ಪರ್ಸೆಂಟೇಜ್ ರಾಜಕಾರಣ; ಕಾಂಗ್ರೆಸ್ ನವರು ಏನೂ ಮಾಡಿಯೇ ಇಲ್ವೇ ?: ಎಚ್.ಡಿ.ದೇವೇಗೌಡ
ಭ್ರಷ್ಟಾಚಾರ ಎಲ್ಲ ಕಡೆ ತುಂಬಿ ಹೋಗಿದೆ, ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ
Team Udayavani, Apr 16, 2022, 2:44 PM IST
ಶ್ರೀರಂಗಪಟ್ಟಣ : ಪರ್ಸೆಂಟೇಜ್ ರಾಜಕಾರಣದಲ್ಲಿ ಯಾರು ಸತ್ಯವಂತರು ? ಅವರ ಮೇಲೆ ಇವರು, ಇವರ ಮೇಲೆ ಅವರು ಮಾತನಾಡುತ್ತಾರೆ.ಕಾಂಗ್ರೆಸ್ ನವರು ಏನೂ ಮಾಡಿಯೇ ಇಲ್ಲವೇ ? ಯಾರು ಸಾಚ ಇದ್ದಾರೆ ಹೇಳಿ ? ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ವ್ಯಂಗ್ಯವಾಡಿದ್ದಾರೆ.
ಜನತಾ ಜಲಧಾರೆ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗಾರರ ಜತೆ ಮಾತನಾಡಿದ ಅವರು, ಕಾಂಗ್ರೆಸ್ ಸರ್ಕಾರ ಇದ್ದಾಗ 10 % ಸರ್ಕಾರ ಅಂತ ಪ್ರಧಾನಿಯೇ ಆರೋಪ ಮಾಡಿದ್ದರು. ಆಗಲೂ ನಾನು ಆರೋಪ ಮಾಡಲಿಲ್ಲ. ಈಗಲೂ ಅಷ್ಟೆ ನಾನು ಯಾವುದೇ ರೀತಿಯ ಪ್ರತಿಕ್ರಿಯೆ ಕೊಡುವುದಿಲ್ಲ ಎಂದರು.
ಭ್ರಷ್ಟಾಚಾರ ಎಲ್ಲ ಕಡೆ ತುಂಬಿ ಹೋಗಿದೆ. ರಾಜಕಾರಣ ಹೇಳಲಾಗದಷ್ಟು ಕೆಟ್ಟು ಹೋಗಿದೆ. ನೀರಿನ ವಿಚಾರ ಬಂದಾಗ ತಮಿಳುನಾಡಿನ ಎಲ್ಲ ಪಕ್ಷಗಳೂ ಒಂದಾಗುತ್ತವೆ ಆದರೆ ನಮ್ಮ ರಾಜ್ಯದಲ್ಲಿ ಯಾರೂ ಒಂದಾಗಲ್ಲ , ಮಹದಾಯಿ ವಿಚಾರದಲ್ಲೂ ಸಾಕಷ್ಟು ನೋವಿದೆ ಇದರ ಬೆನ್ನಲ್ಲೇ ಜಲ ಸಂಪನ್ಮೂಲ ಸಚಿವರು ನನಗೆ ಮೂರು ಬಾರಿ ಅಪಾಯಿಂಟ್ಮೆಂಟ್ ಕೊಟ್ಟರು. ಮನೆಗೆ ಹೋದಾಗ ಚಕ್ಕರ್ ಹಾಕಿದ್ದರು ಎಂದು ವ್ಯಂಗ್ಯವಾಡಿದರು.
ಬಿಜೆಪಿ ಜತೆ ಚುನಾವಣಾ ಪೂರ್ವ ಮೈತ್ರಿ ವಿಚಾರ, ಕೆಲವರು ಉತ್ಪ್ರೇಕ್ಷೆಯಿಂದ ಮಾತನಾಡುತ್ತಾರೆ. ಜೆಡಿಎಸ್ ಕಾರ್ಯಕ್ರಮಗಳನ್ನು ನೋಡಿ ಒಂದಲ್ಲಾ ಒಂದು ಬಣ್ಣ ಕಟ್ಟುತ್ತಾರೆ ನಮ್ಮ ಜೊತೆ ಬಿಜೆಪಿಯ ಯಾರಾದರೂ ಇಲ್ಲಿಗೆ ಬಂದಿದ್ದಾರಾ ? ಸುಮ್ಮನೆ ಯಾರೋ ಏನೋ ಹೇಳುತ್ತಾರೆ ಹೇಳಲಿ ಬಿಡಿ ಎಂದರು.
