ಷಡ್ಯಂತ್ರದ ಹಿಂದೆ ಯಾರಿದ್ದಾರೆಂದು ಗೊತ್ತಾದರೆ ಸಂತೋಷ್ ಆತ್ಮಕ್ಕೂ ಶಾಂತಿ ಸಿಗಲಿದೆ: ಈಶ್ವರಪ್ಪ


Team Udayavani, Apr 16, 2022, 2:33 PM IST

ಷಡ್ಯಂತ್ರದ ಹಿಂದೆ ಯಾರಿದ್ದಾರೆಂದು ಗೊತ್ತಾದರೆ ಸಂತೋಷ್ ಆತ್ಮಕ್ಕೂ ಶಾಂತಿ ಸಿಗಲಿದೆ: ಈಶ್ವರಪ್ಪ

ಶಿವಮೊಗ್ಗ: ತಪ್ಪು ಮಾಡಿದವರು ಹೊರಗೆ ಬರಬೇಕು. ಇದರ ಹಿಂದೆ ದೊಡ್ಡ ಷಡ್ಯಂತ್ರವಿದೆ. ಈ ಷಡ್ಯಂತ್ರದ ರೂವಾರಿಗಳು ಯಾರು? ವ್ಯಕ್ತಿಯೋ, ಸಂಸ್ಥೆಯೋ, ಪಕ್ಷವೋ ಎಂದು ಹೊರಗೆ ಬರಬೇಕು. ಆಗ ನಿಜಕ್ಕೂ ಮೃತ ಸಂತೋಷ್ ಆತ್ಮಕ್ಕೆ ಶಾಂತಿ‌ ಸಿಗುತ್ತದೆ ಎಂದು ಮಾಜಿ ಸಚಿವ ಕೆ.ಎಸ್.ಈಶ್ವರಪ್ಪ ಹೇಳಿದರು.

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆ ಮೃತ ಹುಡುಗನ ಬಗ್ಗೆ ನನಗೂ ಸಹ ಒಂದು ರೀತಿಯ ಕರುಣೆಯಿದೆ. ಆ ಹುಡುಗನನ್ನು ಯಾರಾದರೂ ದುರುಪಯೋಗ ಮಾಡಿಕೊಂಡರೇ ಎಂಬ ಬಗ್ಗೆ ತನಿಖೆ ಆದ ನಂತರವೇ ಹೊರ ಬರಲಿದೆ. ಈ ಬಗ್ಗೆ ನ್ಯಾಯ ಹೊರಗೆ ಬರಬೇಕು ಎಂದರು.

ಒಪ್ಪಿಗೆ ಪಡೆದು ರಾಜೀನಾಮೆ: ಇಡೀ ರಾಜ್ಯದ ಜನ, ನನ್ನ ಕ್ಷೇತ್ರದಲ್ಲಿ ಗೆಲ್ಲಿಸಿದ ಜನ ನಮ್ಮ ಪರಿವಾರದ ಹಿರಿಯರು, ರಾಜ್ಯ ಹಾಗೂ ರಾಷ್ಟ್ರದ ನಾಯಕರು, ಮಂತ್ರಿಗಳು, ಶಾಸಕರು ಯಾರಿಗೂ ಕೂಡಾ ಇರಿಸುಮುರಿಸು ಆಗಬಾರದೆಂದು ಎಲ್ಲಾ ಹಿರಿಯರ ಒಪ್ಪಿಗೆ ಪಡೆದು ರಾಜೀನಾಮೆ ಕೊಟ್ಟಿದ್ದೇನೆ ಎಂದರು.

