![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
![Kuruburu-Shanta](https://www.udayavani.com/wp-content/uploads/2025/02/Kuruburu-Shanta-415x249.jpg)
Team Udayavani, Apr 15, 2022, 1:17 PM IST
ಕನ್ನಡ ಚಿತ್ರರಂಗದಲ್ಲಿ ಹಾಸ್ಯನಟನಾಗಿ ಗುರುತಿಸಿಕೊಂಡಿರುವ ತರಂಗ ವಿಶ್ವ, ಈಗ “ಗಿರ್ಕಿ’ ಸಿನಿಮಾದ ಮೂಲಕ ನಿರ್ಮಾಪಕರಾಗಿ ಗಾಂಧಿನಗರಕ್ಕೆ ಪರಿಚಯವಾಗುತ್ತಿದ್ದಾರೆ. ಈಗಾಗಲೇ ಬಹುತೇಕ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ “ಗಿರ್ಕಿ’ ತೆರೆಗೆ ಬರಲು ಸಿದ್ಧವಾಗುತ್ತಿದ್ದು, ಸದ್ಯ ನಿಧಾನವಾಗಿ ಚಿತ್ರದ ಪ್ರಮೋಶನ್ಸ್ ಕೆಲಸಗಳಿಗೆ ಚಾಲನೆ ನೀಡಿದೆ. ಇತ್ತೀಚೆಗೆ ನಡೆದ ಸಮಾರಂಭದಲ್ಲಿ ನಟ ಶರಣ್ “ಗಿರ್ಕಿ’ ಟೀಸರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು.
ಇದೇ ವೇಳೆ ಮಾತನಾಡಿದ ಶರಣ್, “ವಿಶ್ವ ನನ್ನ ಬಹುಕಾಲದ ಗೆಳೆಯ. ನಾವಿಬ್ಬರೂ ಸಾಕಷ್ಟು ಸಿನಿಮಾಗಳಲ್ಲಿ ಒಟ್ಟಿಗೆ ನಟಿಸಿದ್ದೇವೆ. ಹಾಸ್ಯನಟನಾಗಿ ಚಿತ್ರರಂಗ ಪ್ರವೇಶಿಸಿ, ಈಗ ಚಿತ್ರ ನಿರ್ಮಾಣ ಮಾಡುವ ಮಟ್ಟಕ್ಕೆ ಬೆಳೆದಿರುವುದು ನಿಜಕ್ಕೂ ಹೆಮ್ಮೆ. ಇದು ಸುಲಭ ಅಲ್ಲ. ಇದರ ಹಿಂದೆ ಸಾಕಷ್ಟು ಪರಿಶ್ರಮವಿದೆ. ನಾನು ನೂರು ಚಿತ್ರಗಳಲ್ಲಿ ನಟಿಸಿದ ಮೇಲೆ ನಿರ್ಮಾಪಕನಾದೆ. ವಿಶ್ವ ಕೂಡ ಅಷ್ಟೇ ಚಿತ್ರಗಳ ನಂತರ ನಿರ್ಮಾಪಕನಾಗಿದ್ದಾನೆ. ಚಿತ್ರತಂಡದ ಪರಿಶ್ರಮ ಟೀಸರ್ನಲ್ಲಿ ಎದ್ದು ಕಣುತ್ತಿದೆ’ ಎಂದರು.
ಚಿತ್ರದ ಬಗ್ಗೆ ಮಾತನಾಡಿದ ನಟ ಕಂ ನಿರ್ಮಾಪಕ ತರಂಗ ವಿಶ್ವ, “ಈ ಸಿನಿಮಾದ ನಿರ್ಮಾಣದ ಜೊತೆಗೆ ನಾನು ಕೂಡ ಪ್ರಮುಖ ಪಾತ್ರದಲ್ಲಿ ಅಭಿನಯಿಸಿದ್ದೇನೆ. ಎಲ್ಲರ ಶ್ರಮದಿಂದ ಸಿನಿಮಾ ಚೆನ್ನಾಗಿ ಮೂಡಿಬಂದಿದೆ. ಎಲ್ಲಾ ಅಂದುಕೊಂಡಂತೆ ನಡೆದರೆ ಇದೇ ಮೇ ತಿಂಗಳಿನಲ್ಲಿ ಸಿನಿಮಾವನ್ನು ಬಿಡುಗಡೆ ಮಾಡುವ ಯೋಚನೆ ಇದೆ’ ಎಂದರು.
