![Arrest](https://www.udayavani.com/wp-content/uploads/2025/02/Arrest-6-415x249.jpg)
![Arrest](https://www.udayavani.com/wp-content/uploads/2025/02/Arrest-6-415x249.jpg)
Team Udayavani, Apr 18, 2022, 5:27 PM IST
ಬೆಂಗಳೂರು: ಮನೆ ಮುಂದೆ ನಿಲ್ಲಿಸಿದ್ದ ಬೈಕ್ಗಳ ಹ್ಯಾಂಡಲ್ ಲಾಕ್ ಮುರಿದು ಕಳ್ಳತನ ಮಾಡಿ ಕಡಿಮೆ ಬೆಲೆಗೆ ಮಾರಾಟ ಮಾಡುತ್ತಿದ್ದ ಐವರು ಆರೋಪಿಗಳನ್ನು ರಾಜಗೋಪಾಲನಗರ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಬಂಧಿತರಿಂದ 5.6 ಲಕ್ಷ ರೂ. ಮೌಲ್ಯದ 6 ಬೈಕ್ ಹಾಗೂ 2 ಆಟೋರಿಕ್ಷಾ ವಶಪಡಿಸಿಕೊಳ್ಳಲಾಗಿದೆ. ಮಾಗಡಿ ರಸ್ತೆಯ ಹೊನಗಾನಹಟ್ಟಿಯ ರವಿಕುಮಾರ್ ಅಲಿಯಾಸ್ ಡೀಲ್ ರವಿ (22), ಪರ್ಹಾನ್ (20), ಸೈಯದ್ ರಬ್ಟಾನಿ (20), ಸೈಯದ್ ಸೂಫಿಯಾನ್ (19), ಆರ್. ಪ್ರಭು (19) ಬಂಧಿತರು.
ಆರೋಪಿಗಳು ನಗರದಲ್ಲಿ ಮನೆ ಮುಂದೆ ನಿಲುಗಡೆ ಮಾಡುತ್ತಿದ್ದ ದ್ವಿಚಕ್ರವಾಹನದ ಹ್ಯಾಂಡ್ ಲಾಕ್ ಮುರಿದು ಕದಿಯುತ್ತಿದ್ದರು. ಕಳವು ಮಾಡಿದ ವಾಹನಗಳನ್ನು ಕಡಿಮೆ ಬೆಲೆಗೆ ಗಿರಾಕಿಗಳಿಗೆ ಮಾರಾಟ ಮಾಡುತ್ತಿದ್ದರು. ದಾಖಲೆಗಳನ್ನು ಸದ್ಯದಲ್ಲಿಯೇ ಕೊಡುವುದಾಗಿ ನಂಬಿಸಿ ಮತ್ತೆ ಸಂಪರ್ಕಕ್ಕೆ ಸಿಗುತ್ತಿರಲಿಲ್ಲ. ಬಂಧಿತರು ಹಳೆ ಆರೋಪಿಗಳಾಗಿದ್ದು, ಜೈಲಿಗೆ ಹೋಗಿ ಜಾಮೀನಿನ ಮೇಲೆ ಹೊರ ಬಂದ ಬಳಿಕ ಮತ್ತೆ ಹಳೆ ಚಾಳಿ ಮುಂದುವರಿಸಿದ್ದರು.
ರಾಜಗೋಪಾಲನಗರ ನಿವಾಸಿ ಗೋಪಾಲಕೃಷ್ಣ ಏ.8ರಂದು ಮನೆ ಮುಂದೆ ನಿಲುಗಡೆ ಮಾಡಿದ್ದ ಹೋಂಡಾ ಆಕ್ಟಿವಾ ಸ್ಕೂಟರ್ನ್ನು ಆರೋಪಿಗಳು ಕದ್ದಿದ್ದರು. ಈ ಕುರಿತು ಗೋಪಾಲಕೃಷ್ಣ ರಾಜಗೋಪಾಲನಗರ ಠಾಣೆಗೆ ದೂರು ನೀಡಿದ್ದರು. ಪ್ರಕರಣ ದಾಖಲಿಸಿಕೊಂಡ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಗಳನ್ನು ಬಂಧಿಸಿದ್ದಾರೆ.
You seem to have an Ad Blocker on.
To continue reading, please turn it off or whitelist Udayavani.