ರಾಜೀನಾಮೆ ಕೊಡುವ ವೇಳೆ ಬಲಪ್ರದರ್ಶನ ಅಲ್ಲ. ನಾನು ರಾಜೀನಾಮೆ ಕೊಡುತ್ತೇನೆಂದು ಹೇಳಿದಾಗ ನನ್ನ ಜೊತೆ ಬರುತ್ತೇನೆ ಎಂದಿದ್ದರು. ಒಂದು 3-4 ಕಾರಿನಲ್ಲಿ ಬರುತ್ತಾರೆ ಅಂದುಕೊಂಡಿದ್ದೆ. ಆದರೆ, ನೂರಾರು ಕಾರಿನಲ್ಲಿ ಬರುತ್ತಾರೆಂದು ಗೊತ್ತಿರಲಿಲ್ಲ. ಅವರ ಅಭಿಮಾನ, ಸ್ನೇಹ, ಬಾಂಧವ್ಯ, ಬೆಂಗಳೂರಿನವರೆಗೆ ಬಂದು ಬೆಂಬಲ ಕೊಟ್ಟಿದ್ದು ನನಗೂ ಸಂತೋಷವಾಗಿದೆ ಎಂದರು.

ರಾಜ್ಯದಲ್ಲಿ ಎಲ್ಲರೂ ನನಗೆ ಬೆಂಬಲ ಕೊಡುತ್ತಿದ್ದಾರೆ. ಒಂದೇ ಒಂದು ನನ್ನ ಬಗ್ಗೆ ಒಡಕು ಧ್ವನಿ‌ ಇಲ್ಲ. ಎಲ್ಲರದ್ದು ಒಂದೇ ಧ್ವನಿ‌, ಇದರಲ್ಲಿ ನಿಮ್ಮ ಯಾವುದೇ ತಪ್ಪು ಇಲ್ಲ. ಷಡ್ಯಂತ್ರ ಇದೆ. ಈ ಷಡ್ಯಂತ್ರದಿಂದ ನೀವು ಹೊರಗೆ ಬರುತ್ತೀರಾ ಎಂಬ ಮಾತನ್ನು ಎಲ್ಲರೂ ಹೇಳುತ್ತಿದ್ದಾರೆ ಎಂದರು.

ಅನುಮಾನವಿದೆ: ನಾನು ಅವರಿಗೆ (ಸಂತೋಷ್) ನ್ಯಾಯಾಲಯದ ಮೂಲಕ ನೋಟೀಸ್ ಕೊಟ್ಟಾಗ ಹೆದರಿಕೊಂಡು ಈ ರೀತಿ ಮಾಡಿಕೊಂಡಿದ್ದಾರೆಂದುಕೊಂಡಿದ್ದೆ. ಆದರೆ ಆಮೇಲೆ ನನಗೆ ಒಂದೊಂದೇ ಅನುಮಾನ ಬರುತ್ತಿದೆ. ಇದು ಆತ್ಮಹತ್ಯೆಯೋ, ಕೊಲೆಯೋ ಎಂಬ ಅನುಮಾನ ಬರುತ್ತಿದೆ. ಕೊಲೆ ಎನ್ನುವ ಅಂಶಗಳ ಬಗ್ಗೆ ಬೇರೆ ಬೇರೆಯವರ ಜೊತೆ ಮಾತನಾಡಿದಾಗ ಅನೇಕ ಅಂಶ ಮಾತನಾಡಿದ್ದಾರೆ. ಈ ಬಗ್ಗೆ ಆದಷ್ಟು ಬೇಗ ತನಿಖೆ ವರದಿ ಬರಬೇಕು ಅಂತಾ ಮುಖ್ಯಮಂತ್ರಿ ಅವರಿಗೆ ಮನವಿ ಸಲ್ಲಿಸಿದ್ದೇನೆ ಎಂದು ಈಶ್ವರಪ್ಪ ಹೇಳಿದರು.

