ನಾಡು-ನುಡಿಗೆ ತಿ.ತಾ. ಶರ್ಮ ಕೊಡುಗೆ ಅಪಾರ

ಸಾರ್ವಕಾಲಿಕ ಸತ್ಯ ಬಹು ಹಿಂದೆಯೇ ಹೇಳಿದ್ದ ಮಹಾನ್‌ ಚಿಂತಕ: ಡಾ| ಶ್ರೀನಿವಾಸ್‌

Team Udayavani, Apr 18, 2022, 3:32 PM IST

sharma

ಚಿತ್ರದುರ್ಗ: ಕರ್ನಾಟಕದಲ್ಲಿ ಪ್ರತಿಮೆ, ವಿಗ್ರಹ, ಆಧಾರಗಳ ವಿನಾಶವಾಗುತ್ತಿದೆ. ಅಂತಹ ಆಧಾರಗಳನ್ನು ಸಂರಕ್ಷಿಸಬೇಕು. ಕರ್ನಾಟಕವನ್ನು ವಿರೂಪಗೊಳಿಸುವುದು ನಿಲ್ಲಬೇಕು. ಇತಿಹಾಸಕ್ಕೆ ಬೇರೆ ಭಾಷೆ ವಿದ್ವಾಂಸರು ನೀಡಿರುವ ಕೊಡುಗೆಯನ್ನು ಸ್ಮರಿಸಬೇಕು ಎಂದು ಮೈಸೂರು ವಿಶ್ವವಿದ್ಯಾನಿಲಯದ ನಿವೃತ್ತ ಇತಿಹಾಸ ಪ್ರಾಧ್ಯಾಪಕ ಡಾ| ಎಂ.ವಿ. ಶ್ರೀನಿವಾಸ್‌ ಹೇಳಿದರು.

ಚಿತ್ರದುರ್ಗ ಇತಿಹಾಸ ಕೂಟ, ಇತಿಹಾಸ-ಸಂಸ್ಕೃತಿ-ಸಂಶೋಧನೆಗಳ ವಿಚಾರ ವೇದಿಕೆ ಹಾಗೂ ರೇಣುಕಾ ಪ್ರಕಾಶನ ಸಹಯೋಗದಲ್ಲಿ ಭಾನುವಾರ ನಗರದ ಐಎಂಎ ಸಭಾಂಗಣದಲ್ಲಿ ನಡೆದ ‘ಕರ್ನಾಟಕ ಇತಿಹಾಸ: ತಿ.ತಾ. ಶರ್ಮ ಅವರ ವಿಚಾರಗಳು’ ವಿಷಯ ಕುರಿತ 42ನೇ ಉಪನ್ಯಾಸ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸಾಂಸ್ಕೃತಿಕ ಲೋಕದಲ್ಲಿ ಉನ್ನತ ಸ್ಥಾನದಲ್ಲಿದ್ದ ತಿರುಮಲೆ ತಾತಾಚಾರ್ಯ ಶರ್ಮ ಅವರು ಕನ್ನಡ ನಾಡು, ನುಡಿಗೆ ಅಮೂಲ್ಯ ಸೇವೆ ಸಲ್ಲಿಸಿ ಅಮರರಾಗಿದ್ದಾರೆ. ಇತಿಹಾಸಕಾರ, ಶಾಸನ ತಜ್ಞ, ಪತ್ರಿಕೋದ್ಯಮಿ, ಸ್ವಾತಂತ್ರ್ಯ ಹೋರಾಟಗಾರ, ಕನ್ನಡ ಸಾಹಿತ್ಯ ಪರಿಷತ್‌ ಅಧ್ಯಕ್ಷರಾಗಿದ್ದ ತಿ.ತಾ. ಶರ್ಮ ಅವರ ವಿಚಾರ ಇಂದಿನ ಪೀಳಿಗೆಗೆ ಗೊತ್ತಿಲ್ಲ. ಕರ್ನಾಟಕಕ್ಕೆ ಅವರು ನೀಡಿರುವ ಕೊಡುಗೆ ಅಪೂರ್ವವಾದುದು ಎಂದರು.

