ತ್ರಿವಳಿ ಆಘಾತ! ದೀಪಕ್ ಚಹರ್ ನಿರ್ಗಮನ ಅಧಿಕೃತ
ಡೆಲ್ಲಿ ಫಿಸಿಯೋ ಪ್ಯಾಟ್ರಿಕ್ಗೆ ಕೋವಿಡ್ ; ಕೆಕೆಆರ್ನ ರಾಸಿಖ್ ಸಲಾಂ ಹೊರಕ್ಕೆ
Team Udayavani, Apr 16, 2022, 6:25 AM IST
ಮುಂಬಯಿ: ಶುಕ್ರವಾರ ಐಪಿಎಲ್ ಕೂಟಕ್ಕೆ ತ್ರಿವಳಿ ಆಘಾತ ಎದುರಾಗಿದೆ. ಗಾಯದ ಸಮಸ್ಯೆಗೆ ಸಿಲುಕಿದ್ದ ಚೆನ್ನೈ ಸೂಪರ್ ಕಿಂಗ್ಸ್ನ ಬೌಲಿಂಗ್ ಆಲ್ರೌಂಡರ್ ದೀಪಕ್ ಚಹರ್ ಅವರು ಕೂಟದಿಂದ ಅಧಿಕೃತವಾಗಿ ಹೊರಬಿದ್ದಿದ್ದಾರೆ.
ಕೋಲ್ಕತಾ ನೈಟ್ರೈಡರ್ ನ ವೇಗಿ ರಾಸಿಖ್ ಸಲಾಂ ಕೂಡ ಗಾಯಾಳಾಗಿ ಕೂಟದಿಂದ ನಿರ್ಗಮಿಸಿದ್ದಾರೆ.
ಇದೇ ವೇಳೆ ಡೆಲ್ಲಿ ಕ್ಯಾಪಿಟಲ್ಸ್ನ ಫಿಸಿಯೋ ಪ್ಯಾಟ್ರಿಕ್ ಫರ್ಹಾರ್ತ್ ಅವರಿಗೆ ಕೋವಿಡ್ ಸೋಂಕು ದೃಢಪಟ್ಟಿದೆ!
ಮಂಡಿ ನೋವಿನಿಂದಾಗಿ ದೀಪಕ್ ಚಹರ್ ಕೂಟದಿಂದ ಹೊರಬಿದ್ದಿದ್ದಾರೆ ಎಂದು ಐಪಿಎಲ್ ಪ್ರಕಟನೆ ತಿಳಿಸಿದೆ.
ಕೆಕೆಆರ್ ವೇಗಿ ರಾಸಿಖ್ ಸಲಾಂ ಬೆನ್ನುನೋವಿನ ಸಮಸ್ಯೆಗೆ ಸಿಲುಕಿದ್ದು, ಅವರು ಕೂಟದಿಂದ ಬೇರ್ಪಡುವುದು ಅನಿವಾರ್ಯವಾಗಿದೆ. ಇವರ ಬದಲು ದಿಲ್ಲಿಯ ಯುವ ವೇಗಿ ಹರ್ಷಿತ್ ರಾಣಾ ಅವರನ್ನು ಸೇರಿಸಿಕೊಳ್ಳಲಾಗಿದೆ. ಸಲಾಂ ಈ ಐಪಿಎಲ್ನಲ್ಲಿ ಕೆಕೆಆರ್ ಪರ ಎರಡು ಪಂದ್ಯಗಳನ್ನು ಆಡಿದ್ದರು. ಬದಲಿ ಆಟಗಾರ ಹರ್ಷಿತ್ ರಾಣಾ ಅವರೊಂದಿಗೆ ಕೆಕೆಆರ್ 20 ಲಕ್ಷ ರೂ. ಒಪ್ಪಂದ ಮಾಡಿಕೊಂಡಿದೆ.
ಇದನ್ನೂ ಓದಿ:ಎಫ್ಐಎಚ್ ಪ್ರೊ ಲೀಗ್ ಹಾಕಿ: ಜರ್ಮನಿಯೆದುರು ಭಾರತಕ್ಕೆ ಗೆಲುವು
ಫರ್ಹಾರ್ತ್ಗೆ ಸೋಂಕು
ಟೀಮ್ ಇಂಡಿಯಾದ ಫಿಸಿಯೋ ಆಗಿದ್ದ ಡೆಲ್ಲಿ ಕ್ಯಾಪಿಟಲ್ಸ್ನ ಪ್ಯಾಟ್ರಿಕ್ ಫರ್ಹಾರ್ತ್ಗೆ ಕೊರೊನಾ ಸೋಂಕು ದೃಢಪಟ್ಟಿದೆ. ಫ್ರಾಂಚೈಸಿಯ ವೈದ್ಯಕೀಯ ತಂಡ ಅವರ ಬಗ್ಗೆ ತೀವ್ರ ನಿಗಾ ವಹಿಸುತ್ತಿದೆ. ಸದ್ಯ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಐಪಿಎಲ್ಗೆ ಕೋವಿಡ್ ಅಪಾಯ ಎದುರಾಗಲೂಬಹುದು.
ಕಳೆದ ವರ್ಷ ಎರಡನೇ ಅಲೆ ತೀವ್ರಗೊಂಡಾಗ ಐಪಿಎಲ್ ಕೂಟವನ್ನು ಅಮಾನತುಗೊಳಿಸಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Womens T20 World Cup: ಪಾಕ್ ವಿರುದ್ದದ ಗೆಲ್ಲಲೇ ಬೇಕಾದ ಪಂದ್ಯದಲ್ಲಿ ಟಾಸ್ ಸೋತ ಭಾರತ
INDvsBAN: ಟಿ20ಯಲ್ಲಿ ಭಾರತಕ್ಕೆ ಹೊಸ ಆರಂಭಿಕರು; ಶರ್ಮಾ ಜತೆ ಓಪನರ್ ಯಾರು?
T20 series: ಬಾಂಗ್ಲಾ ವಿರುದ್ಧ ಯುವ ದರ್ಬಾರ್
Women’s T20 World Cup: ಭಾರತಕ್ಕೆ ಎದುರಾಗಿದೆ ಪಾಕ್ ಸವಾಲು
Blind Chess World C’ships: ವಿಶ್ವ ಅಂಧರ ಚೆಸ್: ಪ್ರಶಸ್ತಿ ಸನಿಹಕ್ಕೆ ಲುಬೋವ್
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Varun Tej; ನ.14ಕ್ಕೆ ‘ಮಟ್ಕಾ’ ತೆರೆಗೆ
Sandalwood: ಎಚ್ಚರಗೊಂಡ ನಿದ್ರಾದೇವಿ; ಶೂಟಿಂಗ್ ಮುಗಿಸಿ, ಪೋಸ್ಟ್ ಪ್ರೊಡಕ್ಷನ್ ನತ್ತ..
Malpe: 8 ಜಿಲ್ಲಾಡಳಿತದಿಂದ ತಡೆಬೇಲಿ ತೆರವು 8ವಾಟರ್ ಸ್ಪೋರ್ಟ್ಸ್ ಮತ್ತೆ ಆರಂಭ
Uttar Pradesh: ಆ ಕಾರಣಕ್ಕೆ ಪ್ರಿಯಕರನ ಮೇಲೆ ಆ್ಯಸಿಡ್ ಎಸೆದ ಪ್ರಿಯತಮೆ
Alzheimer’s disease: ಅಲ್ಜೀಮರ್ – ಮರೆಗುಳಿ ಕಾಯಿಲೆಯ ಬಗ್ಗೆ ತಿಳಿಯಿರಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.