ಇದನ್ನೂ ಓದಿ:ಸಂತೋಷ್ ಪಾಟೀಲ್ ಕೇಸ್: ತನಿಖೆಗೆ ಉಡುಪಿ ಎಸ್ಪಿ ನೇತೃತ್ವದಲ್ಲಿ 7 ತಂಡಗಳ ರಚನೆ; ಎಡಿಜಿಪಿ

ಇದು ಆತ್ಮಹತ್ಯೆಯೋ, ಕೊಲೆಯೋ ಎಂದು ಗೊತ್ತಿಲ್ಲ. ಏನೂ ಗೊತ್ತಿಲ್ಲದೇ ಸರಕಾರ ಸಹ ಏನು ಮಾಡಲು ಸಾಧ್ಯವಿಲ್ಲ. ತನಿಖೆಯ ವರದಿ ಬಂದ ನಂತರ ಸಿಎಂ ಜೊತೆ ಮಾತನಾಡುತ್ತೇನೆ. ತನಿಖೆ ನಡೆಯುವ ಸಂದರ್ಭದಲ್ಲಿ ಇದರ ಹಿಂದೆ ಡಿಕೆಶಿ‌ ಇದ್ದಾರೋ, ಇಲ್ಲವೋ ಎಂಬ ಬಗ್ಗೆ ಈಗಲೇ ಹೇಳಲ್ಲ. ವರದಿಯ ಬಳಿಕ ಗೊತ್ತಾದರೆ ಆಗ ಹೇಳುತ್ತೇನೆ. ತನಿಖೆಯ ವರದಿ ತಿಳಿದುಕೊಳ್ಳದೇ ಏನು ಹೇಳಲು ಇಷ್ಟಪಡುವುದಿಲ್ಲ ಎಂದರು.

ವೀರಶೈವ ಸಮಾಜದವರ ಹೋರಾಟ ವಿಚಾರದ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ವೀರಶೈವ ಸಮಾಜದ ಯಾರೋ ನಾಲ್ಕು ಜನ ಫ್ಲೆಕ್ಸ್ ಹಾಕಿದ ಮಾತ್ರಕ್ಕೆ ನಾನು ಒಪ್ಪಲ್ಲ. ಸಮಾಜದವರು, ಕುಟುಂಬದವರು ಏನು ಮಾಡಬೇಕೋ ಮಾಡಲಿ. ಅದು ಅವರ ಕರ್ತವ್ಯ ಎಂದರು.

ಮೊಮ್ಮಗನ ಆರತಕ್ಷತೆ: ಕಾರ್ಯಕಾರಿಣಿ ಸಭೆಗೆ ಗೈರಾದ ಬಗ್ಗೆ ಕೇಳಲಾದ ಪ್ರಶ್ಮೆಗೆ ಉತ್ತರಿಸಿದ ಅವರು, ಇದೇ 20 ಹಾಗು 21 ರಂದು ನನ್ನ ಮೊಮ್ಮಗನ ಮದುವೆ ಸಮಾರಂಭ ಇರುವ ಕಾರಣ ಕಾರ್ಯಕಾರಿಣಿಗೆ ಹೋಗಲ್ಲ. ಈ ಬಗ್ಗೆ ರಾಜ್ಯಾಧ್ಯಕ್ಷರಿಗೆ, ಮುಖ್ಯಮಂತ್ರಿಯವರಿಗೆ ತಿಳಿಸಿದ್ದೇನೆ. ಇದೇ 19 ರಂದು ಬಳ್ಳಾರಿಯಲ್ಲಿ ಕಾರ್ಯಕ್ರಮ ಇದೆ. ಆ ಕಾರ್ಯಕ್ರಮದಲ್ಲಿ ಭಾಗವಹಿಸುತ್ತೇನೆ. ನಮ್ಮ ಮನೆ ದೇವರು ಸಹ ಬಳ್ಳಾರಿಯಲ್ಲಿ ಇದೆ. ಮನೆ ದೇವರು ಪೂಜೆ ಮಾಡಿಕೊಂಡು ಬರುವವನಿದ್ದೇನೆ. 20 ರಂದು ನನ್ನ ಮೊಮ್ಮಗನ ಆರತಕ್ಷತೆ ಇದೆ. ಆ ಸಮಾರಂಭದಲ್ಲಿ ಸಿಎಂ ಕೂಡಾ ಭಾಗವಹಿಸುತ್ತಾರೆ ಎಂದರು.