ಗುತ್ತಿಗೆದಾರರ ಸಂಘದಿಂದ ಪರ್ಸೆಂಟೇಜ್ ಆರೋಪ ವಿಚಾರ ನನಗೆ ಸಂಬಂಧವಿಲ್ಲ ನನ್ನ ಮಗ ಪಿಡಬ್ಲ್ಯೂಡಿ ಮಿನಿಸ್ಟರ್ ಆಗಿದ್ದಾನಾ ? ನೀರಾವರಿ ಸಚಿವ ಆಗಿದ್ದಾನಾ ? ಎಂದು ಪ್ರಶ್ನಿಸಿದರು. ನನ್ನ ಮಗ ಸಚಿವ ಆಗಿದ್ದರೆ ಮಾತನಾಡುತ್ತಿದ್ದೆ. ಆರೋಪ ಮಾಡಿಕೊಳ್ಳಲಿ ಬಿಡಿ ನಮಗೇನು ? ಎಂದರು.
ಕೃಷ್ಣರಾಜ ಸಾಗರ ಜಲಾಶಯದ ಬಳಿ ಜನತಾ ಜಲಧಾರೆಗೆ ಚಾಲನೆಗೂ ಮುನ್ನ ಮಾಜಿ ಪ್ರಧಾನಿ ಡ್ಯಾಂ ಮುಂಭಾಗ ಇರುವ ಕಾವೇರಿ ಮಾತೆಗೆ ಪೂಜೆ ಸಲ್ಲಿಸಿದರು. ಬಳಿಕ ಜಲಧಾರೆ ರಥಕ್ಕೆ ಚಾಲನೆ ನೀಡಿದರು.
ಪೂರ್ಣಕುಂಭ, ಕಲಾತಂಡದೊಂದಿಗೆ ದೇವೇಗೌಡರಿಗೆ ಸ್ವಾಗತ ನೀಡಲಾಯಿತು. ವೇದಬ್ರಹ್ಮ ಭಾನುಪ್ರಕಾಶ್ ಶರ್ಮಾ ನೇತೃತ್ವದಲ್ಲಿ ಜಲಧಾರೆ ಕಾರ್ಯಕ್ರಮದ ಪೂಜಾ ವಿಧಿಗಳನ್ನು ನಡೆಸಲಾಯಿತು. ಜೆಡಿಎಸ್ ಶಾಸಕರಾದ ಸಿಎಸ್ ಪುಟ್ಟರಾಜು, ರವೀಂದ್ರ ಶ್ರೀಕಂಠಯ್ಯ, ಸುರೇಶ್ ಗೌಡ, ತಮ್ಮಣ್ಣ, ಅನ್ನದಾನಿ, ಕೆ.ಟಿ.ಶ್ರೀಕಂಠೇಗೌಡ ಭಾಗವಹಿಸಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Legislative Council: ಅಭ್ಯರ್ಥಿ ಆಯ್ಕೆ ಬಗ್ಗೆ ರಾಜ್ಯ ನಾಯಕರಿಂದ ಅಭಿಪ್ರಾಯ ಸಂಗ್ರಹ: ಕುಂಪಲ
Police Duty Meeting: ವೃತ್ತಿಪರತೆಗೆ ಕರ್ತವ್ಯಕೂಟ ಸಹಕಾರಿ
ABVP Meeting: ದೇಶದ ಕೆಲವು ವಿಶ್ವವಿದ್ಯಾಲಯಗಳಲ್ಲಿ ಸಂಸ್ಕೃತಿ ಹಾನಿಗೆ ಷಡ್ಯಂತ್ರ
Felicitation ceremony: ಡಾ| ನಾ. ಮೊಗಸಾಲೆ ಪ್ರತಿಭೆ, ಪರಿಶ್ರಮ ಅನನ್ಯ: ಡಾ| ಹೆಗ್ಗಡೆ
Thirupathi: ಲಡ್ಡು ಪ್ರಸಾದಕ್ಕೆ ಕಲಬೆರಕೆ ಪದಾರ್ಥಗಳ ಬಳಕೆ: ಸುಬ್ರಹ್ಮಣ್ಯ ಸ್ವಾಮೀಜಿ ಕಳವಳ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.