ರಸ್ತೆ ತಿರುವಿಗೆ ಅಂಟಿಕೊಂಡಿರುವ ಕಂಪೌಂಡ್‌: ಪ್ರಯಾಣಿಕರಿಗೆ ಆತಂಕ

6 ತಿಂಗಳಾದರೂ ರಸ್ತೆ ವಿಸ್ತರಣೆ ಜಾಗ ನೀಡದ ಆಹಾರ ನಿಗಮ

Team Udayavani, Apr 18, 2022, 12:05 PM IST

compound

ಉಡುಪಿ: ಅಂಬಾಗಿಲು- ಪೆರಂಪಳ್ಳಿ ಮೂಲಕ ಮಣಿಪಾಲ ಸಂಪರ್ಕಿಸುವ ಚತುಷ್ಪಥ ರಸ್ತೆ ಕಾಮಗಾರಿ ಬಹುತೇಕ ಪೂರ್ಣಗೊಳ್ಳುತ್ತಿದೆ. ಆದರೆ ಪೆರಂಪಳ್ಳಿಯಲ್ಲಿರುವ ಕೇಂದ್ರ ಸರಕಾರದ ಆಹಾರ ನಿಗಮದ ಡಿಪೋ ಆವರಣ ಗೋಡೆ ರಸ್ತೆಗೆ ಅಂಟಿಕೊಂಡಿರುವುದರಿಂದ ಪ್ರಯಾಣಿಕರು ನಿತ್ಯ ಆತಂಕದಲ್ಲಿ ಸಂಚರಿಸುವಂತಾಗಿದೆ.

ಈ ಅಪಾಯಕಾರಿ ಆವರಣಗೋಡೆ ಕೂಡಲೇ ತೆರವುಗೊಳಿಸಿ, ಪ್ರಯಾಣಿಕರ ಆತಂಕ ನಿವಾರಣೆ ಮಾಡಿದಿದ್ದಲ್ಲಿ ಮುಂದೆ ಇಂದೊಂದು ದೊಡ್ಡ ಅಪಘಾತ ವಲಯವೇ ಆಗಬಹುದು. ತಿರುವಿನಲ್ಲಿ ರಸ್ತೆಗೆ ಅಡ್ಡವಾಗಿರುವ ಈ ಗೋಡೆ ಯನ್ನು ತೆರವುಗೊಳಿಸಿ ನೇರ ರಸ್ತೆ ನಿರ್ಮಿಸುವಂತೆ ಸ್ಥಳೀಯರು ಈಗಾಗಲೇ ಲೋಕೋಪಯೋಗಿ ಇಲಾಖೆಗೆ ಮನವಿ ಸಲ್ಲಿಸಿದ್ದಾರೆ ಮತ್ತು ಸ್ಥಳೀಯ ಶಾಸಕರ ಗಮನಕ್ಕೂ ತಂದಿದ್ದಾರೆ.

ಪೆರಂಪಳ್ಳಿಯಲ್ಲಿರುವ ಆಹಾರ ನಿಗಮದ ಕಚೇರಿಯ ಆವರಣಗೋಡೆ ರಸ್ತೆಗೆ ಅಂಟಿಕೊಂಡಿದೆ. ಚರಂಡಿಗೂ ಕನಿಷ್ಠ ಒಂದು ಅಡಿ ಜಾಗವೂ ಬಿಟ್ಟಿಲ್ಲ. ಮಳೆಗಾಲ ದಲ್ಲಿ ನೀರು ರಸ್ತೆಯ ಮೇಲೆ ಹರಿದು ಹೋಗಬೇಕು. ಏಕಮುಖ ಸಂಚಾರ ರಸ್ತೆಯಾದರೂ ಎರಡು ವಾಹನಗಳು ಒಟ್ಟಿಗೆ ಸಾಗುವಾಗ ಅಥವಾ ದ್ವಿಚಕ್ರ ವಾಹನ ವೇಗಕ್ಕೆ ಒಮ್ಮೆಲೆ ನಿಯಂತ್ರಣ ಸಿಗದಿದ್ದರೆ ಎಡಬದಿಯ ಗೋಡೆಗೆ ಢಿಕ್ಕಿ ಹೊಡೆಯುವ ಸ್ಥಿತಿ ಇದೆ. ಅಪಾಯ ಕಾರಿ ತಿರುವಿನಂತೆ ಭಾಸವಾಗುವ ಈ ಕಾಂಪೌಂಡ್‌ನ್ನು ಕೂಡಲೆ ತೆರವುಗೊಳಿಸಿ ನೇರ, ಸಮತಟ್ಟಾದ ರಸ್ತೆ ನಿರ್ಮಿಸಬೇಕು ಎಂದು ಸ್ಥಳೀಯರು ಆಗ್ರಹಿಸುತ್ತಿದ್ದಾರೆ.

