ಯಡಿಯೂರಪ್ಪ ಸಮ್ಮುಖದಲ್ಲೇ ತೇರದಾಳ ಬಿಜೆಪಿ ಭಿನ್ನಮತ ಸ್ಫೋಟ


Team Udayavani, Apr 13, 2022, 6:56 PM IST

ಯಡಿಯೂರಪ್ಪ ಸಮ್ಮುಖದಲ್ಲೇ ತೇರದಾಳ ಬಿಜೆಪಿ ಭಿನ್ನಮತ ಸ್ಫೋಟ

ರಬಕವಿ-ಬನಹಟ್ಟಿ : ತೇರದಾಳ ವಿಧಾನಸಭಾ ಕ್ಷೇತ್ರದ ಬಿಜೆಪಿ ಕಾರ್ಯಕರ್ತರ ದಂಡು ಬೆಳಗಾವಿಯ ಖಾಸಗಿ ಹೊಟೇಲ್‌ನಲ್ಲಿ ಬುಧವಾರ ನಡೆದ ಬಿಜೆಪಿ ಕೋರ್ ಕಮಿಟಿಯಲ್ಲಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಹಾಗು ರಾಜ್ಯ ಉಸ್ತುವಾರಿ ಅರುಣ್ ಸಿಂಗ್ ಹಾಗು ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಬರುವ ಚುನಾವಣೆಯಲ್ಲಿ ಸ್ಥಳೀಯರಿಗೆ ಟಿಕೆಟ್ ನೀಡಬೇಕೆಂದು ಒತ್ತಾಯಿಸಲು ತೆರಳಿದ್ದ ವೇಳೆ ಕಾರ್ಯಕರ್ತರೊಂದಿಗೆ ಹಾಲಿ ಶಾಸಕ ಸಿದ್ದು ಸವದಿ ನಡೆಸಿದ ಮಾತು ವಾಗ್ವಾದಕ್ಕೆ ತಿರುಗಿದ್ದು,ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.

ನಡೆದಿದ್ದೇನು: ಹಳೆಯ ಕಾರ್ಯಕರ್ತರ ಮೇಲೆ ದೌರ್ಜನ್ಯ ಹಾಗು ಪಕ್ಷನಿಷ್ಠೆಆಗಿ ದುಡಿದ ಮುಖಂಡರಿಗೆ ನ್ಯಾಯ ಒದಗಿಸಬೇಕೆಂದು ಕೋರಿ ತೇರದಾಳ ಕ್ಷೇತ್ರದಿಂದ ತೇರದಾಳದ ಬಸವರಾಜ ಬಾಳಿಕಾಯಿ, ಬನಹಟ್ಟಿಯ ಭೀಮಶಿ ಮಗದುಮ್, ಮಹಾಲಿಂಗಪೂರದ ಶೇಖರ ಅಂಗಡಿ, ರಬಕವಿಯ ಬಸವರಾಜ ದಲಾಲ, ಆಸಂಗಿಯ ಹರ್ಷವರ್ಧನ ಪಟವರ್ಧನ ಸೇರಿದಂತೆ 30 ಕ್ಕೂ ಅಧಿಕ ಕಾರ್ಯಕರ್ತರು ತೆರಳಿದ್ದರು.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪನವರಿಗೆ ಮನವಿ ಅರ್ಪಿಸುವ ಸಂದರ್ಭದಲ್ಲಿ ಹಾಲಿ ಶಾಸಕ ಸಿದ್ದು ಸವದಿಯವರೊಂದಿಗೆ ಮಾತಿನ ವಾಗ್ವಾದ ನಡೆದು ಏಕವಚನಗಳ ಮಾತಿನ ಪ್ರಯೋಗದಿಂದ ಇರುಸು-ಮುರುಸಾಗಲು ಕಾರಣವಾಯಿತು.

ಕ್ಷೇತ್ರದಲ್ಲಿ ಬಿಜೆಪಿ ಪಕ್ಷ ಕಟ್ಟುವ ಸಂದರ್ಭ ಸಾಕಷ್ಟು ಪ್ರಕರಣಗಳನ್ನು ಮೈಮೇಲೆ ಹಾಕಿಕೊಂಡು ಶ್ರಮಿಸಿದ್ದೇವೆ. ಪಕ್ಷದ ಮುಖಂಡರೊಂದಿಗೆ ಸಾಧಕ-ಬಾಧಕಗಳ ಚರ್ಚೆ ಮುಕ್ತವಾಗಿದೆ. ಕಾರ್ಯಕರ್ತರ ಆಹ್ವಾನ ನಿಮಿತ್ತ ತೆರಳಿದ್ದೇವು. ಆ ಸಂದರ್ಭ ವಿನಾಕಾರಣ ಶಾಸಕ ಸವದಿಯವರು ಮನಬಂದಂತೆ ಅಶ್ಲೀಲ ಪದಬಳಕೆ ಮಾಡಿ ಕಾರ್ಯಕರ್ತರನ್ನು ಅವಮಾನಿಸಿದ್ದಾರೆ ಎಂದು ಬಸವರಾಜ ಬಾಳಿಕಾಯಿ ದೂರಿದರು.

