ಸರಕಾರದ ಸಾಧನೆ ಜನರಿಗೆ ತಿಳಿಸಿ ಬಿಜೆಪಿ ಗೆಲ್ಲಿಸಿ: ಬೊಮ್ಮಾಯಿ

ಹಿಂದಿನ ಕಾಂಗ್ರೆಸ್‌ ಸರಕಾರಗಳು ಮಾಡಿದ ಸಾಲವನ್ನೂ ಹಂತ ಹಂತವಾಗಿ ತೀರಿಸುತ್ತಿದೆ

Team Udayavani, Apr 16, 2022, 6:28 PM IST

ಸರಕಾರದ ಸಾಧನೆ ಜನರಿಗೆ ತಿಳಿಸಿ ಬಿಜೆಪಿ ಗೆಲ್ಲಿಸಿ: ಬೊಮ್ಮಾಯಿ

ಗದಗ: ಬಡವರ ಶ್ರೇಯೋಭಿವೃದ್ಧಿಯೊಂದಿಗೆ ವಿರೋಧ ಪಕ್ಷಗಳ ಷಡ್ಯಂತ್ರ, ಹುನ್ನಾರಗಳನ್ನೂ ಮೆಟ್ಟಿ ನಿಲ್ಲಬೇಕು. ಆ ಮೂಲಕ 2023ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯನ್ನು ಮತ್ತೂಮ್ಮೆ ಅಧಿಕಾರಕ್ಕೆ ತರಬೇಕೆಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಪಕ್ಷದ ಕಾರ್ಯಕರ್ತರಿಗೆ ಕರೆ ನೀಡಿದರು.

ಬಿಜೆಪಿ ಜಿಲ್ಲಾ ಘಟಕ ನಗರದ ಸ್ವಾಮಿ ವಿವೇಕಾನಂದ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಅಭಿನಂದನಾ ಸಮಾರಂಭದಲ್ಲಿ ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು, ರಾಜ್ಯದ ಸಮಗ್ರ ಅಭಿವೃದ್ಧಿಯೇ ನಮ್ಮ ಧ್ಯೇಯವಾಗಿದೆ ಎಂದರು.

ಹಿಂದಿನ 5 ವರ್ಷಗಳ ಆಡಳಿತದಲ್ಲಿ ಕಾಂಗ್ರೆಸ್‌ ಪರಿಶಿಷ್ಟ ವಿದ್ಯಾರ್ಥಿಗಳ ವಸತಿ ನಿಲಯಗಳ ಹಾಸಿಗೆ, ತಲೆದಿಂಬಿನಿಂದ ಹಿಡಿದು ಬೆಂಗಳೂರಿನ ಬಿಡಿಎ ನಿವೇಶನಗಳ ವರೆಗೆ ವ್ಯಾಪಕ ಲೂಟಿಯಾಗಿದೆ. ಎಲ್ಲ ರಂಗದಲ್ಲಿ ಭ್ರಷ್ಟಾಚಾರ ಹಬ್ಬಿಸಿರುವ ಖ್ಯಾತಿ ಕಾಂಗ್ರೆಸ್‌ಗೆ ಸಲ್ಲುತ್ತದೆ ಎಂದರು.

ಸುಳ್ಳು ಹೇಳುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು. ಸದ್ಯ ರಾಜ್ಯ ಸರಕಾರದಲ್ಲಿ ಆರ್ಥಿಕ ಕೊರತೆಯಿದೆ ಎಂದು ಅಪಪ್ರಚಾರ ನಡೆಸುತ್ತಿದ್ದಾರೆ. ಆರ್ಥಿಕ ಸ್ಥಿತಿ ಸರಿಯಿಲ್ಲದಿದ್ದರೆ, ಬೃಹತ್‌ ಗಾತ್ರದ ಆಯವ್ಯಯ ಮಂಡನೆ, ಗದಗನಂಥ ಜಿಲ್ಲೆಗೆ ಸಾವಿರಾರು ಕೋಟಿ ಅನುದಾನ ನೀಡಲು ಹೇಗೆ ಸಾಧ್ಯವಾಯಿತು ಎಂದು ಪ್ರಶ್ನಿಸಿದರು.ಆರ್ಥಿಕ ಸ್ಥಿತಿ ಸುಧಾರಿಸಿದೆ. ಅದರ ಫಲವಾಗಿ ನಾವು ನಿರೀಕ್ಷೆ ಮಾಡಿದ್ದಕ್ಕಿಂತ 15 ಸಾವಿರ ಕೋಟಿ ರೂ. ಹೆಚ್ಚುವರಿಯಾಗಿ ತೆರಿಗೆ ಸಂಗ್ರಹವಾಗಿದೆ.

