮತೆ ಪ್ರದರ್ಶಿಸುತ್ತಿರುವುದು ನಮಗೆ ಹೆಮ್ಮೆಯ ಸಂಗತಿ ಎಂದ ಅವರು, ಕೆಲವು ಸಮಾಜಘಾತಕರು ವಿದೇಶಿ ಏಜೆಂಟ್‌ ರ ಜೊತೆಗೆ ಕೈ ಜೋಡಿಸಿ ಆಂತರಿಕ ಶಾಂತಿಯನ್ನು ಕೆಡಿಸುವ ಕಾರ್ಯ ಮಾಡುತ್ತಿದ್ದಾರೆ. ಅಂತವರನ್ನು ಎದುರಿಸಿ ದೇಶದ ಆಂತರಿಕ ಭದ್ರತೆಗೆ ಪೊಲೀಸ್‌ ಇಲಾಖೆ ಗಟ್ಟಿಯಾಗಿ ನಿಂತಿದೆ ಎಂದರು.

ಒಂಬತ್ತು ತಿಂಗಳ ಕಾಲ ವಿಶೇಷ ತರಬೇತಿಯನ್ನು ಪಡೆದ 216 ಕೆ.ಎಸ್‌.ಆರ್‌.ಪಿ ಸಿಬ್ಬಂದಿಗಳು ರಾಷ್ಟ್ರ ಧ್ವಜ ಅಡಿಯಲ್ಲಿ ಸಂಕಲ್ಪ ಮಾಡಿ, ಸಮಾಜದಲ್ಲಿ ಶಾಂತಿ ಸುವ್ಯವಸ್ಥೆ, ಸಂವಿಧಾನದ ಮೌಲ್ಯಗಳನ್ನು ಕಾಪಾಡಬೇಕು ಹಾಗೂ ಕಾನೂನು ಪಾಲಿಸುವ ಮೂಲಕ ಸಮಾಜ ಸೇವೆಗೆ ಮುಂದಾಗಬೇಕು ಎಂದು ಅವರು ಪ್ರಶಿಕ್ಷಣಾರ್ಥಿಗಳಿಗೆ ಕಿವಿಮಾತು ಹೇಳಿದರು.

ಕಳೆದ 1 ವರ್ಷ 6 ತಿಂಗಳಲ್ಲಿ ಪೊಲೀಸ್‌ ಠಾಣೆಗಳ ಉನ್ನತಿಗೆ ಕ್ರಮ ಕೈಗೊಳ್ಳಲಾಗಿದೆ. 200 ಕೋಟಿ ರೂಗಳನ್ನು ಮೀಸಲಿಟ್ಟು 100 ಪೊಲೀಸ್‌ ಠಾಣೆಗಳನ್ನು ಉನ್ನತ ದರ್ಜೆಯಲ್ಲಿ ನಿರ್ಮಾಣ ಮಾಡಲಾಗಿದೆ ಎಂದು ಹೇಳಿದರು.

ಇದೇ ಸಂದರ್ಭದಲ್ಲಿ ವಿವಿಧ ಒಳಾಂಗಣ ಮತ್ತು ಹೊರಾಂಗಣ ತರಬೇತಿಯಲ್ಲಿ ಉತ್ತಮ ಪ್ರದರ್ಶನ ನೀಡಿ ಅತೀ ಹೆಚ್ಚು ಅಂಕಪಡೆದ ಪ್ರಶಿಕ್ಷಣಾರ್ಥಿಗಳಿಗೆ ಗೃಹ ಸಚಿವರು ಬಹುಮಾನ ವಿತರಿಸಿದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ನ ಅಪರ ಮಹಾ ನಿರ್ದೇಶಕರಾದ ಆಲೋಕ್‌ ಕುಮಾರ್‌ ಮಾತನಾಡಿ, ಹೊಸದಾಗಿ ಕೆಲಸಕ್ಕೆ ಸೇರಿದ ಸಿಬ್ಬಂದಿಗೆ ಪ್ರವಾಹ ಭೀತಿ ವಿಪತ್ತು ನಿರ್ವಹಣೆಯ ಜೊತೆ ಉತ್ತಮ ರೀತಿಯ ತರಬೇತಿ ನೀಡಿದ್ದೇವೆ ಎಂದು ಹೇಳಿದರು.

