ಬಾಗೇಪಲ್ಲಿ ನಡೆಯಬೇಕಿದ್ದ ಜಲಧಾರೆ ಕಾರ್ಯಕ್ರಮ ಮುಂದೂಡಿಕೆ
Team Udayavani, Apr 16, 2022, 6:24 PM IST
ಗುಡಿಬಂಡೆ : ಜೆ.ಡಿ.ಎಸ್ ಪಕ್ಷದ ವತಿಯಿಂದ ಏ.17 ರಂದು ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ ನಡೆಯಬೇಕಾಗಿದ್ದ ಜಲಧಾರೆ ಕಾರ್ಯಕ್ರಮ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ನಿಧನದಿಂದ ಮುಂದೂಡಲಾಗಿದೆ ಎಂದು ಜೆ.ಡಿ.ಎಸ್ ಮುಖಂಡ ಡಿ.ಜೆ.ನಾಗರಾಜರೆಡ್ಡಿ ಪತ್ರಿಗೋಷ್ಟಿಯಲ್ಲಿ ತಿಳಿಸಿದರು.
ರಾಜ್ಯದಲ್ಲಿ ಏಪ್ರಿಲ್ 16ರಿಂದ ಜೆ.ಡಿ.ಎಸ್. ಪಕ್ಷದ ವತಿಯಿಂದ ಜಲಧಾರೆ ರಥ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದು, ಅದರಂತೆ ಏ. 17 ರಂದು ಸಹ ಬಾಗೇಪಲ್ಲಿ ವಿಧಾನ ಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಕಾರ್ಯಕ್ರಮ ನಡೆಯಬೇಕಾಗಿತ್ತು, ಆದರೆ ಮಾಜಿ ಶಾಸಕ ಜಿ.ವಿ.ಶ್ರೀರಾಮರೆಡ್ಡಿ ರವರ ಅಕಾಲಿಕ ಮರಣದಿಂದಾಗಿ ಹಾಗೂ ಅವರ ಮರಣದಿಂದ ಅವರ ಆತ್ಮೀಯರಾದ ಮಾಜಿ ಪ್ರಧಾನಿ ಹೆಚ್.ಡಿ.ದೇವಗೌಡ ಮತ್ತು ಹೆಚ್.ಡಿ.ಕುಮಾರಸ್ವಾಮಿ ರವರುಗಳಿಗೂ ಸಹ ತುಂಬಾ ಮನಸ್ಸಿಗೆ ದುಃಖ ತಂದ ಸಂಗತಿಯಾಗಿದ್ದರಿಂದ, ಅವರ ಮರಣ ಹೊಂದಿದ ಕೆಲ ದಿನಗಳಲ್ಲೇ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದು ಸರಿಯಲ್ಲ ಎಂದು ತಿಳಿಸಿ, ಬಾಗೇಪಲ್ಲಿ ಕ್ಷೇತ್ರದಲ್ಲಿ ಕಾರ್ಯಕ್ರಮ ಮುಂದೂಡಲಾಗಿದೆ ಎಂದರು.
ಈ ಸಂದರ್ಭದಲ್ಲಿ ಜೆ.ಡಿ.ಎಸ್. ಮುಖಂಡರಾದ ಜಿ.ಎಲ್.ಮುರಳಿಕೃಷ್ಣ, ಜಗನ್ನಾಥ್, ಬಷೀರ್, ಲಕ್ಷ್ಮೀನಾರಾಯಣಪ್ಪ ಸೇರಿದಂತೆ ಮುಂತಾದವರು ಹಾಜರಿದ್ದರು.
ಇದನ್ನೂ ಓದಿ : ಸಾವಯವ ಕೃಷಿಯಿಂದ ಲಾಭ-ನೆಮ್ಮದಿ; ಮಹಿಮಾ ಪಟೇಲ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Mudhol: ವಾರದ ಸಂತೆಗೆ ಮಳೆರಾಯನ ಕಾಟ… ಜನಜೀವನ ಅಸ್ತವ್ಯಸ್ತ
Kanakapura: ಪ್ರವಾಸ ಸಂದರ್ಭ ವಿದ್ಯಾರ್ಥಿನಿಯರಿಗೆ ಉಪನ್ಯಾಸಕರಿಂದ ಮದ್ಯಪಾನ: ದೂರು
Koppal: ಚಿಕನ್, ಮಟನ್ ಸೆಂಟರ್ಗೆ ಸಚಿವೆ ಶೋಭಾ ಕರಂದ್ಲಾಜೆ ಹೆಸರಿಟ್ಟ ಅಭಿಮಾನಿ
Malleshwaram: ಪ್ರಕರಣದಲ್ಲಿ ಭಾಗಿಯಾಗಿದ್ದ ಕೈದಿಯಿಂದ ಹನಿಟ್ರ್ಯಾಪ್?
MUST WATCH
ಹೊಸ ಸೇರ್ಪಡೆ
Bhavani Revanna: ಅಪಹರಣ ಕೇಸ್-ಭವಾನಿ ರೇವಣ್ಣ ಜಾಮೀನು ರದ್ದತಿಗೆ ಸುಪ್ರೀಂ ನಕಾರ
Puttur: ವಿವೇಕಾನಂದ ವಿದ್ಯಾವರ್ಧಕ ಸಂಘದ ಕಾರ್ಯನಿರ್ವಹಣಾಧಿಕಾರಿ ಅಪಘಾತದಲ್ಲಿ ಮೃತ್ಯು
Simha Roopini: ಭಕ್ತಿ ಭಾವದ ʼಸಿಂಹ ರೂಪಿಣಿʼ: ಕಿನ್ನಾಳ್ ರಾಜ್ ನಿರ್ದೇಶನ
Bengaluru: ಪತಿ, ಪ್ರಿಯಕರನ ಕೊಂದು ಪತಿ ಆತ್ಮಹತ್ಯೆ!
INDvsNZ: ಪಂತ್ ಬದಲು ಧ್ರುವ್ ಜುರೆಲ್ ವಿಕೆಟ್ ಕೀಪಿಂಗ್; ರಿಷಭ್ ಪಂತ್ ಗೆ ಏನಾಗಿದೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.