ನಿಗಮದಿಂದ ವಿಳಂಬ ಧೋರಣೆ

ಆವರಣ ಗೋಡೆ ತೆರವು ಮಾಡದೆ ರಸ್ತೆ ನಿರ್ಮಿಸಿದಲ್ಲಿ ಅಪಘಾತ ವಲಯ ವಾಗಲಿದೆ ಎಂದು ಮೊದಲೇ ಯೋಜನೆ ರೂಪಿಸಿದ್ದ ಲೋಕೋಪಯೋಗಿ ಇಲಾಖೆ ಎಂಜಿನಿಯರ್‌ಗಳು 40 ಮೀಟರ್‌ ಜಾಗವನ್ನು ರಸ್ತೆಗೆ ನೀಡುವಂತೆ ನಿಗಮಕ್ಕೆ ಮನವಿ ಮಾಡಿದ್ದರು. ಅದರಂತೆ ನಿಗಮದ ಹಿರಿಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪಿಡಬ್ಲ್ಯುಡಿ ಎಂಜಿನಿಯರ್‌ಗಳ ಜತೆ ಜಂಟಿ ಸಮೀಕ್ಷೆ ನಡೆಸಿದ್ದರು. ಈ ವರದಿ ಬೆಂಗಳೂರಿನ ವಿಭಾಗೀಯ ಕಚೇರಿಗೆ ಸಲ್ಲಿಸ ಲಾಗಿತ್ತು. ಅಲ್ಲಿಂದ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಲೋಕೋಪಯೋಗಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

23 ಕೋ.ರೂ. ವೆಚ್ಚದಲ್ಲಿ ಚತುಷ್ಪಥ ರಸ್ತೆ ನಿರ್ಮಾಣ, ಟಿಡಿಆರ್‌ ಪ್ರಕ್ರಿಯೆ ಮೂಲಕ ಭೂಸ್ವಾಧೀನ, ಒಟ್ಟು 3.9 ಕಿ.ಮೀ. ರಸ್ತೆ ನಿರ್ಮಾಣಗೊಂಡಿದೆ. ಕೆಲವು ಕಡೆ ರಸ್ತೆ ಉಬ್ಬು, ತಗ್ಗಾಗಿದೆ. ಸಮತಟ್ಟಾಗಿಲ್ಲ ಎಂಬ ದೂರು ವಾಹನ ಸವಾರರದು. ಕೆಲವು ಭಾಗದಲ್ಲಿ ಸೆಕೆಂಡ್‌ ಲೇಯರ್‌ ಡಾಮರು ಹಾಕುವ ಕೆಲಸ ಬಾಕಿ ಇದೆ. ಕೊನೆಯ ಹಂತದ ಕಾಮಗಾರಿ ಶೀಘ್ರ ಸಂಪೂರ್ಣಗೊಳ್ಳಲಿದೆ ಎಂದು ಇಲಾಖೆ ಎಂಜಿನಿಯರ್‌ಗಳು ತಿಳಿಸಿದ್ದಾರೆ.

40 ಮೀಟರ್‌ ಜಾಗಕ್ಕೆ ಬೇಡಿಕೆ

ಕೇಂದ್ರ ಆಹಾರ ನಿಗಮದ ಡಿಪೋ ಅವರಲ್ಲಿ ಕಂಪೌಂಡ್‌ನ‌ ಕಾರ್ನರ್‌ನಲ್ಲಿ 40 ಮೀಟರ್‌ ಜಾಗಕ್ಕೆ ಬೇಡಿಕೆ ಸಲ್ಲಿಸಿದ್ದೆವು. 6 ತಿಂಗಳಿನಿಂದ ಈ ಬಗ್ಗೆ ಪ್ರಯತ್ನ ನಡೆಸುತ್ತಿದ್ದೇವೆ. ನಿಗಮದ ಬೆಂಗಳೂರು ವಿಭಾಗೀಯ ಕಚೇರಿಯಿಂದ ಅನುಮತಿ ಬಂದಿಲ್ಲ. ಹೀಗಾಗಿ ವಿಳಂಬವಾಗಿದೆ. ಶಾಸಕರು, ಜಿಲ್ಲಾಧಿಕಾರಿಗಳು ಈ ಬಗ್ಗೆ ಪ್ರಯತ್ನಿಸುತ್ತಿದ್ದಾರೆ. -ಜಗದೀಶ್‌ ಭಟ್‌, ಎಇಇ, ಲೋಕೋಪಯೋಗಿ ಇಲಾಖೆ.

