ಇಂದಿನಿಂದ ಸಿಇಟಿ ಅರ್ಜಿ ಸಲ್ಲಿಕೆ ಆರಂಭ, ಮೇ 5 ಕೊನೇ ದಿನ
Team Udayavani, Apr 18, 2022, 7:25 AM IST
ಬೆಂಗಳೂರು: ಎಂಜಿನಿಯರಿಂಗ್ ಸೇರಿದಂತೆ ವಿವಿಧ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕಾಗಿ ನಡೆಸುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಅರ್ಜಿ ಸಲ್ಲಿಕೆ ಪ್ರಕ್ರಿಯೆ ಎ. 18ರಿಂದ ಆರಂಭವಾಗಲಿದೆ.
ಸೋಮವಾರ ಬೆಳಗ್ಗೆ 11 ಗಂಟೆಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಲಿದೆ. ಮೇ 5ರ ವರೆಗೆ ಅರ್ಜಿ ಸಲ್ಲಿಸಬಹುದಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ.
ವಿದ್ಯಾರ್ಥಿಗಳಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯನ್ನು ಬಹಳ ಸುಲಭಗೊಳಿಸಲಾಗಿದೆ. ಎಸೆಸೆಲ್ಸಿ ನೋಂದಣಿ ಸಂಖ್ಯೆಯನ್ನು ಅಪ್ಲೋಡ್ ಮಾಡಿದರೆ, ವಿದ್ಯಾರ್ಥಿ ಹೆಸರು, ತಂದೆ-ತಾಯಿ ಹೆಸರು ಯಾಂತ್ರಿಕವಾಗಿ ಅಪ್ಲೋಡ್ ಆಗಲಿದೆ. ಉಳಿದಂತೆ ವಿದ್ಯಾರ್ಥಿಯು 1ರಿಂದ 12ನೇ ತರಗತಿ ವರೆಗೆ ಎಲ್ಲೆಲ್ಲಿ? ವಿದ್ಯಾಭ್ಯಾಸ ಮಾಡಿದ್ದಾರೆ ಎಂಬ ಮಾಹಿತಿ ಹಾಗೂ ಮೀಸಲಾತಿ ಸಂಬಂಧಿಸಿದ ಮಾಹಿತಿಯನ್ನು ಅಪ್ಲೋಡ್ ಮಾಡಿದರೆ ಸಾಕು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕಿ ಎಸ್. ರಮ್ಯಾ ತಿಳಿಸಿದ್ದಾರೆ.
ಮೂಲ ದಾಖಲೆ ಅಗತ್ಯವಿಲ್ಲ
ಇದೇ 22ರಿಂದ ದ್ವಿತೀಯ ಪಿಯುಸಿ ಪರೀಕ್ಷೆ ಆರಂಭವಾಗುತ್ತಿರುವುದರಿಂದ ವಿದ್ಯಾರ್ಥಿಗಳಿಗೆ ಒತ್ತಡವಾಗದಿರಲಿ ಎಂಬ ಕಾರಣದಿಂದ ಮೀಸಲಾತಿಗೆ ಸಂಬಂಧಿಸಿದ ಮೂಲ ದಾಖಲೆಗಳನ್ನು ಸಲ್ಲಿಸುವ ನಿಯಮವನ್ನು ಸಡಿಲಗೊಳಿಸಲಾಗಿದೆ. ಅರ್ಜಿ ಸಲ್ಲಿಸುವ ವೇಳೆ ಮೀಸಲಾತಿಗೆ ಸಂಬಂಧಿಸಿದ ಜಾತಿ, ಗ್ರಾಮೀಣ ವಿದ್ಯಾರ್ಥಿ, ಕನ್ನಡ ಮಾಧ್ಯಮ, ಕಲ್ಯಾಣ ಕರ್ನಾಟಕ ಸೇರಿದಂತೆ ವಿವಿಧ ಮಾಹಿತಿಗಳನ್ನು (ಹೌದು ಅಥವಾ ಇಲ್ಲ) ಅಪ್ಲೋಡ್ ಮಾಡಿದರೆ ಸಾಕು. ಮೂಲ ದಾಖಲೆಗಳನ್ನು ದಾಖಲಾತಿ ಪರಿಶೀಲನೆ ವೇಳೆ ಸಲ್ಲಿಸಬಹುದು ಎಂದು ತಿಳಿಸಿದ್ದಾರೆ.
ಪ್ರಕ್ರಿಯೆ ಸುಲಭ
ಅರ್ಜಿಯನ್ನು ಹೇಗೆ ಸಲ್ಲಿಸಬೇಕು ಎಂಬ ಮಾಹಿತಿ ನೀಡುವುದಕ್ಕಾಗಿ ವೀಡಿಯೋ ಮಾರ್ಗದರ್ಶನ ಮಾಡಲಾಗುತ್ತಿದೆ. ಕೆಇಎ ವೆಬ್ಸೈಟ್ನಲ್ಲಿ ಸೋಮವಾರ ಬೆಳಗ್ಗೆ ವೀಡಿಯೋ ಅಪ್ಲೋಡ್ ಮಾಡಲಾಗುತ್ತದೆ. ವೀಡಿಯೋ ನೋಡಿ ವಿದ್ಯಾರ್ಥಿಗಳು ಅರ್ಜಿ ಸಲ್ಲಿಸಬಹುದು. ಅದೇ ರೀತಿ ಶುಲ್ಕವನ್ನು ಪೋನ್ ಪೇ, ಗೂಗಲ್ ಪೇ ಮೂಲಕವೂ ಪಾವತಿ ಮಾಡಬಹುದುದಾಗಿದೆ ಎಂದು ನಿರ್ದೇಶಕಿ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.