ಇದೇ ಸಂದರ್ಭದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಮಾತನಾಡಿ, ಪಕ್ಷದ್ರೋಹಿಗಳ ಗುಂಪು ಪಕ್ಷದ ಅಂಗಳಕ್ಕೆ ಬಂದಿತ್ತು. ಜೆಡಿಎಸ್ ಪಕ್ಷದಲ್ಲಿದ್ದು, ಬಿಜೆಪಿಯಲ್ಲಿದ್ದೇನೆಂದು ನಾಟಕವಾಡುವದು ಎಷ್ಟು ಸರಿ? ಕಳೆದ 2013 ರಲ್ಲಿ ಕೆಜೆಪಿ ಪಕ್ಷದಿಂದ ಸ್ಪರ್ಧಿಸಿ ಅಲ್ಪಮತಗಳ ಅಂತರದ ಸೋಲಿಗೆ ಕಾರಣವಾದವನು ಅರ್ಹತೆಯಿಲ್ಲದೆ ಬಂದಿದ್ದಾರೆ.

ಉಂಡ ಮನೆಗೆ ಜಂತಿ ಎಣಿಸುವ ಜಾಯಮಾನದವರಾಗಿದ್ದು, ಪಕ್ಷದಿಂದಲೇ ಬಿಡಿಸಿಸಿ, ಕೆಎಂಎಫ್ ಸೇರಿದಂತೆ ಇತರೆ ಹುದ್ದೆಗಳನ್ನು ಅಲಂಕರಿಸಿ ಇದೀಗ ವಿರೋಧವಾಗುತ್ತಿದ್ದಾರೆ. ಸ್ಥಳೀಯ ಕಾರ್ಯಕರ್ತರು ಇವರಿಗೆ ಛೀಮಾರಿ ಹಾಕಿದ್ದು, ಹೈಕಮಾಂಡ್ ಮುಂದೆ ನೈತಿಕತೆಯಿಲ್ಲದಿದ್ದರೂ ಮೊಂಡತನ ಪ್ರದರ್ಶಿಸಿದ್ದಾರೆ.

ನಾನೇ ಪಕ್ಷದ ಅಭ್ಯರ್ಥಿ: ಹಿತಶತ್ರುಗಳಂತೆ ಬೆನ್ನಿಗೆ ಚೂರಿ ಹಾಕುವವರ ವಿರುದ್ಧ ಎಚ್ಚರವಾಗಿದ್ದೇನೆ. ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಪಡೆಯ ಒತ್ತಾಯದಿಂದ ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವದಷ್ಟೇ ಅಲ್ಲದೆ ಹಳೆಯ ಗೆಲುವಿನ ನನ್ನ ದಾಖಲೆಯನ್ನು ನಾನೇ ಮುರಿಯುತ್ತೇನೆ. ಇಂತಹ ಕೊಳತೆ ರೆಜೆಕ್ಟೆಡ್ ಗೂಡ್ಸ್ ನಂತೆ ಇವೆ. ಹತಾಶೆ ಭಾವನೆಯಿಂದ ಪಕ್ಷದ ಮುಖಂಡರ ಮುಂದೆ ಬಂದು ನಿಂತಿದ್ದಾರೆಂದು ಸವದಿ ತಿಳಿಸಿದರು.

ಟಾಪ್ ನ್ಯೂಸ್

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

12-mudhol

Mudhol: ನಾರಿಯರ ಗಸ್ತುಕಾರ್ಯಕ್ಕೆ ಪೊಲೀಸ್ ಇಲಾಖೆ ಶ್ಲಾಘನೆ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

Bagalakote: ಇನ್ವೆಸ್ಟ್ ಕರ್ನಾಟಕ ಸಮಾವೇಶದಲ್ಲಿ ಮಹತ್ವದ ಒಪ್ಪಂದಕ್ಕೆ ಎಂ.ಆರ್.ಎನ್ ಸಮೂಹ ಸಹಿ

11

Mudhol: ಅಂತಾರಾಜ್ಯ ಕಳ್ಳನ ಬಂಧನ; ಟ್ರ್ಯಾಕ್ಟರ್ ವಶ

4

Mudhol: ಮನೆ ಕಳ್ಳತನ; ದೂರು ದಾಖಲು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

Mudhol: ನಗರದಲ್ಲಿ ಹೆಚ್ಚಿದ ಕಳ್ಳರ ಹಾವಳಿ… ಮಹಿಳಾ‌ಮಣಿಗಳಿಂದ ರಾತ್ರಿ‌ ಗಸ್ತು

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Jagadish Shettar: ಯಾವಾಗ ಬೇಕಾದರೂ ಸರ್ಕಾರ ಪತನ: ಶೆಟ್ಟರ್‌

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

WPL: ಮುಂಬೈ-ಡೆಲ್ಲಿ ಪಂದ್ಯದಲ್ಲಿ ರನೌಟ್‌ ವಿವಾದ

de

Vitla: ಕಾಲು ಜಾರಿ ಕೆರೆಗೆ ಬಿದ್ದು ಯುವಕ ಸಾವು

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.