ವೈಚಾರಿಕ, ವೈಜ್ಞಾನಿಕ, ವಿಶ್ಲೇಷಾತ್ಮಕ ಅಧ್ಯಯನ ಮಾಡಬೇಕೆಂಬ ನಿಲುವು ತಿ.ತಾ. ಶರ್ಮಾ ಅವರದ್ದಾಗಿತ್ತು. ಇತಿಹಾಸವೇ ವೈಚಾರಿಕವಾದುದು. ಹಾಗಾಗಿ ಅವರಲ್ಲಿದ್ದ ಸಂಶೋಧನೆ, ವೇದನೆ, ಅಭಿಪ್ರಾಯಗಳನ್ನು ಕೊಡುತ್ತಾರೆ. ಸಾರ್ವಕಾಲಿಕ ಸತ್ಯಗಳನ್ನು ಅರವತ್ತು ವರ್ಷಗಳ ಹಿಂದೆಯೇ ಅವರು ಹೇಳಿದ್ದರು ಎಂದು ಸ್ಮರಿಸಿದರು.

ಚಿತ್ರದುರ್ಗ ಇತಿಹಾಸ ಕೂಟದ ನಿರ್ದೇಶಕ ಡಾ| ಲಕ್ಷ್ಮಣ ತೆಲಗಾವಿ ಮಾತನಾಡಿ, ಕೋವಿಡ್‌ ಮಹಾಮಾರಿಯಿಂದ ಕಳೆದೆರಡು ವರ್ಷಗಳಿಂದ ಚಿತ್ರದುರ್ಗ ಇತಿಹಾಸ ಕೂಟದ ಮಾಸಿಕ ಉಪನ್ಯಾಸ ಮಾಲೆ ಸಂಪೂರ್ಣವಾಗಿ ನಿಲ್ಲಿಸಲಾಗಿತ್ತು. ಈಗ ಮತ್ತೆ ಪ್ರತಿ ತಿಂಗಳು ಉಪನ್ಯಾಸ ಕಾರ್ಯಕ್ರಮಗಳು ಯಾವುದೇ ಅಡೆತಡೆಯಿಲ್ಲದೆ ನಿರಂತರವಾಗಿ ನಡೆಯುತ್ತವೆ. ಇಲ್ಲಿಯವರೆಗೂ ನಡೆದ ಉಪನ್ಯಾಸಗಳನ್ನೆಲ್ಲಾ ಸಂಗ್ರಹಿಸಿ ಸಂಕಲನ ಹೊರತರುವ ಪ್ರಯತ್ನ ಮಾಡುತ್ತಿದ್ದೇವೆ. ಇದಕ್ಕೆ ಚಿತ್ರದುರ್ಗ ಇತಿಹಾಸ ಕೂಟದ ಎಲ್ಲಾ ಸದಸ್ಯರ ಹಾಗೂ ಅಭಿಮಾನಿಗಳ ಸಹಕಾರವಿದೆ ಎಂದು ತಿಳಿಸಿದರು.

ಅಂತಾರಾಷ್ಟ್ರೀಯ ಮಟ್ಟಕ್ಕೆ ಏರಿದ ಅನೇಕ ವಿದ್ವಾಂಸರು ಇಲ್ಲಿಯವರೆಗೂ ಉಪನ್ಯಾಸಗಳನ್ನು ನೀಡಿದ್ದಾರೆ. ಇಷ್ಟೇ ಅಲ್ಲದೆ ಸ್ಥಳೀಯ ಚಾರಿಣಿ, ಸಾಹಸಿಗರು, ಚಿತ್ರಕಲಾವಿದರಿಗೂ ಉಪನ್ಯಾಸ ನೀಡುವ ಅವಕಾಶ ಒದಗಿಸಲಾಗುವುದು. ಇತ್ತೀಚೆಗೆ ಸಂಶೋಧನಾ ಕ್ಷೇತ್ರ ಬರಡಾಗುತ್ತಿದೆ. ಬರೆದಿದ್ದನ್ನು ಓದುವವರಿಲ್ಲ. ಪ್ರೋತ್ಸಾಹವಿಲ್ಲದಂತಾಗಿದೆ ಎಂದು ಬೇಸರ ವ್ಯಕ್ತಪಡಿಸಿದರು.

