ಅಂಜನಾದ್ರಿಗೆ ಡಾ|ರಾಜ್ ಮೊಮ್ಮಗ ಯುವರಾಜ್ ಕುಮಾರ್ ಭೇಟಿ
ಪುನೀತ್ ನೆನದು ಭಾವುಕರಾದ ಕುಟುಂಬ ಸದಸ್ಯರು
Team Udayavani, Apr 17, 2022, 12:42 PM IST
ಗಂಗಾವತಿ: ಕಿಷ್ಕಿಂದಾ ಅಂಜನಾದ್ರಿಗೆ ಡಾ|ರಾಘವೇಂದ್ರ ರಾಜ್ ಕುಮಾರ್ ಅವರ ಪುತ್ರ ಯುವರಾಜ್ ಕುಮಾರ್ ಪತ್ನಿ ಮತ್ತು ಕುಟುಂಬ ಸದಸ್ಯರು ಸಮೇತ ರವಿವಾರ ಭೇಟಿ ನೀಡಿ ಶ್ರೀಆಂಜನೇಯಸ್ವಾಮಿ ದರ್ಶನ ಪಡೆದರು. ದೇವಾಲಯ ಸಮಿತಿಯಿಂದ ಯುವರಾಜ್ ಕುಮಾರ್ ಹಾಗೂ ಪತ್ನಿಯನ್ನು ಸನ್ಮಾನಿಸಲಾಯಿತು.
ಈ ಸಂದರ್ಭದಲ್ಲಿ ಯುವರಾಜ್ ಕುಮಾರ್ ತಮ್ಮ ಚಿಕ್ಕಪ್ಪ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರನ್ನು ನೆನದು ಭಾವುಕರಾದರು. ಈ ಭಾಗದಲ್ಲಿ ಪುನೀತ್ ರಾಜ್ ಕುಮಾರ್ ಅವರು ಜನರ ಪ್ರೀತಿ ಗಳಿಸಿದ್ದಾರೆ. ಇಲ್ಲಿ ರಣವಿಕ್ರಮ, ಜೇಮ್ಸ್ ಸೇರಿ ಅನೇಕ ಚಿತ್ರಗಳು ಹಂಪಿ, ಅಂಜನಾದ್ರಿ, ಜಿಂದಾಲ್, ರಾಯಚೂರು, ಬಾಗಲಕೋಟೆ ಭಾಗದಲ್ಲಿ ಚಿತ್ರೀಕರಣವಾಗಿದ್ದು ಈ ಸಂದರ್ಭದಲ್ಲಿ ಅನೇಕ ಸಾಮಾಜಿಕ ಕಾರ್ಯ ಮಾಡಿದ್ದಾರೆ. ಅಂಜನಾದ್ರಿ ಎಂದರೆ ಪುನೀತ್ ಅವರಿಗೆ ಇಷ್ಟವಾದ ಪ್ರದೇಶ. ಕುಟುಂಬದ ಯಾವುದೇ ಕಾರ್ಯಕ್ರಮವಾದರೂ ಅಂಜನಾದ್ರಿ ಬಗ್ಗೆ ಅವರು ಮಾತನಾಡುತ್ತಿದ್ದರು. ಆದ್ದರಿಂದ ಅಪ್ಪ ಅಂಜನಾದ್ರಿಗೆ ಹೋಗಿ ಬರುವಂತೆ ಹೇಳಿದ್ದರಿಂದ ತಾವು ಬಂದಿದ್ದು ಈ ಕ್ಷೇತ್ರ ಶಕ್ತಿಯುತವಾಗಿದೆ. ಪ್ರಕೃತಿ ಸೌಂದರ್ಯದಿಂದ ಕೂಡಿದೆ. ಅಭಿವೃದ್ಧಿಯ ಹೆಸರಿನಲ್ಲಿ ಪ್ರಕೃತಿ ಸೌಂದರ್ಯ ಹಾಳು ಮಾಡದೇ ಉಳಿಸಿಕೊಂಡು ಮೂಲಸೌಕರ್ಯ ಕಲ್ಪಿಸಬೇಕೆಂದು ಮನವಿ ಮಾಡಿದರು.
ಈ ಸಂದರ್ಭದಲ್ಲಿ ಅರ್ಚಕ ಮಹಾಂತ ವಿದ್ಯಾದಾಸ ಬಾಬಾ, ಸಿಪಿಐ ಉದಯರವಿ ಸೇರಿ ಅನೇಕರಿದ್ದರು.
ಇದನ್ನೂ ಓದಿ:ಅಯೋಧ್ಯೆಯಂತೆ ಅಂಜನಾದ್ರಿ ಅಭಿವೃದ್ಧಿಗೆ ಸರಕಾರ ಬದ್ಧವಾಗಿದೆ: ಸಂಸದ ಪ್ರತಾಪ್ ಸಿಂಹ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಬಿಗ್ ಬಾಸ್ ಕಾರ್ಯಕ್ರಮದ ನಿರೂಪಕ ಬದಲು: ಸುದೀಪ್ ಜಾಗಕ್ಕೆ ಇವರು ಎಂಟ್ರಿ…
Madikeri: ಕರ್ತವ್ಯನಿರತ ಪೊಲೀಸ್ ಸಿಬ್ಬಂದಿಯನ್ನು ಗಾಯಗೊಳಿಸಿದ ಬಂಟ್ವಾಳ ಮೂಲದ ಚಾಲಕನ ಬಂಧನ
Revenge Strikes: ಇರಾನ್ ಸೇನಾ ನೆಲಗಳ ಮೇಲೆ ಇಸ್ರೇಲ್ ಕ್ಷಿಪಣಿ ದಾಳಿ…
Hosapete: ಬಾಲಕನನ್ನು ಅಪಹರಿಸಿ, ಎಚ್.ಎಲ್.ಸಿ. ಕಾಲುವೆಗೆ ಎಸೆದು ಕೊಲೆ: ಆರೋಪಿ ಬಂಧನ
Horoscope: ಗಣೇಶ, ದುರ್ಗೆಯರ ಆರಾಧನೆಯಿಂದ ವಿಘ್ನ ನಿವಾರಣೆ,ಶುಭಕಾರ್ಯ ನಡೆಸುವ ಬಗ್ಗೆ ಚಿಂತನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.