ಹೆಚ್ಚುವರಿ ತರಬೇತಿ ಶಾಲೆ ಕೆ.ಎಸ್‌.ಆರ್‌.ಪಿ 2ನೇ ಪಡೆಯ ಪ್ರಾಂಶುಪಾಲರಾದ ಹಂಜಾ ಹುಸೇನ್‌ ಅವರು ಪ್ರಶಿಕ್ಷಾರ್ಥಿಗಳಿಗೆ ಪ್ರತಿಜ್ಞಾ ವಿಧಿ ಬೋಧಿಸಿದರು. ಕರ್ನಾಟಕ ರಾಜ್ಯ ಮೀಸಲು ಪೊಲೀಸ್‌ ಪಡೆಯ ಪೊಲೀಸ್‌ ಮಹಾ ನಿರೀಕ್ಷಕರಾದ ರವಿ ಎಸ್‌., ಬೆಳಗಾವಿ ಪೊಲೀಸ್‌ ಆಯುಕ್ತರಾದ ಡಾ.ಎಂ.ಬಿ. ಬೋರಲಿಂಗಯ್ಯ, ಪೊಲೀಸ್‌ ವರಿಷ್ಠಾಧಿಕಾರಿ ಲಕ್ಷ¾ಣ ನಿಂಬರಗಿ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

DKSHi-4

Siddaramaiah ನಮ್ಮ ನಾಯಕ, ಹೆಸರು ದುರ್ಬಳಕೆ ಮಾಡಿಕೊಳ್ಳುವ ಅಗತ್ಯವಿಲ್ಲ: ಡಿಕೆಶಿ

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Actor Darshan: ಪ್ರೇಮ್‌ – ದರ್ಶನ್‌ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್‌ ಪೋಸ್ಟರ್‌ ಔಟ್

Gambhir-Agarkar have differences of opinion on Pant-Rahul issue

Team India: ಪಂತ್-ರಾಹುಲ್‌ ವಿಚಾರದಲ್ಲಿ ಗಂಭೀರ್-‌ ಅಗರ್ಕರ್‌ ನಡುವೆ ಭಿನ್ನಾಭಿಪ್ರಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Belagavai: ಆಟೋಗೆ ಕಾರು ಟಚ್ ಆಗಿದ್ದಕ್ಕೆ ಮಾಜಿ ಶಾಸಕರ ಹ*ತ್ಯೆ!

Belagavai: ಆಟೋ ಚಾಲಕನ ಜತೆ ಜಗಳ ಬೆನ್ನಲ್ಲೇ ಗೋವಾ ಮಾಜಿ ಶಾಸಕ ಸಾವು!

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belgavi: ಬೆಳಗಾವಿ ಪ್ರಾದೇಶಿಕ ಆಯುಕ್ತರ ವಿರುದ್ಧ ರಾಜ್ಯಪಾಲರಿಗೆ ಶಾಸಕ ಅಭಯ ದೂರು

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belegavi: ಗದ್ದೆಗೆ ಹೊತ್ತಿದ್ದ ಬೆಂಕಿ ಆರಿಸಲುಹೋಗಿ ಸುಟ್ಟು ಕರಕಲಾದ ರೈತ

Belagavi: Rpe, mrder have increased due to the court system: Muthalik

Belagavi: ನ್ಯಾಯಾಲಯ ವ್ಯವಸ್ಥೆಯಿಂದಲೇ ಅತ್ಯಾ*ಚಾರ, ಕೊ*ಲೆ ಹೆಚ್ಚಾಗಿದೆ: ಮುತಾಲಿಕ್

Belagavi: Return to public life in two weeks: Minister Lakshmi Hebbalkar

Belagavi: ಎರಡು ವಾರಗಳಲ್ಲಿ ಸಾರ್ವಜನಿಕ ಜೀವನಕ್ಕೆ ವಾಪಸ್: ಸಚಿವೆ ಲಕ್ಷ್ಮೀ ಹೆಬ್ಬಾಳಕರ್

MUST WATCH

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

udayavani youtube

ಮುಕೇಶ್ ಅಂಬಾನಿ ಕುಟುಂಬದ ನಾಲ್ಕು ತಲೆಮಾರು ಮಹಾ ಕುಂಭಮೇಳದಲ್ಲಿ ಪವಿತ್ರ ಸ್ನಾನ

ಹೊಸ ಸೇರ್ಪಡೆ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

1sadgu

Pariksha Pe Charcha: ಸ್ಮಾರ್ಟ್ ಫೋನ್‌ಗಿಂತಲೂ ನೀವು ಸ್ಮಾರ್ಟ್ ಆಗಬೇಕು:ಸದ್ಗುರು

1-congress

Congress ಪಕ್ಷಕ್ಕೆ ಮರು ಸೇರ್ಪಡೆಯಾದ ಎಲ್.ಆರ್.ಶಿವರಾಮೇಗೌಡ, ಬ್ರಿಜೇಶ್ ಕಾಳಪ್ಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.