![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
![DKSHi (3)](https://www.udayavani.com/wp-content/uploads/2025/02/DKSHi-3-2-415x276.jpg)
Team Udayavani, Apr 18, 2022, 12:56 PM IST
ಮೈಸೂರು: ಕಾಂಗ್ರೆಸ್ ನಾಯಕರ ಭ್ರಷ್ಟಾಚಾರದ ಕಡತ ತೆಗೆಯುತ್ತೇವೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ತಿರುಗೇಟು ನೀಡಿರುವ ವಿಪಕ್ಷ ನಾಯಕ ಸಿದ್ದರಾಮಯ್ಯ, ಬಿಜೆಪಿಯವರು ಇಲ್ಲಿವರೆಗೆ ಕಡ್ಲೆಪುರಿ ತಿನ್ನುತ್ತಿದ್ದರೆ ಎಂದು ಪ್ರಶ್ನಿಸಿದ್ದಾರೆ.
ಮೈಸೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಬಿಜೆಪಿ ಅಧಿಕಾರಕ್ಕೆ ಬಂದು ಇಷ್ಟು ವರ್ಷವಾಯ್ತು. ಹಿಂದೆ ಐದು ವರ್ಷ ವಿರೋಧ ಪಕ್ಷದಲ್ಲಿ ಇರಲಿಲ್ಲವೇ? ಆಗ ಯಾಕೆ ಈ ಭ್ರಷ್ಟಾಚಾರದ ಮಾತು ಹೇಳಲಿಲ್ಲ. ಈಗ ನಾವು ನಿಮ್ಮ ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದೇವೆ. ಈ ಸಂದರ್ಭದಲ್ಲಿ ಈ ಮಾತುಗಳನ್ನು ಹೇಳಿದರೆ ಜನ ನಂಬುವುದಿಲ್ಲ. ಭ್ರಷ್ಟಾಚಾರ ವಿಚಾರ ಗೊತ್ತಿದ್ದರೂ ಅದನ್ನ ಮುಚ್ವಿಡುವುದೂ ಕೂಡ ಅಪರಾಧ. ಇದು ಸರ್ಕಾರಕ್ಕೆ ಗೊತ್ತಿಲ್ಲವೇ? ಜನರಿಗೆ ಇದೆಲ್ಲವೂ ಅರ್ಥವಾಗುತ್ತಿದೆ ಎಂದರು.
ಇದನ್ನೂ ಓದಿ:ಮಠಕ್ಕೆ ಕೊಟ್ಟ ಅನುದಾನ ಸರ್ಕಾರಕ್ಕೆ ಹಿಂತಿರುಗಿಸಿದ್ದೇವೆ: ಬಸವ ಜಯಮೃತ್ಯುಂಜಯ ಸ್ವಾಮೀಜಿ
ಪಿಎಸ್ಐ ನೇಮಕಾತಿಯಲ್ಲಿ ಅಕ್ರಮ ವಿಚಾರವಾಗಿ ಮಾತನಾಡಿದ ಅವರು, ಅಕ್ರಮ ನಡೆದಿದೆ ಎಂದು ನನ್ನ ಬಳಿ ಕೂಡ ಬಂದು ಹೇಳಿದ್ದರು. ನಾನು ಸಂಬಂಧ ಪಟ್ಟವರಿಗೆ ತನಿಖೆಗೆ ಹೇಳಿದ್ದೆ. ತನಿಖೆ ನಡೆಯುತ್ತಿದೆ, ತಪ್ಪಿತಸ್ಥರಿಗೆ ಶಿಕ್ಷೆಯಾಗಲಿ ಎಂದರು.
ಮಠಕ್ಕೆ ನೀಡುವ ಅನುದಾನ ಪಡೆಯಲು ಕಮಿಷನ್ ಕೊಡಬೇಕು ಎಂಬ ದಿಂಗಾಲೇಶ್ವರ ಸ್ವಾಮೀಜಿ ಹೇಳಿಕೆಯೆ ಬಗ್ಗೆ ಕೇಳಿದ ಪ್ರಶ್ನೆಗೆ, ಅದರ ಬಗ್ಗೆ ನನಗೇನು ಗೊತ್ತಿಲ್ಲ ಎಂದು ಸಿದ್ದರಾಮಯ್ಯ ಹೇಳಿದರು.
Hunsur: ನೀರಿನ ಹೊಂಡಕ್ಕೆ ಬಿದ್ದು ಮಗು ಸಾವು
Mob Attack: ಉದಯಗಿರಿ ಪೊಲೀಸ್ ಠಾಣೆ ಮೇಲೆ ದಾಳಿ: ಆರೋಪಿಯ ಅಂಗಡಿ ಸಿಬಂದಿ ದುಷ್ಕೃತ್ಯ ಶಂಕೆ
80 ಸಾವಿರ ಲಂಚ ಸ್ವೀಕರಿಸುವಾಗ ಸಬ್ ಇನ್ಸ್ಪೆಕ್ಟರ್ ಲೋಕ ಬಲೆಗೆ
Dr G. Parameshwar: ಉದಯಗಿರಿ ಪ್ರಕರಣ: “ಬುಲ್ಡೋಜರ್’ ಕ್ರಮ ಇಲ್ಲಿ ಅಗತ್ಯವಿಲ್ಲ; ಪರಂ
ಉದಯಗಿರಿ ಪ್ರಕರಣ: ಎಷ್ಟೇ ಬಲಾಡ್ಯರಾಗಿದ್ದರೂ ಕ್ರಮ: ಡಾ. ಜಿ. ಪರಮೇಶ್ವರ್
You seem to have an Ad Blocker on.
To continue reading, please turn it off or whitelist Udayavani.