ಬಿಜೆಪಿ ಸರ್ಕಾರದಿಂದ ಅರಾಜಕತೆ ಸೃಷ್ಟಿ
Team Udayavani, Apr 18, 2022, 3:41 PM IST
ಹೊಳಲ್ಕೆರೆ: ರಾಜ್ಯದಲ್ಲಿ ಸಂವಿಧಾನಗಳ ಆಶಯಕ್ಕೆ ವಿರುದ್ಧವಾಗಿ ಅನೈತಿಕವಾಗಿ ಅಧಿಕಾರ ಬಂದ ಸರಕಾರದಿಂದ ರಾಜ್ಯದಲ್ಲಿ ಅರಾಜಕತೆ ಸೃಷ್ಟಿಯಾಗಿದ್ದು, ಶ್ರೀಸಾಮಾನ್ಯರ ಬದುಕು ನಾಶ ಮಾಡುತ್ತಿದೆ ಎಂದು ಜಿಡಿಎಸ್ ಪಕ್ಷದ ಜಿಲಾಧ್ಯಕ್ಷ ಯಶೋಧರ ಸರಕಾರದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.
ಪಟ್ಟಣದ ಜೆಡಿಎಸ್ ಪಕ್ಷದ ಕಚೇರಿಯಲ್ಲಿ ತಾಲೂಕು ಜೆಡಿಎಸ್ ಪಕ್ಷದ ಕಾರ್ಯಕರ್ತರ ಸಭೆ ಹಾಗೂ ಜಲಧಾರೆ ಯಾತ್ರೆ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ದೇಶದಲ್ಲಿ ರಾಜ್ಯದಲ್ಲಿ ಡಬಲ್ ಎಂಜಿನ್ ಸರಕಾರ ಇದ್ದರೆ ಹೊನ್ನಿನ ಮಳೆ ಹರಿಯುತ್ತಿದೆ ಎನ್ನುವ ಆಶಯದಿಂದ ಜನರು ಅಧಿಕಾರಕ್ಕೆ ತಂದ ಬಿಜೆಪಿ ಆಡಳಿತದಿಂದ ಜನರು ಬೇಸತ್ತಿದ್ದರೆ. ಅನೈತಿಕ ಮಾರ್ಗದಲ್ಲಿ ಅಧಿಕಾರಕ್ಕೆ ಬಂದಿರುವ ಬಿಜೆಪಿ ಸರಕಾರ ನಿತ್ಯ ಬೆಲೆ ಏರಿಕೆಯನ್ನೇ ಉದ್ಯೋಗ ಮಾಡಿಕೊಂಡಿದೆ. ಇಂದು ಪೆಟ್ರೋಲ್, ಡಿಸೇಲ್, ಗ್ಯಾಸ್, ಅಡುಗೆ ಎಣ್ಣೆ, ಆಹಾರ ಪರ್ದಾಥಗಳ ಬೆಲೆ ಏರಿಕೆ ಬಲೆಯಲ್ಲಿ ಸಿಕ್ಕಿಕೊಂಡಿರುವ ರಾಜ್ಯದ ಜನರು ಬದುಕು ನಡೆಸಲು ಆಸಾಧ್ಯ ಎನ್ನುವಂತ ಸ್ಥಿತಿ ನಿರ್ಮಾಣವಾಗಿದೆ. ಇದಕ್ಕೆಲ್ಲ ಬಿಜೆಪಿ ಸರಕಾರದ ಭ್ರಷ್ಟಾಚಾರದ ದೂರಾಡಳಿತವೇ ಕಾರಣ ಎಂದು ದೂರಿದರು.
ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯಧ್ಯಕ್ಷರಾದ ಜಿ.ಬಿ. ಶೇಖರ್, ತಾಲೂಕು ಜೆಡಿಎಸ್ ಪಕ್ಷದ ಅಧ್ಯಕ್ಷ ಪರಮೇಶ್ವರಪ್ಪ, ಪಕ್ಷದ ಮುಖಂಡರಾದ ಮಾಳೆನಹಳ್ಳಿ ವೆಂಕಟೇಶ್, ಜಯ್ಯಣ್ಣ, ಕೇಶವಮೂರ್ತಿ, ಲಿಂಗನಾಯ್ಕ, ಸೈಪುಲ್ಲಾ ಖಾನ್, ವಕೀಲರಾದ ಎನ್. ಎಚ್. ಶಾಂತವೀರಪ್ಪ, ಮೂಲೆಮನೆ, ಕಾರ್ಯದರ್ಶಿ ಪರಮೇಶ್ವರಪ್ಪ ಇತರರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್
ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.