ಇದನ್ನೂ ಓದಿ:‘ತೋತಾಪುರಿ’ ಟ್ರೇಲರ್ ಗೆ ಕಿಚ್ಚನ ಸಾಥ್
ಚಿತ್ರದ ಬಗ್ಗೆ ಮಾತನಾಡಿದ ನಿರ್ದೇಶಕ ವೀರೇಶ್ ಪಿ. ಎಂ, “ಗಿರ್ಕಿ ಎಂದರೆ ಸುತ್ತಾಟ ಹಾಗೂ ಪರ್ಯಟನೆ. ಒಂದೇ ಥರಹದ ಕಥೆಯಲ್ಲ. ಲವ್, ಕಾಮಿಡಿ, ಫ್ಯಾಮಿಲಿ ಕಂಟೆಂಟ್ ಹೀಗೆ ಎಲ್ಲ ಥರದ ಎಂಟರ್ ಟೈನ್ಮೆಂಟ್ ಎಲಿಮೆಂಟ್ಸ್ ಕೂಡ ಇದರಲ್ಲಿದೆ. ಸಿನಿಮಾದ ಬಹುತೇಕ ಶೂಟಿಂಗ್ ಬೆಂಗಳೂರು ಸುತ್ತಮುತ್ತ ನಡೆಸಲಾಗಿದೆ’ ಎಂದು ಚಿತ್ರದ ಬಗ್ಗೆ ಮಾಹಿತಿ ನೀಡಿದರು.
“ಗಿರ್ಕಿ’ ಚಿತ್ರದ ನಾಯಕ ವಿಲೋಕ್, ನಾಯಕಿ ದಿವ್ಯ ಉರುಡುಗ, ನಟ ರಾಶಿ ಮಹದೇವ್ ತಮ್ಮ ಪಾತ್ರ ಪರಿಚಯ ಮಾಡಿಕೊಟ್ಟರು. “ಗಿರ್ಕಿ’ ಚಿತ್ರದ ಹಾಡುಗಳಿಗೆ ಸಂಗೀತದ ವೀರ ಸಮರ್ಥ್ ಸಂಗೀತ ಸಂಯೋಜನೆಯಿದ್ದು, ಜಯಂತ್ ಕಾಯ್ಕಿಣಿ, ಯೋಗರಾಜ್ ಭಟ್ ಸಾಹಿತ್ಯವಿದೆ. ವಾಸುಕಿ ಭುವನ್ ಹಾಗೂ ವಿಶ್ವ ಜಂಟಿಯಾಗಿ ಚಿತ್ರವನ್ನು ನಿರ್ಮಿಸಿದ್ದಾರೆ. ಸದ್ಯ ಟೀಸರ್ ರಿಲೀಸ್ ಮೂಲಕ ಸೌಂಡ್ ಮಾಡುತ್ತಿರುವ “ಗಿರ್ಕಿ’ ಥಿಯೇಟರ್ನಲ್ಲಿ ಹೇಗಿರಲಿದೆ ಅನ್ನೋದು ಮೇ ವೇಳೆಗೆ ಗೊತ್ತಾಗಲಿದೆ
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!
Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ
Air Lift: ಪಂಜಾಬ್ನಲ್ಲಿ ರೈತ ಮುಖಂಡ ಶಾಂತಕುಮಾರ್ಗೆ ಅಪಘಾತ; ಬೆಂಗಳೂರಿಗೆ ಏರ್ಲಿಫ್ಟ್
Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?
Bharamasagara: ವಿದ್ಯುತ್ ಕಿಡಿಗೆ ಎರಡು ಮೇವಿನ ಬಣವೆ ಸಂಪೂರ್ಣ ಭಸ್ಮ
You seem to have an Ad Blocker on.
To continue reading, please turn it off or whitelist Udayavani.