ಕೇಂದ್ರದಿಂದಲೂ ಹೆಚ್ಚಿನ ಅನುದಾನ ಹರಿದು ಬಂದಿದೆ. ಇದೆಲ್ಲದರ ಪರಿಣಾಮ ಮೊನ್ನೆ ನಡೆದ ಬಜೆಟ್‌ ಅ ಧಿವೇಶನದಲ್ಲಿ 25 ಸಾವಿರ ಕೋಟಿ ರೂ. ವೆಚ್ಚ ಮಾಡಲು ಅನುಮೋದನೆ ಪಡೆದುಕೊಳ್ಳಲಾಗಿದೆ ಎಂದರು.

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ, ರೋಣ ಶಾಸಕ ಕಳಕಪ್ಪ ಬಂಡಿ ಮಾತನಾಡಿ, ಜಿಲ್ಲೆಯ ಬಹುವರ್ಷಗಳ ಬೇಡಿಕೆಗೆ ಮುಖ್ಯಮಂತ್ರಿಗಳು ಸ್ಪಂದಿಸಿದ್ದಾರೆ. 1,305 ಕೋಟಿ ರೂ. ಅನುದಾನ ಬಿಡುಗಡೆ ಮಾಡಿರುವುದು ಅಭಿನಂದನೀಯ. ಕಳೆದ ವಿಧಾನಸಭಾ ಚುನಾವಣೆಯಲ್ಲಿ ನಮ್ಮಿಂದಾದ ಸಣ್ಣ ತಪ್ಪಿನಿಂದಾಗಿ ಗದಗ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಗೆಲುವು ಸಾಧಿ ಸಿದೆ. ಆದರೆ, ಇತ್ತೀಚೆಗೆ ನಡೆದ ನಗರಸಭೆ ಚುನಾವಣೆಯಲ್ಲಿ ಜನ ಬಿಜೆಪಿಗೆ ಅ ಧಿಕಾರ ನೀಡಿದ್ದಾರೆ. ನಗರಸಭೆ ಅಧ್ಯಕ್ಷರು ಹಾಗೂ ಸದಸ್ಯರು ಜನರ ಆಶೋತ್ತರಗಳನ್ನು ಈಡೇರಿಸಿ, ಮುಂಬರುವ ಚುನಾವಣೆಯಲ್ಲಿ ಗದಗಿನಲ್ಲಿ ಬಿಜೆಪಿ ಜಯಭೇರಿ
ಬಾರಿಸಬೇಕು. ಬೊಮ್ಮಾಯಿ ಅವರ ಕೈ ಬಲಪಡಿಸಬೇಕೆಂದರು.

ಸಂಸದ ಶಿವಕುಮಾರ ಉದಾಸಿ ಮಾತನಾಡಿ, ಕೇಂದ್ರ ಮತ್ತು ರಾಜ್ಯ ಸರಕಾರಗಳು ಕೈಗೊಂಡ ತೆರಿಗೆ ಸುಧಾರಣೆ ನೀತಿಗಳಿಂದಾಗಿ ಸರಕಾರದ ಮೇಲಿನ ಸಾಲದ ಹೊರೆ ಕಡಿಮೆಯಾಗುತ್ತಿದೆ. ಹಿಂದಿನ ಕಾಂಗ್ರೆಸ್‌ ಸರಕಾರಗಳು ಮಾಡಿದ ಸಾಲವನ್ನೂ ಹಂತ ಹಂತವಾಗಿ ತೀರಿಸುತ್ತಿದೆ ಎಂದು ವಿವರಿಸಿದರು.

ವೇದಿಕೆ ಮೇಲೆ ಜಿಲ್ಲಾ ಉಸ್ತುವಾರಿ ಸಚಿವ ಬಿ.ಸಿ.ಪಾಟೀಲ, ಶಾಸಕ ರಾಮಣ್ಣ ಲಮಾಣಿ, ವಿಧಾನ ಪರಿಷತ್‌ ಸದಸ್ಯ ಎಸ್‌.ವಿ.ಸಂಕನೂರ, ರಾಜ್ಯ ದ್ರಾಕ್ಷಾರಸ ಅಭಿವೃದ್ಧಿ ನಿಗಮದ ಅಧ್ಯಕ್ಷ ಕಾಂತಿಲಾಲ ಬನ್ಸಾಲಿ, ನಗರಸಭೆ ಅಧ್ಯಕ್ಷೆ ಉಷಾದಾಸರ, ಉಪಾಧ್ಯಕ್ಷೆ ಸುನಂದಾ ಬಾಕಳೆ, ಬಿಜೆಪಿ ಜಿಲ್ಲಾಧ್ಯಕ್ಷ ಮೋಹನ ಮಾಳಶೆಟ್ಟಿ ಹಾಗೂ ಪ್ರಮುಖರು ಉಪಸ್ಥಿತರಿದ್ದರು.