ಇತಿಹಾಸ ಕೂಟದ ಸಂಚಾಲಕ ಡಾ| ಎನ್.ಎಸ್. ಮಹಂತೇಶ್‌ ಕಾರ್ಯಕ್ರಮ ನಿರ್ವಹಣೆ ಮಾಡಿದರು. ಡಾ| ತಿಪ್ಪೇಸ್ವಾಮಿ, ಪ್ರೊ| ಎಚ್‌. ಲಿಂಗಪ್ಪ, ಪ್ರೊ| ಜಿ.ಎನ್. ಮಲ್ಲಿಕಾರ್ಜುನಪ್ಪ, ಜಿ.ಎಸ್. ಉಜ್ಜಿನಪ್ಪ, ಆರ್.ಎನ್.ಬೋರಯ್ಯ, ಡಿ. ಗೋಪಾಲಸ್ವಾಮಿ ನಾಯಕ, ಡಾ| ಎಸ್‌.ಕೆ. ಯೋಗಾನಂದ ಮತ್ತಿತರರು ಹಾಜರಿದ್ದರು.

ವಿಮರ್ಶಗೆ ಒತ್ತು ಕೊಟ್ಟಿದ್ದ ತಿ.ತಾ. ಶರ್ಮ ಚರಿತ್ರೆಯಲ್ಲಿರುವ ನ್ಯೂನತೆಗಳನ್ನು ಸರಿಪಡಿಸಬೇಕೆಂದು ಹೇಳಿದ್ದರು. ಆರ್ಯರು ಹೊರಗಿನಿಂದ ಬಂದವರಲ್ಲ, ಸ್ಥಳೀಯರು ಎನ್ನುವುದನ್ನು ತಮ್ಮ ಬರವಣಿಗೆಯಲ್ಲಿ ಉಲ್ಲೇಖೀಸಿದ್ದಾರೆ. ಭಾಷಾ ಪ್ರಯೋಗದಿಂದ ಒಂದು ಜನಾಂಗದ ಮೂಲವನ್ನು ಗುರುತಿಸಬಹುದು ಎಂದಿದ್ದರು. ಐತಿಹಾಸಿಕ ಧರ್ಮ, ಸತ್ಯದ ಪ್ರತಿಪಾದನೆ, ಸತ್ಯದ ಅನ್ವೇಷಣೆ ಆಗಬೇಕು ಎನ್ನುವ ಬಯಕೆ ಅವರದಾಗಿತ್ತು. -ಡಾ| ಎಂ.ವಿ. ಶ್ರೀನಿವಾಸ್‌, ನಿವೃತ್ತ ಪ್ರಾಧ್ಯಾಪಕರು

ಟಾಪ್ ನ್ಯೂಸ್

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

Hiriyur: ಹೆದ್ದಾರಿಗೆ ಮಣ್ಣು ಕುಸಿದು  ಹತ್ತು ಕಿ.ಮೀ ಟ್ರಾಫಿಕ್‌ ಜಾಮ್

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

CM Siddaramaiah: ಹಿಂದೆ ಮುಂದೆ ಇದ್ದವರಿಂದಲೇ ಖೆಡ್ಡಾ; ಅಶೋಕ

ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ: ಅಶೋಕ

R. Ashok: ಚಾಮುಂಡೇಶ್ವರಿಗೆ ಅವಮಾನ ಮಾಡಿದವರಿಗೆ ತಕ್ಕ ಶಿಕ್ಷೆ

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

ಒಣ ಕೊಬ್ಬರಿಗೆ ಈಗ ಬಂಗಾರದ ಬೆಲೆ; ಬೆಲೆ ಹೆಚ್ಚಳಕ್ಕೇನು ಕಾರಣ?

3-chitradurga

Chitradurga: ಚಾಲಕನ ನಿಯಂತ್ರಣ ತಪ್ಪಿ ಲಾರಿ ಹಿಂಬದಿಗೆ ಡಿಕ್ಕಿ ಹೊಡೆದ ಕಾರು; ಓರ್ವ ಸಾವು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

rahul gandhi

Constitution ನಾಶ ಮಾಡಿ, ಶಿವಾಜಿಗೆ ತಲೆ ಬಾಗಿದರೆ ಏನು ಲಾಭ?: ರಾಹುಲ್‌

Supreme Court

Migrants ಪಡಿತರ ಚೀಟಿ: ನಮ್ಮ ತಾಳ್ಮೆ ಕಟ್ಟೆ ಒಡೆದಿದೆ ಎಂದ ಸುಪ್ರೀಂ

Mang2

Mangaluru: ರಾಷ್ಟ್ರೀಯ ಸ್ಟಾಂಡಪ್‌ ಪ್ಯಾಡ್ಲಿಂಗ್‌: ರಾಜ್ಯಕ್ಕೆ 7 ಪದಕ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.