ಟಾಪ್ ನ್ಯೂಸ್

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

police

Davanagere; ಏಕಾಏಕಿ ಬಾರ್ ಗೆ ನುಗ್ಗಿ ಮದ್ಯ ಸೇವಿಸುತ್ತಿದ್ದ ವ್ಯಕ್ತಿಯ ಇರಿದು ಹ*ತ್ಯೆ

1-ammi

J&K Assembly polls; ಈಗ ಪಾಕಿಸ್ಥಾನವು ಮೋದಿಗೆ ಹೆದರುತ್ತಿದೆ: ಅಮಿತ್ ಶಾ ವಾಗ್ದಾಳಿ

Achraya-das

Tirupati laddoo: ʼಅಯೋಧ್ಯೆ ರಾಮಮಂದಿರ ಪ್ರಾಣಪ್ರತಿಷ್ಠೆಯಲ್ಲಿ ಲಡ್ಡು ಪ್ರಸಾದ ಹಂಚಿದ್ದೆವುʼ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Theetrhalli–Sunil

Theerthahalli: ಶೋಕಿ ಜೀವನಕ್ಕಾಗಿ ಗ್ರಾಹಕರ ಹಣ ವಂಚಿಸಿದ ಬ್ಯಾಂಕ್ ಉದ್ಯೋಗಿ ಆತ್ಮಹತ್ಯೆ! 

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

ಕುಡಿದು ಆ್ಯಂಬ್ಯುಲೆನ್ಸ್‌ ಚಲಾಯಿಸಿ ಟ್ಯಾಂಕರ್‌ ಗೆ ಡಿಕ್ಕಿ; ಸ್ವಲ್ಪದರಲ್ಲಿ ತಪ್ಪಿದ ಅನಾಹುತ

Harassment of Hindu sentiment is going on: Vijayendra

Shimoga; ಹಿಂದೂ ಭಾವನೆ ಮೇಲೆ ಧಕ್ಕೆ ತರುವ ಕೆಲಸ ನಡೆಯುತ್ತಿದೆ: ವಿಜಯೇಂದ್ರ ಆಕ್ರೋಶ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Thirthahalli: ಬಾಳೆಬೈಲು ಬೈಪಾಸ್ ಗೆ ಮತ್ತೆ ಬ್ಯಾರಿಕೇಡ್ ಅಳವಡಿಕೆ

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

Sagara: ಲೈಂಗಿಕ ದೌರ್ಜನ್ಯ ಎಸಗುವವರನ್ನು ಗಲ್ಲಿಗೇರಿಸಿ: ಬೇಳೂರು

MUST WATCH

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

udayavani youtube

ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು

udayavani youtube

ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!

ಹೊಸ ಸೇರ್ಪಡೆ

Puttige-sri

Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ತುಪ್ಪ ಬಳಸಿ ಅಪಚಾರ: ಪರ್ಯಾಯ ಪುತ್ತಿಗೆ ಶ್ರೀ

Mangalore-Taxi-meet

Mangaluru: ಪ್ಯಾನಿಕ್‌ ಬಟನ್‌, ಜಿಪಿಎಸ್‌ ರದ್ದುಪಡಿಸಿ; ಸಾರಿಗೆ ಸಚಿವ ರೆಡ್ಡಿಗೆ ಮನವಿ

R Ashok (2)

BJP; ವಿಪಕ್ಷ ನಾಯಕ ಆರ್‌. ಅಶೋಕ್‌ ನಡೆಗೆ ಕಾಂಗ್ರೆಸ್‌ ಖಂಡನೆ

Tiger-Hunasuru

Nagarhole Park Tiger Fight: ಹುಲಿಗಳ ಕಾದಾಟ ಗಂಡು ಹುಲಿಗೆ ಗಾಯ!

Vijayapura-Sainik

Vijayapura: ನೌಕಾಪಡೆ ಅನೇಕ ಕಾರ್ಯಾಚರಣೆಯಲ್ಲಿದ್ದ ಹೆಲಿಕಾಪ್ಟರ್ ಸೈನಿಕ ಶಾಲೆಯಲ್ಲಿ ಸ್ಥಾಪನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.