ಟಾಪ್ ನ್ಯೂಸ್

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

Kollywood: ಖ್ಯಾತ ನಟ ಯೋಗಿ ಬಾಬು ಕಾರು ಅಪಘಾತ?: ನಟ ಹೇಳಿದ್ದೇನು?

naki

Naki Sumo: ಮಗುವನ್ನು ಅಳಿಸುವ ವಿಚಿತ್ರ ಆಚರಣೆ !; ನಡೆಯುವುದಾದರು ಎಲ್ಲಿ?

mohan bhagwat

RSS; ಹಿಂದೂ ಸಮಾಜ ದೇಶದ ಜವಾಬ್ದಾರಿಯುತ ಸಮುದಾಯ: ಮೋಹನ್ ಭಾಗವತ್

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

IPL 2025: ಐಪಿಎಲ್‌ ವೇಳಾಪಟ್ಟಿ ಪ್ರಕಟ; KKR vs RCB ಮೊದಲ ಮುಖಾಮುಖಿ- ಇಲ್ಲಿದೆ ಪಟ್ಟಿ

Lalu

Controversy; ಮಹಾಕುಂಭ ‘ಅರ್ಥಹೀನ’ ಎಂದ ಲಾಲು ಪ್ರಸಾದ್ ಯಾದವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

1-tengu-dsdsa

Udayavani-MIC ನಮ್ಮ ಸಂತೆ: ತೆಂಗಿನ ಗರಟೆಯಲ್ಲಿ ಅರಳಿದ ಕಲಾಕೃತಿ

1-namm-mannu-1

Udayavani-MIC ನಮ್ಮ ಸಂತೆ:ಮಣ್ಣಿನಿಂದ ಮಾಡಿದ ನಾನಾ ಉತ್ಪನ್ನ

1-neyge-1

Udayavani-MIC ನಮ್ಮ ಸಂತೆ:ಗಮನ ಸೆಳೆದ ನೇಯ್ಗೆ ಯಂತ್ರ

ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

Namma Santhe: ಕಟಲ್‌ ಬೋನ್‌ನಲ್ಲಿ ಮೂಡಿಬಂದ ಕಲಾ ಮ್ಯಾಜಿಕ್

MUST WATCH

udayavani youtube

ನಿಮ್ಮ ಅಚ್ಚುಮೆಚ್ಚಿನ ; ಆರೋಗ್ಯಕರ ಪಾನಿಪುರಿ ಸವಿಯಲು ಇಲ್ಲಿಗೆ ಬನ್ನಿ

udayavani youtube

ಭೀಕರ ಹಿಟ್ & ರನ್ ಸಂತ್ರಸ್ತರ ಪರ ನಿಂತ ಪುತ್ತೂರು ಶಾಸಕ ಅಶೋಕ್ ರೈ

udayavani youtube

ಶ್ರೀ ಬ್ರಹ್ಮಬೈದರ್ಕಳ ನೇಮೋತ್ಸವ, ಮಾಣಿಬಾಲೆ ನೇಮೋತ್ಸವ

udayavani youtube

ಸಾಹಿತ್ಯಾಸಕ್ತಿಯ ಚಹಾ ಅಂಗಡಿ

udayavani youtube

ಇಲ್ಲಿ ಪ್ರತಿಯೊಂದು ಗೋವುಗಳಿಗೂ ವಿಭಿನ್ನ ಹೆಸರಿದೆ

ಹೊಸ ಸೇರ್ಪಡೆ

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

Politics: ಸಿದ್ದರಾಮಯ್ಯ 5 ವರ್ಷವೂ ಸಿಎಂ: ಕೊತ್ತೂರು ಮಂಜುನಾಥ್‌

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

ಜರ್ಮನಿ ಅಧ್ಯಕ್ಷರ ಎಕ್ಸ್‌ ಖಾತೆ ಹ್ಯಾಕ್‌: ಬಿಹಾರ ಇಲಾಖೆ ಹೆಸರಿಟ್ಟ ಕಿಡಿಗೇಡಿಗಳು

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

Anekal: ಪತ್ನಿಯನ್ನು ಹೊತ್ತೂಯ್ದು 2ನೇ ಮಹಡಿಯಿಂದ ತಳ್ಳಿ ಕೊಂದ!

20

Udayavani-MIC ನಮ್ಮ ಸಂತೆ ಸಂಭ್ರಮ: ಜೇನುಗೂಡು, ಜೇನು ಹನಿ

Kuruburu-Shanta

Air Lift: ಪಂಜಾಬ್‌ನಲ್ಲಿ ರೈತ ಮುಖಂಡ ಶಾಂತಕುಮಾರ್‌ಗೆ ಅಪಘಾತ; ಬೆಂಗಳೂರಿಗೆ ಏರ್‌ಲಿಫ್ಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.