ನಾನು ಸಚಿವನಾಗಿದ್ದಾಗ ಸಿಂಗಟಾಲೂರು ಏತ ನೀರಾವರಿ ಯೋಜನೆಗೆ ಚಾಲನೆ ನೀಡಲಾಗಿತ್ತು. ಆದರ ಭಾಗವಾಗಿದ್ದ ಜಾಲವಾಡಿ ಯೋಜನೆ ಜಾರಿಗೂ ನಾವೇ ಅಧಿಕಾರಕ್ಕೆ ಬರಬೇಕಾಯಿತು. ಜಿಲ್ಲೆಯವರೇ ಹಿಂದೆ ನೀರಾವರಿ ಸಚಿವರಾಗಿದ್ದರು ಯೋಜನೆಗೆ ಯಾಕೆ ಗಮನ ಹರಿಸಿಲ್ಲ.

∙ಬಸವರಾಜ ಬೊಮ್ಮಾಯಿ, ಮುಖ್ಯಮಂತ್ರಿ

ಯೋಜನೆ ಪೂರ್ಣಗೊಳ್ಳುವ ಮುನ್ನವೇ ಗದಗ-ಬೆಟಗೇರಿ ಅವಳಿ ನಗರದಲ್ಲಿ 24×7 ಕುಡಿಯುವ ನೀರಿನ ಯೋಜನೆಗೆ ಅಂದಿನ ಸಿಎಂ ಸಿದ್ದರಾಮಯ್ಯ ಅವರಿಂದ ಉದ್ಘಾಟಿಸಲಾಗಿದೆ. ಇದೊಂದು ವಿಫಲ ಯೋಜನೆಯಾಗಿದ್ದು, ನಗರದಲ್ಲಿ 24×7 ಅಂದರೆ, 7 ತಿಂಗಳಲ್ಲಿ 24 ದಿನ ನೀರು ಬರುವ ಯೋಜನೆ ಎನ್ನುವಂತಾಗಿದೆ. ಅದನ್ನು ಸರಿಪಡಿಸಲು ಮುಖ್ಯಮಂತ್ರಿಗಳು ಅಗತ್ಯ ನೆರವು ನೀಡಬೇಕು.
∙ಅನಿಲ್‌ ಮೆಣಸಿನಕಾಯಿ, ಬಿಜೆಪಿ ಯುವ ಮುಖಂಡ

ಟಾಪ್ ನ್ಯೂಸ್

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Delhi-Stamp

Mahakumbh Rush: ಗೊಂದಲಕಾರಿ ಪ್ರಕಟಣೆಯಿಂದ ರೈಲು ನಿಲ್ದಾಣದಲ್ಲಿ ಕಾಲ್ತುಳಿತ: ಪೊಲೀಸರು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sidda

Mahakumbh; ಸಿದ್ದರಾಮಯ್ಯನವರೇ 5 ವರ್ಷ ಸಿಎಂ ಆಗಿರಲಿ: ಅಭಿಮಾನಿಯ ಪ್ರಾರ್ಥನೆ

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

ಗದಗ-ಬೆಟಗೇರಿ ನಗರಸಭೆ ಮಾಜಿ ಅದ್ಯಕ್ಷೆ ಸೇರಿ ಇಬ್ಬರು ಸದಸ್ಯರ ಸದಸ್ಯತ್ವ ರದ್ದು

gadag-police

Gadag: ಕೌಟುಂಬಿಕ ಕಲಹದಿಂದ ನೊಂದು ಪೊಲೀಸ್ ಪೇದೆ ಆತ್ಮಹ*ತ್ಯೆ!

Gove-Patil

Approve:ಮೈಕ್ರೋ ಫೈನಾನ್ಸ್‌ ಕಿರುಕುಳ ವಿರುದ್ಧದ ಸುಗ್ರೀವಾಜ್ಞೆಗೆ ಕೊನೆಗೂ ರಾಜ್ಯಪಾಲರ ಅಂಕಿತ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

Gadag: ಅಕ್ರಮ ಬಡ್ಡಿ ವ್ಯವಹಾರದ ವಿರುದ್ಧ ಕಾರ್ಯಾಚರಣೆ… ಅಪಾರ ಪ್ರಮಾಣದ ನಗ ನಗದು ವಶ

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Gun-Fire

Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್‌: 3 ವರ್ಷದ ಮಗು ಮೃತ್ಯು!

accident

Kaup: ಸ್ಕೂಟಿ, ಕಾರಿಗೆ ಬಸ್‌ ಢಿಕ್ಕಿ; ಸವಾರನಿಗೆ ಗಾಯ

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್‌ ಸಿಬ್ಬಂದಿ!

1

Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್‌ ಹಲ್ಲೆ; ದೂರು

BR-Hills

Restriction: ನಿಷೇಧವಿದ್ದರೂ ಗೂಡ್ಸ್‌ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.